<p><strong>ಬೆಂಗಳೂರು: </strong>ದೇಶದಲ್ಲಿ ಕ್ರೀಡೆಗಳನ್ನು ವೃತ್ತಿಯಾಗಿ ಸ್ವೀಕರಿಸಲು ಸಾಧ್ಯವಿಲ್ಲ ಎಂದು ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಅಭಿಪ್ರಾಯಪಟ್ಟರು.<br /> <br /> ‘ಟ್ರೇಡ್ ವಿಷನ್ ಇಂಡಿಯಾ’ ಸಂಸ್ಥೆಯು ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ಹೌಸಾಟ್’ ಸಂಗೀತ ಸಿ.ಡಿಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.<br /> <br /> ‘ಕ್ರೀಡಾ ಕ್ಷೇತ್ರದಲ್ಲಿ ಮುಂದುವರೆಯಬೇಕಾದರೆ ವೃತ್ತಿಯನ್ನು ಕೈಬಿಡಬೇಕಾಗುತ್ತದೆ. ದೇಶದಲ್ಲಿ ಇಂದಿಗೂ ಎರಡನೇ ದರ್ಜೆಯಲ್ಲಿ ಉಳಿದಿರುವ ಕ್ರೀಡೆಯನ್ನು ಹವ್ಯಾಸವಾಗಿ ಮಾತ್ರ ಸ್ವೀಕರಿಸಲು ಸಾಧ್ಯ. ಕ್ರೀಡೆಗೆ ಪೂರಕ ವಾತಾವರಣ ಇಲ್ಲದಿರುವುದರಿಂದ ಕ್ರೀಡಾ ಕ್ಷೇತ್ರದಲ್ಲಿ ಭಾರತ ತೃತೀಯ ದರ್ಜೆಯ ರಾಷ್ಟ್ರವಾಗಿದೆ’ ಎಂದು ಅವರು ವಿಷಾದ ವ್ಯಕ್ತಪಡಿಸಿದರು.<br /> <br /> ಮಾಜಿ ಕ್ರಿಕೆಟಿಗ ಕೆ.ಎಸ್.ವಿಶ್ವನಾಥ್, ಚಿಂತಕ ಡಾ.ಗುರುರಾಜ ಕರ್ಜಗಿ ಕಾರ್ಯಕ್ರಮದ ಆಯೋಜಕರಾದ ಸತ್ಯೇಶ್.ಎನ್.ಬೆಳ್ಳೂರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ದೇಶದಲ್ಲಿ ಕ್ರೀಡೆಗಳನ್ನು ವೃತ್ತಿಯಾಗಿ ಸ್ವೀಕರಿಸಲು ಸಾಧ್ಯವಿಲ್ಲ ಎಂದು ಮಾಜಿ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಅಭಿಪ್ರಾಯಪಟ್ಟರು.<br /> <br /> ‘ಟ್ರೇಡ್ ವಿಷನ್ ಇಂಡಿಯಾ’ ಸಂಸ್ಥೆಯು ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ಹೌಸಾಟ್’ ಸಂಗೀತ ಸಿ.ಡಿಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.<br /> <br /> ‘ಕ್ರೀಡಾ ಕ್ಷೇತ್ರದಲ್ಲಿ ಮುಂದುವರೆಯಬೇಕಾದರೆ ವೃತ್ತಿಯನ್ನು ಕೈಬಿಡಬೇಕಾಗುತ್ತದೆ. ದೇಶದಲ್ಲಿ ಇಂದಿಗೂ ಎರಡನೇ ದರ್ಜೆಯಲ್ಲಿ ಉಳಿದಿರುವ ಕ್ರೀಡೆಯನ್ನು ಹವ್ಯಾಸವಾಗಿ ಮಾತ್ರ ಸ್ವೀಕರಿಸಲು ಸಾಧ್ಯ. ಕ್ರೀಡೆಗೆ ಪೂರಕ ವಾತಾವರಣ ಇಲ್ಲದಿರುವುದರಿಂದ ಕ್ರೀಡಾ ಕ್ಷೇತ್ರದಲ್ಲಿ ಭಾರತ ತೃತೀಯ ದರ್ಜೆಯ ರಾಷ್ಟ್ರವಾಗಿದೆ’ ಎಂದು ಅವರು ವಿಷಾದ ವ್ಯಕ್ತಪಡಿಸಿದರು.<br /> <br /> ಮಾಜಿ ಕ್ರಿಕೆಟಿಗ ಕೆ.ಎಸ್.ವಿಶ್ವನಾಥ್, ಚಿಂತಕ ಡಾ.ಗುರುರಾಜ ಕರ್ಜಗಿ ಕಾರ್ಯಕ್ರಮದ ಆಯೋಜಕರಾದ ಸತ್ಯೇಶ್.ಎನ್.ಬೆಳ್ಳೂರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>