<p>ನವದೆಹಲಿ (ಪಿಟಿಐ): ಕೆರಿಬಿಯನ್ ನಾಡಿನಲ್ಲಿ ನಡೆಯುತ್ತಿರುವ ತ್ರಿಕೋನ ಏಕದಿನ ಸರಣಿಯಲ್ಲಿ ವಿಂಡೀಸ್ ವಿರುದ್ಧದ ಪಂದ್ಯದ ವೇಳೆ ಕ್ರೀಡಾಂಗಣದಲ್ಲಿ ಮಾತಿನ ಚಕಮಕಿ ನಡೆಸ್ದ್ದಿದ ಸುರೇಶ್ ರೈನಾ ಹಾಗೂ ರವೀಂದ್ರ ಜಡೇಜ ಕೊನೆಗೂ ಕ್ಷಮೆಯಾಚಿಸಿದ್ದಾರೆ.<br /> <br /> ಇಬ್ಬರೂ ಆಟಗಾರರು ತಂಡದ ಮ್ಯಾನೇಜರ್ ಎಂ.ವಿ.ಶ್ರೀಧರ್ ಅವರೊಂದಿಗೆ ಚರ್ಚಿಸಿದ್ದು, ಕ್ರೀಡಾಂಗಣದಲ್ಲಿನ ನಡವಳಿಕೆ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.<br /> <br /> `ತಂಡದ ಮ್ಯಾನೇಜರ್ ಜೊತೆಗೆ ರೈನಾ ಹಾಗೂ ಜಡೇಜ ಮಾತನಾಡಿದ್ದಾರೆ. ಕ್ರೀಡಾಂಗಣದಲ್ಲಿನ ತಮ್ಮ ವರ್ತನೆಗೆ ಉಭಯ ಆಟಗಾರರು ಷರತ್ತುರಹಿತ ಕ್ಷಮೆಯಾಚಿಸಿದ್ದಾರೆ. ಇಂತಹ ಘಟನೆ ಮತ್ತೊಮ್ಮೆ ಪುನರಾವರ್ತನೆಯಾಗುವುದಿಲ್ಲ ಎಂಬ ಭರವಸೆ ನೀಡಿದ್ದಾರೆ' ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.<br /> <br /> ಈ ನಡುವೆ `ಘಟನೆ ಸಂಬಂಧ ವರದಿ ನೀಡುವಂತೆ ತಂಡದ ಮ್ಯಾನೇಜರ್ ಅವರನ್ನು ಕೋರಲಾಗಿದೆ' ಎಂದು ಬಿಸಿಸಿಐ ಹಂಗಾಮಿ ಅಧ್ಯಕ್ಷ ಜಗಮೋಹನ್ ದಾಲ್ಮಿಯ ಸೋಮವಾರವಷ್ಟೇ ತಿಳಿಸಿದ್ದರು. ಶುಕ್ರವಾರ ವಿಂಡೀಸ್ ವಿರುದ್ಧದ ಪಂದ್ಯದಲ್ಲಿ ರೈನಾ ಅವರು ಸುನಿಲ್ ನಾರಾಯಣ್ ಬಾರಿಸಿದ ಚೆಂಡನ್ನು ಎರಡು ಬಾರಿ ಕೈ ಚೆಲ್ಲಿದ್ದರು.</p>.<p>ಇದಾದ ಬಳಿಕ 34 ಓವರ್ನ 5ನೇ ಎಸೆತದಲ್ಲಿ ಜಡೇಜ, ನಾರಾಯಣ್ ಅವರ ವಿಕೆಟ್ದಾಗ ರೈನಾ ಬಳಿ ತೆರಳಿ ಏನನ್ನೊ ಹೇಳಿದ್ದರು. ಇದರಿಂದ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿತ್ತು. ಈ ವೇಳೆ ನಾಯಕ ವಿರಾಟ್ ಕೊಹ್ಲಿ ಮಧ್ಯ ಪ್ರವೇಶಿಸಿ ವಾತಾವರಣ ತಿಳಿಗೊಳಿಸಿದ್ದರು. ಈ ಘಟನೆ ಭಾರತ ತಂಡದ ಡ್ರೇಸಿಂಗ್ ಕೋಣೆಯಲ್ಲಿ ಹೊಂದಾಣಿಕೆಯ ಕೊರತೆ ಇದೆ ಎಂಬ ಚರ್ಚೆಗೆ ನಾಂದಿ ಹಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಪಿಟಿಐ): ಕೆರಿಬಿಯನ್ ನಾಡಿನಲ್ಲಿ ನಡೆಯುತ್ತಿರುವ ತ್ರಿಕೋನ ಏಕದಿನ ಸರಣಿಯಲ್ಲಿ ವಿಂಡೀಸ್ ವಿರುದ್ಧದ ಪಂದ್ಯದ ವೇಳೆ ಕ್ರೀಡಾಂಗಣದಲ್ಲಿ ಮಾತಿನ ಚಕಮಕಿ ನಡೆಸ್ದ್ದಿದ ಸುರೇಶ್ ರೈನಾ ಹಾಗೂ ರವೀಂದ್ರ ಜಡೇಜ ಕೊನೆಗೂ ಕ್ಷಮೆಯಾಚಿಸಿದ್ದಾರೆ.<br /> <br /> ಇಬ್ಬರೂ ಆಟಗಾರರು ತಂಡದ ಮ್ಯಾನೇಜರ್ ಎಂ.ವಿ.ಶ್ರೀಧರ್ ಅವರೊಂದಿಗೆ ಚರ್ಚಿಸಿದ್ದು, ಕ್ರೀಡಾಂಗಣದಲ್ಲಿನ ನಡವಳಿಕೆ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ.<br /> <br /> `ತಂಡದ ಮ್ಯಾನೇಜರ್ ಜೊತೆಗೆ ರೈನಾ ಹಾಗೂ ಜಡೇಜ ಮಾತನಾಡಿದ್ದಾರೆ. ಕ್ರೀಡಾಂಗಣದಲ್ಲಿನ ತಮ್ಮ ವರ್ತನೆಗೆ ಉಭಯ ಆಟಗಾರರು ಷರತ್ತುರಹಿತ ಕ್ಷಮೆಯಾಚಿಸಿದ್ದಾರೆ. ಇಂತಹ ಘಟನೆ ಮತ್ತೊಮ್ಮೆ ಪುನರಾವರ್ತನೆಯಾಗುವುದಿಲ್ಲ ಎಂಬ ಭರವಸೆ ನೀಡಿದ್ದಾರೆ' ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.<br /> <br /> ಈ ನಡುವೆ `ಘಟನೆ ಸಂಬಂಧ ವರದಿ ನೀಡುವಂತೆ ತಂಡದ ಮ್ಯಾನೇಜರ್ ಅವರನ್ನು ಕೋರಲಾಗಿದೆ' ಎಂದು ಬಿಸಿಸಿಐ ಹಂಗಾಮಿ ಅಧ್ಯಕ್ಷ ಜಗಮೋಹನ್ ದಾಲ್ಮಿಯ ಸೋಮವಾರವಷ್ಟೇ ತಿಳಿಸಿದ್ದರು. ಶುಕ್ರವಾರ ವಿಂಡೀಸ್ ವಿರುದ್ಧದ ಪಂದ್ಯದಲ್ಲಿ ರೈನಾ ಅವರು ಸುನಿಲ್ ನಾರಾಯಣ್ ಬಾರಿಸಿದ ಚೆಂಡನ್ನು ಎರಡು ಬಾರಿ ಕೈ ಚೆಲ್ಲಿದ್ದರು.</p>.<p>ಇದಾದ ಬಳಿಕ 34 ಓವರ್ನ 5ನೇ ಎಸೆತದಲ್ಲಿ ಜಡೇಜ, ನಾರಾಯಣ್ ಅವರ ವಿಕೆಟ್ದಾಗ ರೈನಾ ಬಳಿ ತೆರಳಿ ಏನನ್ನೊ ಹೇಳಿದ್ದರು. ಇದರಿಂದ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿತ್ತು. ಈ ವೇಳೆ ನಾಯಕ ವಿರಾಟ್ ಕೊಹ್ಲಿ ಮಧ್ಯ ಪ್ರವೇಶಿಸಿ ವಾತಾವರಣ ತಿಳಿಗೊಳಿಸಿದ್ದರು. ಈ ಘಟನೆ ಭಾರತ ತಂಡದ ಡ್ರೇಸಿಂಗ್ ಕೋಣೆಯಲ್ಲಿ ಹೊಂದಾಣಿಕೆಯ ಕೊರತೆ ಇದೆ ಎಂಬ ಚರ್ಚೆಗೆ ನಾಂದಿ ಹಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>