<p>ಕೋಲಾರ: ತಾಲ್ಲೂಕಿನ ಮಂಗಸಂದ್ರದಲ್ಲಿ ಸ್ಥಗಿತಗೊಂಡಿರುವ ಸ್ನಾತಕೋತ್ತರ ಕೇಂದ್ರದ ಕಟ್ಟಡ ಕಾಮಗಾರಿಯನ್ನು ಕೂಡಲೇ ಆರಂಭಿಸಬೇಕು ಎಂದು ಆಗ್ರಹಿಸಿ ನಗರದ ಬಾಲಕರ ಸರ್ಕಾರಿ ಕಾಲೇಜು ಆವರಣದಲ್ಲಿರುವ ಸ್ನಾತಕೋತ್ತರ ಕೇಂದ್ರದ ಮುಂದೆ ಶನಿವಾರ ವಿದ್ಯಾರ್ಥಿಗಳು ಅನಿರ್ದಿಷ್ಟ ಧರಣಿ ಆರಂಭಿಸಿದರು.<br /> <br /> ಕಾಮಗಾರಿ ಸ್ಥಗಿತಗೊಂಡು ಮೂರ್ನಾಲ್ಕು ತಿಂಗಳಾದರೂ ವಿಶ್ವವಿದ್ಯಾಲಯ ಗಂಭೀರ ಗಮನ ಹರಿಸಿಲ್ಲ. ಆ. 15ರ ಹೊತ್ತಿಗೆ ಕೇಂದ್ರವನ್ನು ಹೊಸ ಕಟ್ಟಡಕ್ಕೆ ಸ್ಥಳಾಂತರಿಸಲಾಗುವುದು ಎಂದು ಕುಲಪತಿಗಳು ನೀಡಿದ ಭರವಸೆ ಈಡೇರಿಲ್ಲ. ಹೀಗಾಗಿ ಕಾಮಗಾರಿ ಶುರುವಾಗುವವರೆಗೂ ತರಗತಿಗಳಿಗೆ ಹಾಜರಾಗುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.<br /> <br /> ಧರಣಿ ನಿಲ್ಲಿಸಲು ಮನವಿ ಮಾಡಿದ ಕೇಂದ್ರದ ನಿರ್ದೇಶಕ ಸಿ.ನಾಗಭೂಷಣ ಅವರೊಂದಿಗೆ ಮಾತನಾಡಿದ ವಿದ್ಯಾರ್ಥಿ ಮುಖಂಡರು, ವಿಶ್ವವಿದ್ಯಾಲಯದ ಅಧಿಕಾರಿಗಳನ್ನು ಸ್ಥಳಕ್ಕೆ ಕರೆತರುವವರೆಗೂ ನಮ್ಮಡನೆ ಮಾತನಾಡಬೇಡಿ. ಕೇಂದ್ರಕ್ಕೂ ಬರಬೇಡಿ ಎಂದು ಆಗ್ರಹಿಸಿದರು. ಈ ಹಿನ್ನೆಲೆಯಲ್ಲಿ ನಿರ್ದೇಶಕರು ಕೇಂದ್ರದ ಎಲ್ಲ ಬೋಧಕ ಸಿಬ್ಬಂದಿಯೊಡನೆ ಬೆಂಗಳೂರಿಗೆ ಪ್ರಯಾಣ ಬೆಳೆಸಿದ ಘಟನೆಯೂ ನಡೆಯಿತು.<br /> <br /> ಸೋಮವಾರ ಮತ್ತೆ ಧರಣಿ ನಡೆಯಲಿದೆ. ವಿಶ್ವವಿದ್ಯಾಲಯದ ಪ್ರತಿಕ್ರಿಯೆಯನ್ನು ಆಧರಿಸಿ ಧರಣಿ ಮುಂದುವರಿಸುವುದರ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ. <br /> <br /> ಮುಖಂಡರಾದ ಬಿ.ಸುರೇಶ್ಗೌಡ, ಶಂಕರ್, ಪ್ರದೀಪ್, ದೇವರಾಜ್, ಶ್ರೀನಿವಾಸ್, ಅಂಬರೀಶ್, ಮಮತಾ, ಆಶಾ, ಸರಳಾ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋಲಾರ: ತಾಲ್ಲೂಕಿನ ಮಂಗಸಂದ್ರದಲ್ಲಿ ಸ್ಥಗಿತಗೊಂಡಿರುವ ಸ್ನಾತಕೋತ್ತರ ಕೇಂದ್ರದ ಕಟ್ಟಡ ಕಾಮಗಾರಿಯನ್ನು ಕೂಡಲೇ ಆರಂಭಿಸಬೇಕು ಎಂದು ಆಗ್ರಹಿಸಿ ನಗರದ ಬಾಲಕರ ಸರ್ಕಾರಿ ಕಾಲೇಜು ಆವರಣದಲ್ಲಿರುವ ಸ್ನಾತಕೋತ್ತರ ಕೇಂದ್ರದ ಮುಂದೆ ಶನಿವಾರ ವಿದ್ಯಾರ್ಥಿಗಳು ಅನಿರ್ದಿಷ್ಟ ಧರಣಿ ಆರಂಭಿಸಿದರು.<br /> <br /> ಕಾಮಗಾರಿ ಸ್ಥಗಿತಗೊಂಡು ಮೂರ್ನಾಲ್ಕು ತಿಂಗಳಾದರೂ ವಿಶ್ವವಿದ್ಯಾಲಯ ಗಂಭೀರ ಗಮನ ಹರಿಸಿಲ್ಲ. ಆ. 15ರ ಹೊತ್ತಿಗೆ ಕೇಂದ್ರವನ್ನು ಹೊಸ ಕಟ್ಟಡಕ್ಕೆ ಸ್ಥಳಾಂತರಿಸಲಾಗುವುದು ಎಂದು ಕುಲಪತಿಗಳು ನೀಡಿದ ಭರವಸೆ ಈಡೇರಿಲ್ಲ. ಹೀಗಾಗಿ ಕಾಮಗಾರಿ ಶುರುವಾಗುವವರೆಗೂ ತರಗತಿಗಳಿಗೆ ಹಾಜರಾಗುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.<br /> <br /> ಧರಣಿ ನಿಲ್ಲಿಸಲು ಮನವಿ ಮಾಡಿದ ಕೇಂದ್ರದ ನಿರ್ದೇಶಕ ಸಿ.ನಾಗಭೂಷಣ ಅವರೊಂದಿಗೆ ಮಾತನಾಡಿದ ವಿದ್ಯಾರ್ಥಿ ಮುಖಂಡರು, ವಿಶ್ವವಿದ್ಯಾಲಯದ ಅಧಿಕಾರಿಗಳನ್ನು ಸ್ಥಳಕ್ಕೆ ಕರೆತರುವವರೆಗೂ ನಮ್ಮಡನೆ ಮಾತನಾಡಬೇಡಿ. ಕೇಂದ್ರಕ್ಕೂ ಬರಬೇಡಿ ಎಂದು ಆಗ್ರಹಿಸಿದರು. ಈ ಹಿನ್ನೆಲೆಯಲ್ಲಿ ನಿರ್ದೇಶಕರು ಕೇಂದ್ರದ ಎಲ್ಲ ಬೋಧಕ ಸಿಬ್ಬಂದಿಯೊಡನೆ ಬೆಂಗಳೂರಿಗೆ ಪ್ರಯಾಣ ಬೆಳೆಸಿದ ಘಟನೆಯೂ ನಡೆಯಿತು.<br /> <br /> ಸೋಮವಾರ ಮತ್ತೆ ಧರಣಿ ನಡೆಯಲಿದೆ. ವಿಶ್ವವಿದ್ಯಾಲಯದ ಪ್ರತಿಕ್ರಿಯೆಯನ್ನು ಆಧರಿಸಿ ಧರಣಿ ಮುಂದುವರಿಸುವುದರ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ. <br /> <br /> ಮುಖಂಡರಾದ ಬಿ.ಸುರೇಶ್ಗೌಡ, ಶಂಕರ್, ಪ್ರದೀಪ್, ದೇವರಾಜ್, ಶ್ರೀನಿವಾಸ್, ಅಂಬರೀಶ್, ಮಮತಾ, ಆಶಾ, ಸರಳಾ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>