<p><strong>ಬೆಂಗಳೂರು:</strong> ಬೇಸಿಗೆಯ ದುರ್ಲಾಭ ಪಡೆದು ಹೆಚ್ಚಿನ ದರ ವಿಧಿಸಿ ಜನರನ್ನು ಸುಲಿಗೆ ಮಾಡುವ ಖಾಸಗಿ ನೀರು ಸರಬರಾಜು ಟ್ಯಾಂಕರ್ಗಳಿಗೆ ಕಡಿವಾಣ ಹಾಕಲಾಗುವುದು ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸಚಿವ ಎಸ್. ಸುರೇಶ್ಕುಮಾರ್ ಭಾನುವಾರ ಇಲ್ಲಿ ಎಚ್ಚರಿಸಿದರು.<br /> <br /> ರಾಜಾಜಿನಗರ ವಿಧಾನಸಭಾ ಕ್ಷೇತ್ರದ 2ನೇ ಬ್ಲಾಕ್ನಲ್ಲಿ ನಿರ್ಮಿಸಲಿರುವ ವಿವಿಧ ಸೌಲಭ್ಯವುಳ್ಳ (ಡಯಾಲಿಸಿಸ್ ಕೇಂದ್ರ ಮತ್ತು ಡಯಾಬಿಟಿಕ್ ಪ್ರಯೋಗಾಲಯ) ಅತ್ಯಾಧುನಿಕ ನೂತನ ಹೈಟೆಕ್ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಂಬಂಧ ಜಲಮಂಡಳಿ ಅಧ್ಯಕ್ಷರು ಹಾಗೂ ಬಿಬಿಎಂಪಿ ಆಯುಕ್ತರೊಂದಿಗೆ ಸಭೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.<br /> `ನಗರದ ನಾಗರಿಕರಿಗೆ ಜಲಮಂಡಳಿಯು ಶುದ್ಧ ಕುಡಿಯುವ ನೀರು ಪೂರೈಸುತ್ತಿದೆ. ನೀರಿನ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ.~<br /> <br /> `ನೀರು ಕಲುಷಿತಗೊಳ್ಳದಂತೆ ಗಮನಹರಿಸಲು ವಾಲ್ವ್ಮೆನ್ಗಳಿಗೆ ಸೂಚಿಸಲಾಗಿದೆ. ಒಂದು ವೇಳೆ ಒಡೆದ ಪೈಪು ಅಥವಾ ಮೋರಿಯಲ್ಲಿನ ಪೈಪುಗಳಿಂದ ನೀರು ಕಲುಷಿತಗೊಳ್ಳುತ್ತಿರುವ ದೂರುಗಳ ಬಗ್ಗೆ ಪರಿವೀಕ್ಷಣೆ ನಡೆಸಿ ತಕ್ಷಣ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ~ ಎಂದು ಅವರು ಹೇಳಿದರು.<br /> <br /> `ಕಾವೇರಿ 4ನೇ ಹಂತದ 2ನೇ ಘಟ್ಟ ಬರುವ ಜೂನ್ ವೇಳೆಗೆ ಪೂರ್ಣಗೊಳ್ಳಲಿದೆ. ಆನಂತರ ಪಾಲಿಕೆ ವ್ಯಾಪ್ತಿಗೆ ಹೊಸದಾಗಿ ಸೇರ್ಪಡೆಯಾದಂತಹ ವಾರ್ಡ್ಗಳಿಗೆ ಪ್ರಾಯೋಗಿಕವಾಗಿ ಕಾವೇರಿ ನೀರು ಸರಬರಾಜು ಮಾಡಲಾಗುವುದು~ ಎಂದರು.<br /> <br /> ಇದಕ್ಕೂ ಮುನ್ನ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ 1.2 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಿರುವ ಅತ್ಯಾಧುನಿಕ ಹೈಟೆಕ್ ಆಸ್ಪತ್ರೆ ನಿರ್ಮಾಣಕ್ಕೆ ಸಚಿವರು ಶಂಕುಸ್ಥಾಪನೆ ನೆರವೇರಿಸಿದರು.ಜನರಿಗೆ ಕೈಗೆಟುಕುವ ದರದಲ್ಲಿ ಡಯಾಲಿಸಿಸ್ ಸೇವೆ ಒದಗಿಸಲಾಗುತ್ತದೆ. ಮುಖ್ಯವಾಗಿ ಸ್ಥಳೀಯರು ಹಾಗೂ ದುರ್ಬಲ ವರ್ಗದವರ ಅನುಕೂಲಕ್ಕಾಗಿ ಈ ಆಸ್ಪತ್ರೆ ತೆರೆಯಲಾಗುತ್ತಿದೆ ಎಂದು ಅವರು ತಿಳಿಸಿದರು.ಬಿಬಿಎಂಪಿ ಸದಸ್ಯರಾದ ಕೃಷ್ಣಪ್ಪ, ಪದ್ಮರಾಜ್, ರವೀಂದ್ರ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೇಸಿಗೆಯ ದುರ್ಲಾಭ ಪಡೆದು ಹೆಚ್ಚಿನ ದರ ವಿಧಿಸಿ ಜನರನ್ನು ಸುಲಿಗೆ ಮಾಡುವ ಖಾಸಗಿ ನೀರು ಸರಬರಾಜು ಟ್ಯಾಂಕರ್ಗಳಿಗೆ ಕಡಿವಾಣ ಹಾಕಲಾಗುವುದು ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸಚಿವ ಎಸ್. ಸುರೇಶ್ಕುಮಾರ್ ಭಾನುವಾರ ಇಲ್ಲಿ ಎಚ್ಚರಿಸಿದರು.<br /> <br /> ರಾಜಾಜಿನಗರ ವಿಧಾನಸಭಾ ಕ್ಷೇತ್ರದ 2ನೇ ಬ್ಲಾಕ್ನಲ್ಲಿ ನಿರ್ಮಿಸಲಿರುವ ವಿವಿಧ ಸೌಲಭ್ಯವುಳ್ಳ (ಡಯಾಲಿಸಿಸ್ ಕೇಂದ್ರ ಮತ್ತು ಡಯಾಬಿಟಿಕ್ ಪ್ರಯೋಗಾಲಯ) ಅತ್ಯಾಧುನಿಕ ನೂತನ ಹೈಟೆಕ್ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಂಬಂಧ ಜಲಮಂಡಳಿ ಅಧ್ಯಕ್ಷರು ಹಾಗೂ ಬಿಬಿಎಂಪಿ ಆಯುಕ್ತರೊಂದಿಗೆ ಸಭೆ ನಡೆಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.<br /> `ನಗರದ ನಾಗರಿಕರಿಗೆ ಜಲಮಂಡಳಿಯು ಶುದ್ಧ ಕುಡಿಯುವ ನೀರು ಪೂರೈಸುತ್ತಿದೆ. ನೀರಿನ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ.~<br /> <br /> `ನೀರು ಕಲುಷಿತಗೊಳ್ಳದಂತೆ ಗಮನಹರಿಸಲು ವಾಲ್ವ್ಮೆನ್ಗಳಿಗೆ ಸೂಚಿಸಲಾಗಿದೆ. ಒಂದು ವೇಳೆ ಒಡೆದ ಪೈಪು ಅಥವಾ ಮೋರಿಯಲ್ಲಿನ ಪೈಪುಗಳಿಂದ ನೀರು ಕಲುಷಿತಗೊಳ್ಳುತ್ತಿರುವ ದೂರುಗಳ ಬಗ್ಗೆ ಪರಿವೀಕ್ಷಣೆ ನಡೆಸಿ ತಕ್ಷಣ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ~ ಎಂದು ಅವರು ಹೇಳಿದರು.<br /> <br /> `ಕಾವೇರಿ 4ನೇ ಹಂತದ 2ನೇ ಘಟ್ಟ ಬರುವ ಜೂನ್ ವೇಳೆಗೆ ಪೂರ್ಣಗೊಳ್ಳಲಿದೆ. ಆನಂತರ ಪಾಲಿಕೆ ವ್ಯಾಪ್ತಿಗೆ ಹೊಸದಾಗಿ ಸೇರ್ಪಡೆಯಾದಂತಹ ವಾರ್ಡ್ಗಳಿಗೆ ಪ್ರಾಯೋಗಿಕವಾಗಿ ಕಾವೇರಿ ನೀರು ಸರಬರಾಜು ಮಾಡಲಾಗುವುದು~ ಎಂದರು.<br /> <br /> ಇದಕ್ಕೂ ಮುನ್ನ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ 1.2 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಿರುವ ಅತ್ಯಾಧುನಿಕ ಹೈಟೆಕ್ ಆಸ್ಪತ್ರೆ ನಿರ್ಮಾಣಕ್ಕೆ ಸಚಿವರು ಶಂಕುಸ್ಥಾಪನೆ ನೆರವೇರಿಸಿದರು.ಜನರಿಗೆ ಕೈಗೆಟುಕುವ ದರದಲ್ಲಿ ಡಯಾಲಿಸಿಸ್ ಸೇವೆ ಒದಗಿಸಲಾಗುತ್ತದೆ. ಮುಖ್ಯವಾಗಿ ಸ್ಥಳೀಯರು ಹಾಗೂ ದುರ್ಬಲ ವರ್ಗದವರ ಅನುಕೂಲಕ್ಕಾಗಿ ಈ ಆಸ್ಪತ್ರೆ ತೆರೆಯಲಾಗುತ್ತಿದೆ ಎಂದು ಅವರು ತಿಳಿಸಿದರು.ಬಿಬಿಎಂಪಿ ಸದಸ್ಯರಾದ ಕೃಷ್ಣಪ್ಪ, ಪದ್ಮರಾಜ್, ರವೀಂದ್ರ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>