<p><strong>ಹುಮನಾಬಾದ್: </strong>ವಿದ್ಯಾರ್ಥಿಗಳು ಓದಿನಷ್ಟೆ ಮಹತ್ವ ಕ್ರೀಡೆಗೂ ನೀಡಬೇಕು. ಹೆಚ್ಚು ಶ್ರಮ ಬೇಡುವ ಕ್ರೀಡೆಯಲ್ಲಿ ಪಾಲ್ಗೊಳ್ಳುವುದಕ್ಕೆ ಸಾಧ್ಯವಾಗದಿದ್ದರೆ ಪ್ರತಿಯೊಬ್ಬ ವಿದ್ಯಾರ್ಥಿಕನಿಷ್ಠ ಓಟದಲ್ಲಾದರೂ ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಲಕ್ಷ್ಮಿವೆಂಕಟೇಶ್ವರ ಬಾಲಭಾರತಿ ವಿದ್ಯಾಮಂದಿರ ಕಾರ್ಯದರ್ಶಿ ಶಿವಶಂಕರ ತರನಳ್ಳಿ ಹೇಳಿದರು.<br /> <br /> ಸಂಸ್ಥೆಯ ವಾರ್ಷಿಕೋತ್ಸವ ಅಂಗವಾಗಿ ಈಚೆಗೆ ಏರ್ಪಡಿಸಿದ್ದ ಶಾಲಾ ಮಟ್ಟದ ಕ್ರೀಡಾಸ್ಪರ್ಧೆ ಉದ್ಘಾಟನಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ, ಮಾತನಾಡಿದರು.<br /> <br /> ತಾಲ್ಲೂಕು ದೈಹಿಕ ಶಿಕ್ಷಕರ ಸಂಘದ ಉಪಾಧ್ಯಕ್ಷ ಉಮಾಕಾಂತ ಕುಂಬಾರ ಮಾತನಾಡಿ, ಮನುಷ್ಯನಿಗೆ ಆಹಾರದಷ್ಟೇ ಕ್ರೀಡೆಮುಖ್ಯ. ಈ ಭಾಗದವರಲ್ಲಿ ಇರುವ ಹಿಂದುಳಿದವರು ಎಂಬ ಮನೋಭಾವನೆ ಹೊಡೆದೋಡಿಸಲು ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ, ಯಾರಿಗೂ ಕಮ್ಮಿಯಲ್ಲ ಎಂಬುದನ್ನು ಸಾಬೀತುಪಡಿಸಬೇಕು ಎಂದು ತಿಳಿಸಿದರು.<br /> <br /> ಸಬ್ ಇನ್ಸ್ಪೆಕ್ಟರ್ ಎಲ್.ಬಿ ಅಗ್ನಿ ಸ್ಪರ್ಧೆ ಉದ್ಘಾಟಿಸಿದರು. ಸಂಸ್ಥೆಯ ನಿರ್ದೇಶಕ ನಾರಾಯಣರಾವ ಚಿದ್ರಿ ಮಾತನಾಡಿ, ’ಊಟ ಬಲ್ಲವನಿಗೆ ರೋಗವಿಲ್ಲ. ’ಮಾತು ಬಲ್ಲವನಿಗೆ ಜಗಳವಿಲ್ಲ’ ಎಂಬ ಹಿರಿಯರ ಮಾತನ್ನು ವಿದ್ಯಾರ್ಥಿಗಳು ಜೀವನದಲ್ಲಿ ಮರೆಯಬಾರದು ಎಂದರು.<br /> <br /> ಪ್ರೌಢಶಾಲೆ ಮುಖ್ಯಶಿಕ್ಷಕ ಕೆ.ಕೆ ಯರಂತೇಲಿ ಮಠ್, ಪ್ರಾಥಮಿಕ ವಿಭಾಗದ ಅಶೋಕಕುಮಾರ ವಡ್ಡನಕೇರಿ ಇದ್ದರು.<br /> ದಿಲೀಪಕುಮಾರ ಗಾಯಕವಾಡ ನಿರೂಪಿಸಿದರು. ಉದಯಕುಮಾರ ಕಲ್ಲೂರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಮನಾಬಾದ್: </strong>ವಿದ್ಯಾರ್ಥಿಗಳು ಓದಿನಷ್ಟೆ ಮಹತ್ವ ಕ್ರೀಡೆಗೂ ನೀಡಬೇಕು. ಹೆಚ್ಚು ಶ್ರಮ ಬೇಡುವ ಕ್ರೀಡೆಯಲ್ಲಿ ಪಾಲ್ಗೊಳ್ಳುವುದಕ್ಕೆ ಸಾಧ್ಯವಾಗದಿದ್ದರೆ ಪ್ರತಿಯೊಬ್ಬ ವಿದ್ಯಾರ್ಥಿಕನಿಷ್ಠ ಓಟದಲ್ಲಾದರೂ ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಲಕ್ಷ್ಮಿವೆಂಕಟೇಶ್ವರ ಬಾಲಭಾರತಿ ವಿದ್ಯಾಮಂದಿರ ಕಾರ್ಯದರ್ಶಿ ಶಿವಶಂಕರ ತರನಳ್ಳಿ ಹೇಳಿದರು.<br /> <br /> ಸಂಸ್ಥೆಯ ವಾರ್ಷಿಕೋತ್ಸವ ಅಂಗವಾಗಿ ಈಚೆಗೆ ಏರ್ಪಡಿಸಿದ್ದ ಶಾಲಾ ಮಟ್ಟದ ಕ್ರೀಡಾಸ್ಪರ್ಧೆ ಉದ್ಘಾಟನಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ, ಮಾತನಾಡಿದರು.<br /> <br /> ತಾಲ್ಲೂಕು ದೈಹಿಕ ಶಿಕ್ಷಕರ ಸಂಘದ ಉಪಾಧ್ಯಕ್ಷ ಉಮಾಕಾಂತ ಕುಂಬಾರ ಮಾತನಾಡಿ, ಮನುಷ್ಯನಿಗೆ ಆಹಾರದಷ್ಟೇ ಕ್ರೀಡೆಮುಖ್ಯ. ಈ ಭಾಗದವರಲ್ಲಿ ಇರುವ ಹಿಂದುಳಿದವರು ಎಂಬ ಮನೋಭಾವನೆ ಹೊಡೆದೋಡಿಸಲು ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ, ಯಾರಿಗೂ ಕಮ್ಮಿಯಲ್ಲ ಎಂಬುದನ್ನು ಸಾಬೀತುಪಡಿಸಬೇಕು ಎಂದು ತಿಳಿಸಿದರು.<br /> <br /> ಸಬ್ ಇನ್ಸ್ಪೆಕ್ಟರ್ ಎಲ್.ಬಿ ಅಗ್ನಿ ಸ್ಪರ್ಧೆ ಉದ್ಘಾಟಿಸಿದರು. ಸಂಸ್ಥೆಯ ನಿರ್ದೇಶಕ ನಾರಾಯಣರಾವ ಚಿದ್ರಿ ಮಾತನಾಡಿ, ’ಊಟ ಬಲ್ಲವನಿಗೆ ರೋಗವಿಲ್ಲ. ’ಮಾತು ಬಲ್ಲವನಿಗೆ ಜಗಳವಿಲ್ಲ’ ಎಂಬ ಹಿರಿಯರ ಮಾತನ್ನು ವಿದ್ಯಾರ್ಥಿಗಳು ಜೀವನದಲ್ಲಿ ಮರೆಯಬಾರದು ಎಂದರು.<br /> <br /> ಪ್ರೌಢಶಾಲೆ ಮುಖ್ಯಶಿಕ್ಷಕ ಕೆ.ಕೆ ಯರಂತೇಲಿ ಮಠ್, ಪ್ರಾಥಮಿಕ ವಿಭಾಗದ ಅಶೋಕಕುಮಾರ ವಡ್ಡನಕೇರಿ ಇದ್ದರು.<br /> ದಿಲೀಪಕುಮಾರ ಗಾಯಕವಾಡ ನಿರೂಪಿಸಿದರು. ಉದಯಕುಮಾರ ಕಲ್ಲೂರ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>