<p><strong>ಢಾಕಾ (ಪಿಟಿಐ):</strong> ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ರಾಜಕೀಯ ಪ್ರೇರಿತ ಗಲಭೆ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಮುಂದಿನ ವರ್ಷ ನಡೆಯಲಿರುವ ಟ್ವೆಂಟಿ-20 ವಿಶ್ವಕಪ್ ಮೇಲೂ ಪರಿಣಾಮ ಬೀರುವ ಸಾಧ್ಯತೆಯಿದೆ.<br /> <br /> ಮುಂದಿನ ಮಾರ್ಚ್ 16 ರಿಂದ ಏಪ್ರಿಲ್ 6ರವರೆಗೆ ಬಾಂಗ್ಲಾದಲ್ಲಿ ಟಿ-20 ವಿಶ್ವಕಪ್ ಟೂರ್ನಿ ನಡೆಯಲಿದೆ. ಈ ಪ್ರಮುಖ ಟೂರ್ನಿಗೆ ಎಲ್ಲ ಸಿದ್ಧತೆಗಳು ನಡೆದಿವೆ.<br /> ‘ಪರಿಸ್ಥಿತಿ ಹೀಗೆ ಮುಂದುವರಿದರೆ ಟೂರ್ನಿಯಲ್ಲಿ ಪಾಲ್ಗೊಳ್ಳಲಿರುವ 16 ತಂಡಗಳ ಆಟಗಾರರು ಹಾಗೂ ಸಿಬ್ಬಂದಿಗೆ ಭದ್ರತೆ ಒದಗಿಸುವುದು ಕಷ್ಟವಾಗಲಿದೆ.<br /> <br /> ಇಂತಹ ಪರಿಸ್ಥಿತಿಯಲ್ಲಿ ತಂಡಗಳೂ ಟೂರ್ನಿಯಲ್ಲಿ ಆಡಲು ಒಪ್ಪುವ ಸಾಧ್ಯತೆ ಕಡಿಮೆ. ಆದ್ದರಿಂದ ಟೂರ್ನಿ ಬಾಂಗ್ಲಾದ ಕೈತಪ್ಪಲಿದೆಯೇ ಎಂಬ ಭಯ ಕಾಡುತ್ತಿದೆ’ ಎಂದು ಬಾಂಗ್ಲಾ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ ನಜ್ಮುಲ್ ಹಸನ್ ತಿಳಿಸಿದ್ದಾರೆ.<br /> <br /> ಗಲಭೆಯು ವಿಶ್ವಕಪ್ ಟೂರ್ನಿ ನಡೆಸಲು ಉದ್ದೇಶಿಸಿರುವ ಢಾಕಾ, ಚಿತ್ತಗಾಂಗ್ ಮತ್ತು ಸಿಲೆಟ್ ನಲ್ಲಿಯೂ ತೀವ್ರ ಸ್ವರೂಪ ಪಡೆದುಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಢಾಕಾ (ಪಿಟಿಐ):</strong> ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ರಾಜಕೀಯ ಪ್ರೇರಿತ ಗಲಭೆ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಮುಂದಿನ ವರ್ಷ ನಡೆಯಲಿರುವ ಟ್ವೆಂಟಿ-20 ವಿಶ್ವಕಪ್ ಮೇಲೂ ಪರಿಣಾಮ ಬೀರುವ ಸಾಧ್ಯತೆಯಿದೆ.<br /> <br /> ಮುಂದಿನ ಮಾರ್ಚ್ 16 ರಿಂದ ಏಪ್ರಿಲ್ 6ರವರೆಗೆ ಬಾಂಗ್ಲಾದಲ್ಲಿ ಟಿ-20 ವಿಶ್ವಕಪ್ ಟೂರ್ನಿ ನಡೆಯಲಿದೆ. ಈ ಪ್ರಮುಖ ಟೂರ್ನಿಗೆ ಎಲ್ಲ ಸಿದ್ಧತೆಗಳು ನಡೆದಿವೆ.<br /> ‘ಪರಿಸ್ಥಿತಿ ಹೀಗೆ ಮುಂದುವರಿದರೆ ಟೂರ್ನಿಯಲ್ಲಿ ಪಾಲ್ಗೊಳ್ಳಲಿರುವ 16 ತಂಡಗಳ ಆಟಗಾರರು ಹಾಗೂ ಸಿಬ್ಬಂದಿಗೆ ಭದ್ರತೆ ಒದಗಿಸುವುದು ಕಷ್ಟವಾಗಲಿದೆ.<br /> <br /> ಇಂತಹ ಪರಿಸ್ಥಿತಿಯಲ್ಲಿ ತಂಡಗಳೂ ಟೂರ್ನಿಯಲ್ಲಿ ಆಡಲು ಒಪ್ಪುವ ಸಾಧ್ಯತೆ ಕಡಿಮೆ. ಆದ್ದರಿಂದ ಟೂರ್ನಿ ಬಾಂಗ್ಲಾದ ಕೈತಪ್ಪಲಿದೆಯೇ ಎಂಬ ಭಯ ಕಾಡುತ್ತಿದೆ’ ಎಂದು ಬಾಂಗ್ಲಾ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ ನಜ್ಮುಲ್ ಹಸನ್ ತಿಳಿಸಿದ್ದಾರೆ.<br /> <br /> ಗಲಭೆಯು ವಿಶ್ವಕಪ್ ಟೂರ್ನಿ ನಡೆಸಲು ಉದ್ದೇಶಿಸಿರುವ ಢಾಕಾ, ಚಿತ್ತಗಾಂಗ್ ಮತ್ತು ಸಿಲೆಟ್ ನಲ್ಲಿಯೂ ತೀವ್ರ ಸ್ವರೂಪ ಪಡೆದುಕೊಂಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>