<p><strong>ನವದೆಹಲಿ (ಪಿಟಿಐ):</strong> ಕ್ರೀಡಾ ಸಚಿವಾಲಯದ ವಿರುದ್ಧ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿಯವರು ಕಿಡಿಕಿಡಿಯಾಗಿದ್ದಾರೆ.<br /> ರಾಜೀವ್ಗಾಂಧಿ ಖೇಲ್ರತ್ನ ಮತ್ತು ಅರ್ಜುನ ಪ್ರಶಸ್ತಿಗಳ ಆಯ್ಕೆ ಸಮಿತಿಯ ಸದಸ್ಯರಾಗಿದ್ದರೂ, ಅದಕ್ಕೆ ಸಂಬಂಧಿಸಿದ ಯಾವುದೇ ಸಭೆಯಲ್ಲಿ ರವಿಶಾಸ್ತ್ರಿಯವರು ಪಾಲ್ಗೊಂಡಿಲ್ಲ ಎಂಬುದಾಗಿ ಕ್ರೀಡಾ ಇಲಾಖೆಯ ಮೂಲಗಳು ಹೇಳಿರುವುದರ ಬಗ್ಗೆ ರವಿಶಾಸ್ತ್ರಿ ತೀವ್ರ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.<br /> <br /> ದೇಶದ ಅತ್ಯುನ್ನತ ಕ್ರೀಡಾ ಪ್ರಶಸ್ತಿಗಳಿಗೆ ಸಾಧಕರನ್ನು ಆಯ್ಕೆ ಮಾಡಲು ರಚಿಸಲಾದ 15 ಮಂದಿ ಸದಸ್ಯರ ಸಮಿತಿಯಲ್ಲಿ ರವಿಶಾಸ್ತ್ರಿಯವರೂ ಇದ್ದಾರೆಂದು ಕ್ರೀಡಾ ಸಚಿವಾಲಯ ಪ್ರಕಟಿಸಿತ್ತು.<br /> <br /> `ಆದರೆ ರವಿಶಾಸ್ತ್ರಿಯವರಿಗೆ ಈ ವಿಷಯ ತಿಳಿಸಲು ನಡೆಸಿದ ಪ್ರಯತ್ನಗಳೆಲ್ಲವೂ ವಿಫಲವಾಗಿದ್ದು, ಅವರನ್ನು ಸಂಪರ್ಕಿಸಲು ಸಾಧ್ಯವಾಗಲೇ ಇಲ್ಲ~ ಎಂದು ಕ್ರೀಡಾ ಇಲಾಖೆಯ ಮೂಲಗಳು ತಿಳಿಸಿರುವುದು ಸೋಮವಾರ ಮಾಧ್ಯಮಗಳಲ್ಲಿ ಪ್ರಕಟಗೊಂಡಿತ್ತು. <br /> <br /> ಈ ಬಗ್ಗೆ ತಮ್ಮ ಅನಿಸಿಕೆ ವ್ಯಕ್ತ ಪಡಿಸಿರುವ ರವಿಶಾಸ್ತ್ರಿ `ನಾವು ಪ್ರಸಕ್ತ ಸಂಪರ್ಕ ಕ್ರಾಂತಿಯ ಯುಗದಲ್ಲಿದ್ದೇವೆ. ನನ್ನನ್ನು ಸಂಪರ್ಕಿಸಲು ಸಾಧ್ಯವಾಗಲಿಲ್ಲ ಎಂಬ ಕ್ರೀಡಾ ಸಚಿವಾಲಯದ ಹೇಳಿಕೆಗೆ ಅಳುವುದೋ, ನಗುವುದೋ ಗೊತ್ತಾಗುತ್ತಿಲ್ಲ. ನನ್ನ ಮೊಬೈಲ್ ಫೋನ್ಗೆ ಇಲಾಖೆಯಿಂದ ಯಾವುದೇ ಕರೆ ಅಥವಾ ಎಸ್ಎಂಎಸ್ ಬಂದಿಲ್ಲ. ನನ್ನ ಇಮೇಲ್ಗೂ ಯಾವುದೇ `ಮೇಲ್~ ಬಂದಿಲ್ಲ. ಅಂಚೆ ಮೂಲಕ ಅಥವಾ ಕೊರಿಯರ್ ಸೇವೆಗಳ ಮೂಲಕವೂ ನನಗೆ ಯಾವುದೇ ಪತ್ರ ಬಂದಿಲ್ಲ. ಪರಿಸ್ಥಿತಿ ಈ ರೀತಿ ಇರುವಾಗ ನಾನು ಆಯ್ಕೆ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳುವುದಾದರೂ ಹೇಗೆ~ ಎಂದೂ ಅವರು ಪ್ರಶ್ನಿಸಿದ್ದಾರೆ.<br /> <br /> `ಅಂತಹದ್ದೊಂದು ಸಮಿತಿಗೆ ನನ್ನನ್ನು ಸದಸ್ಯನನ್ನಾಗಿ ನೇಮಕ ಮಾಡಿದ್ದಾರೆಂಬುದೇ ಅತ್ಯಂತ ಗೌರವದ ಸಂಗತಿ ಎಂದು ನಾನು ಭಾವಿಸುತ್ತೇನೆ. ಆದರೆ ಅಂತಹ ವಿಷಯಗಳನ್ನು ಮಾಧ್ಯಮಗಳಲ್ಲಿ ಓದಿ ಸಭೆಗಳಲ್ಲಿ ಪಾಲ್ಗೊಳ್ಳಲಾಗುವುದಿಲ್ಲ~ ಎಂದೂ ಅವರು ನುಡಿದಿದ್ದಾರೆ.<br /> <br /> ರಾಜ್ಯವರ್ಧನ್ ಸಿಂಗ್ ರಾಥೋಡ್ ಸಾರಥ್ಯದ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ಬೈಚುಂಗ್ ಭುಟಿಯಾ, ಅಪರ್ಣಾ ಪೋಪಟ್, ಅಖಿಲ್ ಕುಮಾರ್, ರಾಜೇಶ್ ಕುಮಾರ್ ಸೇರಿದಂತೆ 15 ಮಂದಿ ಇದ್ದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಕ್ರೀಡಾ ಸಚಿವಾಲಯದ ವಿರುದ್ಧ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿಯವರು ಕಿಡಿಕಿಡಿಯಾಗಿದ್ದಾರೆ.<br /> ರಾಜೀವ್ಗಾಂಧಿ ಖೇಲ್ರತ್ನ ಮತ್ತು ಅರ್ಜುನ ಪ್ರಶಸ್ತಿಗಳ ಆಯ್ಕೆ ಸಮಿತಿಯ ಸದಸ್ಯರಾಗಿದ್ದರೂ, ಅದಕ್ಕೆ ಸಂಬಂಧಿಸಿದ ಯಾವುದೇ ಸಭೆಯಲ್ಲಿ ರವಿಶಾಸ್ತ್ರಿಯವರು ಪಾಲ್ಗೊಂಡಿಲ್ಲ ಎಂಬುದಾಗಿ ಕ್ರೀಡಾ ಇಲಾಖೆಯ ಮೂಲಗಳು ಹೇಳಿರುವುದರ ಬಗ್ಗೆ ರವಿಶಾಸ್ತ್ರಿ ತೀವ್ರ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.<br /> <br /> ದೇಶದ ಅತ್ಯುನ್ನತ ಕ್ರೀಡಾ ಪ್ರಶಸ್ತಿಗಳಿಗೆ ಸಾಧಕರನ್ನು ಆಯ್ಕೆ ಮಾಡಲು ರಚಿಸಲಾದ 15 ಮಂದಿ ಸದಸ್ಯರ ಸಮಿತಿಯಲ್ಲಿ ರವಿಶಾಸ್ತ್ರಿಯವರೂ ಇದ್ದಾರೆಂದು ಕ್ರೀಡಾ ಸಚಿವಾಲಯ ಪ್ರಕಟಿಸಿತ್ತು.<br /> <br /> `ಆದರೆ ರವಿಶಾಸ್ತ್ರಿಯವರಿಗೆ ಈ ವಿಷಯ ತಿಳಿಸಲು ನಡೆಸಿದ ಪ್ರಯತ್ನಗಳೆಲ್ಲವೂ ವಿಫಲವಾಗಿದ್ದು, ಅವರನ್ನು ಸಂಪರ್ಕಿಸಲು ಸಾಧ್ಯವಾಗಲೇ ಇಲ್ಲ~ ಎಂದು ಕ್ರೀಡಾ ಇಲಾಖೆಯ ಮೂಲಗಳು ತಿಳಿಸಿರುವುದು ಸೋಮವಾರ ಮಾಧ್ಯಮಗಳಲ್ಲಿ ಪ್ರಕಟಗೊಂಡಿತ್ತು. <br /> <br /> ಈ ಬಗ್ಗೆ ತಮ್ಮ ಅನಿಸಿಕೆ ವ್ಯಕ್ತ ಪಡಿಸಿರುವ ರವಿಶಾಸ್ತ್ರಿ `ನಾವು ಪ್ರಸಕ್ತ ಸಂಪರ್ಕ ಕ್ರಾಂತಿಯ ಯುಗದಲ್ಲಿದ್ದೇವೆ. ನನ್ನನ್ನು ಸಂಪರ್ಕಿಸಲು ಸಾಧ್ಯವಾಗಲಿಲ್ಲ ಎಂಬ ಕ್ರೀಡಾ ಸಚಿವಾಲಯದ ಹೇಳಿಕೆಗೆ ಅಳುವುದೋ, ನಗುವುದೋ ಗೊತ್ತಾಗುತ್ತಿಲ್ಲ. ನನ್ನ ಮೊಬೈಲ್ ಫೋನ್ಗೆ ಇಲಾಖೆಯಿಂದ ಯಾವುದೇ ಕರೆ ಅಥವಾ ಎಸ್ಎಂಎಸ್ ಬಂದಿಲ್ಲ. ನನ್ನ ಇಮೇಲ್ಗೂ ಯಾವುದೇ `ಮೇಲ್~ ಬಂದಿಲ್ಲ. ಅಂಚೆ ಮೂಲಕ ಅಥವಾ ಕೊರಿಯರ್ ಸೇವೆಗಳ ಮೂಲಕವೂ ನನಗೆ ಯಾವುದೇ ಪತ್ರ ಬಂದಿಲ್ಲ. ಪರಿಸ್ಥಿತಿ ಈ ರೀತಿ ಇರುವಾಗ ನಾನು ಆಯ್ಕೆ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳುವುದಾದರೂ ಹೇಗೆ~ ಎಂದೂ ಅವರು ಪ್ರಶ್ನಿಸಿದ್ದಾರೆ.<br /> <br /> `ಅಂತಹದ್ದೊಂದು ಸಮಿತಿಗೆ ನನ್ನನ್ನು ಸದಸ್ಯನನ್ನಾಗಿ ನೇಮಕ ಮಾಡಿದ್ದಾರೆಂಬುದೇ ಅತ್ಯಂತ ಗೌರವದ ಸಂಗತಿ ಎಂದು ನಾನು ಭಾವಿಸುತ್ತೇನೆ. ಆದರೆ ಅಂತಹ ವಿಷಯಗಳನ್ನು ಮಾಧ್ಯಮಗಳಲ್ಲಿ ಓದಿ ಸಭೆಗಳಲ್ಲಿ ಪಾಲ್ಗೊಳ್ಳಲಾಗುವುದಿಲ್ಲ~ ಎಂದೂ ಅವರು ನುಡಿದಿದ್ದಾರೆ.<br /> <br /> ರಾಜ್ಯವರ್ಧನ್ ಸಿಂಗ್ ರಾಥೋಡ್ ಸಾರಥ್ಯದ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ಬೈಚುಂಗ್ ಭುಟಿಯಾ, ಅಪರ್ಣಾ ಪೋಪಟ್, ಅಖಿಲ್ ಕುಮಾರ್, ರಾಜೇಶ್ ಕುಮಾರ್ ಸೇರಿದಂತೆ 15 ಮಂದಿ ಇದ್ದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>