<p><strong>ಬೀದರ್:</strong> ಕ್ರೈಸ್ತರ ಪ್ರಮುಖ ಹಬ್ಬವಾದ ಕ್ರಿಸ್ಮಸ್ ನಿಮಿತ್ತ ನಗರದಲ್ಲಿ ಭಾನುವಾರ ನಗರದಲ್ಲಿ ‘ಮ್ಯಾರಥಾನ್ ಓಟ’ ನಡೆಯಿತು. ಮಂಗಲಪೇಟ್ನ ಸೇಂಟ್ ಪೌಲ್ ಮೆಥೋಡಿಸ್ಟ್ ಚರ್ಚ್ ಆಯೋಜಿಸಿದ್ದ ಮ್ಯಾರಥಾನ್ ಓಟದಲ್ಲಿ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.<br /> <br /> ಮಂಗಲಪೇಟ್ನಲ್ಲಿ ಸೇಂಟ್ ಪೌಲ್ ಮೆಥೋಡಿಸ್ಟ್ ಚರ್ಚ್ ಜಿಲ್ಲಾ ಮೇಲ್ವಿಚಾರಕ ಎ. ನಿಮಿಯೋನ್ ಓಟಕ್ಕೆ ಚಾಲನೆ ನೀಡಿದರು. ಚೌಬಾರ, ಮಹಮ್ಮದ್ ಗವಾನ್ ವೃತ್ತ, ಶಾಹಗಂಜ್, ಅಂಬೇಡ್ಕರ್ ವೃತ್ತ, ಬಸವೇಶ್ವರ ವೃತ್ತ, ಪೊಲೀಸ್ ವೃತ್ತದ ಮತ್ತೆ ಓಟ ಮಂಗಲ್ ಪೇಟ್ ತಲುಪಿತು.<br /> <br /> ಮ್ಯಾರಥಾನ್ನಲ್ಲಿ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು, ಯುವಕರು, ಹಿರಿಯರು ಉತ್ಸಾಹದಿಂದ ಪಾಲ್ಗೊಂಡರು.<br /> <br /> ನಂತರ ನಡೆದ ಸಮಾರಂಭದಲ್ಲಿ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢಶಾಲೆ, ಕಾಲೇಜು ಹಾಗೂ ಹಿರಿಯ ನಾಗರಿಕರ ವಿಭಾಗಗಳಲ್ಲಿನ ವಿಜೇತರಿಗೆ ಬಹುಮಾನ ನೀಡಲಾಯಿತು. <br /> <br /> ನಗರಸಭೆ ಸದಸ್ಯ ಫಿಲೋಮಿನ್ರಾಜ್ ಪ್ರಸಾದ್, ಎನ್.ಎಫ್. ಶಾಲೆಯ ಮುಖ್ಯಗುರು ಬಿ.ಕೆ. ಸುಂದರರಾಜ್, ಸುದರ್ಶನ್ ಸುಂದರರಾಜ್, ಸಂಜಯ್, ನೋವೆಲ್ ಆಶಿಸ್, ರಾರ್ಬಟ್ ಡೇವಿಡ್, ಪ್ರವೀಣಕುಮಾರ್ ವಸಂತರಾಜ್ ಪಾಲ್ಗೊಂಡಿದ್ದರು. ಸಾಯಂಕಾಲ ಎನ್.ಎಫ್. ಪ್ರೌಢಶಾಲೆಯ ಸಭಾಂಗಣದಲ್ಲಿ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್:</strong> ಕ್ರೈಸ್ತರ ಪ್ರಮುಖ ಹಬ್ಬವಾದ ಕ್ರಿಸ್ಮಸ್ ನಿಮಿತ್ತ ನಗರದಲ್ಲಿ ಭಾನುವಾರ ನಗರದಲ್ಲಿ ‘ಮ್ಯಾರಥಾನ್ ಓಟ’ ನಡೆಯಿತು. ಮಂಗಲಪೇಟ್ನ ಸೇಂಟ್ ಪೌಲ್ ಮೆಥೋಡಿಸ್ಟ್ ಚರ್ಚ್ ಆಯೋಜಿಸಿದ್ದ ಮ್ಯಾರಥಾನ್ ಓಟದಲ್ಲಿ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.<br /> <br /> ಮಂಗಲಪೇಟ್ನಲ್ಲಿ ಸೇಂಟ್ ಪೌಲ್ ಮೆಥೋಡಿಸ್ಟ್ ಚರ್ಚ್ ಜಿಲ್ಲಾ ಮೇಲ್ವಿಚಾರಕ ಎ. ನಿಮಿಯೋನ್ ಓಟಕ್ಕೆ ಚಾಲನೆ ನೀಡಿದರು. ಚೌಬಾರ, ಮಹಮ್ಮದ್ ಗವಾನ್ ವೃತ್ತ, ಶಾಹಗಂಜ್, ಅಂಬೇಡ್ಕರ್ ವೃತ್ತ, ಬಸವೇಶ್ವರ ವೃತ್ತ, ಪೊಲೀಸ್ ವೃತ್ತದ ಮತ್ತೆ ಓಟ ಮಂಗಲ್ ಪೇಟ್ ತಲುಪಿತು.<br /> <br /> ಮ್ಯಾರಥಾನ್ನಲ್ಲಿ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು, ಯುವಕರು, ಹಿರಿಯರು ಉತ್ಸಾಹದಿಂದ ಪಾಲ್ಗೊಂಡರು.<br /> <br /> ನಂತರ ನಡೆದ ಸಮಾರಂಭದಲ್ಲಿ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢಶಾಲೆ, ಕಾಲೇಜು ಹಾಗೂ ಹಿರಿಯ ನಾಗರಿಕರ ವಿಭಾಗಗಳಲ್ಲಿನ ವಿಜೇತರಿಗೆ ಬಹುಮಾನ ನೀಡಲಾಯಿತು. <br /> <br /> ನಗರಸಭೆ ಸದಸ್ಯ ಫಿಲೋಮಿನ್ರಾಜ್ ಪ್ರಸಾದ್, ಎನ್.ಎಫ್. ಶಾಲೆಯ ಮುಖ್ಯಗುರು ಬಿ.ಕೆ. ಸುಂದರರಾಜ್, ಸುದರ್ಶನ್ ಸುಂದರರಾಜ್, ಸಂಜಯ್, ನೋವೆಲ್ ಆಶಿಸ್, ರಾರ್ಬಟ್ ಡೇವಿಡ್, ಪ್ರವೀಣಕುಮಾರ್ ವಸಂತರಾಜ್ ಪಾಲ್ಗೊಂಡಿದ್ದರು. ಸಾಯಂಕಾಲ ಎನ್.ಎಫ್. ಪ್ರೌಢಶಾಲೆಯ ಸಭಾಂಗಣದಲ್ಲಿ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>