<p>ಬೆಂಗಳೂರು: ಹೈದರಾಬಾದ್- ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ಉದ್ದೇಶದ ಮಸೂದೆಗೆ ತಕರಾರು ಎತ್ತಿ ಗೊಂದಲ ಉಂಟು ಮಾಡಿರುವುದಕ್ಕಾಗಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ರಾಜ್ಯದ ಜನರ ಕ್ಷಮೆ ಯಾಚಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಒತ್ತಾಯಿಸಿದ್ದಾರೆ.</p>.<p>`ಸಂವಿಧಾನದ 371ನೇ ವಿಧಿಗೆ ತಿದ್ದುಪಡಿ ತಂದು ಹೈದರಾಬಾದ್ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡಲು ಯುಪಿಎ ಸರ್ಕಾರ ಮುಂದಾಗಿದೆ. ಇದರಿಂದ ಆ ಭಾಗದ ಜನರ ಬಹುದಿನಗಳ ಕನಸು ನನಸಾಗಲಿದೆ. ಇಂತಹ ಸಂದರ್ಭದಲ್ಲಿ ಮಸೂದೆಯ ಬಗ್ಗೆ ಆಕ್ಷೇಪ ಎತ್ತುವ ಮೂಲಕ ಆ ಭಾಗದ ಜನರ ಹಿತಾಸಕ್ತಿಯನ್ನು ಬಲಿಕೊಡಲು ರಾಜ್ಯ ಸರ್ಕಾರ ಪ್ರಯತ್ನಿಸಿದೆ' ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಟೀಕಿಸಿದ್ದಾರೆ.</p>.<p>ಆ ಭಾಗದ ಜನರ ಕೋಪಕ್ಕೆ ಗುರಿಯಾಗಬಹುದು ಎಂಬ ಆತಂಕದಿಂದ ಶೆಟ್ಟರ್ ದಿಢೀರನೆ ನಿಲುವು ಬದಲಿಸಿ ಮಸೂದೆ ಅಂಗೀಕಾರಕ್ಕೆ ಸಮ್ಮತಿಸಿದ್ದಾರೆ ಎಂದು ಅವರು ಜನತೆಯ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಹೈದರಾಬಾದ್- ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ಉದ್ದೇಶದ ಮಸೂದೆಗೆ ತಕರಾರು ಎತ್ತಿ ಗೊಂದಲ ಉಂಟು ಮಾಡಿರುವುದಕ್ಕಾಗಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ರಾಜ್ಯದ ಜನರ ಕ್ಷಮೆ ಯಾಚಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಒತ್ತಾಯಿಸಿದ್ದಾರೆ.</p>.<p>`ಸಂವಿಧಾನದ 371ನೇ ವಿಧಿಗೆ ತಿದ್ದುಪಡಿ ತಂದು ಹೈದರಾಬಾದ್ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡಲು ಯುಪಿಎ ಸರ್ಕಾರ ಮುಂದಾಗಿದೆ. ಇದರಿಂದ ಆ ಭಾಗದ ಜನರ ಬಹುದಿನಗಳ ಕನಸು ನನಸಾಗಲಿದೆ. ಇಂತಹ ಸಂದರ್ಭದಲ್ಲಿ ಮಸೂದೆಯ ಬಗ್ಗೆ ಆಕ್ಷೇಪ ಎತ್ತುವ ಮೂಲಕ ಆ ಭಾಗದ ಜನರ ಹಿತಾಸಕ್ತಿಯನ್ನು ಬಲಿಕೊಡಲು ರಾಜ್ಯ ಸರ್ಕಾರ ಪ್ರಯತ್ನಿಸಿದೆ' ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಟೀಕಿಸಿದ್ದಾರೆ.</p>.<p>ಆ ಭಾಗದ ಜನರ ಕೋಪಕ್ಕೆ ಗುರಿಯಾಗಬಹುದು ಎಂಬ ಆತಂಕದಿಂದ ಶೆಟ್ಟರ್ ದಿಢೀರನೆ ನಿಲುವು ಬದಲಿಸಿ ಮಸೂದೆ ಅಂಗೀಕಾರಕ್ಕೆ ಸಮ್ಮತಿಸಿದ್ದಾರೆ ಎಂದು ಅವರು ಜನತೆಯ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>