<p>ಶಿವಮೊಗ್ಗ: ಕೊಳೆಗೇರಿಯ ಎಲ್ಲಾ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ಮಾಡಲು ಸರ್ಕಾರ ನಿರ್ಧರಿಸಿದ್ದು, ಕೊಳೆಗೇರಿ ಪ್ರದೇಶ ಸರ್ವೇ ಕಾರ್ಯ ನಡೆಸಿ, ಚಕ್ಕುಬಂದಿ, ಮಾಲೀಕತ್ವದ ವಿವರಗಳನ್ನು ಸಂಗ್ರಹಿಸಲಾಗಿದೆ. ಆದಷ್ಟು ಶೀಘ್ರದಲ್ಲಿಯೇ ಎಲ್ಲರಿಗೂ ಹಕ್ಕುಪತ್ರ ದೊರೆಯಲಿದೆ ಎಂದು ಶಾಸಕ ಕೆ.ಎಸ್. ಈಶ್ವರಪ್ಪ ತಿಳಿಸಿದರು.<br /> <br /> ನಗರದ ನವುಲೆಯಲ್ಲಿ ಶನಿವಾರ ಕರ್ನಾಟಕ ರಾಜ್ಯ ಕೊಳಚೆ ನಿರ್ಮೂಲನಾ ಮಂಡಳಿ, ನಗರಸಭೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕೊಳೆಗೇರಿ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸಿ ಅವರು ಮಾತನಾಡಿದರು. <br /> <br /> ಹಕ್ಕುಪತ್ರ ಪಡೆದ ಫಲಾನುಭವಿಗಳು ್ಙ 35 ಸಾವಿರವನ್ನು ಕೊಳಚೆ ನಿರ್ಮೂಲನಾ ಮಂಡಳಿಗೆ ಕಟ್ಟಬೇಕು. ಅಂತಹವರಿಗೆ ಸುಮಾರ್ಙು ಮೂರೂವರೆ ಲಕ್ಷ ವೆಚ್ಚದಲ್ಲಿ ಸುಸಜ್ಜಿತ ಮನೆ ನಿರ್ಮಿಸಿ ಕೊಡಲಾಗುವುದು ಎಂದರು.<br /> <br /> ಕೊಳಚೆ ನಿರ್ಮೂಲನೆ ಮಂಡಳಿ ಈಗ 1,000 ಕೊಳೆಗೇರಿ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ಮಾಡುತ್ತಿದೆ. ಮುಂದಿನ ದಿನಗಳಲ್ಲಿ 7,900 ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ಮಾಡಲಿದೆ ಎಂದು ಹೇಳಿದರು. <br /> <br /> ಸರ್ಕಾರ ಅಧಿಕಾರಕ್ಕೆ ಬರುವ ಮುಂಚೆ ನೀಡಿದ್ದ ಭರವಸೆಯಂತೆ ಕೊಳೆಗೇರಿ ನಿವಾಸಿಗಳಿಗೆ ಹಕ್ಕುಪತ್ರ ನೀಡಲಾಗುತ್ತಿದೆ. ಹಾಗೆಯೇ, ನಗರದ ವಸತಿ ರಹಿತರಿಗೆ ಕೊಟ್ಟ ಭರವಸೆಯನ್ನು ಈಡೇರಿಸಲು ಕ್ರಮಕೈಗೊಳ್ಳಲಾಗಿದೆ. ಅಡಿಕೆ ಮಂಡಿ ಹಮಾಲರ 620 ಮನೆಗಳ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ ಎಂದರು. <br /> <br /> ನಗರಾಭಿವೃದ್ಧಿ ಪ್ರಾಧಿಕಾರದ ಮೂಲಕ 50 ಎಕರೆ ಪ್ರದೇಶವನ್ನು ಭೂಸ್ವಾಧೀನ ಪಡಿಸಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ. ಇದು ಪೂರ್ಣಗೊಂಡ ನಂತರ ಸುಮಾರು 1,500 ನಿವೇಶನಗಳನ್ನು ರಚಿಸಿ, ನಿವೇಶನರಹಿತರಿಗೆ ವಿತರಿಸಲಾಗುವುದು ಎಂದರು. <br /> <br /> ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷ ಎಸ್.ಎನ್. ಚನ್ನಬಸಪ್ಪ, ಉಪಾಧ್ಯಕ್ಷ ಎಸ್. ರಾಮು, `ಸೂಡಾ~ ಅಧ್ಯಕ್ಷ ಎಸ್. ದತ್ತಾತ್ರಿ, ನಗರಸಭೆ ಸದಸ್ಯೆ ಲಕ್ಷ್ಮಮ್ಮ ಸಣ್ಣಪ್ಪ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗ: ಕೊಳೆಗೇರಿಯ ಎಲ್ಲಾ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ಮಾಡಲು ಸರ್ಕಾರ ನಿರ್ಧರಿಸಿದ್ದು, ಕೊಳೆಗೇರಿ ಪ್ರದೇಶ ಸರ್ವೇ ಕಾರ್ಯ ನಡೆಸಿ, ಚಕ್ಕುಬಂದಿ, ಮಾಲೀಕತ್ವದ ವಿವರಗಳನ್ನು ಸಂಗ್ರಹಿಸಲಾಗಿದೆ. ಆದಷ್ಟು ಶೀಘ್ರದಲ್ಲಿಯೇ ಎಲ್ಲರಿಗೂ ಹಕ್ಕುಪತ್ರ ದೊರೆಯಲಿದೆ ಎಂದು ಶಾಸಕ ಕೆ.ಎಸ್. ಈಶ್ವರಪ್ಪ ತಿಳಿಸಿದರು.<br /> <br /> ನಗರದ ನವುಲೆಯಲ್ಲಿ ಶನಿವಾರ ಕರ್ನಾಟಕ ರಾಜ್ಯ ಕೊಳಚೆ ನಿರ್ಮೂಲನಾ ಮಂಡಳಿ, ನಗರಸಭೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕೊಳೆಗೇರಿ ನಿವಾಸಿಗಳಿಗೆ ಹಕ್ಕುಪತ್ರ ವಿತರಿಸಿ ಅವರು ಮಾತನಾಡಿದರು. <br /> <br /> ಹಕ್ಕುಪತ್ರ ಪಡೆದ ಫಲಾನುಭವಿಗಳು ್ಙ 35 ಸಾವಿರವನ್ನು ಕೊಳಚೆ ನಿರ್ಮೂಲನಾ ಮಂಡಳಿಗೆ ಕಟ್ಟಬೇಕು. ಅಂತಹವರಿಗೆ ಸುಮಾರ್ಙು ಮೂರೂವರೆ ಲಕ್ಷ ವೆಚ್ಚದಲ್ಲಿ ಸುಸಜ್ಜಿತ ಮನೆ ನಿರ್ಮಿಸಿ ಕೊಡಲಾಗುವುದು ಎಂದರು.<br /> <br /> ಕೊಳಚೆ ನಿರ್ಮೂಲನೆ ಮಂಡಳಿ ಈಗ 1,000 ಕೊಳೆಗೇರಿ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ಮಾಡುತ್ತಿದೆ. ಮುಂದಿನ ದಿನಗಳಲ್ಲಿ 7,900 ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ಮಾಡಲಿದೆ ಎಂದು ಹೇಳಿದರು. <br /> <br /> ಸರ್ಕಾರ ಅಧಿಕಾರಕ್ಕೆ ಬರುವ ಮುಂಚೆ ನೀಡಿದ್ದ ಭರವಸೆಯಂತೆ ಕೊಳೆಗೇರಿ ನಿವಾಸಿಗಳಿಗೆ ಹಕ್ಕುಪತ್ರ ನೀಡಲಾಗುತ್ತಿದೆ. ಹಾಗೆಯೇ, ನಗರದ ವಸತಿ ರಹಿತರಿಗೆ ಕೊಟ್ಟ ಭರವಸೆಯನ್ನು ಈಡೇರಿಸಲು ಕ್ರಮಕೈಗೊಳ್ಳಲಾಗಿದೆ. ಅಡಿಕೆ ಮಂಡಿ ಹಮಾಲರ 620 ಮನೆಗಳ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ ಎಂದರು. <br /> <br /> ನಗರಾಭಿವೃದ್ಧಿ ಪ್ರಾಧಿಕಾರದ ಮೂಲಕ 50 ಎಕರೆ ಪ್ರದೇಶವನ್ನು ಭೂಸ್ವಾಧೀನ ಪಡಿಸಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ. ಇದು ಪೂರ್ಣಗೊಂಡ ನಂತರ ಸುಮಾರು 1,500 ನಿವೇಶನಗಳನ್ನು ರಚಿಸಿ, ನಿವೇಶನರಹಿತರಿಗೆ ವಿತರಿಸಲಾಗುವುದು ಎಂದರು. <br /> <br /> ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷ ಎಸ್.ಎನ್. ಚನ್ನಬಸಪ್ಪ, ಉಪಾಧ್ಯಕ್ಷ ಎಸ್. ರಾಮು, `ಸೂಡಾ~ ಅಧ್ಯಕ್ಷ ಎಸ್. ದತ್ತಾತ್ರಿ, ನಗರಸಭೆ ಸದಸ್ಯೆ ಲಕ್ಷ್ಮಮ್ಮ ಸಣ್ಣಪ್ಪ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>