<p><strong>ಬೆಂಗಳೂರು: `</strong>ಮುಂದಿನ ಸಂಸತ್ ಅಧಿವೇಶನದಲ್ಲಿ ಖಾಸಗಿ ಕ್ಷೇತ್ರದಲ್ಲಿ ಮೀಸಲಾತಿ ಮಸೂದೆ ಮಂಡನೆಗೆ ಒತ್ತಾಯಿಸಿ ಏಪ್ರಿಲ್ 21 ರಂದು ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಲಾಗುವುದು~ ಎಂದು ಅಖಿಲ ಭಾರತ ಪರಿಶಿಷ್ಟ ಜಾತಿ/ ಪಂಗಡದ ಸಂಘ ಸಂಸ್ಥೆಗಳ ಒಕ್ಕೂಟ (ಎಐಸಿಎಸ್ಒ) ರಾಜ್ಯ ಘಟಕದ ಸಂಚಾಲಕ ಜೆ. ಶ್ರೀನಿವಾಸ ಹೇಳಿದರು.<br /> <br /> ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, `ದೇಶದಲ್ಲಿ ಎಲ್ಲ ಸೇವೆಗಳು ಜಾಗತಿಕ ವ್ಯವಸ್ಥೆಗೆ ಪಲ್ಲಟಗೊಂಡು ಖಾಸಗಿ ಮತ್ತು ಅರೆಸರ್ಕಾರಿ ವ್ಯವಸ್ಥೆ ಜಾರಿಗೆ ಬಂದಿದೆ. ಇಂತಹ ಸಂದರ್ಭದಲ್ಲಿ ಸಮಾಜದಲ್ಲಿ ಸಮಾನ ಅವಕಾಶ ಕಲ್ಪಿಸುವ ದೃಷ್ಟಿಯಿಂದ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಒಳಿತಿಗಾಗಿ ನಮ್ಮ ಸಂಘಟನೆ ದುಡಿಯುತ್ತಿದೆ~ಎಂದರು.<br /> <br /> `ಎಸ್ಡಬ್ಲುಎ, ಎಸ್ಎಸ್ಡಿ, ಎಸ್ಬಿಐ ಮತ್ತು ಸೇವಾಸ್ಫೆಡ್~ ಅಧ್ಯಕ್ಷ ಎಂ.ವೆಂಕಟಸ್ವಾಮಿ ಕೆನರಾ ಬ್ಯಾಂಕ್ ಎಸ್ಸಿ/ಎಸ್ಟಿ ನೌಕರರ ಕಲ್ಯಾಣ ಸಂಘದ ಅಧ್ಯಕ್ಷ ಪುರುಷೋತ್ತಮ ದಾಸ್, ಕರ್ನಾಟಕ ದಲಿತ ನೌಕರರ ಒಕ್ಕೂಟದ ಅಧ್ಯಕ್ಷ ಹೆಣ್ಣೂರು ಶ್ರೀನಿವಾಸ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: `</strong>ಮುಂದಿನ ಸಂಸತ್ ಅಧಿವೇಶನದಲ್ಲಿ ಖಾಸಗಿ ಕ್ಷೇತ್ರದಲ್ಲಿ ಮೀಸಲಾತಿ ಮಸೂದೆ ಮಂಡನೆಗೆ ಒತ್ತಾಯಿಸಿ ಏಪ್ರಿಲ್ 21 ರಂದು ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಲಾಗುವುದು~ ಎಂದು ಅಖಿಲ ಭಾರತ ಪರಿಶಿಷ್ಟ ಜಾತಿ/ ಪಂಗಡದ ಸಂಘ ಸಂಸ್ಥೆಗಳ ಒಕ್ಕೂಟ (ಎಐಸಿಎಸ್ಒ) ರಾಜ್ಯ ಘಟಕದ ಸಂಚಾಲಕ ಜೆ. ಶ್ರೀನಿವಾಸ ಹೇಳಿದರು.<br /> <br /> ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ ಅವರು, `ದೇಶದಲ್ಲಿ ಎಲ್ಲ ಸೇವೆಗಳು ಜಾಗತಿಕ ವ್ಯವಸ್ಥೆಗೆ ಪಲ್ಲಟಗೊಂಡು ಖಾಸಗಿ ಮತ್ತು ಅರೆಸರ್ಕಾರಿ ವ್ಯವಸ್ಥೆ ಜಾರಿಗೆ ಬಂದಿದೆ. ಇಂತಹ ಸಂದರ್ಭದಲ್ಲಿ ಸಮಾಜದಲ್ಲಿ ಸಮಾನ ಅವಕಾಶ ಕಲ್ಪಿಸುವ ದೃಷ್ಟಿಯಿಂದ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಒಳಿತಿಗಾಗಿ ನಮ್ಮ ಸಂಘಟನೆ ದುಡಿಯುತ್ತಿದೆ~ಎಂದರು.<br /> <br /> `ಎಸ್ಡಬ್ಲುಎ, ಎಸ್ಎಸ್ಡಿ, ಎಸ್ಬಿಐ ಮತ್ತು ಸೇವಾಸ್ಫೆಡ್~ ಅಧ್ಯಕ್ಷ ಎಂ.ವೆಂಕಟಸ್ವಾಮಿ ಕೆನರಾ ಬ್ಯಾಂಕ್ ಎಸ್ಸಿ/ಎಸ್ಟಿ ನೌಕರರ ಕಲ್ಯಾಣ ಸಂಘದ ಅಧ್ಯಕ್ಷ ಪುರುಷೋತ್ತಮ ದಾಸ್, ಕರ್ನಾಟಕ ದಲಿತ ನೌಕರರ ಒಕ್ಕೂಟದ ಅಧ್ಯಕ್ಷ ಹೆಣ್ಣೂರು ಶ್ರೀನಿವಾಸ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>