<p><strong>ಬೀದರ್: </strong>ಭಾಲ್ಕಿ ತಾಲ್ಲೂಕಿನ ಜ್ಯಾಂತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಆಗಿರುವ ಅವ್ಯವಹಾರದ ತನಿಖೆ ನಡೆಸಲು ಆಗ್ರಹಪಡಿಸಿ ಮತ್ತು ಕೆಲಸ ಮಾಡಿದವರಿಗೆ ಮೊತ್ತ ಪಾವತಿಸಲು ಆಗ್ರಹಿಸಿ ಅಲ್ಲಿನ ಗ್ರಾಮಸ್ಥರು ಗುರುವಾರ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.<br /> <br /> ಗ್ರಾಮ ಪಂಚಾಯಿತಿಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಕಂಪ್ಯೂಟರ್ ಅಧಿಕಾರಿ ಗೈರು ಹಾಜರಿ ಹೆಚ್ಚಿದೆ. ಈ ಬಗೆಗ ತನಿಖೆ ನಡೆಸಬೇಕು ಎಂದು ಈ ಕುರಿತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಅವರಿಗೆ ಸಲ್ಲಿಸಿರುವ ಮನವಿಯಲ್ಲಿ ಒತ್ತಾಯಿಸಿದ್ದಾರೆ.<br /> <br /> ಉದ್ಯೋಗ ಖಾತರಿ ಯೋಜನೆಯಡಿ ರೇಷ್ಮೆ ಸಸಿಗಳ ವಿತರಣೆ, ರಸ್ತೆ ನಿರ್ಮಾಣ, ಬಾವಿನಿರ್ಮಾಣ ಕಾಮಗಾರಿ ನಡೆದಿದ್ದು, ಇಲ್ಲಿ ಕಾರ್ಯ ನಿರ್ವಹಿಸಿರುವ ಜನರಿಗೆ ಹಣ ಪಾವತಿಯಾಗಿಲ್ಲ. ಅಲ್ಲದೆ, ಒಂದೇ ವ್ಯಕ್ತಿಯ ಹೆಸರಿನಲ್ಲಿ ಹೆಚ್ಚಿನ ಮೊತ್ತ ಪಡೆಯಲಾಗಿದೆ ಎಂದು ಮನವಿಯಲ್ಲಿ ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀದರ್: </strong>ಭಾಲ್ಕಿ ತಾಲ್ಲೂಕಿನ ಜ್ಯಾಂತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಆಗಿರುವ ಅವ್ಯವಹಾರದ ತನಿಖೆ ನಡೆಸಲು ಆಗ್ರಹಪಡಿಸಿ ಮತ್ತು ಕೆಲಸ ಮಾಡಿದವರಿಗೆ ಮೊತ್ತ ಪಾವತಿಸಲು ಆಗ್ರಹಿಸಿ ಅಲ್ಲಿನ ಗ್ರಾಮಸ್ಥರು ಗುರುವಾರ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.<br /> <br /> ಗ್ರಾಮ ಪಂಚಾಯಿತಿಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಕಂಪ್ಯೂಟರ್ ಅಧಿಕಾರಿ ಗೈರು ಹಾಜರಿ ಹೆಚ್ಚಿದೆ. ಈ ಬಗೆಗ ತನಿಖೆ ನಡೆಸಬೇಕು ಎಂದು ಈ ಕುರಿತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಅವರಿಗೆ ಸಲ್ಲಿಸಿರುವ ಮನವಿಯಲ್ಲಿ ಒತ್ತಾಯಿಸಿದ್ದಾರೆ.<br /> <br /> ಉದ್ಯೋಗ ಖಾತರಿ ಯೋಜನೆಯಡಿ ರೇಷ್ಮೆ ಸಸಿಗಳ ವಿತರಣೆ, ರಸ್ತೆ ನಿರ್ಮಾಣ, ಬಾವಿನಿರ್ಮಾಣ ಕಾಮಗಾರಿ ನಡೆದಿದ್ದು, ಇಲ್ಲಿ ಕಾರ್ಯ ನಿರ್ವಹಿಸಿರುವ ಜನರಿಗೆ ಹಣ ಪಾವತಿಯಾಗಿಲ್ಲ. ಅಲ್ಲದೆ, ಒಂದೇ ವ್ಯಕ್ತಿಯ ಹೆಸರಿನಲ್ಲಿ ಹೆಚ್ಚಿನ ಮೊತ್ತ ಪಡೆಯಲಾಗಿದೆ ಎಂದು ಮನವಿಯಲ್ಲಿ ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>