<p>ಕೋಲಾರ: 2005ರಿಂದ ಕಾರ್ಯನಿರ್ವಹಿಸುತ್ತಿರುವವರನ್ನು ಕಾಯಂ ಮಾಡಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಒಕ್ಕೂಟದ ಜಿಲ್ಲಾ ಶಾಖೆ ಸದಸ್ಯರು ನಗರದಲ್ಲಿ ಶನಿವಾರ ಪ್ರತಿಭಟನಾ ಮೆರವಣಿಗೆ, ಧರಣಿ ನಡೆಸಿದರು.<br /> <br /> ಪ್ರವಾಸಿ ಮಂದಿರದಿಂದ ಮೆರವಣಿಗೆ ಆರಂಭಿಸಿದ ಉಪನ್ಯಾಸಕರು ಎಂ.ಜಿ.ರಸ್ತೆ ಮೂಲಕ ಜಿಲ್ಲಾಧಿಕಾರಿ ಕಚೇರಿ ತಲುಪಿ ಧರಣಿ ನಡೆಸಿದರು.<br /> <br /> ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ, `ಅದು ಸೇವೆಯನ್ನು ಬಾಡಿಗೆಗೆ ತೆಗೆದುಕೊಂಡಂತಹುದು ಮಾತ್ರ~ ಎಂದು ಪ್ರಾಂಶುಪಾಲರು ಸ್ಪಷ್ಟವಾಗಿ ತಿಳಿಸಬೇಕು ಎಂದು ಕಾಲೇಜು ಶಿಕ್ಷಣ ಇಲಾಖೆಯು ಜುಲೈ 30ರ ಸುತ್ತೋಲೆಯಲ್ಲಿ ಹೇಳಿರುವುದು ಅಮಾನವೀಯ. ಕೂಡಲೇ ಸುತ್ತೋಲೆ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.<br /> <br /> ರಾಜ್ಯದ ಅನೇಕ ಸರ್ಕಾರಿ ಕಾಲೇಜುಗಳಲ್ಲಿ ಪೂರ್ಣಾವಧಿ ಉಪನ್ಯಾಸಕರಿಲ್ಲದೆ ಅತಿಥಿ ಉಪನ್ಯಾಸಕರೇ ಬಹುತೇಕ ಜವಾಬ್ದಾರಿ ಹೊರುತ್ತಿದ್ದಾರೆ. 2012-13ನೇ ಸಾಲಿಗೆ ನೇಮಕ ಸಂಬಂಧ ಜುಲೈ 30ರಂದು ಇಲಾಖೆ ಹೊರಡಿಸಿರುವ ಆದೇಶದಲ್ಲಿ ಸೇವೆಯನ್ನು ಬಾಡಿಗೆಗೆ ಪಡೆಯುವುದು ಎಂಬ ವಾಕ್ಯವನ್ನು ಬಳಸಲಾಗಿದೆ. ಇದು ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಅವಮಾನಕಾರಿಯಾದ ನಿಲುವು ಎಂದರು.<br /> <br /> ಅತಿಥಿ ಉಪನ್ಯಾಸಕರಿಗೆ ಬೇಸಿಗೆ ರಜೆ, ಮಧ್ಯಂತರ ರಜೆ ಅವಧಿ ಸೇರಿದಂತೆ ನೀಡಲಾಗುತ್ತಿದ್ದ 10 ತಿಂಗಳ ವೇತನವನ್ನು ನೀಡದಿರುವ ನಿರ್ಧಾರವನ್ನು ಕೈಗೊಂಡಿರುವುದು ಅಮಾನವೀಯ ಎಂದು ಪ್ರತಿಪಾದಿಸಿದರು.<br /> <br /> ಅಕ್ಕ-ಪಕ್ಕದ ರಾಜ್ಯಗಳಲ್ಲಿ ಇರುವಂತೆ ಕಾಯಂ ಉಪನ್ಯಾಸಕರ ನೇಮಕಾತಿ ಆಗುವವರೆಗೂ ಅತಿಥಿ ಉಪನ್ಯಾಸಕರ ಸೇವಾ ಹಿರಿತನವನ್ನು ಪರಿಗಣಿಸಿ ನೇಮಕಾತಿ ಮುಂದುವರಿಸಬೇಕು. ಪ್ರತಿ ವರ್ಷವೂ ಸಂದರ್ಶನ, ಆಯ್ಕೆ ಪ್ರಕ್ರಿಯೆಗಳನ್ನು ನಡೆಸಬಾರದು ಎಂದು ಆಗ್ರಹಿಸಿದರು.<br /> <br /> ಒಕ್ಕೂಟದ ಸಿ.ಮುನಿಯಪ್ಪ, ಯಲ್ಲಪ್ಪ, ಕೆ.ಎನ್.ನಾಗರಾಜ್, ಎಲ್.ನಾಗರಾಜ್, ಎಸ್.ಎಂ.ರಮಾನಂದ, ವನಿತಾ, ರಾಜೇಶ್ವರಿ, ವೀಣಾ, ರವಿ, ಅನಂತ್, ಚೌಡೇಗೌಡ, ರಂಗಪ್ಪ ಇತರರು ಪಾಲ್ಗೊಂಡಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋಲಾರ: 2005ರಿಂದ ಕಾರ್ಯನಿರ್ವಹಿಸುತ್ತಿರುವವರನ್ನು ಕಾಯಂ ಮಾಡಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಒಕ್ಕೂಟದ ಜಿಲ್ಲಾ ಶಾಖೆ ಸದಸ್ಯರು ನಗರದಲ್ಲಿ ಶನಿವಾರ ಪ್ರತಿಭಟನಾ ಮೆರವಣಿಗೆ, ಧರಣಿ ನಡೆಸಿದರು.<br /> <br /> ಪ್ರವಾಸಿ ಮಂದಿರದಿಂದ ಮೆರವಣಿಗೆ ಆರಂಭಿಸಿದ ಉಪನ್ಯಾಸಕರು ಎಂ.ಜಿ.ರಸ್ತೆ ಮೂಲಕ ಜಿಲ್ಲಾಧಿಕಾರಿ ಕಚೇರಿ ತಲುಪಿ ಧರಣಿ ನಡೆಸಿದರು.<br /> <br /> ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ, `ಅದು ಸೇವೆಯನ್ನು ಬಾಡಿಗೆಗೆ ತೆಗೆದುಕೊಂಡಂತಹುದು ಮಾತ್ರ~ ಎಂದು ಪ್ರಾಂಶುಪಾಲರು ಸ್ಪಷ್ಟವಾಗಿ ತಿಳಿಸಬೇಕು ಎಂದು ಕಾಲೇಜು ಶಿಕ್ಷಣ ಇಲಾಖೆಯು ಜುಲೈ 30ರ ಸುತ್ತೋಲೆಯಲ್ಲಿ ಹೇಳಿರುವುದು ಅಮಾನವೀಯ. ಕೂಡಲೇ ಸುತ್ತೋಲೆ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.<br /> <br /> ರಾಜ್ಯದ ಅನೇಕ ಸರ್ಕಾರಿ ಕಾಲೇಜುಗಳಲ್ಲಿ ಪೂರ್ಣಾವಧಿ ಉಪನ್ಯಾಸಕರಿಲ್ಲದೆ ಅತಿಥಿ ಉಪನ್ಯಾಸಕರೇ ಬಹುತೇಕ ಜವಾಬ್ದಾರಿ ಹೊರುತ್ತಿದ್ದಾರೆ. 2012-13ನೇ ಸಾಲಿಗೆ ನೇಮಕ ಸಂಬಂಧ ಜುಲೈ 30ರಂದು ಇಲಾಖೆ ಹೊರಡಿಸಿರುವ ಆದೇಶದಲ್ಲಿ ಸೇವೆಯನ್ನು ಬಾಡಿಗೆಗೆ ಪಡೆಯುವುದು ಎಂಬ ವಾಕ್ಯವನ್ನು ಬಳಸಲಾಗಿದೆ. ಇದು ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಅವಮಾನಕಾರಿಯಾದ ನಿಲುವು ಎಂದರು.<br /> <br /> ಅತಿಥಿ ಉಪನ್ಯಾಸಕರಿಗೆ ಬೇಸಿಗೆ ರಜೆ, ಮಧ್ಯಂತರ ರಜೆ ಅವಧಿ ಸೇರಿದಂತೆ ನೀಡಲಾಗುತ್ತಿದ್ದ 10 ತಿಂಗಳ ವೇತನವನ್ನು ನೀಡದಿರುವ ನಿರ್ಧಾರವನ್ನು ಕೈಗೊಂಡಿರುವುದು ಅಮಾನವೀಯ ಎಂದು ಪ್ರತಿಪಾದಿಸಿದರು.<br /> <br /> ಅಕ್ಕ-ಪಕ್ಕದ ರಾಜ್ಯಗಳಲ್ಲಿ ಇರುವಂತೆ ಕಾಯಂ ಉಪನ್ಯಾಸಕರ ನೇಮಕಾತಿ ಆಗುವವರೆಗೂ ಅತಿಥಿ ಉಪನ್ಯಾಸಕರ ಸೇವಾ ಹಿರಿತನವನ್ನು ಪರಿಗಣಿಸಿ ನೇಮಕಾತಿ ಮುಂದುವರಿಸಬೇಕು. ಪ್ರತಿ ವರ್ಷವೂ ಸಂದರ್ಶನ, ಆಯ್ಕೆ ಪ್ರಕ್ರಿಯೆಗಳನ್ನು ನಡೆಸಬಾರದು ಎಂದು ಆಗ್ರಹಿಸಿದರು.<br /> <br /> ಒಕ್ಕೂಟದ ಸಿ.ಮುನಿಯಪ್ಪ, ಯಲ್ಲಪ್ಪ, ಕೆ.ಎನ್.ನಾಗರಾಜ್, ಎಲ್.ನಾಗರಾಜ್, ಎಸ್.ಎಂ.ರಮಾನಂದ, ವನಿತಾ, ರಾಜೇಶ್ವರಿ, ವೀಣಾ, ರವಿ, ಅನಂತ್, ಚೌಡೇಗೌಡ, ರಂಗಪ್ಪ ಇತರರು ಪಾಲ್ಗೊಂಡಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>