<p><strong>ಹಿರಿಯೂರು:</strong> ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 1.12 ಲಕ್ಷ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ನಿರುದ್ಯೋಗಿಗಳ ಬದುಕಿಗೆ ಭದ್ರತೆ ನೀಡಬೇಕು ಎಂದು ಬಯಲುಸೀಮೆ ರೈತ ಸಂಘದ ಅಧ್ಯಕ್ಷ ಕಸವನಹಳ್ಳಿ ರಮೇಶ್, ಪ್ರಧಾನ ಕಾರ್ಯದರ್ಶಿ ಎಸ್.ವಿ. ರಂಗನಾಥ್ ಒತ್ತಾಯ ಮಾಡಿದ್ದಾರೆ.<br /> <br /> ಹಿಂದೆ ಆಡಳಿತ ನಡೆಸಿದವರು ತಮಗೆ ಬೇಕಾದವರನ್ನು ತೃಪ್ತಿಪಡಿಸಲು, ಹಿಂಬಾಲಕರಿಗೆ ಲಾಭ ಮಾಡಿಕೊಳ್ಳಲು ಬೇಕಾಬಿಟ್ಟಿಯಾಗಿ ನರ್ಸಿಂಗ್, ಐಟಿಐ, ಡಿಇಡಿ, ಬಿಇಡಿ, ಎಂಜಿನಿಯರಿಂಗ್, ಆಯುರ್ವೇದ ಮೊದಲಾದ ಕಾಲೇಜುಗಳನ್ನು ಮಂಜೂರು ಮಾಡಿದ್ದರಿಂದ ಲಕ್ಷಾಂತರ ಯುವಕರು ಪದವಿ ಪಡೆದು ಉದ್ಯೋಗಕ್ಕಾಗಿ ಪ್ರಮಾಣ ಪತ್ರಗಳನ್ನು ಕೈಯಲ್ಲಿ ಹಿಡಿದು ತಿರುಗುತ್ತಿದ್ದಾರೆ.<br /> <br /> ನ್ಯಾಯಾಂಗ, ಕೃಷಿ, ಅರಣ್ಯ, ತೋಟಗಾರಿಕೆ, ಕಂದಾಯ, ನೀರಾವರಿ, ಆರೋಗ್ಯ, ಶಿಕ್ಷಣ ಮೊದಲಾದ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅವೈಜ್ಞಾನಿಕವಾಗಿ ನಿವೃತ್ತರನ್ನು ಭರ್ತಿ ಮಾಡುವ ಮೂಲಕ ಯುವಕರ ಬದುಕನ್ನು ಹಾಳುಗೆಡವಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.<br /> <br /> ಗೌರವಧನ, ಅರೆಕಾಲಿಕ, ಗುತ್ತಿಗೆ, ಅತಿಥಿ ನೌಕರ ಮೊದಲಾದ ಹೆಸರಿನಲ್ಲಿ ನೇಮಕಾತಿ ಮಾಡಿಕೊಳ್ಳುವುದನ್ನು ಸರ್ಕಾರ ತಕ್ಷಣ ನಿಲ್ಲಿಸಬೇಕು. ಅರ್ಹ ವಿದ್ಯಾವಂತ ನಿರುದ್ಯೋಗಿಗಳನ್ನು ಖಾಲಿ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಬೇಕು ಎಂದು ರಮೇಶ್ ಹಾಗೂ ರಂಗನಾಥ್ ಒತ್ತಾಯ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಿರಿಯೂರು:</strong> ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 1.12 ಲಕ್ಷ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ನಿರುದ್ಯೋಗಿಗಳ ಬದುಕಿಗೆ ಭದ್ರತೆ ನೀಡಬೇಕು ಎಂದು ಬಯಲುಸೀಮೆ ರೈತ ಸಂಘದ ಅಧ್ಯಕ್ಷ ಕಸವನಹಳ್ಳಿ ರಮೇಶ್, ಪ್ರಧಾನ ಕಾರ್ಯದರ್ಶಿ ಎಸ್.ವಿ. ರಂಗನಾಥ್ ಒತ್ತಾಯ ಮಾಡಿದ್ದಾರೆ.<br /> <br /> ಹಿಂದೆ ಆಡಳಿತ ನಡೆಸಿದವರು ತಮಗೆ ಬೇಕಾದವರನ್ನು ತೃಪ್ತಿಪಡಿಸಲು, ಹಿಂಬಾಲಕರಿಗೆ ಲಾಭ ಮಾಡಿಕೊಳ್ಳಲು ಬೇಕಾಬಿಟ್ಟಿಯಾಗಿ ನರ್ಸಿಂಗ್, ಐಟಿಐ, ಡಿಇಡಿ, ಬಿಇಡಿ, ಎಂಜಿನಿಯರಿಂಗ್, ಆಯುರ್ವೇದ ಮೊದಲಾದ ಕಾಲೇಜುಗಳನ್ನು ಮಂಜೂರು ಮಾಡಿದ್ದರಿಂದ ಲಕ್ಷಾಂತರ ಯುವಕರು ಪದವಿ ಪಡೆದು ಉದ್ಯೋಗಕ್ಕಾಗಿ ಪ್ರಮಾಣ ಪತ್ರಗಳನ್ನು ಕೈಯಲ್ಲಿ ಹಿಡಿದು ತಿರುಗುತ್ತಿದ್ದಾರೆ.<br /> <br /> ನ್ಯಾಯಾಂಗ, ಕೃಷಿ, ಅರಣ್ಯ, ತೋಟಗಾರಿಕೆ, ಕಂದಾಯ, ನೀರಾವರಿ, ಆರೋಗ್ಯ, ಶಿಕ್ಷಣ ಮೊದಲಾದ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅವೈಜ್ಞಾನಿಕವಾಗಿ ನಿವೃತ್ತರನ್ನು ಭರ್ತಿ ಮಾಡುವ ಮೂಲಕ ಯುವಕರ ಬದುಕನ್ನು ಹಾಳುಗೆಡವಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.<br /> <br /> ಗೌರವಧನ, ಅರೆಕಾಲಿಕ, ಗುತ್ತಿಗೆ, ಅತಿಥಿ ನೌಕರ ಮೊದಲಾದ ಹೆಸರಿನಲ್ಲಿ ನೇಮಕಾತಿ ಮಾಡಿಕೊಳ್ಳುವುದನ್ನು ಸರ್ಕಾರ ತಕ್ಷಣ ನಿಲ್ಲಿಸಬೇಕು. ಅರ್ಹ ವಿದ್ಯಾವಂತ ನಿರುದ್ಯೋಗಿಗಳನ್ನು ಖಾಲಿ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಬೇಕು ಎಂದು ರಮೇಶ್ ಹಾಗೂ ರಂಗನಾಥ್ ಒತ್ತಾಯ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>