<p>ಕೋಲಾರ: ಜಿಲ್ಲೆಗೆ ಕಾವೇರಿ ನೀರು ಪೂರೈಸಲಾಗುವುದು ಎಂದು ಕಳೆದ ವಿಧಾನಸಭೆ ಚುನಾವಣೆ ಸಂದರ್ಭ ತಾವು ನೀಡಿದ್ದ ಭರವಸೆ ಈಡೇರಿಸುವ ದಿನಗಳು ಹತ್ತಿರದಲ್ಲಿವೆ. ಅಂಥ ಪ್ರಯತ್ನ ಆರಂಭವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವರ್ತೂರು ಪ್ರಕಾಶ್ ತಿಳಿಸಿದರು.<br /> <br /> ಹೂಡಿ ಸಮೀಪದಲ್ಲಿ ಕಾವೇರಿ ನೀರು ಸಂಗ್ರಹಗೊಳ್ಳುತ್ತಿದ್ದು, ಅಲ್ಲಿ ಟ್ಯಾಂಕ್ ನಿರ್ಮಿಸಿ ಅಲ್ಲಿಂದ ನಗರದ ಅಮ್ಮೇರಹಳ್ಳಿ ಕೆರೆಗೆ ಹರಿಸಿ, ಅಲ್ಲಿಂದ ಪೂರೈಸುವ 100 ಕೋಟಿ ವೆಚ್ಚದ ಯೋಜನೆ ಸಿದ್ಧವಾಗುತ್ತಿದೆ ಎಂದರು.<br /> ಜಿಲ್ಲೆಗೆ ನೀರು ಪೂರೈಸುವ ನಿಟ್ಟಿನಲ್ಲಿ 63 ಕೋಟಿ ವೆಚ್ಚದ ಕ್ರಿಯಾಯೋಜನೆ ಸಿದ್ಧವಾಗಿದ್ದು, ಅನುಷ್ಠಾನಗೊಂಡರೆ ನೀರಿನ ಸಮಸ್ಯೆ ಬಹುತೇಕ ತೀರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.<br /> <br /> ನಗರದ ಎಂಬಿ.ರಸ್ತೆ ವಿಸ್ತರಣೆ ಕಾಮಗಾರಿ ಒಂದೆರಡು ತಿಂಗಳಲ್ಲಿ ಕೊನೆಗೊಳ್ಳಲಿದೆ. ಡೂಂಲೈಟ್ ವೃತ್ತದಿಂದ ಕ್ಲಾಕ್ಟವರ್ ವೃತ್ತದವರೆಗಿನ ರಸ್ತೆ ವಿಸ್ತರಣೆ ಕಾಮಗಾರಿಯೂ ನಡೆಯುತ್ತಿದ್ದು ಶೀಘ್ರ ಪೂರ್ಣಗೊಳ್ಳಲಿದೆ ಎಂದರು.<br /> <br /> ಮೊಸರಲ್ಲಿ ಕಲ್ಲು: ನಗರಕ್ಕೆ ನೀರು ಪೂರೈಸುವ ಸಲುವಾಗಿ 1 ಸಾವಿರ ಲೀಕೇಜ್ ಸರಿಪಡಿಸಲಾಗಿದೆ. ಅಂಥ ಕಾಮಗಾರಿಗಳಿಗೆ ಟೆಂಡರ್ ಕರೆದರೆ ಪ್ರಕ್ರಿಯೆ ವಿಳಂಬವಾಗುತ್ತದೆ. ಜನರಿಗೆ ಸಮಸ್ಯೆಯಾಗುತ್ತದೆ ಎಂಬ ಕಾರಣಕ್ಕೆ ಟೆಂಡರ್ ಪ್ರಕ್ರಿಯೆಯನ್ನು ನಿಧಾನಕ್ಕೆ ನಡೆಸಲು ನಿರ್ಧರಿಸಿ, ಸ್ವಂತ ಹಣ ವಿನಿಯೋಗಿಸುತ್ತಿರುವೆ. ನಂತರದ ದಿನಗಳಲ್ಲಿ ಸರ್ಕಾರದಿಂದ ಆ ಹಣ ಪಡೆಯುವೆ ಎಂದರು.<br /> <br /> ನೀರು ಪೂರೈಸುವ ವಿಚಾರದಲ್ಲಿ ಬಳಸುತ್ತಿರುವ ಸ್ವಂತ ಹಣ ಎಲ್ಲಿಂದ ಬಂತು ಎಂದು ಪ್ರಶ್ನಿಸುವ ಹಕ್ಕು ವಿರೋಧಿಗಳಿಗೆ ಇಲ್ಲ. ಅವರೆಲ್ಲ ಅಧಿಕಾರದಲ್ಲಿದ್ದಾಗ ಸುಳ್ಳು ಬಿಲ್ಗಳನ್ನು ಸೃಷ್ಟಿಸಿ ಹಣ ದೋಚಿದವರು. ಮೊಸರಿನಲ್ಲಿ ಕಲ್ಲು ಹುಡುಕುವುದನ್ನು ಅವರು ನಿಲ್ಲಿಸಬೇಕು ಎಂದು ನುಡಿದರು.<br /> <br /> ಎರಡು ದಿನಕ್ಕೊಮ್ಮೆ ನೀರು ನಗರದ ಎಲ್ಲ ಜನರಿಗೂ ದೊರಕುವಂಥ ವ್ಯವಸ್ಥೆ ರೂಪುಗೊಳ್ಳುತ್ತಿದೆ. ಅದೇ ರೀತಿ ಎಲ್ಲ ರಸ್ತೆಗಳನ್ನು ಅಭಿವೃದ್ಧಿಗೊಳಿಸಲಾಗುತ್ತಿದೆ ಎಂದರು.<br /> <br /> ಪಾಪದ ಪರಿಣಾಮ: ನಗರದಲ್ಲಿ ಬಹಳಷ್ಟು ಕಾಂಕ್ರಿಟ್ ರಸ್ತೆಗಳು ಕಳಪೆಯಾಗಿರುವುದು ತಮ್ಮ ಪಾಪದ ಪರಿಣಾಮ. ನಗರಸಭೆ ಸದಸ್ಯರೇ ಗುತ್ತಿಗೆದಾರರಾಗಿ ಕಾಮಗಾರಿ ನಡೆಸಿದ್ದರ ಪರಿಣಾಮ. ಅವರ ವಿರುದ್ಧ ತನಿಖೆ, ಕ್ರಮ ಎಂದು ಮುಂದುವರಿಯುವುದರಿಂದ ಯಾವ ಪ್ರಯೋಜನವೂ ಇಲ್ಲ ಎಂದು ಅವರು ನಿರಾಶೆ ವ್ಯಕ್ತಪಡಿಸಿದರು.<br /> <br /> <strong>ದೇವಿಕಾ ಗೈರು: ಕ್ರಮಕ್ಕೆ ಸೂಚನೆ</strong><br /> ಕೋಲಾರ: ಸ್ವಾತಂತ್ರ್ಯ ದಿನಾಚರಣೆಗೆ ಗೈರುಹಾಜರಾದ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಅಧೀಕ್ಷಕಿ ಎಂ.ಎಲ್.ದೇವಿಕಾ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲು ಸರ್ಕಾರಕ್ಕೆ ವರದಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ವರ್ತೂರು ಪ್ರಕಾಶ್ ಜಿಲ್ಲಾಧಿಕಾರಿ ಡಾ.ಡಿ.ಎಸ್.ವಿಶ್ವನಾಥ್ ಅವರಿಗೆ ಸೂಚಿಸಿದರು.<br /> <br /> ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಬಳಿಕ ಅಲ್ಲಿನ ಕೊಠಡಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸಂದರ್ಭ ಪ್ರಶ್ನೆಯೊಂದಕ್ಕೆ ಉತ್ತರಿಸುವ ಸಲುವಾಗಿ ಸಚಿವರು, ಇಲಾಖೆಯ ಸಹಾಯಕ ನಿರ್ದೇಶಕ ರುದ್ರಪ್ಪ ಅವರಿಂದ ಮಾಹಿತಿ ಕೋರುವ ಸಂದರ್ಭದಲ್ಲಿ, ಅಧೀಕ್ಷಕಿ ದೇವಿಕಾ ಕಾರ್ಯಕ್ರಮಕ್ಕೆ ಬಾರದಿರುವುದು ಬೆಳಕಿಗೆ ಬಂತು.<br /> <br /> ಕಾರ್ಯಕ್ರಮಕ್ಕೆ ಕಡ್ಡಾಯವಾಗಿ ಬರಲೇಬೇಕು ಎಂದು ಅವರಿಗೆ ಸ್ಪಷ್ಟವಾಗಿ ತಿಳಿಸಲಾಗಿತ್ತು. ಆದರೂ ಅವರು ಬಂದಿಲ್ಲ ಎಂದು ರುದ್ರಪ್ಪ ಸ್ಪಷ್ಟಪಡಿಸಿದರು.<br /> <br /> ಅವರ ಮಾತಿನಿಂದ ಅಸಮಾಧಾನಗೊಂಡ ಸಚಿವರು, ಕೂಡಲೇ ದೇವಿಕಾ ಅವರಿಗೆ ಕಾರಣ ಕೇಳಿ ನೋಟಿಸ್ ಕೊಡಿ, ಶಿಸ್ತುಕ್ರಮಕ್ಕೆ ಶಿಫಾರಸು ಮಾಡಿ ಎಂದರು. ವರದಿಯನ್ನು ಸರ್ಕಾರಕ್ಕೆ ಕಳಿಸಿ ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋಲಾರ: ಜಿಲ್ಲೆಗೆ ಕಾವೇರಿ ನೀರು ಪೂರೈಸಲಾಗುವುದು ಎಂದು ಕಳೆದ ವಿಧಾನಸಭೆ ಚುನಾವಣೆ ಸಂದರ್ಭ ತಾವು ನೀಡಿದ್ದ ಭರವಸೆ ಈಡೇರಿಸುವ ದಿನಗಳು ಹತ್ತಿರದಲ್ಲಿವೆ. ಅಂಥ ಪ್ರಯತ್ನ ಆರಂಭವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವರ್ತೂರು ಪ್ರಕಾಶ್ ತಿಳಿಸಿದರು.<br /> <br /> ಹೂಡಿ ಸಮೀಪದಲ್ಲಿ ಕಾವೇರಿ ನೀರು ಸಂಗ್ರಹಗೊಳ್ಳುತ್ತಿದ್ದು, ಅಲ್ಲಿ ಟ್ಯಾಂಕ್ ನಿರ್ಮಿಸಿ ಅಲ್ಲಿಂದ ನಗರದ ಅಮ್ಮೇರಹಳ್ಳಿ ಕೆರೆಗೆ ಹರಿಸಿ, ಅಲ್ಲಿಂದ ಪೂರೈಸುವ 100 ಕೋಟಿ ವೆಚ್ಚದ ಯೋಜನೆ ಸಿದ್ಧವಾಗುತ್ತಿದೆ ಎಂದರು.<br /> ಜಿಲ್ಲೆಗೆ ನೀರು ಪೂರೈಸುವ ನಿಟ್ಟಿನಲ್ಲಿ 63 ಕೋಟಿ ವೆಚ್ಚದ ಕ್ರಿಯಾಯೋಜನೆ ಸಿದ್ಧವಾಗಿದ್ದು, ಅನುಷ್ಠಾನಗೊಂಡರೆ ನೀರಿನ ಸಮಸ್ಯೆ ಬಹುತೇಕ ತೀರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.<br /> <br /> ನಗರದ ಎಂಬಿ.ರಸ್ತೆ ವಿಸ್ತರಣೆ ಕಾಮಗಾರಿ ಒಂದೆರಡು ತಿಂಗಳಲ್ಲಿ ಕೊನೆಗೊಳ್ಳಲಿದೆ. ಡೂಂಲೈಟ್ ವೃತ್ತದಿಂದ ಕ್ಲಾಕ್ಟವರ್ ವೃತ್ತದವರೆಗಿನ ರಸ್ತೆ ವಿಸ್ತರಣೆ ಕಾಮಗಾರಿಯೂ ನಡೆಯುತ್ತಿದ್ದು ಶೀಘ್ರ ಪೂರ್ಣಗೊಳ್ಳಲಿದೆ ಎಂದರು.<br /> <br /> ಮೊಸರಲ್ಲಿ ಕಲ್ಲು: ನಗರಕ್ಕೆ ನೀರು ಪೂರೈಸುವ ಸಲುವಾಗಿ 1 ಸಾವಿರ ಲೀಕೇಜ್ ಸರಿಪಡಿಸಲಾಗಿದೆ. ಅಂಥ ಕಾಮಗಾರಿಗಳಿಗೆ ಟೆಂಡರ್ ಕರೆದರೆ ಪ್ರಕ್ರಿಯೆ ವಿಳಂಬವಾಗುತ್ತದೆ. ಜನರಿಗೆ ಸಮಸ್ಯೆಯಾಗುತ್ತದೆ ಎಂಬ ಕಾರಣಕ್ಕೆ ಟೆಂಡರ್ ಪ್ರಕ್ರಿಯೆಯನ್ನು ನಿಧಾನಕ್ಕೆ ನಡೆಸಲು ನಿರ್ಧರಿಸಿ, ಸ್ವಂತ ಹಣ ವಿನಿಯೋಗಿಸುತ್ತಿರುವೆ. ನಂತರದ ದಿನಗಳಲ್ಲಿ ಸರ್ಕಾರದಿಂದ ಆ ಹಣ ಪಡೆಯುವೆ ಎಂದರು.<br /> <br /> ನೀರು ಪೂರೈಸುವ ವಿಚಾರದಲ್ಲಿ ಬಳಸುತ್ತಿರುವ ಸ್ವಂತ ಹಣ ಎಲ್ಲಿಂದ ಬಂತು ಎಂದು ಪ್ರಶ್ನಿಸುವ ಹಕ್ಕು ವಿರೋಧಿಗಳಿಗೆ ಇಲ್ಲ. ಅವರೆಲ್ಲ ಅಧಿಕಾರದಲ್ಲಿದ್ದಾಗ ಸುಳ್ಳು ಬಿಲ್ಗಳನ್ನು ಸೃಷ್ಟಿಸಿ ಹಣ ದೋಚಿದವರು. ಮೊಸರಿನಲ್ಲಿ ಕಲ್ಲು ಹುಡುಕುವುದನ್ನು ಅವರು ನಿಲ್ಲಿಸಬೇಕು ಎಂದು ನುಡಿದರು.<br /> <br /> ಎರಡು ದಿನಕ್ಕೊಮ್ಮೆ ನೀರು ನಗರದ ಎಲ್ಲ ಜನರಿಗೂ ದೊರಕುವಂಥ ವ್ಯವಸ್ಥೆ ರೂಪುಗೊಳ್ಳುತ್ತಿದೆ. ಅದೇ ರೀತಿ ಎಲ್ಲ ರಸ್ತೆಗಳನ್ನು ಅಭಿವೃದ್ಧಿಗೊಳಿಸಲಾಗುತ್ತಿದೆ ಎಂದರು.<br /> <br /> ಪಾಪದ ಪರಿಣಾಮ: ನಗರದಲ್ಲಿ ಬಹಳಷ್ಟು ಕಾಂಕ್ರಿಟ್ ರಸ್ತೆಗಳು ಕಳಪೆಯಾಗಿರುವುದು ತಮ್ಮ ಪಾಪದ ಪರಿಣಾಮ. ನಗರಸಭೆ ಸದಸ್ಯರೇ ಗುತ್ತಿಗೆದಾರರಾಗಿ ಕಾಮಗಾರಿ ನಡೆಸಿದ್ದರ ಪರಿಣಾಮ. ಅವರ ವಿರುದ್ಧ ತನಿಖೆ, ಕ್ರಮ ಎಂದು ಮುಂದುವರಿಯುವುದರಿಂದ ಯಾವ ಪ್ರಯೋಜನವೂ ಇಲ್ಲ ಎಂದು ಅವರು ನಿರಾಶೆ ವ್ಯಕ್ತಪಡಿಸಿದರು.<br /> <br /> <strong>ದೇವಿಕಾ ಗೈರು: ಕ್ರಮಕ್ಕೆ ಸೂಚನೆ</strong><br /> ಕೋಲಾರ: ಸ್ವಾತಂತ್ರ್ಯ ದಿನಾಚರಣೆಗೆ ಗೈರುಹಾಜರಾದ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆಯ ಅಧೀಕ್ಷಕಿ ಎಂ.ಎಲ್.ದೇವಿಕಾ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲು ಸರ್ಕಾರಕ್ಕೆ ವರದಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ವರ್ತೂರು ಪ್ರಕಾಶ್ ಜಿಲ್ಲಾಧಿಕಾರಿ ಡಾ.ಡಿ.ಎಸ್.ವಿಶ್ವನಾಥ್ ಅವರಿಗೆ ಸೂಚಿಸಿದರು.<br /> <br /> ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ಬಳಿಕ ಅಲ್ಲಿನ ಕೊಠಡಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸಂದರ್ಭ ಪ್ರಶ್ನೆಯೊಂದಕ್ಕೆ ಉತ್ತರಿಸುವ ಸಲುವಾಗಿ ಸಚಿವರು, ಇಲಾಖೆಯ ಸಹಾಯಕ ನಿರ್ದೇಶಕ ರುದ್ರಪ್ಪ ಅವರಿಂದ ಮಾಹಿತಿ ಕೋರುವ ಸಂದರ್ಭದಲ್ಲಿ, ಅಧೀಕ್ಷಕಿ ದೇವಿಕಾ ಕಾರ್ಯಕ್ರಮಕ್ಕೆ ಬಾರದಿರುವುದು ಬೆಳಕಿಗೆ ಬಂತು.<br /> <br /> ಕಾರ್ಯಕ್ರಮಕ್ಕೆ ಕಡ್ಡಾಯವಾಗಿ ಬರಲೇಬೇಕು ಎಂದು ಅವರಿಗೆ ಸ್ಪಷ್ಟವಾಗಿ ತಿಳಿಸಲಾಗಿತ್ತು. ಆದರೂ ಅವರು ಬಂದಿಲ್ಲ ಎಂದು ರುದ್ರಪ್ಪ ಸ್ಪಷ್ಟಪಡಿಸಿದರು.<br /> <br /> ಅವರ ಮಾತಿನಿಂದ ಅಸಮಾಧಾನಗೊಂಡ ಸಚಿವರು, ಕೂಡಲೇ ದೇವಿಕಾ ಅವರಿಗೆ ಕಾರಣ ಕೇಳಿ ನೋಟಿಸ್ ಕೊಡಿ, ಶಿಸ್ತುಕ್ರಮಕ್ಕೆ ಶಿಫಾರಸು ಮಾಡಿ ಎಂದರು. ವರದಿಯನ್ನು ಸರ್ಕಾರಕ್ಕೆ ಕಳಿಸಿ ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>