<p>ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದಂಪತಿ ಮನನೊಂದು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಾನುಕುಂಟೆ ಸಮೀಪದ ಅದ್ದೆ ಗ್ರಾಮದಲ್ಲಿ ನಡೆದಿದೆ.<br /> <br /> ರಿಯಲ್ ಎಸ್ಟೇಟ್ ಉದ್ಯಮಿ ರಾಜಣ್ಣ (35) ಮತ್ತು ಅವರ ಪತ್ನಿ ಮಂಜುಳಾ (26) ಆತ್ಮಹತ್ಯೆ ಮಾಡಿಕೊಂಡವರು. ವಿವಾಹವಾಗಿ ಆರು ವರ್ಷವಾಗಿದ್ದ ದಂಪತಿಗೆ ವಿನಯ್ ಮತ್ತು ಮೌನಶ್ರೀ ಎಂಬ ಮಕ್ಕಳಿದ್ದಾರೆ.<br /> <br /> ಅಣ್ಣನ ಪತ್ನಿಗೆ ಎರಡು ದಿನಗಳ ಹಿಂದೆಯಷ್ಟೇ ಮಗು ಜನಿಸಿತ್ತು. ಮಂಜುಳಾ ಅವರು, ಅಣ್ಣನ ಮಗು ವನ್ನು ನೋಡಲು ಆಂಧ್ರಪ್ರದೇಶದ ತವರು ಮನೆಗೆ ಹೋಗುವುದಾಗಿ ಭಾನುವಾರ ಸಂಜೆ ಪತಿಗೆ ತಿಳಿಸಿದರು.<br /> <br /> ಆದರೆ, ರಾಜಣ್ಣ ಅವರ ಸಂಬಂಧಿಕರೊಬ್ಬರ ಮದುವೆ ಸಮಾರಂಭ ಬುಧವಾರ (ಏ.25) ಏರ್ಪಡಾಗಿತ್ತು. ಈ ಹಿನ್ನೆಲೆಯಲ್ಲಿ ಸಮಾರಂಭ ಮುಗಿದ ಬಳಿಕ ತವರು ಮನೆಗೆ ಹೋಗುವಂತೆ ಪತ್ನಿಗೆ ಸೂಚಿಸಿದರು.<br /> <br /> ಈ ವಿಷಯವಾಗಿ ದಂಪತಿ ಮಧ್ಯೆ ವಾಗ್ವಾದ ನಡೆದು ಜಗಳವಾಯಿತು. ಇದರಿಂದ ಬೇಸರಗೊಂಡ ಮಂಜುಳಾ ಅವರು ಕೋಣೆಯೊಂದರಲ್ಲಿ ರಾತ್ರಿ ನೇಣು ಹಾಕಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.<br /> <br /> ಪತ್ನಿಯ ಆತ್ಮಹತ್ಯೆ ಸುದ್ದಿ ತಿಳಿದು ಮನನೊಂದ ರಾಜಣ್ಣ ಅವರು ಸೋಮವಾರ ಬೆಳಗಿನ ಜಾವ ಮನೆಯಿಂದ ಹೊರ ಹೋಗಿ ತೋಟವೊಂದರಲ್ಲಿ ಮರಕ್ಕೆ ನೇಣು ಹಾಕಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.<br /> `ನನ್ನ ಸಾವಿಗೆ ಯಾರು ಕಾರಣರಲ್ಲ. ಪತ್ನಿಯ ಸಾವಿನಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. <br /> <br /> ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಿ~ ಎಂದು ರಾಜಣ್ಣ ಪತ್ರ ಬರೆದಿಟ್ಟಿದ್ದಾರೆ. ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾರ ಮಧ್ಯಾಹ್ನ ದಂಪತಿಯ ಮರಣೋತ್ತರ ಪರೀಕ್ಷೆ ನಡೆಸಿ ಶವಗಳನ್ನು ಕುಟುಂಬ ಸದಸ್ಯರಿಗೆ ಒಪ್ಪಿಸಲಾಯಿತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ರಾಜಾನುಕುಂಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದಂಪತಿ ಮನನೊಂದು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಾನುಕುಂಟೆ ಸಮೀಪದ ಅದ್ದೆ ಗ್ರಾಮದಲ್ಲಿ ನಡೆದಿದೆ.<br /> <br /> ರಿಯಲ್ ಎಸ್ಟೇಟ್ ಉದ್ಯಮಿ ರಾಜಣ್ಣ (35) ಮತ್ತು ಅವರ ಪತ್ನಿ ಮಂಜುಳಾ (26) ಆತ್ಮಹತ್ಯೆ ಮಾಡಿಕೊಂಡವರು. ವಿವಾಹವಾಗಿ ಆರು ವರ್ಷವಾಗಿದ್ದ ದಂಪತಿಗೆ ವಿನಯ್ ಮತ್ತು ಮೌನಶ್ರೀ ಎಂಬ ಮಕ್ಕಳಿದ್ದಾರೆ.<br /> <br /> ಅಣ್ಣನ ಪತ್ನಿಗೆ ಎರಡು ದಿನಗಳ ಹಿಂದೆಯಷ್ಟೇ ಮಗು ಜನಿಸಿತ್ತು. ಮಂಜುಳಾ ಅವರು, ಅಣ್ಣನ ಮಗು ವನ್ನು ನೋಡಲು ಆಂಧ್ರಪ್ರದೇಶದ ತವರು ಮನೆಗೆ ಹೋಗುವುದಾಗಿ ಭಾನುವಾರ ಸಂಜೆ ಪತಿಗೆ ತಿಳಿಸಿದರು.<br /> <br /> ಆದರೆ, ರಾಜಣ್ಣ ಅವರ ಸಂಬಂಧಿಕರೊಬ್ಬರ ಮದುವೆ ಸಮಾರಂಭ ಬುಧವಾರ (ಏ.25) ಏರ್ಪಡಾಗಿತ್ತು. ಈ ಹಿನ್ನೆಲೆಯಲ್ಲಿ ಸಮಾರಂಭ ಮುಗಿದ ಬಳಿಕ ತವರು ಮನೆಗೆ ಹೋಗುವಂತೆ ಪತ್ನಿಗೆ ಸೂಚಿಸಿದರು.<br /> <br /> ಈ ವಿಷಯವಾಗಿ ದಂಪತಿ ಮಧ್ಯೆ ವಾಗ್ವಾದ ನಡೆದು ಜಗಳವಾಯಿತು. ಇದರಿಂದ ಬೇಸರಗೊಂಡ ಮಂಜುಳಾ ಅವರು ಕೋಣೆಯೊಂದರಲ್ಲಿ ರಾತ್ರಿ ನೇಣು ಹಾಕಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.<br /> <br /> ಪತ್ನಿಯ ಆತ್ಮಹತ್ಯೆ ಸುದ್ದಿ ತಿಳಿದು ಮನನೊಂದ ರಾಜಣ್ಣ ಅವರು ಸೋಮವಾರ ಬೆಳಗಿನ ಜಾವ ಮನೆಯಿಂದ ಹೊರ ಹೋಗಿ ತೋಟವೊಂದರಲ್ಲಿ ಮರಕ್ಕೆ ನೇಣು ಹಾಕಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.<br /> `ನನ್ನ ಸಾವಿಗೆ ಯಾರು ಕಾರಣರಲ್ಲ. ಪತ್ನಿಯ ಸಾವಿನಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. <br /> <br /> ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಿ~ ಎಂದು ರಾಜಣ್ಣ ಪತ್ರ ಬರೆದಿಟ್ಟಿದ್ದಾರೆ. ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾರ ಮಧ್ಯಾಹ್ನ ದಂಪತಿಯ ಮರಣೋತ್ತರ ಪರೀಕ್ಷೆ ನಡೆಸಿ ಶವಗಳನ್ನು ಕುಟುಂಬ ಸದಸ್ಯರಿಗೆ ಒಪ್ಪಿಸಲಾಯಿತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ರಾಜಾನುಕುಂಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>