<p>ಕೃಷ್ಣರಾಜಪುರ: ಗ್ರಾಮ ಪಂಚಾಯಿತಿಯಿಂದ ಬಿಬಿಎಂಪಿಗೆ ಸೇರ್ಪಡೆಯಾದ ಕ್ಯಾಲಸನಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎನ್.ಎಸ್. ನಂದೀಶ್ರೆಡ್ಡಿ ಗುದ್ದಲಿ ಪೂಜೆ ನೆರವೇರಿಸಿದರು.<br /> <br /> ನಂತರ ಮಾತನಾಡಿದ ಅವರು, ಬಿಬಿಂಪಿಯು 50 ಲಕ್ಷ ರೂಪಾಯಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಂಡಿದೆ. ಕೆಲವೆಡೆ ಒಳಚರಂಡಿ ಕೊಳವೆ ಅಳವಡಿಕೆ ಕಾಮಗಾರಿ ವಿಳಂಬಗೊಂಡ ಕಾರಣಕ್ಕೆ ಗುತ್ತಿಗೆದಾರರಿಗೆ ದಂಡ ವಿಧಿಸಲಾಗಿದೆ. ಕಾಮಗಾರಿ ಸಕಾಲದಲ್ಲಿ ಪೂರ್ಣಗೊಳ್ಳುವ ರೀತಿಯಲ್ಲಿ ಸ್ಥಳೀಯರು ಮೇಲ್ವಿಚಾರಣೆ ನಡೆಸಬೇಕು ಎಂದರು.<br /> <br /> ಬಿಬಿಎಂಪಿ ಸದಸ್ಯೆ ತೇಜಸ್ವಿನಿರಾಜು ಮಾತನಾಡಿ, ನಾಗರಿಕ ಪರ ಸಂಘಟನೆಗಳು ಮತ್ತು ನಿವಾಸಿಗಳು ಒಗ್ಗಟ್ಟಿನಿಂದ ಇದ್ದರೆ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಬಗೆಹರಿಸಲು ಸಾಧ್ಯ ಎಂದರು.<br /> <br /> ಬಿಜೆಪಿ ನಗರ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಚಿದಾನಂದ, ಮುಖಂಡ ಕೇಶವಮೂರ್ತಿ, ಸುಬ್ಬರೆಡ್ಡಿ, ಬೈರೇಗೌಡ, ಬಿ.ಎಚ್.ಗಣೇಶರೆಡ್ಡಿ, ಲೋಕೇಶ್, ದಾಮೋದರ ರೆಡ್ಡಿ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೃಷ್ಣರಾಜಪುರ: ಗ್ರಾಮ ಪಂಚಾಯಿತಿಯಿಂದ ಬಿಬಿಎಂಪಿಗೆ ಸೇರ್ಪಡೆಯಾದ ಕ್ಯಾಲಸನಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎನ್.ಎಸ್. ನಂದೀಶ್ರೆಡ್ಡಿ ಗುದ್ದಲಿ ಪೂಜೆ ನೆರವೇರಿಸಿದರು.<br /> <br /> ನಂತರ ಮಾತನಾಡಿದ ಅವರು, ಬಿಬಿಂಪಿಯು 50 ಲಕ್ಷ ರೂಪಾಯಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಂಡಿದೆ. ಕೆಲವೆಡೆ ಒಳಚರಂಡಿ ಕೊಳವೆ ಅಳವಡಿಕೆ ಕಾಮಗಾರಿ ವಿಳಂಬಗೊಂಡ ಕಾರಣಕ್ಕೆ ಗುತ್ತಿಗೆದಾರರಿಗೆ ದಂಡ ವಿಧಿಸಲಾಗಿದೆ. ಕಾಮಗಾರಿ ಸಕಾಲದಲ್ಲಿ ಪೂರ್ಣಗೊಳ್ಳುವ ರೀತಿಯಲ್ಲಿ ಸ್ಥಳೀಯರು ಮೇಲ್ವಿಚಾರಣೆ ನಡೆಸಬೇಕು ಎಂದರು.<br /> <br /> ಬಿಬಿಎಂಪಿ ಸದಸ್ಯೆ ತೇಜಸ್ವಿನಿರಾಜು ಮಾತನಾಡಿ, ನಾಗರಿಕ ಪರ ಸಂಘಟನೆಗಳು ಮತ್ತು ನಿವಾಸಿಗಳು ಒಗ್ಗಟ್ಟಿನಿಂದ ಇದ್ದರೆ ಸಮಸ್ಯೆಗಳನ್ನು ಪರಿಣಾಮಕಾರಿಯಾಗಿ ಬಗೆಹರಿಸಲು ಸಾಧ್ಯ ಎಂದರು.<br /> <br /> ಬಿಜೆಪಿ ನಗರ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಚಿದಾನಂದ, ಮುಖಂಡ ಕೇಶವಮೂರ್ತಿ, ಸುಬ್ಬರೆಡ್ಡಿ, ಬೈರೇಗೌಡ, ಬಿ.ಎಚ್.ಗಣೇಶರೆಡ್ಡಿ, ಲೋಕೇಶ್, ದಾಮೋದರ ರೆಡ್ಡಿ ಇತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>