<p><strong>ಹಿರಿಯೂರು: </strong>ತಾಲ್ಲೂಕಿನಲ್ಲಿ ಉದ್ಯೋಗ ಖಾತ್ರಿ ಯೋಜನೆ ಕಾಮಗಾರಿಗಳಿಗೆ ್ಙ 7.38 ಕೋಟಿ ಬಿಡುಗಡೆ ಮಾಡಿದ್ದು, ಪಂಚಾಯ್ತಿವಾರು ಹಣ ಹಂಚಿಕೆ ಮಾಡಲಾಗುವುದು ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಎನ್. ಜಯರಾಂ ತಿಳಿಸಿದರು.<br /> <br /> ನಗರದ ತಾಲ್ಲೂಕು ಪಂಚಾಯ್ತಿ ಸಭಾಂಗಣದಲ್ಲಿ ಸೋಮವಾರ ಉದ್ಯೋಗ ಖಾತ್ರಿ ಹಣ ಹಂಚಿಕೆ, ಕುಡಿಯುವ ನೀರಿನ ಸಮಸ್ಯೆ, ಆರೋಗ್ಯ ಸಮಸ್ಯೆ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಿ ಅವರು ಮಾತನಾಡಿದರು.<br /> <br /> ಪಂಚಾಯ್ತಿಯಲ್ಲಿ ನಡೆದಿರುವ ಕಾಮಗಾರಿಗಳನ್ನು ಪರಿಶೀಲಿಸಲು ಬೇರೆ ತಾಲ್ಲೂಕುಗಳ 9 ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಒಬ್ಬೊಬ್ಬರು 3ರಿಂದ 4 ಪಂಚಾಯ್ತಿಗಳ ವರದಿ ತರಿಸಿಕೊಂಡು ಪರಿಶೀಲಿಸುತ್ತಾರೆ. ನೋಡೆಲ್ ಅಧಿಕಾರಿಗಳ ವರದಿ ಆಧರಿಸಿ ಹಣ ಬಿಡುಗಡೆ ಮಾಡಲಾಗುವುದು. ಸಮಸ್ಯೆ ಇದ್ದ ಕಡೆ ಕೂಲಿ ಹಣ ಮಾತ್ರ ಬಿಡುಗಡೆ ಮಾಡಲು ಸೂಚಿಸಲಾಗಿದೆ ಎಂದು ಹೇಳಿದರು.<br /> <br /> ತಾಲ್ಲೂಕಿನಲ್ಲಿ ವಿವಿಧ ವಸತಿ ಯೋಜನೆಗಳ ಪ್ರಗತಿ ಕುರಿತು ಮಾಹಿತಿ ಪಡೆದರು. ತಾಲ್ಲೂಕು ಪಂಚಾಯ್ತಿ ಇಒ ರಮೇಶ್ ಅವರು ವಸತಿ ಯೋಜನೆ ಪ್ರಗತಿಯಲ್ಲಿ ಹಿರಿಯೂರು ತಾಲ್ಲೂಕು ಜಿಲ್ಲೆಯಲ್ಲಿ ಮುಂಚೂಣಿಯಲ್ಲಿದೆ ಎಂದು ಮಾಹಿತಿ ನೀಡಿದರು.<br /> <br /> <strong>ಕುಡಿಯುವ ನೀರು ಪೂರೈಕೆಗೆ ಆದ್ಯತೆ ನೀಡಲು ಸೂಚನೆ: </strong>ತಾಲ್ಲೂಕಿನ ಐಮಂಗಲ ಹೋಬಳಿಯ ಐಮಂಗಲ, ಮರಡಿದೇವಿಗೆರೆ, ಕಲ್ಲಹಟ್ಟಿ, ಭರಂಪುರ, ದಾಸಣ್ಣನಮಾಳಿಗೆ ಮೊದಲಾದ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ತೀವ್ರ ತೊಂದರೆಯಿದೆ. ಬರ ಪರಿಹಾರ ಯೋಜನೆಯಡಿ ಕುಡಿಯುವ ನೀರಿನ ಸಮಸ್ಯೆ ಇರುವ ಹಳ್ಳಿಗಳನ್ನು ಸೇರಿಸಿ ತಕ್ಷಣ ಪರಿಹಾರ ನೀಡಬೇಕು ಎಂದು ಅವರು ಸಲಹೆ ಮಾಡಿದರು.<br /> <br /> <strong>ಕ್ರಮಕ್ಕೆ ಸೂಚನೆ</strong>: ತಾಲ್ಲೂಕಿನ ಬಗ್ಗನಡು ಗ್ರಾಮದಲ್ಲಿ ಡೆಂಗೆಜ್ವರ ಕಾಣಿಸಿಕೊಂಡಿರುವ ಮಾಹಿತಿ ಬಂದಿದ್ದು, ಮೃತಪಟ್ಟಿರುವ ನಾಲ್ವರಲ್ಲಿ ಒಬ್ಬರು ಡೆಂಗೆಯಿಂದ ಸಾವನ್ನಪ್ಪಿರುವುದಾಗಿ ಆರೋಗ್ಯ ಇಲಾಖೆ ತಿಳಿಸಿದೆ. <br /> <br /> ತಾಲ್ಲೂಕುಮಟ್ಟದ ಅಧಿಕಾರಿಗಳು ತಕ್ಷಣ ಗ್ರಾಮಕ್ಕೆ ತೆರಳಿ ಇಡೀ ಹಳ್ಳಿಗೆ ಡೆಂಗೆ ಜ್ವರ ಹರಡಲು ಕಾರಣವಾಗಿರುವ ಅಂಶಗಳನ್ನು ಪತ್ತೆ ಮಾಡಿ, ಪರಿಹಾರ ಕಂಡು ಹಿಡಿಯಬೇಕು ಎಂದು ಸೂಚಿಸಿದರು.<br /> <br /> ಗ್ರಾಮದಲ್ಲಿ ಸೊಳ್ಳೆನಾಶಕ ಸಿಂಪರಣೆ ಮಾಡಬೇಕು. ಕುಡಿಯುವ ನೀರಿನ ಸ್ಥಳಗಳನ್ನು ಸ್ವಚ್ಛಗೊಳಿಸಬೇಕು. ಜನರಿಗೆ ರೋಗದ ಬಗ್ಗೆ ಅರಿವು ಮೂಡಿಸಬೇಕು ಎಂದು ಜಯರಾಂ ಅಧಿಕಾರಿಗಳಿಗೆ ತಿಳಿಸಿದರು.<br /> ಮುಖ್ಯ ಯೋಜನಾಧಿಕಾರಿ ಚಂದ್ರಪ್ಪ, ಯೋಜನಾ ನಿರ್ದೇಶಕ ಲಕ್ಷ್ಮೀನಾರಾಯಣ್ ಹಾಗೂ ನೋಡೆಲ್ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರಿಯೂರು: </strong>ತಾಲ್ಲೂಕಿನಲ್ಲಿ ಉದ್ಯೋಗ ಖಾತ್ರಿ ಯೋಜನೆ ಕಾಮಗಾರಿಗಳಿಗೆ ್ಙ 7.38 ಕೋಟಿ ಬಿಡುಗಡೆ ಮಾಡಿದ್ದು, ಪಂಚಾಯ್ತಿವಾರು ಹಣ ಹಂಚಿಕೆ ಮಾಡಲಾಗುವುದು ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಎನ್. ಜಯರಾಂ ತಿಳಿಸಿದರು.<br /> <br /> ನಗರದ ತಾಲ್ಲೂಕು ಪಂಚಾಯ್ತಿ ಸಭಾಂಗಣದಲ್ಲಿ ಸೋಮವಾರ ಉದ್ಯೋಗ ಖಾತ್ರಿ ಹಣ ಹಂಚಿಕೆ, ಕುಡಿಯುವ ನೀರಿನ ಸಮಸ್ಯೆ, ಆರೋಗ್ಯ ಸಮಸ್ಯೆ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಿ ಅವರು ಮಾತನಾಡಿದರು.<br /> <br /> ಪಂಚಾಯ್ತಿಯಲ್ಲಿ ನಡೆದಿರುವ ಕಾಮಗಾರಿಗಳನ್ನು ಪರಿಶೀಲಿಸಲು ಬೇರೆ ತಾಲ್ಲೂಕುಗಳ 9 ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಒಬ್ಬೊಬ್ಬರು 3ರಿಂದ 4 ಪಂಚಾಯ್ತಿಗಳ ವರದಿ ತರಿಸಿಕೊಂಡು ಪರಿಶೀಲಿಸುತ್ತಾರೆ. ನೋಡೆಲ್ ಅಧಿಕಾರಿಗಳ ವರದಿ ಆಧರಿಸಿ ಹಣ ಬಿಡುಗಡೆ ಮಾಡಲಾಗುವುದು. ಸಮಸ್ಯೆ ಇದ್ದ ಕಡೆ ಕೂಲಿ ಹಣ ಮಾತ್ರ ಬಿಡುಗಡೆ ಮಾಡಲು ಸೂಚಿಸಲಾಗಿದೆ ಎಂದು ಹೇಳಿದರು.<br /> <br /> ತಾಲ್ಲೂಕಿನಲ್ಲಿ ವಿವಿಧ ವಸತಿ ಯೋಜನೆಗಳ ಪ್ರಗತಿ ಕುರಿತು ಮಾಹಿತಿ ಪಡೆದರು. ತಾಲ್ಲೂಕು ಪಂಚಾಯ್ತಿ ಇಒ ರಮೇಶ್ ಅವರು ವಸತಿ ಯೋಜನೆ ಪ್ರಗತಿಯಲ್ಲಿ ಹಿರಿಯೂರು ತಾಲ್ಲೂಕು ಜಿಲ್ಲೆಯಲ್ಲಿ ಮುಂಚೂಣಿಯಲ್ಲಿದೆ ಎಂದು ಮಾಹಿತಿ ನೀಡಿದರು.<br /> <br /> <strong>ಕುಡಿಯುವ ನೀರು ಪೂರೈಕೆಗೆ ಆದ್ಯತೆ ನೀಡಲು ಸೂಚನೆ: </strong>ತಾಲ್ಲೂಕಿನ ಐಮಂಗಲ ಹೋಬಳಿಯ ಐಮಂಗಲ, ಮರಡಿದೇವಿಗೆರೆ, ಕಲ್ಲಹಟ್ಟಿ, ಭರಂಪುರ, ದಾಸಣ್ಣನಮಾಳಿಗೆ ಮೊದಲಾದ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ತೀವ್ರ ತೊಂದರೆಯಿದೆ. ಬರ ಪರಿಹಾರ ಯೋಜನೆಯಡಿ ಕುಡಿಯುವ ನೀರಿನ ಸಮಸ್ಯೆ ಇರುವ ಹಳ್ಳಿಗಳನ್ನು ಸೇರಿಸಿ ತಕ್ಷಣ ಪರಿಹಾರ ನೀಡಬೇಕು ಎಂದು ಅವರು ಸಲಹೆ ಮಾಡಿದರು.<br /> <br /> <strong>ಕ್ರಮಕ್ಕೆ ಸೂಚನೆ</strong>: ತಾಲ್ಲೂಕಿನ ಬಗ್ಗನಡು ಗ್ರಾಮದಲ್ಲಿ ಡೆಂಗೆಜ್ವರ ಕಾಣಿಸಿಕೊಂಡಿರುವ ಮಾಹಿತಿ ಬಂದಿದ್ದು, ಮೃತಪಟ್ಟಿರುವ ನಾಲ್ವರಲ್ಲಿ ಒಬ್ಬರು ಡೆಂಗೆಯಿಂದ ಸಾವನ್ನಪ್ಪಿರುವುದಾಗಿ ಆರೋಗ್ಯ ಇಲಾಖೆ ತಿಳಿಸಿದೆ. <br /> <br /> ತಾಲ್ಲೂಕುಮಟ್ಟದ ಅಧಿಕಾರಿಗಳು ತಕ್ಷಣ ಗ್ರಾಮಕ್ಕೆ ತೆರಳಿ ಇಡೀ ಹಳ್ಳಿಗೆ ಡೆಂಗೆ ಜ್ವರ ಹರಡಲು ಕಾರಣವಾಗಿರುವ ಅಂಶಗಳನ್ನು ಪತ್ತೆ ಮಾಡಿ, ಪರಿಹಾರ ಕಂಡು ಹಿಡಿಯಬೇಕು ಎಂದು ಸೂಚಿಸಿದರು.<br /> <br /> ಗ್ರಾಮದಲ್ಲಿ ಸೊಳ್ಳೆನಾಶಕ ಸಿಂಪರಣೆ ಮಾಡಬೇಕು. ಕುಡಿಯುವ ನೀರಿನ ಸ್ಥಳಗಳನ್ನು ಸ್ವಚ್ಛಗೊಳಿಸಬೇಕು. ಜನರಿಗೆ ರೋಗದ ಬಗ್ಗೆ ಅರಿವು ಮೂಡಿಸಬೇಕು ಎಂದು ಜಯರಾಂ ಅಧಿಕಾರಿಗಳಿಗೆ ತಿಳಿಸಿದರು.<br /> ಮುಖ್ಯ ಯೋಜನಾಧಿಕಾರಿ ಚಂದ್ರಪ್ಪ, ಯೋಜನಾ ನಿರ್ದೇಶಕ ಲಕ್ಷ್ಮೀನಾರಾಯಣ್ ಹಾಗೂ ನೋಡೆಲ್ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>