<p>ಬೆಂಗಳೂರು: ಕಾರ್ಮಿಕರ ದಿನದ ಅಂಗವಾಗಿ ನಗರದ ಕ್ರೆಡಯ್ (ಭಾರತೀಯ ರಿಯಲ್ ಎಸ್ಟೇಟ್ ಮತ್ತು ನಿರ್ಮಾಣಗಾರರ ಮಹಾಸಂಘ) ಸಂಸ್ಥೆ ಇಂದಿರಾನಗರ ರೋಟರಿ ಕ್ಲಬ್ ಸಹಯೋಗದಲ್ಲಿ ಭಾನುವಾರ ಕಾರ್ಮಿಕರ ದಿನ ಒಲಿಂಪಿಕ್ಸ್ ಆಯೋಜಿಸಿತ್ತು.<br /> <br /> ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಸುಶೀಲ್ ಮಂತ್ರಿ ಮಾತನಾಡಿ ‘ಸುಧಾರಣೆ ಮತ್ತು ಹೊಸತನ ಕಾಪಾಡಿಕೊಳ್ಳಲು ಶ್ರಮಿಸುತ್ತಿರುವ ಸಂಸ್ಥೆ ಕಾರ್ಮಿಕರಿಗಾಗಿ ಪ್ರಥಮ ಬಾರಿಗೆ ಇಂತಹ ಯೋಜನೆಯೊಂದನ್ನು ರೂಪಿಸಿದೆ. ಸಂಸ್ಥೆಯ ಸದಸ್ಯರಿಗೆ ಮತ್ತು ಕಾರ್ಮಿಕರಿಗೆ ಉತ್ತಮ ಸೌಲಭ್ಯಗಳನ್ನು ನೀಡಲು ಶ್ರಮಿಸಲಾಗುತ್ತಿದೆ’ ಎಂದರು.<br /> <br /> ‘ಹಗಲುರಾತ್ರಿ ವಿವಿಧ ಯೋಜನೆಗಳನ್ನು ಯಶಸ್ವಿಗೊಳಿಸಲು ಶ್ರಮಿಸುತ್ತಿರುವ ಕಾರ್ಮಿಕರಿಗೆ ಕ್ರೆಡಾಯ್ ಪರವಾಗಿ ನಾನು ಕೃತಜ್ಞತೆ ಸಲ್ಲಿಸುತ್ತೇನೆ’ ಎಂದು ಅವರು ಹೇಳಿದರು. ಕಾರ್ಯಕ್ರಮದ ಸಂಘಟನಾ ಅಧ್ಯಕ್ಷ ಸುರೇಶ್ ಹರಿ ಮಾತನಾಡಿ ‘ನಗರದ ವಿವಿಧ ಭಾಗಗಳಿಂದ ಈ ಕ್ರೀಡಾಕೂಟದಲ್ಲಿ ಸುಮಾರು 500 ಕಟ್ಟಡ ಕಾರ್ಮಿಕರು ಭಾಗವಹಿಸಿದ್ದಾರೆ’ ಎಂದರು.<br /> <br /> ಇಂದಿರಾನಗರ ರೋಟರಿ ಸಂಸ್ಥೆ ಅಧ್ಯಕ್ಷ ಸುರೇಶ್ ಪಟೇಲ್, ‘ಪ್ರತಿವರ್ಷ ಸಂಸ್ಥೆಯು ಜಿ.ಎಸ್.ರಾಂಧವ್ ಹಾಕಿ ಟೂರ್ನ್ಮೆಂಟ್, ನಾನ್ ಮೆಡಲಿಸ್ಟ್ ಈಜು ಸ್ಪರ್ಧೆ, ಬ್ಯಾಸ್ಕೆಟ್ ಬಾಲ್ ಟೂರ್ನ್ಮೆಂಟ್, ಅಂತರ ಕಾಲೇಜು ಪೂಟ್ಬಾಲ್ ಟೂರ್ನ್ಮೆಂಟ್ ಮುಂತಾದವುಗಳನ್ನು ನಡೆಸುತ್ತಿದೆ’ ಎಂದು ಅವರು ತಿಳಿಸಿದರು.<br /> <br /> ಸ್ಪರ್ಧೆಯಲ್ಲಿ ವಿಜೇತರಾದವರಿಗೆ ವಿವಿಧ ಬಹುಮಾನಗಳನ್ನು ವಿತರಿಸಲಾಯಿತು. ಮಲ್ಲೇಶ್ವರಂ ಶಾಸಕ ಡಾ.ಅಶ್ವತ್ಥನಾರಾಯಣ, ಸಂಸ್ಥೆಯ ಕಾರ್ಯದರ್ಶಿ ಶಂಕರ್ ಶಾಸ್ತ್ರಿ, ಕರ್ನಾಟಕ ಕಟ್ಟಡ ಮತ್ತು ಇತರ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯ ಸಿಇಓ ವಸಂತ ಕುಮಾರ್ ಎನ್.ಹಿಟ್ಟಂಗಡಿ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಕಾರ್ಮಿಕರ ದಿನದ ಅಂಗವಾಗಿ ನಗರದ ಕ್ರೆಡಯ್ (ಭಾರತೀಯ ರಿಯಲ್ ಎಸ್ಟೇಟ್ ಮತ್ತು ನಿರ್ಮಾಣಗಾರರ ಮಹಾಸಂಘ) ಸಂಸ್ಥೆ ಇಂದಿರಾನಗರ ರೋಟರಿ ಕ್ಲಬ್ ಸಹಯೋಗದಲ್ಲಿ ಭಾನುವಾರ ಕಾರ್ಮಿಕರ ದಿನ ಒಲಿಂಪಿಕ್ಸ್ ಆಯೋಜಿಸಿತ್ತು.<br /> <br /> ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಸುಶೀಲ್ ಮಂತ್ರಿ ಮಾತನಾಡಿ ‘ಸುಧಾರಣೆ ಮತ್ತು ಹೊಸತನ ಕಾಪಾಡಿಕೊಳ್ಳಲು ಶ್ರಮಿಸುತ್ತಿರುವ ಸಂಸ್ಥೆ ಕಾರ್ಮಿಕರಿಗಾಗಿ ಪ್ರಥಮ ಬಾರಿಗೆ ಇಂತಹ ಯೋಜನೆಯೊಂದನ್ನು ರೂಪಿಸಿದೆ. ಸಂಸ್ಥೆಯ ಸದಸ್ಯರಿಗೆ ಮತ್ತು ಕಾರ್ಮಿಕರಿಗೆ ಉತ್ತಮ ಸೌಲಭ್ಯಗಳನ್ನು ನೀಡಲು ಶ್ರಮಿಸಲಾಗುತ್ತಿದೆ’ ಎಂದರು.<br /> <br /> ‘ಹಗಲುರಾತ್ರಿ ವಿವಿಧ ಯೋಜನೆಗಳನ್ನು ಯಶಸ್ವಿಗೊಳಿಸಲು ಶ್ರಮಿಸುತ್ತಿರುವ ಕಾರ್ಮಿಕರಿಗೆ ಕ್ರೆಡಾಯ್ ಪರವಾಗಿ ನಾನು ಕೃತಜ್ಞತೆ ಸಲ್ಲಿಸುತ್ತೇನೆ’ ಎಂದು ಅವರು ಹೇಳಿದರು. ಕಾರ್ಯಕ್ರಮದ ಸಂಘಟನಾ ಅಧ್ಯಕ್ಷ ಸುರೇಶ್ ಹರಿ ಮಾತನಾಡಿ ‘ನಗರದ ವಿವಿಧ ಭಾಗಗಳಿಂದ ಈ ಕ್ರೀಡಾಕೂಟದಲ್ಲಿ ಸುಮಾರು 500 ಕಟ್ಟಡ ಕಾರ್ಮಿಕರು ಭಾಗವಹಿಸಿದ್ದಾರೆ’ ಎಂದರು.<br /> <br /> ಇಂದಿರಾನಗರ ರೋಟರಿ ಸಂಸ್ಥೆ ಅಧ್ಯಕ್ಷ ಸುರೇಶ್ ಪಟೇಲ್, ‘ಪ್ರತಿವರ್ಷ ಸಂಸ್ಥೆಯು ಜಿ.ಎಸ್.ರಾಂಧವ್ ಹಾಕಿ ಟೂರ್ನ್ಮೆಂಟ್, ನಾನ್ ಮೆಡಲಿಸ್ಟ್ ಈಜು ಸ್ಪರ್ಧೆ, ಬ್ಯಾಸ್ಕೆಟ್ ಬಾಲ್ ಟೂರ್ನ್ಮೆಂಟ್, ಅಂತರ ಕಾಲೇಜು ಪೂಟ್ಬಾಲ್ ಟೂರ್ನ್ಮೆಂಟ್ ಮುಂತಾದವುಗಳನ್ನು ನಡೆಸುತ್ತಿದೆ’ ಎಂದು ಅವರು ತಿಳಿಸಿದರು.<br /> <br /> ಸ್ಪರ್ಧೆಯಲ್ಲಿ ವಿಜೇತರಾದವರಿಗೆ ವಿವಿಧ ಬಹುಮಾನಗಳನ್ನು ವಿತರಿಸಲಾಯಿತು. ಮಲ್ಲೇಶ್ವರಂ ಶಾಸಕ ಡಾ.ಅಶ್ವತ್ಥನಾರಾಯಣ, ಸಂಸ್ಥೆಯ ಕಾರ್ಯದರ್ಶಿ ಶಂಕರ್ ಶಾಸ್ತ್ರಿ, ಕರ್ನಾಟಕ ಕಟ್ಟಡ ಮತ್ತು ಇತರ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯ ಸಿಇಓ ವಸಂತ ಕುಮಾರ್ ಎನ್.ಹಿಟ್ಟಂಗಡಿ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>