<p>ಬೆಳಗಾವಿ: `ಸಚಿವರ ಖಾತೆಗಳ ಮರು ಹಂಚಿಕೆ ಮಾಡುವುದು, ಬಿಡುವುದು ನನಗೆ ಬಿಟ್ಟ ವಿಚಾರವಾಗಿದೆ. ಈ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಇಷ್ಟಪಡುವುದಿಲ್ಲ~ ಎಂದು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು. <br /> <br /> ಇಲ್ಲಿನ ಸುವರ್ಣ ಸೌಧ ಕಾಮಗಾರಿಯನ್ನು ಸೋಮವಾರ ಪರಿಶೀಲಿಸಿದ ಬಳಿಕ ಮಾಧ್ಯಮದವರ ಪಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, `ಎಲ್ಲ ಸಚಿವರು ಅವರಿಗೆ ನೀಡಿದ ಖಾತೆಯಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಸಚಿವ ಸಂಪುಟ ಪುನರ್ರಚನೆ ಮಾಡಲಾಗುತ್ತದೆ ಎಂದು ನೀವೇ (ಮಾಧ್ಯಮದವರು) ಮೊದಲು ಸುದ್ದಿ ಬರೆಯುತ್ತೀರಿ? ಆಮೇಲೆ ಬಂದು ನನ್ನನು ಕೇಳುತ್ತೀರಿ!~ ಎಂದು ಆಕ್ಷೇಪಿಸಿದರು. `ರಾಜ್ಯದಲ್ಲಿ ಆಡಳಿತ ಸುಗಮವಾಗಿ ನಡೆಯುತ್ತಿದೆ. ಇನ್ನುಳಿದ 10 ತಿಂಗಳ ಅವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸುತ್ತೇವೆ. ಮುಂದಿನ ಬಾರಿಯೂ ನಾವೇ (ಬಿಜೆಪಿ) ಅಧಿಕಾರಕ್ಕೆ ಬರುತ್ತೇವೆ~ ಎಂದರು. <br /> <br /> ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷರ ನೇಮಕ ಮಾಡುವ ಕುರಿತು ಮಾತನಾಡಲು ನಿರಾಕರಿಸಿದ ಶೆಟ್ಟರ್, `ಮುಖ್ಯಮಂತ್ರಿಯಾಗಿ ಕೆಲಸ ಮಾಡಲು ನನಗೆ ಯಾವುದೇ ಅಡೆತಡೆಗಳಿಲ್ಲ. ಆದರೆ, `ನಾನು ಸಿಎಂ, ನನ್ನ ಮೇಲೆ ಇನ್ನೊಬ್ಬರು `ಸೂಪರ್ ಸಿಎಂ~ ಇದ್ದಾರೆ~ ಎಂಬಂತೆ ಬಿಂಬಿಸಲಾಗುತ್ತಿದೆ. ರಾಜಕಾರಣದಲ್ಲಿ ಮುಖ್ಯಮಂತ್ರಿಗಳ ಮೇಲೆ ಸಹಜವಾಗಿ ಕೆಲವು ಒತ್ತಡಗಳು ಇದ್ದೇ ಇರುತ್ತದೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಾಗಿಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು. <br /> <br /> ಸರ್ಕಾರಿ ವೈದ್ಯರ ಸಾಮೂಹಿಕ ರಾಜೀನಾಮೆ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, `ಆಗಸ್ಟ್ 9ರಂದು ಆರೋಗ್ಯ ಮತ್ತು ವೈದ್ಯಕೀಯ ಸಚಿವರೊಂದಿಗೆ ಸಭೆ ನಡೆಸಿ ಸರ್ಕಾರಿ ವೈದ್ಯರ ಬೇಡಿಕೆಗಳ ಬಗ್ಗೆ ಚರ್ಚಿಸಿ ನಿರ್ಣಯ ಕೈಗೊಳ್ಳುತ್ತೇನೆ. ವೈದ್ಯರು ಯಾವುದೇ ಕಾರಣಕ್ಕೂ ಆರೋಗ್ಯ ಸೇವೆ ನೀಡುವುದನ್ನು ನಿಲ್ಲಿಸಬಾರದು~ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳಗಾವಿ: `ಸಚಿವರ ಖಾತೆಗಳ ಮರು ಹಂಚಿಕೆ ಮಾಡುವುದು, ಬಿಡುವುದು ನನಗೆ ಬಿಟ್ಟ ವಿಚಾರವಾಗಿದೆ. ಈ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಇಷ್ಟಪಡುವುದಿಲ್ಲ~ ಎಂದು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು. <br /> <br /> ಇಲ್ಲಿನ ಸುವರ್ಣ ಸೌಧ ಕಾಮಗಾರಿಯನ್ನು ಸೋಮವಾರ ಪರಿಶೀಲಿಸಿದ ಬಳಿಕ ಮಾಧ್ಯಮದವರ ಪಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, `ಎಲ್ಲ ಸಚಿವರು ಅವರಿಗೆ ನೀಡಿದ ಖಾತೆಯಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಸಚಿವ ಸಂಪುಟ ಪುನರ್ರಚನೆ ಮಾಡಲಾಗುತ್ತದೆ ಎಂದು ನೀವೇ (ಮಾಧ್ಯಮದವರು) ಮೊದಲು ಸುದ್ದಿ ಬರೆಯುತ್ತೀರಿ? ಆಮೇಲೆ ಬಂದು ನನ್ನನು ಕೇಳುತ್ತೀರಿ!~ ಎಂದು ಆಕ್ಷೇಪಿಸಿದರು. `ರಾಜ್ಯದಲ್ಲಿ ಆಡಳಿತ ಸುಗಮವಾಗಿ ನಡೆಯುತ್ತಿದೆ. ಇನ್ನುಳಿದ 10 ತಿಂಗಳ ಅವಧಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸುತ್ತೇವೆ. ಮುಂದಿನ ಬಾರಿಯೂ ನಾವೇ (ಬಿಜೆಪಿ) ಅಧಿಕಾರಕ್ಕೆ ಬರುತ್ತೇವೆ~ ಎಂದರು. <br /> <br /> ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷರ ನೇಮಕ ಮಾಡುವ ಕುರಿತು ಮಾತನಾಡಲು ನಿರಾಕರಿಸಿದ ಶೆಟ್ಟರ್, `ಮುಖ್ಯಮಂತ್ರಿಯಾಗಿ ಕೆಲಸ ಮಾಡಲು ನನಗೆ ಯಾವುದೇ ಅಡೆತಡೆಗಳಿಲ್ಲ. ಆದರೆ, `ನಾನು ಸಿಎಂ, ನನ್ನ ಮೇಲೆ ಇನ್ನೊಬ್ಬರು `ಸೂಪರ್ ಸಿಎಂ~ ಇದ್ದಾರೆ~ ಎಂಬಂತೆ ಬಿಂಬಿಸಲಾಗುತ್ತಿದೆ. ರಾಜಕಾರಣದಲ್ಲಿ ಮುಖ್ಯಮಂತ್ರಿಗಳ ಮೇಲೆ ಸಹಜವಾಗಿ ಕೆಲವು ಒತ್ತಡಗಳು ಇದ್ದೇ ಇರುತ್ತದೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸಬೇಕಾಗಿಲ್ಲ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು. <br /> <br /> ಸರ್ಕಾರಿ ವೈದ್ಯರ ಸಾಮೂಹಿಕ ರಾಜೀನಾಮೆ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, `ಆಗಸ್ಟ್ 9ರಂದು ಆರೋಗ್ಯ ಮತ್ತು ವೈದ್ಯಕೀಯ ಸಚಿವರೊಂದಿಗೆ ಸಭೆ ನಡೆಸಿ ಸರ್ಕಾರಿ ವೈದ್ಯರ ಬೇಡಿಕೆಗಳ ಬಗ್ಗೆ ಚರ್ಚಿಸಿ ನಿರ್ಣಯ ಕೈಗೊಳ್ಳುತ್ತೇನೆ. ವೈದ್ಯರು ಯಾವುದೇ ಕಾರಣಕ್ಕೂ ಆರೋಗ್ಯ ಸೇವೆ ನೀಡುವುದನ್ನು ನಿಲ್ಲಿಸಬಾರದು~ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>