<p><strong>ಚೆನ್ನೈ (ಪಿಟಿಐ): </strong>ಹಾಲಿ ಚಾಂಪಿಯನ್ ರಾಜಸ್ತಾನ ತಂಡದವರು ಗುರುವಾರ ಇಲ್ಲಿ ಆರಂಭವಾಗಲಿರುವ ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯ ಫೈನಲ್ನಲ್ಲಿ ತಮಿಳುನಾಡು ತಂಡದ ಸವಾಲಿಗೆ ಉತ್ತರ ನೀಡಲು ಸಜ್ಜಾಗಿದ್ದಾರೆ.<br /> <br /> ಐದು ದಿನಗಳ ಈ ಫೈನಲ್ ಪಂದ್ಯ ಎಂ.ಎ.ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿದೆ. ಎಂಟು ವರ್ಷಗಳ ಬಳಿಕ ಫೈನಲ್ ತಲುಪಿರುವ ತಮಿಳುನಾಡು ಈ ಋತುವಿನಲ್ಲಿ ಸ್ಥಿರ ಪ್ರದರ್ಶನ ತೋರುತ್ತಿದೆ. ಅದರಲ್ಲೂ ಸೆಮಿಫೈನಲ್ನಲ್ಲಿ ಬಲಿಷ್ಠ ಮುಂಬೈಗೆ ಪೆಟ್ಟು ನೀಡಿದ್ದು ಲಕ್ಷ್ಮಿಪತಿ ಬಾಲಾಜಿ ಸಾರಥ್ಯದ ತಂಡದ ವಿಶ್ವಾಸವನ್ನು ಮತ್ತಷ್ಟು ಹೆಚ್ಚಿಸಿದೆ.<br /> <br /> ಹಾಗಾಗಿ ಈ ತಂಡವೀಗ ಮೂರನೇ ಬಾರಿ ರಣಜಿ ಟ್ರೋಫಿ ಎತ್ತಿ ಹಿಡಿಯುವ ಕನಸು ಕಾಣುತ್ತಿದೆ. ಆದರೆ ಪ್ಲೇಟ್ ಗುಂಪಿನಿಂದ ಮೇಲೆದ್ದು ಬಂದು 2010-11ರಲ್ಲಿ ಚಾಂಪಿಯನ್ ಆಗಿದ್ದ ರಾಜಸ್ತಾನ ಅಚ್ಚರಿ ಪ್ರದರ್ಶನ ತೋರುತ್ತಿದೆ. ಸ್ಟಾರ್ ಆಟಗಾರರು ಈ ತಂಡದಲ್ಲಿ ಇಲ್ಲದಿದ್ದರೂ ಬಲಿಷ್ಠ ತಂಡಗಳನ್ನು ಹಿಮ್ಮೆಟ್ಟಿಸಿ ಈ ಬಾರಿಯೂ ಅಂತಿಮ ಸೆಣಸಾಟಕ್ಕೆ ಸನ್ನದ್ಧವಾಗಿ ನಿಂತಿದೆ. ಸತತ ಎರಡನೇ ಬಾರಿ ಚಾಂಪಿಯನ್ ಆಗುವ ಭರವಸೆಯಲ್ಲಿದೆ.<br /> <br /> ತಮಿಳುನಾಡು ತಂಡದಲ್ಲಿ ಮುರಳಿ ವಿಜಯ್, ಅಭಿನವ್ ಮುಕುಂದ್, ಎಸ್.ಬದರೀನಾಥ್, ದಿನೇಶ್ ಕಾರ್ತಿಕ್ ಹಾಗೂ ಬಾಲಾಜಿ ಅವರಂಥ ಆಟಗಾರರಿದ್ದಾರೆ. ರಾಜಸ್ತಾನ ತಂಡದಲ್ಲಿ ರಾಬಿನ್ ಬಿಸ್ತ್, ನಾಯಕ ಹೃಷಿಕೇಶ್ ಕಾನಿಟ್ಕರ್ ಪ್ರಮುಖ ಆಟಗಾರರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ (ಪಿಟಿಐ): </strong>ಹಾಲಿ ಚಾಂಪಿಯನ್ ರಾಜಸ್ತಾನ ತಂಡದವರು ಗುರುವಾರ ಇಲ್ಲಿ ಆರಂಭವಾಗಲಿರುವ ರಣಜಿ ಟ್ರೋಫಿ ಕ್ರಿಕೆಟ್ ಟೂರ್ನಿಯ ಫೈನಲ್ನಲ್ಲಿ ತಮಿಳುನಾಡು ತಂಡದ ಸವಾಲಿಗೆ ಉತ್ತರ ನೀಡಲು ಸಜ್ಜಾಗಿದ್ದಾರೆ.<br /> <br /> ಐದು ದಿನಗಳ ಈ ಫೈನಲ್ ಪಂದ್ಯ ಎಂ.ಎ.ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿದೆ. ಎಂಟು ವರ್ಷಗಳ ಬಳಿಕ ಫೈನಲ್ ತಲುಪಿರುವ ತಮಿಳುನಾಡು ಈ ಋತುವಿನಲ್ಲಿ ಸ್ಥಿರ ಪ್ರದರ್ಶನ ತೋರುತ್ತಿದೆ. ಅದರಲ್ಲೂ ಸೆಮಿಫೈನಲ್ನಲ್ಲಿ ಬಲಿಷ್ಠ ಮುಂಬೈಗೆ ಪೆಟ್ಟು ನೀಡಿದ್ದು ಲಕ್ಷ್ಮಿಪತಿ ಬಾಲಾಜಿ ಸಾರಥ್ಯದ ತಂಡದ ವಿಶ್ವಾಸವನ್ನು ಮತ್ತಷ್ಟು ಹೆಚ್ಚಿಸಿದೆ.<br /> <br /> ಹಾಗಾಗಿ ಈ ತಂಡವೀಗ ಮೂರನೇ ಬಾರಿ ರಣಜಿ ಟ್ರೋಫಿ ಎತ್ತಿ ಹಿಡಿಯುವ ಕನಸು ಕಾಣುತ್ತಿದೆ. ಆದರೆ ಪ್ಲೇಟ್ ಗುಂಪಿನಿಂದ ಮೇಲೆದ್ದು ಬಂದು 2010-11ರಲ್ಲಿ ಚಾಂಪಿಯನ್ ಆಗಿದ್ದ ರಾಜಸ್ತಾನ ಅಚ್ಚರಿ ಪ್ರದರ್ಶನ ತೋರುತ್ತಿದೆ. ಸ್ಟಾರ್ ಆಟಗಾರರು ಈ ತಂಡದಲ್ಲಿ ಇಲ್ಲದಿದ್ದರೂ ಬಲಿಷ್ಠ ತಂಡಗಳನ್ನು ಹಿಮ್ಮೆಟ್ಟಿಸಿ ಈ ಬಾರಿಯೂ ಅಂತಿಮ ಸೆಣಸಾಟಕ್ಕೆ ಸನ್ನದ್ಧವಾಗಿ ನಿಂತಿದೆ. ಸತತ ಎರಡನೇ ಬಾರಿ ಚಾಂಪಿಯನ್ ಆಗುವ ಭರವಸೆಯಲ್ಲಿದೆ.<br /> <br /> ತಮಿಳುನಾಡು ತಂಡದಲ್ಲಿ ಮುರಳಿ ವಿಜಯ್, ಅಭಿನವ್ ಮುಕುಂದ್, ಎಸ್.ಬದರೀನಾಥ್, ದಿನೇಶ್ ಕಾರ್ತಿಕ್ ಹಾಗೂ ಬಾಲಾಜಿ ಅವರಂಥ ಆಟಗಾರರಿದ್ದಾರೆ. ರಾಜಸ್ತಾನ ತಂಡದಲ್ಲಿ ರಾಬಿನ್ ಬಿಸ್ತ್, ನಾಯಕ ಹೃಷಿಕೇಶ್ ಕಾನಿಟ್ಕರ್ ಪ್ರಮುಖ ಆಟಗಾರರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>