<p><strong>ತಲಘಟ್ಟಪುರ:</strong> `ಬಡತನದಿಂದಾಗಿ ಬಾಲಕಾರ್ಮಿಕರ ಸಂಖ್ಯೆ ಜಾಸ್ತಿಯಾಗಿದ್ದು, ಕೆಲವು ದುಷ್ಟಶಕ್ತಿಗಳು ಮಕ್ಕಳನ್ನು ಕ್ರಿಮಿನಲ್ ಚಟುವಟಿಕೆಗಳಿಗೆ ಬಳಸಿಕೊಳ್ಳುತ್ತಿವೆ' ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಧೀಶ ಪಿ.ವಿ. ಸಿಂಗ್ರಿ ಕಳವಳ ವ್ಯಕ್ತಪಡಿಸಿದರು.<br /> <br /> ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಲಘಟ್ಟಪುರ ಠಾಣೆ, ಕಾರ್ಮಿಕ ಇಲಾಖೆ, ಕಗ್ಗಲೀಪುರ ಗ್ರಾಮ ಪಂಚಾಯ್ತಿಯ ವತಿಯಿಂದ ಕಗ್ಗಲೀಪುರದಲ್ಲಿ ಈಚೆಗೆ ಆಯೋಜಿಸಿದ್ದ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> `ಬಡ ಮಕ್ಕಳನ್ನು ಗುರುತಿಸಿ ಆಸೆ, ಅಮಿಷ ತೋರಿಸಿ ಕಾನೂನುಬಾಹಿರ ಕೆಲಸದಲ್ಲಿ ತೊಡಗಿಸುವ ವ್ಯಕ್ತಿಗಳಿಗೆ ಉಗ್ರ ಶಿಕ್ಷೆಯಾಗಬೇಕು. ಆಗ ಮಾತ್ರ ಸಮಾಜದಲ್ಲಿ ನೆಮ್ಮದಿಯ ವಾತಾವರಣ ಸೃಷ್ಟಿಯಾಗಬಹುದು' ಎಂದರು.<br /> <br /> `ಗಣಿಗಾರಿಕೆ, ಇಟ್ಟಿಗೆ, ಸಿಮೆಂಟ್, ಮನೆಕೆಲಸದಲ್ಲಿ ಮಕ್ಕಳನ್ನು ದುಡಿಸಿಕೊಳ್ಳುವ ಪದ್ಧತಿ ಇಂದಿಗೂ ಚಾಲ್ತಿಯಲ್ಲಿದೆ. ಕೆಲಸದ ಸಂದರ್ಭದಲ್ಲಿ ಕಾರ್ಮಿಕರು ಅವಘಡದಲ್ಲಿ ಮೃತಪಟ್ಟರೆ ಸರ್ಕಾರ ಯಾವುದೇ ಸವಲತ್ತು ನೀಡುವುದಿಲ್ಲ' ಎಂದು ಅವರು ವಿಷಾದಿಸಿದರು.<br /> <br /> ಜಿಲ್ಲಾ ಮುಖ್ಯ ನ್ಯಾಯಿಕ ದಂಡಾಧಿಕಾರಿ ಎಂ.ಎಚ್.ಅಣ್ಣಯ್ಯ, ಪೊಲೀಸ್ ಅಧಿಕಾರಿ ಕೆ.ವಿಶ್ವನಾಥ್, ಕಾರ್ಮಿಕ ನಿರೀಕ್ಷಕ ಡಿ.ಸಿ.ಸುರೇಶ್ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಲಘಟ್ಟಪುರ:</strong> `ಬಡತನದಿಂದಾಗಿ ಬಾಲಕಾರ್ಮಿಕರ ಸಂಖ್ಯೆ ಜಾಸ್ತಿಯಾಗಿದ್ದು, ಕೆಲವು ದುಷ್ಟಶಕ್ತಿಗಳು ಮಕ್ಕಳನ್ನು ಕ್ರಿಮಿನಲ್ ಚಟುವಟಿಕೆಗಳಿಗೆ ಬಳಸಿಕೊಳ್ಳುತ್ತಿವೆ' ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಧೀಶ ಪಿ.ವಿ. ಸಿಂಗ್ರಿ ಕಳವಳ ವ್ಯಕ್ತಪಡಿಸಿದರು.<br /> <br /> ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಲಘಟ್ಟಪುರ ಠಾಣೆ, ಕಾರ್ಮಿಕ ಇಲಾಖೆ, ಕಗ್ಗಲೀಪುರ ಗ್ರಾಮ ಪಂಚಾಯ್ತಿಯ ವತಿಯಿಂದ ಕಗ್ಗಲೀಪುರದಲ್ಲಿ ಈಚೆಗೆ ಆಯೋಜಿಸಿದ್ದ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> `ಬಡ ಮಕ್ಕಳನ್ನು ಗುರುತಿಸಿ ಆಸೆ, ಅಮಿಷ ತೋರಿಸಿ ಕಾನೂನುಬಾಹಿರ ಕೆಲಸದಲ್ಲಿ ತೊಡಗಿಸುವ ವ್ಯಕ್ತಿಗಳಿಗೆ ಉಗ್ರ ಶಿಕ್ಷೆಯಾಗಬೇಕು. ಆಗ ಮಾತ್ರ ಸಮಾಜದಲ್ಲಿ ನೆಮ್ಮದಿಯ ವಾತಾವರಣ ಸೃಷ್ಟಿಯಾಗಬಹುದು' ಎಂದರು.<br /> <br /> `ಗಣಿಗಾರಿಕೆ, ಇಟ್ಟಿಗೆ, ಸಿಮೆಂಟ್, ಮನೆಕೆಲಸದಲ್ಲಿ ಮಕ್ಕಳನ್ನು ದುಡಿಸಿಕೊಳ್ಳುವ ಪದ್ಧತಿ ಇಂದಿಗೂ ಚಾಲ್ತಿಯಲ್ಲಿದೆ. ಕೆಲಸದ ಸಂದರ್ಭದಲ್ಲಿ ಕಾರ್ಮಿಕರು ಅವಘಡದಲ್ಲಿ ಮೃತಪಟ್ಟರೆ ಸರ್ಕಾರ ಯಾವುದೇ ಸವಲತ್ತು ನೀಡುವುದಿಲ್ಲ' ಎಂದು ಅವರು ವಿಷಾದಿಸಿದರು.<br /> <br /> ಜಿಲ್ಲಾ ಮುಖ್ಯ ನ್ಯಾಯಿಕ ದಂಡಾಧಿಕಾರಿ ಎಂ.ಎಚ್.ಅಣ್ಣಯ್ಯ, ಪೊಲೀಸ್ ಅಧಿಕಾರಿ ಕೆ.ವಿಶ್ವನಾಥ್, ಕಾರ್ಮಿಕ ನಿರೀಕ್ಷಕ ಡಿ.ಸಿ.ಸುರೇಶ್ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>