<p><strong>ಬೆಂಗಳೂರು: </strong>ಯುವಜನ ಸೇವಾ ಮತ್ತು ಕ್ರೀಡಾ ನಿರ್ದೇಶನಾಲಯ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯ್ತಿಯ ಸಂಯುಕ್ತ ಆಶ್ರಯದಲ್ಲಿ ಬೆಂಗಳೂರು ಗ್ರಾಮಾಂತರ ವಿಭಾಗದ ದಸರಾ ಕ್ರೀಡಾಕೂಟಕ್ಕೆ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಶುಕ್ರವಾರ ಚಾಲನೆ ನೀಡಲಾಯಿತು.<br /> <br /> ಈ ಸಂದರ್ಭದಲ್ಲಿ ಮಾತನಾಡಿದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯ್ತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ವಿ.ನಾರಾಯಣಸ್ವಾಮಿ ಈ ಸಂದರ್ಭದಲ್ಲಿ ಮಾತನಾಡಿ `ಈ ಸ್ಪರ್ಧೆಗಳಿಗೆ ವಯಸ್ಸಿನ ಮಿತಿಯಿಲ್ಲ. ದಸರಾ ಕ್ರೀಡಾಕೂಟದಲ್ಲಿ ಪಡೆಯುವ ಪ್ರಮಾಣಪತ್ರವು ಶೈಕ್ಷಣಿಕ ಕೋರ್ಸ್ಗಳಲ್ಲಿ ಕ್ರೀಡಾ ಕೋಟಾದಡಿ ಪ್ರವೇಶಾವಕಾಶ ಪಡೆಯಲು ಸಹಕಾರಿಯಾಗಲಿದೆ~ ಎಂದರು.<br /> <br /> ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬೆಟ್ಟಸ್ವಾಮಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಭಾಗ್ಯಮ್ಮ, ಉಪಾಧ್ಯಕ್ಷೆ ಶಾಂತಮ್ಮ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಪ್ರಧಾನ ಕಾರ್ಯದರ್ಶಿ ಐ.ಆರ್. ಪೆರುಮಾಳ್ ಇತರರು ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಯುವಜನ ಸೇವಾ ಮತ್ತು ಕ್ರೀಡಾ ನಿರ್ದೇಶನಾಲಯ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯ್ತಿಯ ಸಂಯುಕ್ತ ಆಶ್ರಯದಲ್ಲಿ ಬೆಂಗಳೂರು ಗ್ರಾಮಾಂತರ ವಿಭಾಗದ ದಸರಾ ಕ್ರೀಡಾಕೂಟಕ್ಕೆ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಶುಕ್ರವಾರ ಚಾಲನೆ ನೀಡಲಾಯಿತು.<br /> <br /> ಈ ಸಂದರ್ಭದಲ್ಲಿ ಮಾತನಾಡಿದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯ್ತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ವಿ.ನಾರಾಯಣಸ್ವಾಮಿ ಈ ಸಂದರ್ಭದಲ್ಲಿ ಮಾತನಾಡಿ `ಈ ಸ್ಪರ್ಧೆಗಳಿಗೆ ವಯಸ್ಸಿನ ಮಿತಿಯಿಲ್ಲ. ದಸರಾ ಕ್ರೀಡಾಕೂಟದಲ್ಲಿ ಪಡೆಯುವ ಪ್ರಮಾಣಪತ್ರವು ಶೈಕ್ಷಣಿಕ ಕೋರ್ಸ್ಗಳಲ್ಲಿ ಕ್ರೀಡಾ ಕೋಟಾದಡಿ ಪ್ರವೇಶಾವಕಾಶ ಪಡೆಯಲು ಸಹಕಾರಿಯಾಗಲಿದೆ~ ಎಂದರು.<br /> <br /> ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬೆಟ್ಟಸ್ವಾಮಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಭಾಗ್ಯಮ್ಮ, ಉಪಾಧ್ಯಕ್ಷೆ ಶಾಂತಮ್ಮ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಪ್ರಧಾನ ಕಾರ್ಯದರ್ಶಿ ಐ.ಆರ್. ಪೆರುಮಾಳ್ ಇತರರು ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>