<p><strong>ಎಚ್.ಡಿ.ಕೋಟೆ: </strong>ತಾಲ್ಲೂಕಿನಾದ್ಯಂತ ಉತ್ತಮ ಮಳೆಯಿಂದ ರೈತರ ಮೊಗದಲ್ಲಿ ಸಂತೋಷ ಮೂಡಿದ್ದರೆ, ತಾಲ್ಲೂಕಿನ ಬೆಳಗನಹಳ್ಳಿ ಗ್ರಾಮದ ರೈತರೊಬ್ಬರ ಜಮೀನಿನಲ್ಲಿ ಬೆಳೆದ ಹತ್ತಿ ಕೊಳೆತು ಹೋಗುತ್ತಿದೆ.<br /> <br /> ತಾಲ್ಲೂಕು ಕೇಂದ್ರದಿಂದ 3 ಕಿ.ಮೀ. ದೂರದಲ್ಲಿರುವ ಬೆಳಗನಹಳ್ಳಿ ಗ್ರಾಮದಲ್ಲಿ ನಾಗೇಗೌಡ ಎಂಬವರು 2 ಎಕರೆ ಜಮೀನಿನಲ್ಲಿ ಹತ್ತಿಯನ್ನು ಬಿತ್ತನೆ ಮಾಡಿದ್ದರು. ಉತ್ತಮವಾಗಿ ಬೆಳೆದ ಬೆಳೆ ಹೂ ಬಿಡುವ ವೇಳೆಯಲ್ಲಿ ಕೊಳೆತಿದ್ದು ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ಕೃಷಿ ಇಲಾಖೆಗೆ ದೂರು ನೀಡಿದ್ದು, ಅಧಿಕಾರಿಗಳು ಬಂದು ಸ್ಥಳ ಪರಿಶೀಲಿಸುವುದಾಗಿ ತಿಳಿಸಿದ್ದಾರೆ ಎಂದು ನಾಗೇಗೌಡ ಅಳಲು ತೋಡಿಕೊಂಡಿದ್ದಾರೆ.<br /> <br /> ಕೃಷಿ ಇಲಾಖಾಧಿಕಾರಿ ವೆಂಕಟೇಶ್ ಅವರನ್ನು ಸಂಪರ್ಕಿಸಿದಾಗ ಎಡೆಬಿಡದೇ ಸುರಿದ ಮಳೆಯಿಂದಾಗಿ ಹತ್ತಿ ಗಿಡಗಳಿಗೆ ನಿಗದಿಗಿಂತ ಹೆಚ್ಚು ನೀರು ಬಂದು ಅತೀವ ತೇವಾಂಶದಿಂದ ಈ ರೀತಿ ಆಗಿದೆ ಎಂದರು. ವಾಣಿಜ್ಯ ಬೆಳೆ ಹತ್ತಿಯನ್ನೇ ನಂಬಿ ಬದುಕುತ್ತಿದ್ದ ನಾಗೇಗೌಡ ಕುಟುಂಬ ತೀವ್ರ ಸಂಕಷ್ಟಕ್ಕೆ ಸಿಲುಕಿದೆ.<br /> <br /> <strong>ಪಿಂಚಣಿ ಅದಾಲತ್ ನಾಳೆ</strong><br /> ಪಿರಿಯಾಪಟ್ಟಣ: ತಾಲ್ಲೂಕಿನ ಬೆಟ್ಟದಪುರ ಗ್ರಾಮದಲ್ಲಿ ಜುಲೈ 11 ರಂದು ಬೆಳಿಗ್ಗೆ 11ಕ್ಕೆ ಹಾಗೂ ರಾವಂದೂರು ಗ್ರಾಮದಲ್ಲಿ ಮಧ್ಯಾಹ್ನ 1ಕ್ಕೆ ಪಿಂಚಣಿ ಅದಾಲತ್ ನಡೆಯಲಿದೆ ಎಂದು ತಹಶೀಲ್ದಾರ್ ಎಂ.ಕೆ. ಸವಿತಾ ತಿಳಿಸಿದ್ದಾರೆ. ಉಪವಿಭಾಗಾಧಿಕಾರಿಗಳು ಅಧ್ಯಕ್ಷತೆ ವಹಿಸುವರು. ಸಂಬಂಧಿಸಿದ ಹೋಬಳಿಯ ಸಾರ್ವಜನಿಕರು ಅಹವಾಲುಗಳನ್ನು ಸಲ್ಲಿಸಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಎಚ್.ಡಿ.ಕೋಟೆ: </strong>ತಾಲ್ಲೂಕಿನಾದ್ಯಂತ ಉತ್ತಮ ಮಳೆಯಿಂದ ರೈತರ ಮೊಗದಲ್ಲಿ ಸಂತೋಷ ಮೂಡಿದ್ದರೆ, ತಾಲ್ಲೂಕಿನ ಬೆಳಗನಹಳ್ಳಿ ಗ್ರಾಮದ ರೈತರೊಬ್ಬರ ಜಮೀನಿನಲ್ಲಿ ಬೆಳೆದ ಹತ್ತಿ ಕೊಳೆತು ಹೋಗುತ್ತಿದೆ.<br /> <br /> ತಾಲ್ಲೂಕು ಕೇಂದ್ರದಿಂದ 3 ಕಿ.ಮೀ. ದೂರದಲ್ಲಿರುವ ಬೆಳಗನಹಳ್ಳಿ ಗ್ರಾಮದಲ್ಲಿ ನಾಗೇಗೌಡ ಎಂಬವರು 2 ಎಕರೆ ಜಮೀನಿನಲ್ಲಿ ಹತ್ತಿಯನ್ನು ಬಿತ್ತನೆ ಮಾಡಿದ್ದರು. ಉತ್ತಮವಾಗಿ ಬೆಳೆದ ಬೆಳೆ ಹೂ ಬಿಡುವ ವೇಳೆಯಲ್ಲಿ ಕೊಳೆತಿದ್ದು ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ಕೃಷಿ ಇಲಾಖೆಗೆ ದೂರು ನೀಡಿದ್ದು, ಅಧಿಕಾರಿಗಳು ಬಂದು ಸ್ಥಳ ಪರಿಶೀಲಿಸುವುದಾಗಿ ತಿಳಿಸಿದ್ದಾರೆ ಎಂದು ನಾಗೇಗೌಡ ಅಳಲು ತೋಡಿಕೊಂಡಿದ್ದಾರೆ.<br /> <br /> ಕೃಷಿ ಇಲಾಖಾಧಿಕಾರಿ ವೆಂಕಟೇಶ್ ಅವರನ್ನು ಸಂಪರ್ಕಿಸಿದಾಗ ಎಡೆಬಿಡದೇ ಸುರಿದ ಮಳೆಯಿಂದಾಗಿ ಹತ್ತಿ ಗಿಡಗಳಿಗೆ ನಿಗದಿಗಿಂತ ಹೆಚ್ಚು ನೀರು ಬಂದು ಅತೀವ ತೇವಾಂಶದಿಂದ ಈ ರೀತಿ ಆಗಿದೆ ಎಂದರು. ವಾಣಿಜ್ಯ ಬೆಳೆ ಹತ್ತಿಯನ್ನೇ ನಂಬಿ ಬದುಕುತ್ತಿದ್ದ ನಾಗೇಗೌಡ ಕುಟುಂಬ ತೀವ್ರ ಸಂಕಷ್ಟಕ್ಕೆ ಸಿಲುಕಿದೆ.<br /> <br /> <strong>ಪಿಂಚಣಿ ಅದಾಲತ್ ನಾಳೆ</strong><br /> ಪಿರಿಯಾಪಟ್ಟಣ: ತಾಲ್ಲೂಕಿನ ಬೆಟ್ಟದಪುರ ಗ್ರಾಮದಲ್ಲಿ ಜುಲೈ 11 ರಂದು ಬೆಳಿಗ್ಗೆ 11ಕ್ಕೆ ಹಾಗೂ ರಾವಂದೂರು ಗ್ರಾಮದಲ್ಲಿ ಮಧ್ಯಾಹ್ನ 1ಕ್ಕೆ ಪಿಂಚಣಿ ಅದಾಲತ್ ನಡೆಯಲಿದೆ ಎಂದು ತಹಶೀಲ್ದಾರ್ ಎಂ.ಕೆ. ಸವಿತಾ ತಿಳಿಸಿದ್ದಾರೆ. ಉಪವಿಭಾಗಾಧಿಕಾರಿಗಳು ಅಧ್ಯಕ್ಷತೆ ವಹಿಸುವರು. ಸಂಬಂಧಿಸಿದ ಹೋಬಳಿಯ ಸಾರ್ವಜನಿಕರು ಅಹವಾಲುಗಳನ್ನು ಸಲ್ಲಿಸಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>