<p><strong>ವಾಷಿಂಗ್ಟನ್ (ಪಿಟಿಐ):</strong> ವಾರದ ಅಂತರದಲ್ಲಿ ಭಾರತ ಹಾಗೂ ಪಾಕಿಸ್ತಾನಗಳು ನಡೆಸಿದ ಅಣ್ವಸ್ತ್ರ ಸಜ್ಜಿತ ಕ್ಷಿಪಣಿಗಳ ಯಶಸ್ವಿ ಪರೀಕ್ಷೆಯ ಸಂಬಂಧ ಅಣ್ವಸ್ತ್ರ ಶಕ್ತ ರಾಷ್ಟ್ರಗಳು ಸಂಯಮ ಕಾಯ್ದುಕೊಳ್ಳುವಂತೆ ಅಮೆರಿಕ ಸಲಹೆ ಮಾಡಿದೆ.</p>.<p>ಪಾಕಿಸ್ತಾನದಲ್ಲಿ ನಡೆದ ಯಶಸ್ವಿ ಕ್ಷಿಪಣಿ ಪರೀಕ್ಷೆ ಕುರಿತ ಪ್ರಶ್ನೆಗೆ ಉತ್ತರಿಸಿದ ಶ್ವೇತಭವನದ ವಕ್ತಾರೆ ವಿಕ್ಟೋರಿಯಾ ನುಲಂದ್, ಭಾರತ ಅಗ್ನಿ-5 ಖಂಡಾಂತರ ಕ್ಷಿಪಣಿ ಉಡಾವಣೆ ನಡೆಸಿದಾಗಲೂ ನಾವು ಇದೇ ಸಂದೇಶವನ್ನು ಅಣ್ವಸ್ತ್ರ ಶಕ್ತ ರಾಷ್ಟ್ರಗಳಿಗೆ ನೀಡಿದ್ದಾಗಿ ಅವರು ತಿಳಿಸಿದ್ದಾರೆ.</p>.<p>ಈ ಎರಡೂ ರಾಷ್ಟ್ರಗಳಲ್ಲಿ ನಡೆದಿರುವ ಕ್ಷಿಪಣಿ ಪರೀಕ್ಷೆ ಪೂರ್ವ ಯೋಜಿತ ಎಂಬುದು ಸ್ಪಷ್ಟವಾಗಿದೆ. ಆದರೂ ಪಾಕಿಸ್ತಾನ ತನ್ನ ಪ್ರಯೋಗವನ್ನು ಭಾರತದ ಕ್ಷಿಪಣಿ ಪ್ರಯೋಗಕ್ಕೆ ಪ್ರತಿಯಾಗಿ ಅಲ್ಲ ಎಂದು ಹೇಳಿದೆ ಎಂದು ನುಲಂದ್ ತಿಳಿಸಿದ್ದಾರೆ.</p>.<p>`ಈ ವಿದ್ಯಮಾನಗಳಲ್ಲಿ ಗಮನಿಸಬೇಕಾದ ಅಂಶವೆಂದರೆ, ಪಾಕಿಸ್ತಾನ ಕ್ಷಿಪಣಿ ಉಡಾವಣೆಗೆ ಮುನ್ನ ಭಾರತಕ್ಕೆ ಮಾಹಿತಿ ನೀಡಿದೆ. ಈ ರೀತಿಯಲ್ಲಾದರೂ ಉಭಯ ರಾಷ್ಟ್ರಗಳು ಒಂದಾಗಿ ಕಾರ್ಯ ನಿರ್ವಹಿಸುವ ಮೂಲಕ , ಸಂಬಂಧಗಳನ್ನು ಉತ್ತಮಪಡಿಸಿಕೊಳ್ಳಲಿ~ ಎಂದು ಅಭಿಪ್ರಾಯಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಾಷಿಂಗ್ಟನ್ (ಪಿಟಿಐ):</strong> ವಾರದ ಅಂತರದಲ್ಲಿ ಭಾರತ ಹಾಗೂ ಪಾಕಿಸ್ತಾನಗಳು ನಡೆಸಿದ ಅಣ್ವಸ್ತ್ರ ಸಜ್ಜಿತ ಕ್ಷಿಪಣಿಗಳ ಯಶಸ್ವಿ ಪರೀಕ್ಷೆಯ ಸಂಬಂಧ ಅಣ್ವಸ್ತ್ರ ಶಕ್ತ ರಾಷ್ಟ್ರಗಳು ಸಂಯಮ ಕಾಯ್ದುಕೊಳ್ಳುವಂತೆ ಅಮೆರಿಕ ಸಲಹೆ ಮಾಡಿದೆ.</p>.<p>ಪಾಕಿಸ್ತಾನದಲ್ಲಿ ನಡೆದ ಯಶಸ್ವಿ ಕ್ಷಿಪಣಿ ಪರೀಕ್ಷೆ ಕುರಿತ ಪ್ರಶ್ನೆಗೆ ಉತ್ತರಿಸಿದ ಶ್ವೇತಭವನದ ವಕ್ತಾರೆ ವಿಕ್ಟೋರಿಯಾ ನುಲಂದ್, ಭಾರತ ಅಗ್ನಿ-5 ಖಂಡಾಂತರ ಕ್ಷಿಪಣಿ ಉಡಾವಣೆ ನಡೆಸಿದಾಗಲೂ ನಾವು ಇದೇ ಸಂದೇಶವನ್ನು ಅಣ್ವಸ್ತ್ರ ಶಕ್ತ ರಾಷ್ಟ್ರಗಳಿಗೆ ನೀಡಿದ್ದಾಗಿ ಅವರು ತಿಳಿಸಿದ್ದಾರೆ.</p>.<p>ಈ ಎರಡೂ ರಾಷ್ಟ್ರಗಳಲ್ಲಿ ನಡೆದಿರುವ ಕ್ಷಿಪಣಿ ಪರೀಕ್ಷೆ ಪೂರ್ವ ಯೋಜಿತ ಎಂಬುದು ಸ್ಪಷ್ಟವಾಗಿದೆ. ಆದರೂ ಪಾಕಿಸ್ತಾನ ತನ್ನ ಪ್ರಯೋಗವನ್ನು ಭಾರತದ ಕ್ಷಿಪಣಿ ಪ್ರಯೋಗಕ್ಕೆ ಪ್ರತಿಯಾಗಿ ಅಲ್ಲ ಎಂದು ಹೇಳಿದೆ ಎಂದು ನುಲಂದ್ ತಿಳಿಸಿದ್ದಾರೆ.</p>.<p>`ಈ ವಿದ್ಯಮಾನಗಳಲ್ಲಿ ಗಮನಿಸಬೇಕಾದ ಅಂಶವೆಂದರೆ, ಪಾಕಿಸ್ತಾನ ಕ್ಷಿಪಣಿ ಉಡಾವಣೆಗೆ ಮುನ್ನ ಭಾರತಕ್ಕೆ ಮಾಹಿತಿ ನೀಡಿದೆ. ಈ ರೀತಿಯಲ್ಲಾದರೂ ಉಭಯ ರಾಷ್ಟ್ರಗಳು ಒಂದಾಗಿ ಕಾರ್ಯ ನಿರ್ವಹಿಸುವ ಮೂಲಕ , ಸಂಬಂಧಗಳನ್ನು ಉತ್ತಮಪಡಿಸಿಕೊಳ್ಳಲಿ~ ಎಂದು ಅಭಿಪ್ರಾಯಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>