<p>ಮಾರಕ ರೋಗಗಳ ಸಂಶೋಧನೆಗೆ ನಿಧಿ ಸಂಗ್ರಹ ಮಾಡಲು ವಿದೇಶದಲ್ಲಿರುವ ಹಲವಾರು ಸ್ವಯಂ ಸೇವಾ ಸಂಸ್ಥೆಗಳು ಶ್ರಮಿಸುತ್ತಿವೆ. ಇಂಥವುಗಳ ಪಟ್ಟಿಯಲ್ಲಿ ಕೆನಡಾ ಮೂಲದ ಟೆರಿಫಾಕ್ಸ್ ರನ್ ಸೇವಾ ಸಂಸ್ಥೆ ಸಹ ಒಂದು. <br /> <br /> ಪ್ರಪಂಚದಾದ್ಯಂತ ಕ್ಯಾನ್ಸರ್ ಪೀಡಿತರ ನೆರವಿಗಾಗಿ ಸಹಾಯ ಹಸ್ತ ಚಾಚಿರುವ ಈ ಸಂಸ್ಥೆ ಮತ್ತಷ್ಟು ಸಹಾಯ ಮಾಡಲಿಚ್ಛಿಸಿರುವ ಸಹೃದಯರನ್ನು ನಿರೀಕ್ಷಿಸುತ್ತಿದೆ. ಈ ನಿಟ್ಟಿನಲ್ಲಿ ಭಾನುವಾರ ಮ್ಯಾರಥಾನ್ ಆಯೋಜಿಸಿದೆ. <br /> <br /> ಕಂಠೀರವ ಕ್ರೀಡಾಂಗಣದಲ್ಲಿ ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾಗಲಿರುವ ನಾಲ್ಕು ಕಿ.ಮೀಗಳ ಮ್ಯಾರಥಾನ್ಗೆ ನಟ ರಮೇಶ್ ಅರವಿಂದ್ ಚಾಲನೆ ನೀಡಲಿದ್ದಾರೆ. <br /> <br /> ಉದ್ಘಾಟನಾ ಸಮಾರಂಭದಲ್ಲಿ ಕೆನಡಾದ ಕಾನ್ಸುಲ್ ಜನರಲ್ ಶಾನ್ ವೆಡಿಕ್, ಬಿಲಿಯರ್ಡ್ಸ್ ಆಟಗಾರ ಪಂಕಜ್ ಅಡ್ವಾಣಿ, ಟೆನ್ನಿಸ್ ಆಟಗಾರ ರೋಹನ್ ಬೋಪಣ್ಣ, ಸಂಸ್ಥೆಯ ಮುಖ್ಯಸ್ಥೆ ಅನುಪಮಾ ಮೊಂಗ ಮೊದಲಾದವರು ಪಾಲ್ಗೊಳ್ಳಲಿದ್ದಾರೆ. <br /> <br /> ಕ್ಯಾನ್ಸರ್ ಪೀಡಿತರಿಗೆ ನೆರವು ನೀಡಲಿಚ್ಛಿಸುವವರು ಚೆಕ್ ಅಥವಾ ನಗದನ್ನು ಹೆಸರು ನೊಂದಾಯಿಸುವ ವೇಳೆ ನೀಡಬಹುದು. ಸಂಗ್ರಹವಾದ ಹಣವನ್ನು ಕ್ಯಾನ್ಸರ್ ರೋಗದ ಸಂಶೋಧನೆಗಾಗಿ ಟಾಟಾ ಸ್ಮಾರಕ ಆಸ್ಪತ್ರೆಗೆ ನೀಡಲು ಉದ್ದೇಶಿಸಲಾಗಿದೆ.<br /> ಮಾಹಿತಿಗೆ: ನಿತಿನ್ ತೊಲಾನಿ (99010 90581, 2846 5060). </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಾರಕ ರೋಗಗಳ ಸಂಶೋಧನೆಗೆ ನಿಧಿ ಸಂಗ್ರಹ ಮಾಡಲು ವಿದೇಶದಲ್ಲಿರುವ ಹಲವಾರು ಸ್ವಯಂ ಸೇವಾ ಸಂಸ್ಥೆಗಳು ಶ್ರಮಿಸುತ್ತಿವೆ. ಇಂಥವುಗಳ ಪಟ್ಟಿಯಲ್ಲಿ ಕೆನಡಾ ಮೂಲದ ಟೆರಿಫಾಕ್ಸ್ ರನ್ ಸೇವಾ ಸಂಸ್ಥೆ ಸಹ ಒಂದು. <br /> <br /> ಪ್ರಪಂಚದಾದ್ಯಂತ ಕ್ಯಾನ್ಸರ್ ಪೀಡಿತರ ನೆರವಿಗಾಗಿ ಸಹಾಯ ಹಸ್ತ ಚಾಚಿರುವ ಈ ಸಂಸ್ಥೆ ಮತ್ತಷ್ಟು ಸಹಾಯ ಮಾಡಲಿಚ್ಛಿಸಿರುವ ಸಹೃದಯರನ್ನು ನಿರೀಕ್ಷಿಸುತ್ತಿದೆ. ಈ ನಿಟ್ಟಿನಲ್ಲಿ ಭಾನುವಾರ ಮ್ಯಾರಥಾನ್ ಆಯೋಜಿಸಿದೆ. <br /> <br /> ಕಂಠೀರವ ಕ್ರೀಡಾಂಗಣದಲ್ಲಿ ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾಗಲಿರುವ ನಾಲ್ಕು ಕಿ.ಮೀಗಳ ಮ್ಯಾರಥಾನ್ಗೆ ನಟ ರಮೇಶ್ ಅರವಿಂದ್ ಚಾಲನೆ ನೀಡಲಿದ್ದಾರೆ. <br /> <br /> ಉದ್ಘಾಟನಾ ಸಮಾರಂಭದಲ್ಲಿ ಕೆನಡಾದ ಕಾನ್ಸುಲ್ ಜನರಲ್ ಶಾನ್ ವೆಡಿಕ್, ಬಿಲಿಯರ್ಡ್ಸ್ ಆಟಗಾರ ಪಂಕಜ್ ಅಡ್ವಾಣಿ, ಟೆನ್ನಿಸ್ ಆಟಗಾರ ರೋಹನ್ ಬೋಪಣ್ಣ, ಸಂಸ್ಥೆಯ ಮುಖ್ಯಸ್ಥೆ ಅನುಪಮಾ ಮೊಂಗ ಮೊದಲಾದವರು ಪಾಲ್ಗೊಳ್ಳಲಿದ್ದಾರೆ. <br /> <br /> ಕ್ಯಾನ್ಸರ್ ಪೀಡಿತರಿಗೆ ನೆರವು ನೀಡಲಿಚ್ಛಿಸುವವರು ಚೆಕ್ ಅಥವಾ ನಗದನ್ನು ಹೆಸರು ನೊಂದಾಯಿಸುವ ವೇಳೆ ನೀಡಬಹುದು. ಸಂಗ್ರಹವಾದ ಹಣವನ್ನು ಕ್ಯಾನ್ಸರ್ ರೋಗದ ಸಂಶೋಧನೆಗಾಗಿ ಟಾಟಾ ಸ್ಮಾರಕ ಆಸ್ಪತ್ರೆಗೆ ನೀಡಲು ಉದ್ದೇಶಿಸಲಾಗಿದೆ.<br /> ಮಾಹಿತಿಗೆ: ನಿತಿನ್ ತೊಲಾನಿ (99010 90581, 2846 5060). </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>