<p>ಕೆಜಿಎಫ್: ಗ್ರಾಮ ಪಂಚಾಯಿತಿಗೆ ಸೇರಿದ ಪೈಪ್ಗಳಲ್ಲಿ ಖಾಸಗಿ ವ್ಯಕ್ತಿಗಳು ಕುಡಿಯುವ ನೀರು ಸರಬರಾಜು ಮಾಡಿ, ಹಣ ವಸೂಲಿ ಮಾಡುತ್ತಿರುವ ಆತಂಕಕಾರಿ ಪ್ರಸಂಗ ದಾಸರಹೊಸಹಳ್ಳಿ ಬಳಿಯ ಕುವೆಂಪು ನಗರದಲ್ಲಿ ಬೆಳಕಿಗೆ ಬಂದಿದೆ.<br /> <br /> ದೊಡ್ಡೂರು ಕರಪನಹಳ್ಳಿ ಗ್ರಾಮ ಪಂಚಾಯಿತಿಗೆ ಸೇರಿದ ಕುವೆಂಪು ನಗರದಲ್ಲಿ ಮಧ್ಯಮ ವರ್ಗಕ್ಕೆ ಸೇರಿದ ಕುಟುಂಬಗಳು ವಾಸಿಸುತ್ತಿವೆ. ಇನ್ನೂರಕ್ಕೂ ಹೆಚ್ಚು ಮನೆಗಳಿದ್ದು, ಮೂಲಸೌಕರ್ಯಗಳಿಲ್ಲದ ಬಡಾವಣೆ ಎಂಬ ಕುಖ್ಯಾತಿಗೆ ಒಳಗಾಗಿದೆ.<br /> <br /> ರಸ್ತೆ, ಚರಂಡಿ, ಬೀದಿ ದೀಪ ಇಲ್ಲದಿದ್ದರೂ ಸ್ಥಳೀಯ ನಿವಾಸಿಗಳು ಸಹಿಸಿಕೊಂಡಿದ್ದಾರೆ. ಆದರೆ ಗ್ರಾಮ ಪಂಚಾಯಿತಿಗೆ ಸೇರಿದ ಪೈಪ್ ಲೈನ್ನಲ್ಲಿ ಕೆಲವರು ಕುಡಿಯುವ ನೀರು ಸರಬರಾಜು ಮಾಡಿ, ಅದಕ್ಕಾಗಿ ಪ್ರತಿ ತಿಂಗಳು ₨ 200 ವಸೂಲಿ ಮಾಡುತ್ತಿರುವುದು ನಾಗರಿಕರನ್ನು ಸಿಟ್ಟಿಗೆಬ್ಬಿಸಿದೆ.<br /> <br /> ಗ್ರಾಮ ಪಂಚಾಯಿತಿ ಕುಡಿಯುವ ನೀರನ್ನು ಸಮರ್ಪಕವಾಗಿ ಸರಬರಾಜು ಮಾಡದ ಕಾರಣ, ಕೆಲವರು ಪಂಚಾಯತಿಯ ನೀರಿನ ಕೊಳವೆಗಳ ಮೂಲಕ ನೀರು ಸರಬರಾಜು ಮಾಡುತ್ತಿದ್ದಾರೆ. ಆದರೆ ₨ 10 ಸಾವಿರ ಠೇವಣಿ ಕಟ್ಟಬೇಕು. ವಿಧಿಯಿಲ್ಲದೆ ನೀರಿಗಾಗಿ ಹಣ ಕಟ್ಟಿದ ನಿವಾಸಿಗಳು, ಈಗ ಹದಿನೈದು ದಿನಗಳಿಗೊಮ್ಮೆ ನೀರನ್ನು ಪಡೆಯುತ್ತಿದ್ದಾರೆ. ವಾರಕ್ಕೆ ಎರಡು ದಿನಗಳಿಗೊಮ್ಮೆ ನೀರು ಕೊಡುತ್ತೇವೆ ಎಂದು ಠೇವಣಿ ಕಟ್ಟಿಸಿಕೊಂಡಿದ್ದರು. ಈಗ ಕೇಳಿದರೆ ದೌರ್ಜನ್ಯ ನಡೆಸುತ್ತಾರೆ ಎಂದು ನಿವಾಸಿಗಳು ದೂರುತ್ತಿದ್ದಾರೆ.<br /> <br /> ಜಿಲ್ಲಾ ಪಂಚಾಯಿತಿಯಿಂದ ಬಹಳ ಹಿಂದೆ ಕೊರೆಸಿದ್ದ ಕೊಳವೆ ಬಾವಿ ಸಹ ವಿವಾದಕ್ಕೆ ಈಡಾಗಿದೆ. ಅದು ತನಗೆ ಸೇರಿದ್ದು ಎಂದು ವ್ಯಕ್ತಿಯೊಬ್ಬರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಕೊಳವೆಬಾವಿಗೆ ನೀಡಿದ ತಾತ್ಕಾಲಿಕ ತಡೆಯಾಜ್ಞೆ ತೆರವುಗೊಳಿಸಲು ಗ್ರಾಮ ಪಂಚಾಯತಿ ಮುಂದಾಗಿಲ್ಲ ಎಂದು ನಿವಾಸಿಗಳು ಆರೋಪಿಸಿದ್ದಾರೆ.<br /> <br /> ಅಧಿಕಾರಿಗಳನ್ನು ಕಾಡಿ, ಬೇಡಿ ಹೊಸ ಕೊಳವೆಬಾವಿ ಕೊರೆಸಲು ಅನುಮತಿ ಪಡೆದರೂ ರಾಜಕೀಯವಾಗಿ ಪ್ರಭಾವ ಇರುವ ವ್ಯಕ್ತಿಗಳು ಕೊಳವೆಬಾವಿ ಕೊರೆಯುವ ಯಂತ್ರಗಳು ಬಡಾವಣೆ ಪ್ರವೇಶಿಸದಂತೆ ತಡೆಯೊಡ್ಡುತ್ತಿದ್ದಾರೆ ಎಂದು ಸ್ಥಳೀಯರು ಅಳಲು ತೋಡಿಕೊಳ್ಳುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೆಜಿಎಫ್: ಗ್ರಾಮ ಪಂಚಾಯಿತಿಗೆ ಸೇರಿದ ಪೈಪ್ಗಳಲ್ಲಿ ಖಾಸಗಿ ವ್ಯಕ್ತಿಗಳು ಕುಡಿಯುವ ನೀರು ಸರಬರಾಜು ಮಾಡಿ, ಹಣ ವಸೂಲಿ ಮಾಡುತ್ತಿರುವ ಆತಂಕಕಾರಿ ಪ್ರಸಂಗ ದಾಸರಹೊಸಹಳ್ಳಿ ಬಳಿಯ ಕುವೆಂಪು ನಗರದಲ್ಲಿ ಬೆಳಕಿಗೆ ಬಂದಿದೆ.<br /> <br /> ದೊಡ್ಡೂರು ಕರಪನಹಳ್ಳಿ ಗ್ರಾಮ ಪಂಚಾಯಿತಿಗೆ ಸೇರಿದ ಕುವೆಂಪು ನಗರದಲ್ಲಿ ಮಧ್ಯಮ ವರ್ಗಕ್ಕೆ ಸೇರಿದ ಕುಟುಂಬಗಳು ವಾಸಿಸುತ್ತಿವೆ. ಇನ್ನೂರಕ್ಕೂ ಹೆಚ್ಚು ಮನೆಗಳಿದ್ದು, ಮೂಲಸೌಕರ್ಯಗಳಿಲ್ಲದ ಬಡಾವಣೆ ಎಂಬ ಕುಖ್ಯಾತಿಗೆ ಒಳಗಾಗಿದೆ.<br /> <br /> ರಸ್ತೆ, ಚರಂಡಿ, ಬೀದಿ ದೀಪ ಇಲ್ಲದಿದ್ದರೂ ಸ್ಥಳೀಯ ನಿವಾಸಿಗಳು ಸಹಿಸಿಕೊಂಡಿದ್ದಾರೆ. ಆದರೆ ಗ್ರಾಮ ಪಂಚಾಯಿತಿಗೆ ಸೇರಿದ ಪೈಪ್ ಲೈನ್ನಲ್ಲಿ ಕೆಲವರು ಕುಡಿಯುವ ನೀರು ಸರಬರಾಜು ಮಾಡಿ, ಅದಕ್ಕಾಗಿ ಪ್ರತಿ ತಿಂಗಳು ₨ 200 ವಸೂಲಿ ಮಾಡುತ್ತಿರುವುದು ನಾಗರಿಕರನ್ನು ಸಿಟ್ಟಿಗೆಬ್ಬಿಸಿದೆ.<br /> <br /> ಗ್ರಾಮ ಪಂಚಾಯಿತಿ ಕುಡಿಯುವ ನೀರನ್ನು ಸಮರ್ಪಕವಾಗಿ ಸರಬರಾಜು ಮಾಡದ ಕಾರಣ, ಕೆಲವರು ಪಂಚಾಯತಿಯ ನೀರಿನ ಕೊಳವೆಗಳ ಮೂಲಕ ನೀರು ಸರಬರಾಜು ಮಾಡುತ್ತಿದ್ದಾರೆ. ಆದರೆ ₨ 10 ಸಾವಿರ ಠೇವಣಿ ಕಟ್ಟಬೇಕು. ವಿಧಿಯಿಲ್ಲದೆ ನೀರಿಗಾಗಿ ಹಣ ಕಟ್ಟಿದ ನಿವಾಸಿಗಳು, ಈಗ ಹದಿನೈದು ದಿನಗಳಿಗೊಮ್ಮೆ ನೀರನ್ನು ಪಡೆಯುತ್ತಿದ್ದಾರೆ. ವಾರಕ್ಕೆ ಎರಡು ದಿನಗಳಿಗೊಮ್ಮೆ ನೀರು ಕೊಡುತ್ತೇವೆ ಎಂದು ಠೇವಣಿ ಕಟ್ಟಿಸಿಕೊಂಡಿದ್ದರು. ಈಗ ಕೇಳಿದರೆ ದೌರ್ಜನ್ಯ ನಡೆಸುತ್ತಾರೆ ಎಂದು ನಿವಾಸಿಗಳು ದೂರುತ್ತಿದ್ದಾರೆ.<br /> <br /> ಜಿಲ್ಲಾ ಪಂಚಾಯಿತಿಯಿಂದ ಬಹಳ ಹಿಂದೆ ಕೊರೆಸಿದ್ದ ಕೊಳವೆ ಬಾವಿ ಸಹ ವಿವಾದಕ್ಕೆ ಈಡಾಗಿದೆ. ಅದು ತನಗೆ ಸೇರಿದ್ದು ಎಂದು ವ್ಯಕ್ತಿಯೊಬ್ಬರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಕೊಳವೆಬಾವಿಗೆ ನೀಡಿದ ತಾತ್ಕಾಲಿಕ ತಡೆಯಾಜ್ಞೆ ತೆರವುಗೊಳಿಸಲು ಗ್ರಾಮ ಪಂಚಾಯತಿ ಮುಂದಾಗಿಲ್ಲ ಎಂದು ನಿವಾಸಿಗಳು ಆರೋಪಿಸಿದ್ದಾರೆ.<br /> <br /> ಅಧಿಕಾರಿಗಳನ್ನು ಕಾಡಿ, ಬೇಡಿ ಹೊಸ ಕೊಳವೆಬಾವಿ ಕೊರೆಸಲು ಅನುಮತಿ ಪಡೆದರೂ ರಾಜಕೀಯವಾಗಿ ಪ್ರಭಾವ ಇರುವ ವ್ಯಕ್ತಿಗಳು ಕೊಳವೆಬಾವಿ ಕೊರೆಯುವ ಯಂತ್ರಗಳು ಬಡಾವಣೆ ಪ್ರವೇಶಿಸದಂತೆ ತಡೆಯೊಡ್ಡುತ್ತಿದ್ದಾರೆ ಎಂದು ಸ್ಥಳೀಯರು ಅಳಲು ತೋಡಿಕೊಳ್ಳುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>