<p>ದೊಡ್ಡಬಳ್ಳಾಪುರ: ಬಿಜೆಪಿ ಮುಖಂಡ ಹಾಗೂ ಎಪಿಎಂಸಿ ಅಧ್ಯಕ್ಷ ಟಿ.ವಿ.ಲಕ್ಷ್ಮೀನಾರಾಯಣ್ ಹೇಳಿಕೆಗೆ ಸ್ಥಳೀಯ ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. <br /> <br /> ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಜೆಡಿಎಸ್ ಬೆಂಗಳೂರು ಗ್ರಾಮಾಂತರ ಜಿ.ಖಂಜಾಚಿ ಬಿ.ಮುನೇಗೌಡ ವಿರೋಧ ಪಕ್ಷಗಳ ಮುಖಂಡರು ಜನರನ್ನು ದಾರಿತಪ್ಪಿಸಲು ಶಾಸಕರ ವಿರುದ್ಧ ಇಲ್ಲಸಲ್ಲದ ಆರೋಪ-ಪ್ರತ್ಯಾರೋಪ ಮಾಡಿದ್ದಾರೆ.<br /> <br /> ಜಾತಿ ರಾಜಕಾರಣ ಮಾಡುತ್ತಿಲ್ಲ ಎನ್ನುವ ಬಿಜೆಪಿ ಮುಖಂಡರು ಮುಖ್ಯಮಂತ್ರಿ ಸ್ಥಾನದಿಂದ ಸದಾನಂದಗೌಡರನ್ನು ಕೆಳಗಿಳಿಸಲು ಜಗದೀಶ ಶೆಟ್ಟರ ಪರವಾಗಿ ಕೈ ಎತ್ತಿ ಸದಾನಂದ ಗೌಡರನ್ನು ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಮಾಡುವಂತೆ ಆಗ್ರಹಿಸಿ ತಾಲ್ಲೂಕು ಬಂದ್ಗೆ ಕರೆ ನೀಡುವ ಅಗತ್ಯ ಇರಲಿಲ್ಲ ಎಂದು ಹೇಳಿದ್ದಾರೆ.<br /> <br /> ನರಸಿಂಹಸ್ವಾಮಿ ಅವರು 15 ವರ್ಷಗಳಿಂದ ಎಲ್ಲ ಪಕ್ಷಗಳಿಂದಲೂ ಸ್ಪರ್ಧಿಸಿ ಶಾಸಕರಾಗಿದ್ದರೂ ನೆರೆಯ ಮೀಸಲು ಕ್ಷೇತ್ರವಾಗಿರುವ ದೇವನಹಳ್ಳಿ ಕ್ಷೇತ್ರಕ್ಕೆ ಹೋಲಿಕೆ ಮಾಡಿದರೆ ದೊಡ್ಡಬಳ್ಳಾಪುರ ಅತ್ಯಂತ ಹಿಂದುಳಿದಿದೆ ಎಂದಿದ್ದಾರೆ.<br /> <br /> <br /> <strong>`ಆತ್ಮ ಸಾಕ್ಷಿ ಇಲ್ಲದವರು~</strong><br /> ಭೂ ಮಂಜೂರಾತಿ ಸಮಿತಿ ತಾಲ್ಲೂಕು ಅಧ್ಯಕ್ಷ ಕೆ.ಎಂ.ಮುನಿರಾಮೇ ಗೌಡ ಅವರಿಗೆ ಆತ್ಮಸಾಕ್ಷಿ ಇದ್ದರೆ ನನ್ನ ವಿರುದ್ಧ ಮಾಡಿರುವ ಪಕ್ಷದ್ರೋಹದ ಹೇಳಿಕೆಯನ್ನು ಹಿಂದಕ್ಕೆ ಪಡೆಯಬೇಕು ಎಂದು ಕೆಪಿಸಿಸಿ ಸದಸ್ಯ ಎಂ.ಜಿ.ಶ್ರೀನಿವಾಸ್ ಆಗ್ರಹಿಸಿದ್ದಾರೆ. <br /> <br /> ನಾನು ರಾಜಕೀಯಕ್ಕೆ ಬಂದಾಗಿನಿಂದಲೂ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತನಾಗಿ ದುಡಿದಿದ್ದೇನೆಯೇ ಹೊರತು ಕೆ.ಎಂ.ಮುನಿರಾಮೇಗೌಡ ಅವರಂತೆ ವ್ಯಕ್ತಿಗಳ ಪರವಾಗಿ ಕೆಲಸ ಮಾಡಿಲ್ಲ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.<br /> <br /> ನಗರದಲ್ಲಿನ ಅಭಿವೃದ್ಧಿ ಕೆಲಸಗಳು ಕಾನೂನು ಚೌಕಟ್ಟಿನಲ್ಲಿ ನಡೆಯಬೇಕು ಎನ್ನುವ ದೃಷ್ಟಿಯಿಂದ ರಸ್ತೆ ವಿಸ್ತರಣೆ ವಿರುದ್ಧ ನ್ಯಾಯಾಲಯಕ್ಕೆ ಹೋಗಿದ್ದೆನೇ ಹೊರತು ಅಭಿವೃದ್ಧಿ ಕೆಲಸ ನಿಲ್ಲಸಬೇಕು ಎಂದು ಅಲ್ಲ. ಜಾತಿ ಕಾರಣಕ್ಕಾಗಿ ತಾಲ್ಲೂಕಿನಲ್ಲಿ ಎಂದೂ ಯಾವ ಜಾತಿಯವರು ಬಂದ್ಗೆ ಕರೆ ನೀಡಿದ ಉದಾಹರಣೆ ಇರಲಿಲ್ಲ. <br /> <br /> ಆದರೆ ಶಾಸಕ ಜೆ.ನರಸಿಂಹಸ್ವಾಮಿ ಅವರು ತಮ್ಮ ಹಿಂಬಾಲಕರ ಮೂಲಕ ಬಂದ್ಗೆ ಕರೆ ನೀಡಿ ತಾಲ್ಲೂಕಿನಲ್ಲಿ ಜಾತಿ ರಾಜಕಾರಣಕ್ಕೆ ದಾರಿ ಮಾಡಿಕೊಟ್ಟಿದ್ದಾರೆ ಎಂದು ಅವರು ದೂರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದೊಡ್ಡಬಳ್ಳಾಪುರ: ಬಿಜೆಪಿ ಮುಖಂಡ ಹಾಗೂ ಎಪಿಎಂಸಿ ಅಧ್ಯಕ್ಷ ಟಿ.ವಿ.ಲಕ್ಷ್ಮೀನಾರಾಯಣ್ ಹೇಳಿಕೆಗೆ ಸ್ಥಳೀಯ ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. <br /> <br /> ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಜೆಡಿಎಸ್ ಬೆಂಗಳೂರು ಗ್ರಾಮಾಂತರ ಜಿ.ಖಂಜಾಚಿ ಬಿ.ಮುನೇಗೌಡ ವಿರೋಧ ಪಕ್ಷಗಳ ಮುಖಂಡರು ಜನರನ್ನು ದಾರಿತಪ್ಪಿಸಲು ಶಾಸಕರ ವಿರುದ್ಧ ಇಲ್ಲಸಲ್ಲದ ಆರೋಪ-ಪ್ರತ್ಯಾರೋಪ ಮಾಡಿದ್ದಾರೆ.<br /> <br /> ಜಾತಿ ರಾಜಕಾರಣ ಮಾಡುತ್ತಿಲ್ಲ ಎನ್ನುವ ಬಿಜೆಪಿ ಮುಖಂಡರು ಮುಖ್ಯಮಂತ್ರಿ ಸ್ಥಾನದಿಂದ ಸದಾನಂದಗೌಡರನ್ನು ಕೆಳಗಿಳಿಸಲು ಜಗದೀಶ ಶೆಟ್ಟರ ಪರವಾಗಿ ಕೈ ಎತ್ತಿ ಸದಾನಂದ ಗೌಡರನ್ನು ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಮಾಡುವಂತೆ ಆಗ್ರಹಿಸಿ ತಾಲ್ಲೂಕು ಬಂದ್ಗೆ ಕರೆ ನೀಡುವ ಅಗತ್ಯ ಇರಲಿಲ್ಲ ಎಂದು ಹೇಳಿದ್ದಾರೆ.<br /> <br /> ನರಸಿಂಹಸ್ವಾಮಿ ಅವರು 15 ವರ್ಷಗಳಿಂದ ಎಲ್ಲ ಪಕ್ಷಗಳಿಂದಲೂ ಸ್ಪರ್ಧಿಸಿ ಶಾಸಕರಾಗಿದ್ದರೂ ನೆರೆಯ ಮೀಸಲು ಕ್ಷೇತ್ರವಾಗಿರುವ ದೇವನಹಳ್ಳಿ ಕ್ಷೇತ್ರಕ್ಕೆ ಹೋಲಿಕೆ ಮಾಡಿದರೆ ದೊಡ್ಡಬಳ್ಳಾಪುರ ಅತ್ಯಂತ ಹಿಂದುಳಿದಿದೆ ಎಂದಿದ್ದಾರೆ.<br /> <br /> <br /> <strong>`ಆತ್ಮ ಸಾಕ್ಷಿ ಇಲ್ಲದವರು~</strong><br /> ಭೂ ಮಂಜೂರಾತಿ ಸಮಿತಿ ತಾಲ್ಲೂಕು ಅಧ್ಯಕ್ಷ ಕೆ.ಎಂ.ಮುನಿರಾಮೇ ಗೌಡ ಅವರಿಗೆ ಆತ್ಮಸಾಕ್ಷಿ ಇದ್ದರೆ ನನ್ನ ವಿರುದ್ಧ ಮಾಡಿರುವ ಪಕ್ಷದ್ರೋಹದ ಹೇಳಿಕೆಯನ್ನು ಹಿಂದಕ್ಕೆ ಪಡೆಯಬೇಕು ಎಂದು ಕೆಪಿಸಿಸಿ ಸದಸ್ಯ ಎಂ.ಜಿ.ಶ್ರೀನಿವಾಸ್ ಆಗ್ರಹಿಸಿದ್ದಾರೆ. <br /> <br /> ನಾನು ರಾಜಕೀಯಕ್ಕೆ ಬಂದಾಗಿನಿಂದಲೂ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತನಾಗಿ ದುಡಿದಿದ್ದೇನೆಯೇ ಹೊರತು ಕೆ.ಎಂ.ಮುನಿರಾಮೇಗೌಡ ಅವರಂತೆ ವ್ಯಕ್ತಿಗಳ ಪರವಾಗಿ ಕೆಲಸ ಮಾಡಿಲ್ಲ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.<br /> <br /> ನಗರದಲ್ಲಿನ ಅಭಿವೃದ್ಧಿ ಕೆಲಸಗಳು ಕಾನೂನು ಚೌಕಟ್ಟಿನಲ್ಲಿ ನಡೆಯಬೇಕು ಎನ್ನುವ ದೃಷ್ಟಿಯಿಂದ ರಸ್ತೆ ವಿಸ್ತರಣೆ ವಿರುದ್ಧ ನ್ಯಾಯಾಲಯಕ್ಕೆ ಹೋಗಿದ್ದೆನೇ ಹೊರತು ಅಭಿವೃದ್ಧಿ ಕೆಲಸ ನಿಲ್ಲಸಬೇಕು ಎಂದು ಅಲ್ಲ. ಜಾತಿ ಕಾರಣಕ್ಕಾಗಿ ತಾಲ್ಲೂಕಿನಲ್ಲಿ ಎಂದೂ ಯಾವ ಜಾತಿಯವರು ಬಂದ್ಗೆ ಕರೆ ನೀಡಿದ ಉದಾಹರಣೆ ಇರಲಿಲ್ಲ. <br /> <br /> ಆದರೆ ಶಾಸಕ ಜೆ.ನರಸಿಂಹಸ್ವಾಮಿ ಅವರು ತಮ್ಮ ಹಿಂಬಾಲಕರ ಮೂಲಕ ಬಂದ್ಗೆ ಕರೆ ನೀಡಿ ತಾಲ್ಲೂಕಿನಲ್ಲಿ ಜಾತಿ ರಾಜಕಾರಣಕ್ಕೆ ದಾರಿ ಮಾಡಿಕೊಟ್ಟಿದ್ದಾರೆ ಎಂದು ಅವರು ದೂರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>