<p><strong>ಬೆಂಗಳೂರು:</strong> ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಅವರ ಪುತ್ರರಾದ ಬಿ.ವೈ. ರಾಘವೇಂದ್ರ, ಬಿ.ವೈ. ವಿಜಯೇಂದ್ರ ಮುಂತಾದವರ ವಿರುದ್ಧದ ಭೂಹಗರಣದ ಕುರಿತಾದ ವಿಚಾರಣೆಯನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯವು ಅ.15ಕ್ಕೆ ಮುಂದೂಡಿದೆ.<br /> <br /> ಸ್ವಂತ ಹಾಗೂ ಕುಟುಂಬದ ಹಿತಾಸಕ್ತಿಗಾಗಿ ನಿಯಮ ಉಲ್ಲಂಘಿಸಿ ಹಲವು ಜಮೀನುಗಳನ್ನು ಸ್ವಾಧೀನ ಪ್ರಕ್ರಿಯೆಯಿಂದ ಕೈಬಿಟ್ಟಿರುವ ಆರೋಪಕ್ಕೆ ಸಂಬಂಧಿಸಿದಂತೆ ವಕೀಲ ಸಿರಾಜಿನ್ ಬಾಷಾ ಅವರು ದಾಖಲು ಮಾಡಿರುವ 2 ಮತ್ತು 3ನೇ ದೂರಿನ ವಿವಾದ ಇದಾಗಿದೆ.<br /> <br /> ಈ ದೂರಿಗೆ ಸಂಬಂಧಿಸಿದಂತೆ ಯಡಿಯೂರಪ್ಪ ನಿರೀಕ್ಷಣಾ ಜಾಮೀನು ಕೋರಿದ್ದ ಅರ್ಜಿಯ ವಾದ, ಪ್ರತಿವಾದಗಳನ್ನು ಕಳೆದ ವಾರ ಆಲಿಸಿ ಮುಗಿಸಿದ್ದ ನ್ಯಾಯಾಧೀಶ ಎನ್.ಕೆ.ಸುಧೀಂದ್ರ ರಾವ್ ಅವರು ಈ ಕುರಿತ ಆದೇಶವನ್ನು ಸೋಮವಾರ ಪ್ರಕಟಿಸಬೇಕಿತ್ತು. ಆದರೆ ಈ ಪ್ರಕರಣಗಳ ವಿಚಾರಣೆಗೆ ಹೈಕೋರ್ಟ್ ಕಳೆದ ಶುಕ್ರವಾರ ತಡೆ ನೀಡಿದೆ. <br /> <br /> ಈ ಕುರಿತು ಯಡಿಯೂರಪ್ಪನವರ ಪರ ವಕೀಲ ರವಿ ಬಿ. ನಾಯಕ್ ಅವರು ನ್ಯಾಯಾಧೀಶರ ಗಮನಕ್ಕೆ ತಂದರು. ಈ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಮುಂದೂಡಲಾಯಿತು.<br /> <br /> <strong>ಮಾನ್ಯವಾಗದ ಮನವಿ</strong>: ಹೈಕೋರ್ಟ್ನಿಂದ ಈಗ ಮಧ್ಯಂತರ ತಡೆಯಾಜ್ಞೆ ಮಾತ್ರ ಸಿಕ್ಕಿರುವ ಹಿನ್ನೆಲೆಯಲ್ಲಿ ಅಲ್ಲಿ ವಿಚಾರಣೆ ಮುಗಿಯುವವರೆಗೆ ವಿಶೇಷ ಕೋರ್ಟ್ನಲ್ಲಿನ ವಿಚಾರಣೆಯನ್ನು ಮುಂದೂಡುವಂತೆ ನಾಯಕ್ ಮನವಿ ಮಾಡಿಕೊಂಡರು.<br /> <br /> ಆದರೆ ಇದಕ್ಕೆ ನ್ಯಾ. ರಾವ್ ಒಪ್ಪಲಿಲ್ಲ. `ಹೈಕೋರ್ಟ್ ವಿಚಾರಣೆಯನ್ನು ಅ.14ಕ್ಕೆ ಮುಂದೂಡಿರುವ ಕಾರಣ, 15ರಂದೇ ಇಲ್ಲಿ ವಿಚಾರಣೆ ನಡೆಸಲಾಗುವುದು~ ಎಂದರು. `ಕೊನೆಯ ಪಕ್ಷ ಅ.22ರವರೆಗಾದರೂ ಸಮಯ ನೀಡಿ~ ಎಂಬ ವಕೀಲರ ಮನವಿಯನ್ನೂ ನ್ಯಾಯಾಧೀಶರು ಪುರಸ್ಕರಿಸಲಿಲ್ಲ. <br /> <br /> ಯಡಿಯೂರಪ್ಪನವರ ಜೊತೆಗೆ ಅವರ ಪುತ್ರರು, ಅಳಿಯ ಸೋಹನ್ಕುಮಾರ್, ಶಾಸಕರಾದ ಹೇಮಚಂದ್ರ ಸಾಗರ್, ಕೃಷ್ಣಯ್ಯ ಶೆಟ್ಟಿ ಸೇರಿದಂತೆ ಎಲ್ಲ ಆರೋಪಿಗಳು ಕೋರ್ಟ್ನಲ್ಲಿ ಹಾಜರು ಇದ್ದರು.<br /> <br /> <strong>ಕೇವಿಯಟ್ ಸಲ್ಲಿಕೆ:</strong> ಲೋಕಾಯುಕ್ತ ವಿಶೇಷ ಕೋರ್ಟ್ ವಿಚಾರಣೆಗೆ ಹೈಕೋರ್ಟ್ ಏಕಸದಸ್ಯ ಪೀಠ ತಡೆ ನೀಡಿರುವ ಆದೇಶವನ್ನು ವಕೀಲ ಬಾಷಾ ಅವರು ವಿಭಾಗೀಯ ಪೀಠದಲ್ಲಿ ಪ್ರಶ್ನಿಸಲಿರುವ ಹಿನ್ನೆಲೆಯಲ್ಲಿ, ಯಡಿಯೂರಪ್ಪನವರು `ಕೇವಿಯೆಟ್~ ಸಲ್ಲಿಸಿದ್ದಾರೆ. <br /> <br /> ಒಂದು ವೇಳೆ ಬಾಷಾ ಅವರು ಮೇಲ್ಮನವಿ ಸಲ್ಲಿಸಿದರೆ ತಮ್ಮ ವಾದವನ್ನು ಆಲಿಸದೆ ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಬಾರದು ಎಂದು `ಕೇವಿಯೆಟ್~ ನಲ್ಲಿ ಮನವಿ ಮಾಡಿಕೊಳ್ಳಲಾಗಿದೆ. ಏಕಸದಸ್ಯ ಪೀಠದ ಆದೇಶದ ಪ್ರತಿಯು ಬಾಷಾ ಅವರಿಗೆ ಇದುವರೆಗೆ ದೊರಕದ ಹಿನ್ನೆಲೆಯಲ್ಲಿ ಸೋಮವಾರ ಮೇಲ್ಮನವಿ ಸಲ್ಲಿಸಲು ಸಾಧ್ಯವಾಗಲಿಲ್ಲ ಎಂದು ಬಿಎಸ್ವೈ ಪರ ವಕೀಲರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಅವರ ಪುತ್ರರಾದ ಬಿ.ವೈ. ರಾಘವೇಂದ್ರ, ಬಿ.ವೈ. ವಿಜಯೇಂದ್ರ ಮುಂತಾದವರ ವಿರುದ್ಧದ ಭೂಹಗರಣದ ಕುರಿತಾದ ವಿಚಾರಣೆಯನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯವು ಅ.15ಕ್ಕೆ ಮುಂದೂಡಿದೆ.<br /> <br /> ಸ್ವಂತ ಹಾಗೂ ಕುಟುಂಬದ ಹಿತಾಸಕ್ತಿಗಾಗಿ ನಿಯಮ ಉಲ್ಲಂಘಿಸಿ ಹಲವು ಜಮೀನುಗಳನ್ನು ಸ್ವಾಧೀನ ಪ್ರಕ್ರಿಯೆಯಿಂದ ಕೈಬಿಟ್ಟಿರುವ ಆರೋಪಕ್ಕೆ ಸಂಬಂಧಿಸಿದಂತೆ ವಕೀಲ ಸಿರಾಜಿನ್ ಬಾಷಾ ಅವರು ದಾಖಲು ಮಾಡಿರುವ 2 ಮತ್ತು 3ನೇ ದೂರಿನ ವಿವಾದ ಇದಾಗಿದೆ.<br /> <br /> ಈ ದೂರಿಗೆ ಸಂಬಂಧಿಸಿದಂತೆ ಯಡಿಯೂರಪ್ಪ ನಿರೀಕ್ಷಣಾ ಜಾಮೀನು ಕೋರಿದ್ದ ಅರ್ಜಿಯ ವಾದ, ಪ್ರತಿವಾದಗಳನ್ನು ಕಳೆದ ವಾರ ಆಲಿಸಿ ಮುಗಿಸಿದ್ದ ನ್ಯಾಯಾಧೀಶ ಎನ್.ಕೆ.ಸುಧೀಂದ್ರ ರಾವ್ ಅವರು ಈ ಕುರಿತ ಆದೇಶವನ್ನು ಸೋಮವಾರ ಪ್ರಕಟಿಸಬೇಕಿತ್ತು. ಆದರೆ ಈ ಪ್ರಕರಣಗಳ ವಿಚಾರಣೆಗೆ ಹೈಕೋರ್ಟ್ ಕಳೆದ ಶುಕ್ರವಾರ ತಡೆ ನೀಡಿದೆ. <br /> <br /> ಈ ಕುರಿತು ಯಡಿಯೂರಪ್ಪನವರ ಪರ ವಕೀಲ ರವಿ ಬಿ. ನಾಯಕ್ ಅವರು ನ್ಯಾಯಾಧೀಶರ ಗಮನಕ್ಕೆ ತಂದರು. ಈ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಮುಂದೂಡಲಾಯಿತು.<br /> <br /> <strong>ಮಾನ್ಯವಾಗದ ಮನವಿ</strong>: ಹೈಕೋರ್ಟ್ನಿಂದ ಈಗ ಮಧ್ಯಂತರ ತಡೆಯಾಜ್ಞೆ ಮಾತ್ರ ಸಿಕ್ಕಿರುವ ಹಿನ್ನೆಲೆಯಲ್ಲಿ ಅಲ್ಲಿ ವಿಚಾರಣೆ ಮುಗಿಯುವವರೆಗೆ ವಿಶೇಷ ಕೋರ್ಟ್ನಲ್ಲಿನ ವಿಚಾರಣೆಯನ್ನು ಮುಂದೂಡುವಂತೆ ನಾಯಕ್ ಮನವಿ ಮಾಡಿಕೊಂಡರು.<br /> <br /> ಆದರೆ ಇದಕ್ಕೆ ನ್ಯಾ. ರಾವ್ ಒಪ್ಪಲಿಲ್ಲ. `ಹೈಕೋರ್ಟ್ ವಿಚಾರಣೆಯನ್ನು ಅ.14ಕ್ಕೆ ಮುಂದೂಡಿರುವ ಕಾರಣ, 15ರಂದೇ ಇಲ್ಲಿ ವಿಚಾರಣೆ ನಡೆಸಲಾಗುವುದು~ ಎಂದರು. `ಕೊನೆಯ ಪಕ್ಷ ಅ.22ರವರೆಗಾದರೂ ಸಮಯ ನೀಡಿ~ ಎಂಬ ವಕೀಲರ ಮನವಿಯನ್ನೂ ನ್ಯಾಯಾಧೀಶರು ಪುರಸ್ಕರಿಸಲಿಲ್ಲ. <br /> <br /> ಯಡಿಯೂರಪ್ಪನವರ ಜೊತೆಗೆ ಅವರ ಪುತ್ರರು, ಅಳಿಯ ಸೋಹನ್ಕುಮಾರ್, ಶಾಸಕರಾದ ಹೇಮಚಂದ್ರ ಸಾಗರ್, ಕೃಷ್ಣಯ್ಯ ಶೆಟ್ಟಿ ಸೇರಿದಂತೆ ಎಲ್ಲ ಆರೋಪಿಗಳು ಕೋರ್ಟ್ನಲ್ಲಿ ಹಾಜರು ಇದ್ದರು.<br /> <br /> <strong>ಕೇವಿಯಟ್ ಸಲ್ಲಿಕೆ:</strong> ಲೋಕಾಯುಕ್ತ ವಿಶೇಷ ಕೋರ್ಟ್ ವಿಚಾರಣೆಗೆ ಹೈಕೋರ್ಟ್ ಏಕಸದಸ್ಯ ಪೀಠ ತಡೆ ನೀಡಿರುವ ಆದೇಶವನ್ನು ವಕೀಲ ಬಾಷಾ ಅವರು ವಿಭಾಗೀಯ ಪೀಠದಲ್ಲಿ ಪ್ರಶ್ನಿಸಲಿರುವ ಹಿನ್ನೆಲೆಯಲ್ಲಿ, ಯಡಿಯೂರಪ್ಪನವರು `ಕೇವಿಯೆಟ್~ ಸಲ್ಲಿಸಿದ್ದಾರೆ. <br /> <br /> ಒಂದು ವೇಳೆ ಬಾಷಾ ಅವರು ಮೇಲ್ಮನವಿ ಸಲ್ಲಿಸಿದರೆ ತಮ್ಮ ವಾದವನ್ನು ಆಲಿಸದೆ ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಬಾರದು ಎಂದು `ಕೇವಿಯೆಟ್~ ನಲ್ಲಿ ಮನವಿ ಮಾಡಿಕೊಳ್ಳಲಾಗಿದೆ. ಏಕಸದಸ್ಯ ಪೀಠದ ಆದೇಶದ ಪ್ರತಿಯು ಬಾಷಾ ಅವರಿಗೆ ಇದುವರೆಗೆ ದೊರಕದ ಹಿನ್ನೆಲೆಯಲ್ಲಿ ಸೋಮವಾರ ಮೇಲ್ಮನವಿ ಸಲ್ಲಿಸಲು ಸಾಧ್ಯವಾಗಲಿಲ್ಲ ಎಂದು ಬಿಎಸ್ವೈ ಪರ ವಕೀಲರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>