<p><strong>ತುಮಕೂರು: </strong>ಕ್ಷಯರೋಗ ನಿವಾರಣೆಗೆ ಜಿಲ್ಲಾಡಳಿತ ಸಕಲ ನೆರವು ನೀಡಲಿದೆ ಎಂದು ಜಿಲ್ಲಾಧಿಕಾರಿ ಆರ್.ಕೆ.ರಾಜು ಇಲ್ಲಿ ಶನಿವಾರ ತಿಳಿಸಿದರು.`ವಿಶ್ವ ಕ್ಷಯರೋಗ ದಿನಾಚರಣೆ~ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕ್ಷಯರೋಗ ನಿವಾರಣೆಯನ್ನು ಆದ್ಯತೆ ವಿಚಾರವಾಗಿ ಪರಿಗಣಿಸಬೇಕೆಂದು ತಿಳಿಸಿದರು.<br /> <br /> 2050ನೇ ಇಸವಿ ಒಳಗೆ ಕ್ಷಯರೋಗವನ್ನು ಸಂಪೂರ್ಣ ನಿಯಂತ್ರಿಸುವ, 2015ರ ಒಳಗೆ ಕ್ಷಯರೋಗದ ಸಾವುಗಳನ್ನು ಅರ್ಧದಷ್ಟು ಕಡಿಮೆ ಮಾಡುವ ಗುರಿಯನ್ನು ವಿಶ್ವಸಂಸ್ಥೆ ವಿಧಿಸಿದೆ ಎಂದು ಮಾಹಿತಿ ನೀಡಿದರು.<br /> <br /> ಕ್ಷಯ ರೋಗ ನಿವಾರಣೆಗಾಗಿ ಶ್ರಮಿಸಿದ 21 ಜನರನ್ನು ಅಭಿನಂದಿಸಿದ ಅವರು, ಪುರಸ್ಕಾರ ಪಡೆಯಬೇಕೆಂಬ ಮನೋಭಾವದಿಂದ ಯಾರೂ ಕೆಲಸ ಮಾಡುವುದಿಲ್ಲ. ಆದರೆ ಪ್ರಾಮಾಣಿಕ ಕೆಲಸಕ್ಕೆ ಪುರಸ್ಕಾರ ಸಿಕ್ಕೇ ಸಿಗುತ್ತದೆ ಎಂದರು.<br /> <br /> ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಅಸ್ಮಾ ತಬಸ್ಸುಮ್ ಮಾತನಾಡಿ, ಕ್ಷಯರೋಗ ನಿಯಂತ್ರಣ ಕಾರ್ಯಕ್ರಮ ಜಾರಿಯಾದ ನಂತರ ಜಿಲ್ಲೆಯಲ್ಲಿ ಇಲ್ಲಿಯವರೆಗೆ 28,660 ಕ್ಷಯ ರೋಗಿಗಳನ್ನು ಗುರುತಿಸಲಾಗಿದೆ. 19,702 ರೋಗಿಗಳು ಚಿಕಿತ್ಸೆ ಪಡೆದು ಗುಣ ಹೊಂದಿದ್ದಾರೆ. ಪ್ರಸ್ತುತ 2716 ರೋಗಿಗಳು ಡಾಟ್ಸ್ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವಿವರಿಸಿದರು.<br /> <br /> ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋವಿಂದರಾಜು, ಜಿಲ್ಲಾ ಸರ್ಜನ್ ಡಾ.ನಂಜುಂಡಪ್ಪ, ಜಿಲ್ಲಾ ವೈದ್ಯಾಧಿಕಾರಿ ಡಾ.ಚನ್ನ ಮಲ್ಲಯ್ಯ, ಆರ್ಸಿಎಚ್ ಅಧಿಕಾರಿ ಡಾ. ರಜನಿ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ಕ್ಷಯರೋಗ ನಿವಾರಣೆಗೆ ಜಿಲ್ಲಾಡಳಿತ ಸಕಲ ನೆರವು ನೀಡಲಿದೆ ಎಂದು ಜಿಲ್ಲಾಧಿಕಾರಿ ಆರ್.ಕೆ.ರಾಜು ಇಲ್ಲಿ ಶನಿವಾರ ತಿಳಿಸಿದರು.`ವಿಶ್ವ ಕ್ಷಯರೋಗ ದಿನಾಚರಣೆ~ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕ್ಷಯರೋಗ ನಿವಾರಣೆಯನ್ನು ಆದ್ಯತೆ ವಿಚಾರವಾಗಿ ಪರಿಗಣಿಸಬೇಕೆಂದು ತಿಳಿಸಿದರು.<br /> <br /> 2050ನೇ ಇಸವಿ ಒಳಗೆ ಕ್ಷಯರೋಗವನ್ನು ಸಂಪೂರ್ಣ ನಿಯಂತ್ರಿಸುವ, 2015ರ ಒಳಗೆ ಕ್ಷಯರೋಗದ ಸಾವುಗಳನ್ನು ಅರ್ಧದಷ್ಟು ಕಡಿಮೆ ಮಾಡುವ ಗುರಿಯನ್ನು ವಿಶ್ವಸಂಸ್ಥೆ ವಿಧಿಸಿದೆ ಎಂದು ಮಾಹಿತಿ ನೀಡಿದರು.<br /> <br /> ಕ್ಷಯ ರೋಗ ನಿವಾರಣೆಗಾಗಿ ಶ್ರಮಿಸಿದ 21 ಜನರನ್ನು ಅಭಿನಂದಿಸಿದ ಅವರು, ಪುರಸ್ಕಾರ ಪಡೆಯಬೇಕೆಂಬ ಮನೋಭಾವದಿಂದ ಯಾರೂ ಕೆಲಸ ಮಾಡುವುದಿಲ್ಲ. ಆದರೆ ಪ್ರಾಮಾಣಿಕ ಕೆಲಸಕ್ಕೆ ಪುರಸ್ಕಾರ ಸಿಕ್ಕೇ ಸಿಗುತ್ತದೆ ಎಂದರು.<br /> <br /> ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಅಸ್ಮಾ ತಬಸ್ಸುಮ್ ಮಾತನಾಡಿ, ಕ್ಷಯರೋಗ ನಿಯಂತ್ರಣ ಕಾರ್ಯಕ್ರಮ ಜಾರಿಯಾದ ನಂತರ ಜಿಲ್ಲೆಯಲ್ಲಿ ಇಲ್ಲಿಯವರೆಗೆ 28,660 ಕ್ಷಯ ರೋಗಿಗಳನ್ನು ಗುರುತಿಸಲಾಗಿದೆ. 19,702 ರೋಗಿಗಳು ಚಿಕಿತ್ಸೆ ಪಡೆದು ಗುಣ ಹೊಂದಿದ್ದಾರೆ. ಪ್ರಸ್ತುತ 2716 ರೋಗಿಗಳು ಡಾಟ್ಸ್ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವಿವರಿಸಿದರು.<br /> <br /> ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋವಿಂದರಾಜು, ಜಿಲ್ಲಾ ಸರ್ಜನ್ ಡಾ.ನಂಜುಂಡಪ್ಪ, ಜಿಲ್ಲಾ ವೈದ್ಯಾಧಿಕಾರಿ ಡಾ.ಚನ್ನ ಮಲ್ಲಯ್ಯ, ಆರ್ಸಿಎಚ್ ಅಧಿಕಾರಿ ಡಾ. ರಜನಿ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>