ಕ್ಷಮೆ ಕೋರಲು ಶೆಟ್ಟರ್ಗೆ ಕಾಂಗ್ರೆಸ್ ಒತ್ತಾಯ
ಬೆಂಗಳೂರು: ಹೈದರಾಬಾದ್- ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ಉದ್ದೇಶದ ಮಸೂದೆಗೆ ತಕರಾರು ಎತ್ತಿ ಗೊಂದಲ ಉಂಟು ಮಾಡಿರುವುದಕ್ಕಾಗಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ರಾಜ್ಯದ ಜನರ ಕ್ಷಮೆ ಯಾಚಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಒತ್ತಾಯಿಸಿದ್ದಾರೆ.
`ಸಂವಿಧಾನದ 371ನೇ ವಿಧಿಗೆ ತಿದ್ದುಪಡಿ ತಂದು ಹೈದರಾಬಾದ್ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ನೀಡಲು ಯುಪಿಎ ಸರ್ಕಾರ ಮುಂದಾಗಿದೆ. ಇದರಿಂದ ಆ ಭಾಗದ ಜನರ ಬಹುದಿನಗಳ ಕನಸು ನನಸಾಗಲಿದೆ. ಇಂತಹ ಸಂದರ್ಭದಲ್ಲಿ ಮಸೂದೆಯ ಬಗ್ಗೆ ಆಕ್ಷೇಪ ಎತ್ತುವ ಮೂಲಕ ಆ ಭಾಗದ ಜನರ ಹಿತಾಸಕ್ತಿಯನ್ನು ಬಲಿಕೊಡಲು ರಾಜ್ಯ ಸರ್ಕಾರ ಪ್ರಯತ್ನಿಸಿದೆ' ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ಟೀಕಿಸಿದ್ದಾರೆ.
ಆ ಭಾಗದ ಜನರ ಕೋಪಕ್ಕೆ ಗುರಿಯಾಗಬಹುದು ಎಂಬ ಆತಂಕದಿಂದ ಶೆಟ್ಟರ್ ದಿಢೀರನೆ ನಿಲುವು ಬದಲಿಸಿ ಮಸೂದೆ ಅಂಗೀಕಾರಕ್ಕೆ ಸಮ್ಮತಿಸಿದ್ದಾರೆ ಎಂದು ಅವರು ಜನತೆಯ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.