<p>ತುಮಕೂರು: ವೃತ್ತಿ ಬೇಡುವ ಕೌಶಲಗಳು ಕಾಲಕ್ಕೆ ಅನುಗುಣವಾಗಿ ಬದಲಾಗುತ್ತಿದ್ದು, ವಿದ್ಯಾರ್ಥಿಗಳು ಮೃದು ಕೌಶಲಗಳಾದ ಭಾಷೆ, ಸಂವಹನ ಕಲೆಗಳನ್ನು ಸಮರ್ಥವಾಗಿ ಮೈಗೂಡಿಸಿಕೊಳ್ಳಬೇಕು ಎಂದು ಐಎಸ್ಟಿಇ ಅಧ್ಯಕ್ಷ ಡಾ.ಎನ್.ಆರ್.ಶೆಟ್ಟಿ ತಿಳಿಸಿದರು.<br /> <br /> ನಗರದ ಸಿದ್ಧಾರ್ಥ ತಾಂತ್ರಿಕ ಶಿಕ್ಷಣ ಸಂಸ್ಥೆಯಲ್ಲಿ ಸೋಮವಾರ ಬಿಇ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಪುನಶ್ಚೇತನ ಕಾರ್ಯಕ್ರಮದಲ್ಲಿ ಮಾತನಾಡಿದರು.<br /> <br /> ತರಗತಿಗೆ ದಾಖಲಾದ ವಿದ್ಯಾರ್ಥಿಗಳು ಮೊದಲ ದಿನದಿಂದಲೇ ಮೌಲ್ಯಮಾಪನಕ್ಕೆ ಒಳಗಾಗುತ್ತೀರಿ. ತಂಡದಲ್ಲಿ ಕಾರ್ಯನಿರ್ವಹಿಸುವ ಮನೋಭಾವ ಬೆಳೆಸಿಕೊಳ್ಳಿ ಎಂದು ಹೇಳಿದರು.<br /> <br /> ಪ್ರಾಂಶುಪಾಲ ಡಾ.ಕೆ.ಎ.ಕೃಷ್ಣಮೂರ್ತಿ ಮಾತನಾಡಿ, ಎಂಜಿನಿಯರಿಂಗ್ ಶಿಕ್ಷಣ ಆಯ್ಕೆ ಮಾಡಿಕೊಂಡವರು ಸಮಾಜಕ್ಕೆ ಒಳಿತಾಗುವ ನಿಟ್ಟಿನಲ್ಲಿ ಮಹತ್ವದ ಅನ್ವೇಷಣೆಗೆ ಮುಂದಾಗಬೇಕಿದೆ ಎಂದರು.<br /> <br /> ಆಡಳಿತಾಧಿಕಾರಿ ಪ್ರೊ.ಸಿ.ಎನ್.ನರಸಿಂಹಮೂರ್ತಿ ಮಾತನಾಡಿ, ಸಿದ್ಧಾರ್ಥ ವಿಶ್ವವಿದ್ಯಾಲಯದ ಕಾರ್ಯಚಟುವಟಿಕೆಗೆ ಸಂಬಂಧಿಸಿದಂತೆ ಯಾವುದೇ ಗೊಂದಲಕ್ಕೆ ಒಳಗಾಗಬೇಕಿಲ್ಲ. ನಮ್ಮ ಸಂಸ್ಥೆಯಲ್ಲಿ ಅಧ್ಯಯನ ಮಾಡುವ ಬಹುತೇಕ ವಿದ್ಯಾರ್ಥಿಗಳು ಉತ್ತಮ ಕಂಪೆನಿಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದು, ಸಂಸ್ಥೆಯು ಉತ್ತಮ ಹೆಸರನ್ನು ಹೊಂದಿದೆ ಎಂದು ಹೇಳಿಸದರು.<br /> <br /> ಪ್ರೊ.ಎಸ್.ಎನ್.ಕೇಶವಮೂರ್ತಿ, ಪ್ರೊ.ಎಚ್.ಪಿ. ಸುದರ್ಶನ್, ಪ್ರೊ.ಎಂ.ಝೆಡ್.ಕುರಿಯನ್ ಮತ್ತಿತರರು ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರು: ವೃತ್ತಿ ಬೇಡುವ ಕೌಶಲಗಳು ಕಾಲಕ್ಕೆ ಅನುಗುಣವಾಗಿ ಬದಲಾಗುತ್ತಿದ್ದು, ವಿದ್ಯಾರ್ಥಿಗಳು ಮೃದು ಕೌಶಲಗಳಾದ ಭಾಷೆ, ಸಂವಹನ ಕಲೆಗಳನ್ನು ಸಮರ್ಥವಾಗಿ ಮೈಗೂಡಿಸಿಕೊಳ್ಳಬೇಕು ಎಂದು ಐಎಸ್ಟಿಇ ಅಧ್ಯಕ್ಷ ಡಾ.ಎನ್.ಆರ್.ಶೆಟ್ಟಿ ತಿಳಿಸಿದರು.<br /> <br /> ನಗರದ ಸಿದ್ಧಾರ್ಥ ತಾಂತ್ರಿಕ ಶಿಕ್ಷಣ ಸಂಸ್ಥೆಯಲ್ಲಿ ಸೋಮವಾರ ಬಿಇ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಪುನಶ್ಚೇತನ ಕಾರ್ಯಕ್ರಮದಲ್ಲಿ ಮಾತನಾಡಿದರು.<br /> <br /> ತರಗತಿಗೆ ದಾಖಲಾದ ವಿದ್ಯಾರ್ಥಿಗಳು ಮೊದಲ ದಿನದಿಂದಲೇ ಮೌಲ್ಯಮಾಪನಕ್ಕೆ ಒಳಗಾಗುತ್ತೀರಿ. ತಂಡದಲ್ಲಿ ಕಾರ್ಯನಿರ್ವಹಿಸುವ ಮನೋಭಾವ ಬೆಳೆಸಿಕೊಳ್ಳಿ ಎಂದು ಹೇಳಿದರು.<br /> <br /> ಪ್ರಾಂಶುಪಾಲ ಡಾ.ಕೆ.ಎ.ಕೃಷ್ಣಮೂರ್ತಿ ಮಾತನಾಡಿ, ಎಂಜಿನಿಯರಿಂಗ್ ಶಿಕ್ಷಣ ಆಯ್ಕೆ ಮಾಡಿಕೊಂಡವರು ಸಮಾಜಕ್ಕೆ ಒಳಿತಾಗುವ ನಿಟ್ಟಿನಲ್ಲಿ ಮಹತ್ವದ ಅನ್ವೇಷಣೆಗೆ ಮುಂದಾಗಬೇಕಿದೆ ಎಂದರು.<br /> <br /> ಆಡಳಿತಾಧಿಕಾರಿ ಪ್ರೊ.ಸಿ.ಎನ್.ನರಸಿಂಹಮೂರ್ತಿ ಮಾತನಾಡಿ, ಸಿದ್ಧಾರ್ಥ ವಿಶ್ವವಿದ್ಯಾಲಯದ ಕಾರ್ಯಚಟುವಟಿಕೆಗೆ ಸಂಬಂಧಿಸಿದಂತೆ ಯಾವುದೇ ಗೊಂದಲಕ್ಕೆ ಒಳಗಾಗಬೇಕಿಲ್ಲ. ನಮ್ಮ ಸಂಸ್ಥೆಯಲ್ಲಿ ಅಧ್ಯಯನ ಮಾಡುವ ಬಹುತೇಕ ವಿದ್ಯಾರ್ಥಿಗಳು ಉತ್ತಮ ಕಂಪೆನಿಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದು, ಸಂಸ್ಥೆಯು ಉತ್ತಮ ಹೆಸರನ್ನು ಹೊಂದಿದೆ ಎಂದು ಹೇಳಿಸದರು.<br /> <br /> ಪ್ರೊ.ಎಸ್.ಎನ್.ಕೇಶವಮೂರ್ತಿ, ಪ್ರೊ.ಎಚ್.ಪಿ. ಸುದರ್ಶನ್, ಪ್ರೊ.ಎಂ.ಝೆಡ್.ಕುರಿಯನ್ ಮತ್ತಿತರರು ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>