<p><strong>ಬೆಂಗಳೂರು: </strong>ನ್ಯಾಯಮೂರ್ತಿಗಳ ವಸತಿಗೃಹಕ್ಕೆ ಪೀಠೋಪಕರಣಗಳನ್ನು ಒದಗಿಸುವ ಸಂಬಂಧ ಕರೆಯಲಾಗಿರುವ ಟೆಂಡರ್ನಲ್ಲಿಯೇ ಅವ್ಯವಹಾರ ನಡೆದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಹೈಕೋರ್ಟ್, ಟೆಂಡರ್ ಅಧಿಸೂಚನೆಯನ್ನು ರದ್ದು ಮಾಡಿ ಮಂಗಳವಾರ ಆದೇಶಿಸಿದೆ.<br /> </p>.<table align="right" border="1" cellpadding="3" cellspacing="4" width="350"> <tbody> <tr> <td bgcolor="#f2f0f0"> <p><strong>ಶಸ್ತ್ರಚಿಕಿತ್ಸೆ ಪರವಾನಗಿಗೆ ತಡೆ<br /> </strong><span style="font-size: small">ನಗರದ ಬನ್ನೇರುಘಟ್ಟ ರಸ್ತೆಯಲ್ಲಿನ ಫೋರ್ಟಿಸ್ ಆಸ್ಪತ್ರೆಯಲ್ಲಿ ಮೂತ್ರಪಿಂಡ ಶಸ್ತ್ರಚಿಕಿತ್ಸೆ ನಡೆಸಲು ನೀಡಲಾಗಿರುವ ಪರವಾನಗಿಗೆ ಹೈಕೋರ್ಟ್ ಮಂಗಳವಾರ ತಡೆ ನೀಡಿದೆ.<br /> 2010ನೇ ಸಾಲಿನಲ್ಲಿ ಮೇಜರ್ ಪಂಕಜ್ ರಾಯ್ ಅವರ ಪತ್ನಿಯ ಮೂತ್ರಪಿಂಡ ಶಸ್ತ್ರಚಿಕಿತ್ಸೆ ಸಂದರ್ಭದಲ್ಲಿ ಕರ್ತವ್ಯಲೋಪ ಎಸಗಿದ್ದ ಹಿನ್ನೆಲೆಯಲ್ಲಿ ಅವರು ಸಲ್ಲಿಸಿದ್ದ ದೂರಿನ ಆಧಾರದ ಮೇಲೆ ಈ ಶಸ್ತ್ರಚಿಕಿತ್ಸೆಯ ಪರವಾನಗಿಯನ್ನು ರದ್ದು ಮಾಡಲಾಗಿದೆ. ಈ ರದ್ದತಿಯನ್ನು ಆಸ್ಪತ್ರೆಯು ಹೈಕೋರ್ಟ್ನ ಏಕಸದಸ್ಯ ಪೀಠದ ಮುಂದೆ ಈ ಹಿಂದೆ ಪ್ರಶ್ನಿಸಿ, ಅದಕ್ಕೆ ತಡೆ ಪಡೆದುಕೊಂಡಿತ್ತು. <br /> ಈ ತಡೆಯಾಜ್ಞೆಯನ್ನು ತೆರವುಗೊಳಿಸುವಂತೆ ಕೋರಿ ಈಗ ಪಂಕಜ್ ರಾಯ್ ಅವರು ವಿಭಾಗೀಯ ಪೀಠದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಮೂರ್ತಿ ಡಿ.ವಿ.ಶೈಲೇಂದ್ರಕುಮಾರ್ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ಮುಂದೂಡಿದೆ.</span></p> </td> </tr> </tbody> </table>.<p><br /> ಲೋಕೋಪಯೋಗಿ ಇಲಾಖೆ 2011ರ ನ.18ರಂದು ಕರೆದಿರುವ ಟೆಂಡರ್ ಅಧಿಸೂಚನೆ ಇದಾಗಿದೆ. ಹೊಸದಾಗಿ ಟೆಂಡರ್ ಕರೆಯುವಂತೆ ನ್ಯಾಯಮೂರ್ತಿ ಡಿ.ವಿ.ಶೈಲೇಂದ್ರಕುಮಾರ್ ನೇತೃತ್ವದ ವಿಭಾಗೀಯ ಪೀಠ ಆದೇಶಿಸಿದೆ. `ಏಷಿಯನ್ ಫ್ಯಾಬ್ ಟೆಕ್ ಲಿಮಿಟೆಡ್~ಗೆ ಟೆಂಡರ್ ನೀಡಿರುವುದನ್ನು ಪ್ರಶ್ನಿಸಿ `ಸಂಜಯ್ ಮಾರ್ಕೆಟಿಂಗ್ ಅಂಡ್ ಪಬ್ಲಿಸಿಟಿ ಸರ್ವೀಸಸ್~ ಕಂಪೆನಿ ಅರ್ಜಿ ಸಲ್ಲಿಸಿತ್ತು. ಎಲ್ಲ ನಿಯಮಗಳನ್ನು ಗಾಳಿಗೆ ತೂರಿ ಟೆಂಡರ್ ನೀಡಲಾಗಿದೆ ಎನ್ನುವುದು ಅದರ ವಾದವಾಗಿತ್ತು. <br /> <br /> ಟೆಂಡರ್ ನಿಯಮ ಉಲ್ಲಂಘಿಸಿರುವುದಕ್ಕೆ ನ್ಯಾಯಮೂರ್ತಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. `ಭ್ರಷ್ಟಾಚಾರಕ್ಕೆ ಇನ್ನೊಂದು ಹೆಸರು ಲೋಕೋಪಯೋಗಿ ಇಲಾಖೆ. ಹಲವು ಪ್ರಕರಣಗಳಲ್ಲಿ ಇದೇ ರೀತಿ ಟೆಂಡರ್ ನಿಯಮಗಳನ್ನು ಗಾಳಿಗೆ ತೂರಿರುವುದು ನಮ್ಮ ಗಮನಕ್ಕೆ ಬಂದಿದೆ~ ಎಂದು ಅವರು ಹೇಳಿ ಅಧಿಸೂಚನೆ ರದ್ದು ಮಾಡಿದರು. ಏಷಿಯನ್~ ಕಂಪೆನಿ ಈಗಾಗಲೇ ಅರ್ಧದಷ್ಟು ಕೆಲಸ ಮುಗಿಸಿರುವ ಹಿನ್ನೆಲೆಯಲ್ಲಿ ಅದಕ್ಕೆ ಪರಿಹಾರ ನೀಡುವ ಸಂಬಂಧ ಪರಿಶೀಲಿಸುವಂತೆಯೂ ನ್ಯಾಯಮೂರ್ತಿಗಳು ಇಲಾಖೆಗೆ ನಿರ್ದೇಶಿಸಿದ್ದಾರೆ.<br /> <br /> <strong>ಮಾನವ ಬಳಕೆ: ಮಾಹಿತಿಗೆ ಆದೇಶ</strong><br /> ಮ್ಯಾನ್ಹೋಲ್ ಮತ್ತು ಒಳಚರಂಡಿ ಶುಚಿಗೊಳಿಸಲು ಪೌರಕಾರ್ಮಿಕರನ್ನು ಬಳಕೆ ಮಾಡದಂತೆ ಇದುವರೆಗೆ ತೆಗೆದುಕೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡುವಂತೆ ಹೈಕೋರ್ಟ್ ಸರ್ಕಾರಕ್ಕೆ ಮಂಗಳವಾರ ನಿರ್ದೇಶಿಸಿದೆ.<br /> <br /> ಪೌರ ಕಾರ್ಮಿಕರ ಬಳಕೆಯನ್ನು ವಿರೋಧಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಈ ಆದೇಶ ಹೊರಡಿಸಲಾಗಿದೆ.ಬೆಂಗಳೂರು ನೀರು ಸರಬರಾಜು ಮಂಡಳಿಯು ಪ್ರಮಾಣ ಪತ್ರ ಸಲ್ಲಿಸಿದ್ದು, ತಾನು ಇಲ್ಲಿಯವರೆಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದೆ. <br /> <br /> ಮ್ಯಾನ್ಹೋಲ್ ಶುಚಿಗೊಳಿಸಲು ಹೋಗಿ ಸಾವನ್ನಪ್ಪಿರುವ ಹುಬ್ಬಳ್ಳಿ, ಧಾರವಾಡ, ಕೋಲಾರ ಮೂಲದ ಭಂಗಿಗಳ ಕುಟುಂಬ ವರ್ಗಕ್ಕೆ ಪರಿಹಾರವನ್ನು ನೀಡಲಾಗಿದೆ ಎಂದು ಅದು ವಿವರಿಸಿದೆ. ವಿಚಾರಣೆಯನ್ನು ಮುಂದೂಡಲಾಗಿದೆ.<br /> <br /> <strong>ಮೂರು ತಿಂಗಳ ಅನುಮತಿ</strong><br /> ಆನೆಗಳ ಹಾವಳಿ ತಪ್ಪಿಸುವ ಸಂಬಂಧ ಮೂರು ತಿಂಗಳ ಒಳಗೆ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಈ ಸಲುವಾಗಿ ರಚಿಸಿರುವ ಸಮಿತಿಗೆ ಹೈಕೋರ್ಟ್ ಮಂಗಳವಾರ ನಿರ್ದೇಶಿಸಿದೆ. ಆನೆಗಳ ಹಾವಳಿಗೆ ಸಂಬಂಧಿಸಿದಂತೆ ಪತ್ರಿಕೆಗಳಲ್ಲಿನ ವರದಿಯ ಆಧಾರದ ಮೇಲೆ ನ್ಯಾಯಾಲಯವೇ ಖುದ್ದಾಗಿ ಪ್ರಕರಣ ದಾಖಲಿಸಿಕೊಂಡು ನಡೆಸುತ್ತಿರುವ ವಿಚಾರಣೆ ಇದಾಗಿದೆ. ನ್ಯಾಯಾಲಯವೇ ಈ ಸಂಬಂಧ ಸಮಿತಿ ರಚಿಸಿದೆ. ಹಾವಳಿ ತಡೆಗೆ ತೆಗೆದುಕೊಳ್ಳಬಹುದಾದ ಕ್ರಮಗಳ ಕುರಿತು ಅದು ಚರ್ಚಿಸುತ್ತಿರುವ ಹಿನ್ನೆಲೆಯಲ್ಲಿ ಮೂರು ತಿಂಗಳಲ್ಲಿ ಪೂರ್ಣ ವರದಿ ನೀಡುವಂತೆ ಕೋರ್ಟ್ ಆದೇಶಿಸಿದೆ. <br /> <br /> <strong>ಸಂಚಾರಿ ಪೀಠ ಕಾಯಂ: ನೋಟಿಸ್</strong><br /> ಗುಲ್ಬರ್ಗದ ಸಂಚಾರಿ ಪೀಠವನ್ನು ಕಾಯಂಗೊಳಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಗೆ ಸಂಬಂಧಿಸಿದಂತೆ ಸರ್ಕಾರ, ಹೈಕೋರ್ಟ್ ರಿಜಿಸ್ಟ್ರಾರ್ ಸೇರಿದಂತೆ ಇತರ ಪ್ರತಿವಾದಿಗಳಿಗೆ ಹೈಕೋರ್ಟ್ ಮಂಗಳವಾರ ನೋಟಿಸ್ ಜಾರಿಗೆ ಆದೇಶಿಸಿದೆ. <br /> <br /> ವಕೀಲ ಆರ್.ವೀರಶೆಟ್ಟಿ ಎನ್ನುವವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಡಿ.ವಿ.ಶೈಲೇಂದ್ರಕುಮಾರ್ ನೇತೃತ್ವದ ವಿಭಾಗೀಯ ಪೀಠ ನಡೆಸುತ್ತಿದೆ.<br /> `ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಯು ಬೆಂಗಳೂರಿನ ಪ್ರಧಾನ ಪೀಠದಲ್ಲಿಯೇ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ ಭಾಗಗಳ ಜನತೆಗೆ ಇಲ್ಲಿಯವರೆಗೆ ಬರುವುದು ಕಷ್ಟ ಆಗುತ್ತಿದೆ. ಆದುದರಿಂದ ಅಲ್ಲಿಯೇ ಈ ಅರ್ಜಿಗಳ ವಿಚಾರಣೆ ನಡೆಯಬೇಕು~ ಎನ್ನುವುದೂ ಅರ್ಜಿದಾರರ ಮನವಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ನ್ಯಾಯಮೂರ್ತಿಗಳ ವಸತಿಗೃಹಕ್ಕೆ ಪೀಠೋಪಕರಣಗಳನ್ನು ಒದಗಿಸುವ ಸಂಬಂಧ ಕರೆಯಲಾಗಿರುವ ಟೆಂಡರ್ನಲ್ಲಿಯೇ ಅವ್ಯವಹಾರ ನಡೆದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಹೈಕೋರ್ಟ್, ಟೆಂಡರ್ ಅಧಿಸೂಚನೆಯನ್ನು ರದ್ದು ಮಾಡಿ ಮಂಗಳವಾರ ಆದೇಶಿಸಿದೆ.<br /> </p>.<table align="right" border="1" cellpadding="3" cellspacing="4" width="350"> <tbody> <tr> <td bgcolor="#f2f0f0"> <p><strong>ಶಸ್ತ್ರಚಿಕಿತ್ಸೆ ಪರವಾನಗಿಗೆ ತಡೆ<br /> </strong><span style="font-size: small">ನಗರದ ಬನ್ನೇರುಘಟ್ಟ ರಸ್ತೆಯಲ್ಲಿನ ಫೋರ್ಟಿಸ್ ಆಸ್ಪತ್ರೆಯಲ್ಲಿ ಮೂತ್ರಪಿಂಡ ಶಸ್ತ್ರಚಿಕಿತ್ಸೆ ನಡೆಸಲು ನೀಡಲಾಗಿರುವ ಪರವಾನಗಿಗೆ ಹೈಕೋರ್ಟ್ ಮಂಗಳವಾರ ತಡೆ ನೀಡಿದೆ.<br /> 2010ನೇ ಸಾಲಿನಲ್ಲಿ ಮೇಜರ್ ಪಂಕಜ್ ರಾಯ್ ಅವರ ಪತ್ನಿಯ ಮೂತ್ರಪಿಂಡ ಶಸ್ತ್ರಚಿಕಿತ್ಸೆ ಸಂದರ್ಭದಲ್ಲಿ ಕರ್ತವ್ಯಲೋಪ ಎಸಗಿದ್ದ ಹಿನ್ನೆಲೆಯಲ್ಲಿ ಅವರು ಸಲ್ಲಿಸಿದ್ದ ದೂರಿನ ಆಧಾರದ ಮೇಲೆ ಈ ಶಸ್ತ್ರಚಿಕಿತ್ಸೆಯ ಪರವಾನಗಿಯನ್ನು ರದ್ದು ಮಾಡಲಾಗಿದೆ. ಈ ರದ್ದತಿಯನ್ನು ಆಸ್ಪತ್ರೆಯು ಹೈಕೋರ್ಟ್ನ ಏಕಸದಸ್ಯ ಪೀಠದ ಮುಂದೆ ಈ ಹಿಂದೆ ಪ್ರಶ್ನಿಸಿ, ಅದಕ್ಕೆ ತಡೆ ಪಡೆದುಕೊಂಡಿತ್ತು. <br /> ಈ ತಡೆಯಾಜ್ಞೆಯನ್ನು ತೆರವುಗೊಳಿಸುವಂತೆ ಕೋರಿ ಈಗ ಪಂಕಜ್ ರಾಯ್ ಅವರು ವಿಭಾಗೀಯ ಪೀಠದಲ್ಲಿ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಮೂರ್ತಿ ಡಿ.ವಿ.ಶೈಲೇಂದ್ರಕುಮಾರ್ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ಮುಂದೂಡಿದೆ.</span></p> </td> </tr> </tbody> </table>.<p><br /> ಲೋಕೋಪಯೋಗಿ ಇಲಾಖೆ 2011ರ ನ.18ರಂದು ಕರೆದಿರುವ ಟೆಂಡರ್ ಅಧಿಸೂಚನೆ ಇದಾಗಿದೆ. ಹೊಸದಾಗಿ ಟೆಂಡರ್ ಕರೆಯುವಂತೆ ನ್ಯಾಯಮೂರ್ತಿ ಡಿ.ವಿ.ಶೈಲೇಂದ್ರಕುಮಾರ್ ನೇತೃತ್ವದ ವಿಭಾಗೀಯ ಪೀಠ ಆದೇಶಿಸಿದೆ. `ಏಷಿಯನ್ ಫ್ಯಾಬ್ ಟೆಕ್ ಲಿಮಿಟೆಡ್~ಗೆ ಟೆಂಡರ್ ನೀಡಿರುವುದನ್ನು ಪ್ರಶ್ನಿಸಿ `ಸಂಜಯ್ ಮಾರ್ಕೆಟಿಂಗ್ ಅಂಡ್ ಪಬ್ಲಿಸಿಟಿ ಸರ್ವೀಸಸ್~ ಕಂಪೆನಿ ಅರ್ಜಿ ಸಲ್ಲಿಸಿತ್ತು. ಎಲ್ಲ ನಿಯಮಗಳನ್ನು ಗಾಳಿಗೆ ತೂರಿ ಟೆಂಡರ್ ನೀಡಲಾಗಿದೆ ಎನ್ನುವುದು ಅದರ ವಾದವಾಗಿತ್ತು. <br /> <br /> ಟೆಂಡರ್ ನಿಯಮ ಉಲ್ಲಂಘಿಸಿರುವುದಕ್ಕೆ ನ್ಯಾಯಮೂರ್ತಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. `ಭ್ರಷ್ಟಾಚಾರಕ್ಕೆ ಇನ್ನೊಂದು ಹೆಸರು ಲೋಕೋಪಯೋಗಿ ಇಲಾಖೆ. ಹಲವು ಪ್ರಕರಣಗಳಲ್ಲಿ ಇದೇ ರೀತಿ ಟೆಂಡರ್ ನಿಯಮಗಳನ್ನು ಗಾಳಿಗೆ ತೂರಿರುವುದು ನಮ್ಮ ಗಮನಕ್ಕೆ ಬಂದಿದೆ~ ಎಂದು ಅವರು ಹೇಳಿ ಅಧಿಸೂಚನೆ ರದ್ದು ಮಾಡಿದರು. ಏಷಿಯನ್~ ಕಂಪೆನಿ ಈಗಾಗಲೇ ಅರ್ಧದಷ್ಟು ಕೆಲಸ ಮುಗಿಸಿರುವ ಹಿನ್ನೆಲೆಯಲ್ಲಿ ಅದಕ್ಕೆ ಪರಿಹಾರ ನೀಡುವ ಸಂಬಂಧ ಪರಿಶೀಲಿಸುವಂತೆಯೂ ನ್ಯಾಯಮೂರ್ತಿಗಳು ಇಲಾಖೆಗೆ ನಿರ್ದೇಶಿಸಿದ್ದಾರೆ.<br /> <br /> <strong>ಮಾನವ ಬಳಕೆ: ಮಾಹಿತಿಗೆ ಆದೇಶ</strong><br /> ಮ್ಯಾನ್ಹೋಲ್ ಮತ್ತು ಒಳಚರಂಡಿ ಶುಚಿಗೊಳಿಸಲು ಪೌರಕಾರ್ಮಿಕರನ್ನು ಬಳಕೆ ಮಾಡದಂತೆ ಇದುವರೆಗೆ ತೆಗೆದುಕೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡುವಂತೆ ಹೈಕೋರ್ಟ್ ಸರ್ಕಾರಕ್ಕೆ ಮಂಗಳವಾರ ನಿರ್ದೇಶಿಸಿದೆ.<br /> <br /> ಪೌರ ಕಾರ್ಮಿಕರ ಬಳಕೆಯನ್ನು ವಿರೋಧಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಈ ಆದೇಶ ಹೊರಡಿಸಲಾಗಿದೆ.ಬೆಂಗಳೂರು ನೀರು ಸರಬರಾಜು ಮಂಡಳಿಯು ಪ್ರಮಾಣ ಪತ್ರ ಸಲ್ಲಿಸಿದ್ದು, ತಾನು ಇಲ್ಲಿಯವರೆಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದೆ. <br /> <br /> ಮ್ಯಾನ್ಹೋಲ್ ಶುಚಿಗೊಳಿಸಲು ಹೋಗಿ ಸಾವನ್ನಪ್ಪಿರುವ ಹುಬ್ಬಳ್ಳಿ, ಧಾರವಾಡ, ಕೋಲಾರ ಮೂಲದ ಭಂಗಿಗಳ ಕುಟುಂಬ ವರ್ಗಕ್ಕೆ ಪರಿಹಾರವನ್ನು ನೀಡಲಾಗಿದೆ ಎಂದು ಅದು ವಿವರಿಸಿದೆ. ವಿಚಾರಣೆಯನ್ನು ಮುಂದೂಡಲಾಗಿದೆ.<br /> <br /> <strong>ಮೂರು ತಿಂಗಳ ಅನುಮತಿ</strong><br /> ಆನೆಗಳ ಹಾವಳಿ ತಪ್ಪಿಸುವ ಸಂಬಂಧ ಮೂರು ತಿಂಗಳ ಒಳಗೆ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಈ ಸಲುವಾಗಿ ರಚಿಸಿರುವ ಸಮಿತಿಗೆ ಹೈಕೋರ್ಟ್ ಮಂಗಳವಾರ ನಿರ್ದೇಶಿಸಿದೆ. ಆನೆಗಳ ಹಾವಳಿಗೆ ಸಂಬಂಧಿಸಿದಂತೆ ಪತ್ರಿಕೆಗಳಲ್ಲಿನ ವರದಿಯ ಆಧಾರದ ಮೇಲೆ ನ್ಯಾಯಾಲಯವೇ ಖುದ್ದಾಗಿ ಪ್ರಕರಣ ದಾಖಲಿಸಿಕೊಂಡು ನಡೆಸುತ್ತಿರುವ ವಿಚಾರಣೆ ಇದಾಗಿದೆ. ನ್ಯಾಯಾಲಯವೇ ಈ ಸಂಬಂಧ ಸಮಿತಿ ರಚಿಸಿದೆ. ಹಾವಳಿ ತಡೆಗೆ ತೆಗೆದುಕೊಳ್ಳಬಹುದಾದ ಕ್ರಮಗಳ ಕುರಿತು ಅದು ಚರ್ಚಿಸುತ್ತಿರುವ ಹಿನ್ನೆಲೆಯಲ್ಲಿ ಮೂರು ತಿಂಗಳಲ್ಲಿ ಪೂರ್ಣ ವರದಿ ನೀಡುವಂತೆ ಕೋರ್ಟ್ ಆದೇಶಿಸಿದೆ. <br /> <br /> <strong>ಸಂಚಾರಿ ಪೀಠ ಕಾಯಂ: ನೋಟಿಸ್</strong><br /> ಗುಲ್ಬರ್ಗದ ಸಂಚಾರಿ ಪೀಠವನ್ನು ಕಾಯಂಗೊಳಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಗೆ ಸಂಬಂಧಿಸಿದಂತೆ ಸರ್ಕಾರ, ಹೈಕೋರ್ಟ್ ರಿಜಿಸ್ಟ್ರಾರ್ ಸೇರಿದಂತೆ ಇತರ ಪ್ರತಿವಾದಿಗಳಿಗೆ ಹೈಕೋರ್ಟ್ ಮಂಗಳವಾರ ನೋಟಿಸ್ ಜಾರಿಗೆ ಆದೇಶಿಸಿದೆ. <br /> <br /> ವಕೀಲ ಆರ್.ವೀರಶೆಟ್ಟಿ ಎನ್ನುವವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಡಿ.ವಿ.ಶೈಲೇಂದ್ರಕುಮಾರ್ ನೇತೃತ್ವದ ವಿಭಾಗೀಯ ಪೀಠ ನಡೆಸುತ್ತಿದೆ.<br /> `ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಯು ಬೆಂಗಳೂರಿನ ಪ್ರಧಾನ ಪೀಠದಲ್ಲಿಯೇ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ ಭಾಗಗಳ ಜನತೆಗೆ ಇಲ್ಲಿಯವರೆಗೆ ಬರುವುದು ಕಷ್ಟ ಆಗುತ್ತಿದೆ. ಆದುದರಿಂದ ಅಲ್ಲಿಯೇ ಈ ಅರ್ಜಿಗಳ ವಿಚಾರಣೆ ನಡೆಯಬೇಕು~ ಎನ್ನುವುದೂ ಅರ್ಜಿದಾರರ ಮನವಿ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>