<p><strong>ಢಾಕಾ (ಪಿಟಿಐ)</strong>: ಬಾಂಗ್ಲಾದೇಶದ ಮಾಜಿ ಪ್ರಧಾನಿಯೂ ಆಗಿರುವ ವಿರೋಧ ಪಕ್ಷದ ನಾಯಕಿ ಖಾಲೀದಾ ಜಿಯಾ ಅವರ ವಿರುದ್ಧ ಸೋಮವಾರ ದೇಶದ್ರೋಹ ಪ್ರಕರಣ ದಾಖಲಾಗಿದೆ.</p>.<p>ಬಾಂಗ್ಲಾದೇಶ ವಿಮೋಚನಾ ಚಳವಳಿಯ ಹುತಾತ್ಮರ ಕುರಿತು ‘ನಿಂದನೆಯ ಮಾತು’ಗಳನ್ನಾಡಿದ ಆರೋಪದಡಿ ಈ ಪ್ರಕರಣ ದಾಖಲಿಸಲಾಗಿದೆ.</p>.<p>ಗೃಹ ಸಚಿವಾಲಯವು ಜಿಯಾ ಅವರ ವಿರುದ್ಧ ದೇಶದ್ರೋಹ ಮೊಕದ್ದಮೆ ದಾಖಲಿಸಲು ಅನುಮತಿ ನೀಡಿದ ಒಂದು ದಿನದ ಬಳಿಕ ಈ ಬೆಳವಣಿಗೆ ನಡೆದಿದೆ.</p>.<p>‘ಢಾಕಾದ ಮುಖ್ಯಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎದುರು ಸೋಮವಾರ ಬೆಳಿಗ್ಗೆ ಜಿಯಾ ವಿರುದ್ಧ ಈ ಪ್ರಕರಣ ದಾಖಲಾಗಿದೆ. ಅವರನ್ನು ಬಂಧಿಸುವಂತೆ ಮನವಿ ಮಾಡಲಾಗಿದೆ’ ಎಂದು ನ್ಯಾಯಾಲಯದ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.</p>.<p>ಅರ್ಜಿ ವಿಚಾರಣೆಗೆ ನ್ಯಾಯಾಲಯ ಒಪ್ಪಿಕೊಂಡಿದೆ ಎಂದೂ ಅವರು ತಿಳಿಸಿದ್ದಾರೆ.</p>.<p>2015ರ ಡಿಸೆಂಬರ್ 21ರಂದು ಚರ್ಚೆಯೊಂದರಲ್ಲಿ ಮಾತನಾಡುತ್ತ ಖಾಲೀದಾ ಜಿಯಾ ಅವರು 1971ರ ಸ್ವಾತಂತ್ರ್ಯ ಸಂಗ್ರಾಮದ ಹುತಾತ್ಮರ ಅಂಕಿ ಅಂಶಗಳ ಕುರಿತು ಅನುಮಾನ ವ್ಯಕ್ತಪಡಿಸಿದ್ದರು.</p>.<p>‘ವಿಮೋಚನಾ ಹೋರಾಟದಲ್ಲಿ ಹುತಾತ್ಮರಾದವರೆಷ್ಟು ಎಂಬುದರ ಕುರಿತು ವಿವಾದಗಳಿವೆ. ಈ ಕುರಿತು ಹಲವು ಪುಸ್ತಕಗಳು ಹಾಗೂ ದಾಖಲೆಗಳೂ ಇವೆ’ ಎಂದಿದ್ದರು.</p>.<p>70 ವರ್ಷದ ಜಿಯಾ ಅವರ ಬಿಎನ್ಪಿ ಪಕ್ಷವು ಮೂಲಭೂತವಾದಿ ಜಮಾತೇ ಇಸ್ಲಾಮಿಯ ನಿರ್ಣಾಯಕ ಅಂಗಪಕ್ಷವಾಗಿದೆ. ಇಸ್ಲಾಮಿ ಪಕ್ಷವು ಪಾಕಿಸ್ತಾನದಿಂದ ಬಾಂಗ್ಲಾದೇಶದ ವಿಮೋಚನಾ ಚಳವಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿತ್ತು.</p>.<p>ಬಾಂಗ್ಲಾದೇಶ ದಂಡ ಸಂಹಿತೆಯ 123 (ಎ) ಕಲಂ ಅಡಿಯಲ್ಲಿ ಜಿಯಾ ಅವರ ವಿರುದ್ಧ ದೇಶದ್ರೋಹ ಪ್ರಕರಣದ ದಾಖಲಿಸಿ ವಿಚಾರಣೆ ನಡೆಸುವಂತೆ ಸುಪ್ರೀಂ ಕೋರ್ಟ್ ವಕೀಲರಾದ ಮಮ್ತಾಜ್ ಉದ್ದೀನ್ ಅಹ್ಮದ್ ಮೆಹೆದಿ ಅವರು ಡಿಸೆಂಬರ್ 27ರಂದು ಕೋರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಢಾಕಾ (ಪಿಟಿಐ)</strong>: ಬಾಂಗ್ಲಾದೇಶದ ಮಾಜಿ ಪ್ರಧಾನಿಯೂ ಆಗಿರುವ ವಿರೋಧ ಪಕ್ಷದ ನಾಯಕಿ ಖಾಲೀದಾ ಜಿಯಾ ಅವರ ವಿರುದ್ಧ ಸೋಮವಾರ ದೇಶದ್ರೋಹ ಪ್ರಕರಣ ದಾಖಲಾಗಿದೆ.</p>.<p>ಬಾಂಗ್ಲಾದೇಶ ವಿಮೋಚನಾ ಚಳವಳಿಯ ಹುತಾತ್ಮರ ಕುರಿತು ‘ನಿಂದನೆಯ ಮಾತು’ಗಳನ್ನಾಡಿದ ಆರೋಪದಡಿ ಈ ಪ್ರಕರಣ ದಾಖಲಿಸಲಾಗಿದೆ.</p>.<p>ಗೃಹ ಸಚಿವಾಲಯವು ಜಿಯಾ ಅವರ ವಿರುದ್ಧ ದೇಶದ್ರೋಹ ಮೊಕದ್ದಮೆ ದಾಖಲಿಸಲು ಅನುಮತಿ ನೀಡಿದ ಒಂದು ದಿನದ ಬಳಿಕ ಈ ಬೆಳವಣಿಗೆ ನಡೆದಿದೆ.</p>.<p>‘ಢಾಕಾದ ಮುಖ್ಯಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎದುರು ಸೋಮವಾರ ಬೆಳಿಗ್ಗೆ ಜಿಯಾ ವಿರುದ್ಧ ಈ ಪ್ರಕರಣ ದಾಖಲಾಗಿದೆ. ಅವರನ್ನು ಬಂಧಿಸುವಂತೆ ಮನವಿ ಮಾಡಲಾಗಿದೆ’ ಎಂದು ನ್ಯಾಯಾಲಯದ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.</p>.<p>ಅರ್ಜಿ ವಿಚಾರಣೆಗೆ ನ್ಯಾಯಾಲಯ ಒಪ್ಪಿಕೊಂಡಿದೆ ಎಂದೂ ಅವರು ತಿಳಿಸಿದ್ದಾರೆ.</p>.<p>2015ರ ಡಿಸೆಂಬರ್ 21ರಂದು ಚರ್ಚೆಯೊಂದರಲ್ಲಿ ಮಾತನಾಡುತ್ತ ಖಾಲೀದಾ ಜಿಯಾ ಅವರು 1971ರ ಸ್ವಾತಂತ್ರ್ಯ ಸಂಗ್ರಾಮದ ಹುತಾತ್ಮರ ಅಂಕಿ ಅಂಶಗಳ ಕುರಿತು ಅನುಮಾನ ವ್ಯಕ್ತಪಡಿಸಿದ್ದರು.</p>.<p>‘ವಿಮೋಚನಾ ಹೋರಾಟದಲ್ಲಿ ಹುತಾತ್ಮರಾದವರೆಷ್ಟು ಎಂಬುದರ ಕುರಿತು ವಿವಾದಗಳಿವೆ. ಈ ಕುರಿತು ಹಲವು ಪುಸ್ತಕಗಳು ಹಾಗೂ ದಾಖಲೆಗಳೂ ಇವೆ’ ಎಂದಿದ್ದರು.</p>.<p>70 ವರ್ಷದ ಜಿಯಾ ಅವರ ಬಿಎನ್ಪಿ ಪಕ್ಷವು ಮೂಲಭೂತವಾದಿ ಜಮಾತೇ ಇಸ್ಲಾಮಿಯ ನಿರ್ಣಾಯಕ ಅಂಗಪಕ್ಷವಾಗಿದೆ. ಇಸ್ಲಾಮಿ ಪಕ್ಷವು ಪಾಕಿಸ್ತಾನದಿಂದ ಬಾಂಗ್ಲಾದೇಶದ ವಿಮೋಚನಾ ಚಳವಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿತ್ತು.</p>.<p>ಬಾಂಗ್ಲಾದೇಶ ದಂಡ ಸಂಹಿತೆಯ 123 (ಎ) ಕಲಂ ಅಡಿಯಲ್ಲಿ ಜಿಯಾ ಅವರ ವಿರುದ್ಧ ದೇಶದ್ರೋಹ ಪ್ರಕರಣದ ದಾಖಲಿಸಿ ವಿಚಾರಣೆ ನಡೆಸುವಂತೆ ಸುಪ್ರೀಂ ಕೋರ್ಟ್ ವಕೀಲರಾದ ಮಮ್ತಾಜ್ ಉದ್ದೀನ್ ಅಹ್ಮದ್ ಮೆಹೆದಿ ಅವರು ಡಿಸೆಂಬರ್ 27ರಂದು ಕೋರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>