<p><strong>ನವದೆಹಲಿ (ಪಿಟಿಐ):</strong> ಮಹತ್ವದ ಬೆಳವಣಿಗೆಯೊಂದರಲ್ಲಿ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ರಾಷ್ಟ್ರಪತಿ ಅವರ ಮುಂದಿರುವ 18 ಕ್ಷಮಾದಾನ ಕೋರಿಕೆಯ ಅರ್ಜಿಗಳ ವಿವರ ನೀಡುವಂತೆ ಸೂಚಿಸಿದೆ. ಇದರಲ್ಲಿ ಸಂಸತ್ ಮೇಲೆ ನಡೆದ ದಾಳಿ ಪ್ರಕರಣದಲ್ಲಿ ಮರಣದಂಡನೆಗೆ ಗುರಿಯಾಗಿರುವ ಅಫ್ಜಲ್ ಗುರು ಅರ್ಜಿ ಕೂಡ ಸೇರಿದೆ.</p>.<p>ನ್ಯಾಯಮೂರ್ತಿಗಳಾದ ಜಿ.ಎಸ್. ಸಿಂಘ್ವಿ ಮತ್ತು ಎಸ್.ಜೆ. ಮುಖ್ಯೋಪಾಧ್ಯಾಯ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠವು, `ಕ್ಷಮಾದಾನ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ಬಗ್ಗೆ ತೀರ್ಮಾನ ಕೈಗೊಳ್ಳುವ ಸಂದರ್ಭದಲ್ಲಿ ರಾಷ್ಟ್ರಪತಿ ಅವರು ವಸ್ತುನಿಷ್ಠವಾಗಿ ಕರ್ತವ್ಯ ನಿರ್ವಹಿಸಬೇಕೇ ಎಂಬ ಕುರಿತು ಲಿಖಿತವಾಗಿ ಅಭಿಪ್ರಾಯ ಸಲ್ಲಿಸುವಂತೆ~ ಈ ಪ್ರಕರಣದ ಅರ್ಜಿದಾರರಿಗೆ ಸೂಚಿಸಿದೆ.</p>.<p>ಕ್ಷಮಾದಾನ ಅರ್ಜಿಗಳ ವಿಚಾರದಲ್ಲಿ ಸರ್ಕಾರ ಸಲಹೆ ನೀಡಬಹುದು. ಆದರೆ ಅಂತಿಮ ತೀರ್ಮಾನ ಕೈಗೊಳ್ಳಬೇಕಾದವರು ರಾಷ್ಟ್ರಪತಿಗಳೇ ಎಂದು ಪೀಠ ಅಭಿಪ್ರಾಯಪಟ್ಟಿದೆ.</p>.<p>ಗಲ್ಲು ಶಿಕ್ಷೆಗೆ ಗುರಿಯಾಗಿರುವ ಅಪರಾಧಿಗಳು ಕ್ಷಮಾದಾನ ಕೋರಿ ರಾಷ್ಟ್ರಪತಿ ಅವರಿಗೆ ಸಲ್ಲಿಸಿರುವ ಅರ್ಜಿಗಳ ಕುರಿತು ತೀರ್ಮಾನ ಕೈಗೊಳ್ಳಲು ಆಗುತ್ತಿರುವ ವಿಳಂಬದ ಬಗ್ಗೆ ಹಿರಿಯ ವಕೀಲರು, ಕಾನೂನು ಇಲಾಖೆಯ ಮಾಜಿ ಸಚಿವರೂ ಆದ ರಾಮ್ ಜೇಠ್ಮಲಾನಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನ್ಯಾಯಪೀಠ ನಡೆಸುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಮಹತ್ವದ ಬೆಳವಣಿಗೆಯೊಂದರಲ್ಲಿ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ರಾಷ್ಟ್ರಪತಿ ಅವರ ಮುಂದಿರುವ 18 ಕ್ಷಮಾದಾನ ಕೋರಿಕೆಯ ಅರ್ಜಿಗಳ ವಿವರ ನೀಡುವಂತೆ ಸೂಚಿಸಿದೆ. ಇದರಲ್ಲಿ ಸಂಸತ್ ಮೇಲೆ ನಡೆದ ದಾಳಿ ಪ್ರಕರಣದಲ್ಲಿ ಮರಣದಂಡನೆಗೆ ಗುರಿಯಾಗಿರುವ ಅಫ್ಜಲ್ ಗುರು ಅರ್ಜಿ ಕೂಡ ಸೇರಿದೆ.</p>.<p>ನ್ಯಾಯಮೂರ್ತಿಗಳಾದ ಜಿ.ಎಸ್. ಸಿಂಘ್ವಿ ಮತ್ತು ಎಸ್.ಜೆ. ಮುಖ್ಯೋಪಾಧ್ಯಾಯ ಅವರನ್ನು ಒಳಗೊಂಡ ದ್ವಿಸದಸ್ಯ ಪೀಠವು, `ಕ್ಷಮಾದಾನ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ಬಗ್ಗೆ ತೀರ್ಮಾನ ಕೈಗೊಳ್ಳುವ ಸಂದರ್ಭದಲ್ಲಿ ರಾಷ್ಟ್ರಪತಿ ಅವರು ವಸ್ತುನಿಷ್ಠವಾಗಿ ಕರ್ತವ್ಯ ನಿರ್ವಹಿಸಬೇಕೇ ಎಂಬ ಕುರಿತು ಲಿಖಿತವಾಗಿ ಅಭಿಪ್ರಾಯ ಸಲ್ಲಿಸುವಂತೆ~ ಈ ಪ್ರಕರಣದ ಅರ್ಜಿದಾರರಿಗೆ ಸೂಚಿಸಿದೆ.</p>.<p>ಕ್ಷಮಾದಾನ ಅರ್ಜಿಗಳ ವಿಚಾರದಲ್ಲಿ ಸರ್ಕಾರ ಸಲಹೆ ನೀಡಬಹುದು. ಆದರೆ ಅಂತಿಮ ತೀರ್ಮಾನ ಕೈಗೊಳ್ಳಬೇಕಾದವರು ರಾಷ್ಟ್ರಪತಿಗಳೇ ಎಂದು ಪೀಠ ಅಭಿಪ್ರಾಯಪಟ್ಟಿದೆ.</p>.<p>ಗಲ್ಲು ಶಿಕ್ಷೆಗೆ ಗುರಿಯಾಗಿರುವ ಅಪರಾಧಿಗಳು ಕ್ಷಮಾದಾನ ಕೋರಿ ರಾಷ್ಟ್ರಪತಿ ಅವರಿಗೆ ಸಲ್ಲಿಸಿರುವ ಅರ್ಜಿಗಳ ಕುರಿತು ತೀರ್ಮಾನ ಕೈಗೊಳ್ಳಲು ಆಗುತ್ತಿರುವ ವಿಳಂಬದ ಬಗ್ಗೆ ಹಿರಿಯ ವಕೀಲರು, ಕಾನೂನು ಇಲಾಖೆಯ ಮಾಜಿ ಸಚಿವರೂ ಆದ ರಾಮ್ ಜೇಠ್ಮಲಾನಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನ್ಯಾಯಪೀಠ ನಡೆಸುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>