<p>ದೊಡ್ಡಬಳ್ಳಾಪುರ: ನ್ಯಾಯಾಲಯಕ್ಕೆ ಪ್ರತಿ ದಿನ ಬರುವ ಕಕ್ಷಿದಾರರು ಹಾಗೂ ವಕೀಲರಿಗೆ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಸೂಕ್ತ ಮೂಲಸೌಲಭ್ಯಗಳನ್ನು ಕಲ್ಪಿಸಿಕೊಡಬೇಕು ಎಂದು ಯುವ ವಕೀಲ ರವಿ ಮಾವಿನಕುಂಟೆ ಶಾಸಕರಲ್ಲಿ ಮನವಿ ಮಾಡಿದರು.<br /> <br /> ತಾಲ್ಲೂಕು ವಕೀಲರ ಸಂಘದ ವತಿಯಿಂದ ನಗರದ ನ್ಯಾಯಾಲಯ ಆವರಣದಲ್ಲಿನ ಸಂಘದ ಕಚೇರಿಯಲ್ಲಿ ನೂತನ ಶಾಸಕರನ್ನು ಅಭಿನಂದಿಸಿ ಅವರು ಮಾತನಾಡಿದರು. <br /> <br /> `ಇತ್ತೀಚಿನ ದಿನಗಳಲ್ಲಿ ಯುವ ವಕೀಲರ ಸಂಖ್ಯೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಸಂಘದ ಕಚೇರಿಯಲ್ಲಿ ವಕೀಲರಿಗಾಗಿ ಗ್ರಂಥಾಲಯ ಸ್ಥಾಪನೆ ಅಗತ್ಯವಾಗಿದೆ. ಶಾಸಕರು ತಮ್ಮ ಅನುದಾನದಲ್ಲಿ ಗ್ರಂಥಾಲಯಕ್ಕೆ ಸಹಕಾರ ನೀಡಬೇಕು' ಎಂದು ಅವರು ಮನವಿ ಮಾಡಿದರು.<br /> <br /> ತಾಲ್ಲೂಕು ವಕೀಲರ ಸಂಘದ ಉಪಾಧ್ಯಕ್ಷ ಎಂ.ಕೃಷ್ಣಮೂರ್ತಿ ಮಾತನಾಡಿ, `ತಾಲ್ಲೂಕಿನಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ ರಾಜಿ ಸಂಧಾನದ ಮೂಲಕ ಎರಡು ಸಾವಿರ ವಿವಾದಗಳನ್ನು ಇತ್ಯರ್ಥಗೊಳಿಸಲಾಗಿದೆ. ಅಲ್ಲದೆ ಪ್ರತಿ ಹೋಬಳಿಯಲ್ಲೂ ಕಾನೂನು ರಥ ಯಾತ್ರೆ ಮೂಲಕ ಜನ ಸಾಮಾನ್ಯರಿಗೆ ದಿನನಿತ್ಯ ಅಗತ್ಯ ಇರುವ ಕಾನೂನಿನ ಅರಿವು ಮೂಡಿಸಲಾಗಿದೆ' ಎಂದು ಅವರು ಹೇಳಿದರು.<br /> <br /> ವಕೀಲರ ಸಂಘದ ವತಿಯಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಶಾಸಕ ಟಿ.ವೆಂಕಟರಮಣಯ್ಯ, `ಗ್ರಂಥಾಲಯ ಹಾಗೂ ನ್ಯಾಯಾಲಯ ಆವರಣದಲ್ಲಿ ಅಗತ್ಯ ಇರುವ ಮೂಲ ಸೌಲಭ್ಯಗಳನ್ನು ಕಲ್ಪಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು. ತಾಲ್ಲೂಕಿನಲ್ಲಿ ಭ್ರಷ್ಟಾಚಾರ ರಹಿತ ಆಡಳಿತ ನೀಡಲು ವಕೀಲರ ಸಹಕಾರ, ಸಲಹೆಗಳು ಅಗತ್ಯ' ಎಂದು ಹೇಳಿದರು.<br /> <br /> ವಕೀಲರ ಸಂಘದ ತಾಲ್ಲೂಕು ಅಧ್ಯಕ್ಷ ಬಿ.ಸಿ.ಜನಾರ್ಧನ್, ಕಾರ್ಯದರ್ಶಿ ಬಿ.ಎಂ.ಬೈರೇಗೌಡ, ಖಜಾಂಚಿ ಡಿ.ಎಂ.ರೇಣುಕಾ ಮೂರ್ತಿ, ಜಂಟಿ ಕಾರ್ಯದರ್ಶಿ ಎ.ಕೃಷ್ಣಮೂರ್ತಿ ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದೊಡ್ಡಬಳ್ಳಾಪುರ: ನ್ಯಾಯಾಲಯಕ್ಕೆ ಪ್ರತಿ ದಿನ ಬರುವ ಕಕ್ಷಿದಾರರು ಹಾಗೂ ವಕೀಲರಿಗೆ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಸೂಕ್ತ ಮೂಲಸೌಲಭ್ಯಗಳನ್ನು ಕಲ್ಪಿಸಿಕೊಡಬೇಕು ಎಂದು ಯುವ ವಕೀಲ ರವಿ ಮಾವಿನಕುಂಟೆ ಶಾಸಕರಲ್ಲಿ ಮನವಿ ಮಾಡಿದರು.<br /> <br /> ತಾಲ್ಲೂಕು ವಕೀಲರ ಸಂಘದ ವತಿಯಿಂದ ನಗರದ ನ್ಯಾಯಾಲಯ ಆವರಣದಲ್ಲಿನ ಸಂಘದ ಕಚೇರಿಯಲ್ಲಿ ನೂತನ ಶಾಸಕರನ್ನು ಅಭಿನಂದಿಸಿ ಅವರು ಮಾತನಾಡಿದರು. <br /> <br /> `ಇತ್ತೀಚಿನ ದಿನಗಳಲ್ಲಿ ಯುವ ವಕೀಲರ ಸಂಖ್ಯೆ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಸಂಘದ ಕಚೇರಿಯಲ್ಲಿ ವಕೀಲರಿಗಾಗಿ ಗ್ರಂಥಾಲಯ ಸ್ಥಾಪನೆ ಅಗತ್ಯವಾಗಿದೆ. ಶಾಸಕರು ತಮ್ಮ ಅನುದಾನದಲ್ಲಿ ಗ್ರಂಥಾಲಯಕ್ಕೆ ಸಹಕಾರ ನೀಡಬೇಕು' ಎಂದು ಅವರು ಮನವಿ ಮಾಡಿದರು.<br /> <br /> ತಾಲ್ಲೂಕು ವಕೀಲರ ಸಂಘದ ಉಪಾಧ್ಯಕ್ಷ ಎಂ.ಕೃಷ್ಣಮೂರ್ತಿ ಮಾತನಾಡಿ, `ತಾಲ್ಲೂಕಿನಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ ರಾಜಿ ಸಂಧಾನದ ಮೂಲಕ ಎರಡು ಸಾವಿರ ವಿವಾದಗಳನ್ನು ಇತ್ಯರ್ಥಗೊಳಿಸಲಾಗಿದೆ. ಅಲ್ಲದೆ ಪ್ರತಿ ಹೋಬಳಿಯಲ್ಲೂ ಕಾನೂನು ರಥ ಯಾತ್ರೆ ಮೂಲಕ ಜನ ಸಾಮಾನ್ಯರಿಗೆ ದಿನನಿತ್ಯ ಅಗತ್ಯ ಇರುವ ಕಾನೂನಿನ ಅರಿವು ಮೂಡಿಸಲಾಗಿದೆ' ಎಂದು ಅವರು ಹೇಳಿದರು.<br /> <br /> ವಕೀಲರ ಸಂಘದ ವತಿಯಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಶಾಸಕ ಟಿ.ವೆಂಕಟರಮಣಯ್ಯ, `ಗ್ರಂಥಾಲಯ ಹಾಗೂ ನ್ಯಾಯಾಲಯ ಆವರಣದಲ್ಲಿ ಅಗತ್ಯ ಇರುವ ಮೂಲ ಸೌಲಭ್ಯಗಳನ್ನು ಕಲ್ಪಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು. ತಾಲ್ಲೂಕಿನಲ್ಲಿ ಭ್ರಷ್ಟಾಚಾರ ರಹಿತ ಆಡಳಿತ ನೀಡಲು ವಕೀಲರ ಸಹಕಾರ, ಸಲಹೆಗಳು ಅಗತ್ಯ' ಎಂದು ಹೇಳಿದರು.<br /> <br /> ವಕೀಲರ ಸಂಘದ ತಾಲ್ಲೂಕು ಅಧ್ಯಕ್ಷ ಬಿ.ಸಿ.ಜನಾರ್ಧನ್, ಕಾರ್ಯದರ್ಶಿ ಬಿ.ಎಂ.ಬೈರೇಗೌಡ, ಖಜಾಂಚಿ ಡಿ.ಎಂ.ರೇಣುಕಾ ಮೂರ್ತಿ, ಜಂಟಿ ಕಾರ್ಯದರ್ಶಿ ಎ.ಕೃಷ್ಣಮೂರ್ತಿ ಮತ್ತಿತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>