<p>ನವದೆಹಲಿ (ಪಿಟಿಐ): ಸಾರ್ವಜನಿಕ ಹಾಗೂ ಖಾಸಗಿ ಬದುಕುಗಳ ನಡುವಿನ ವ್ಯತ್ಯಾಸವನ್ನು ಪ್ರತಿಯೊಬ್ಬರೂ ಅರಿಯಬೇಕು ಎಂದು ಕೇಂದ್ರ ಕಾನೂನು ಸಚಿವ ಸಲ್ಮಾನ್ ಖುರ್ಷಿದ್ ಹೇಳಿದ್ದಾರೆ.<br /> <br /> ಸಿ.ಡಿ ವಿವಾದದ ಹಿನ್ನೆಲೆಯಲ್ಲಿ ಸಿಲುಕಿರುವ ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ ಅವರಿಂದ ಪ್ರತಿಪಕ್ಷ ಬಿಜೆಪಿ ವಿವರಣೆ ಬಯಸಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿ ಅವರು ಹೀಗೆ ಹೇಳಿದ್ದಾರೆ.<br /> <br /> ಸಾರ್ವಜನಿಕ ಕಾರ್ಯವೈಖರಿ, ಸಾರ್ವಜನಿಕ ಆಡಳಿತದ ಬಗ್ಗೆ ಪ್ರಶ್ನೆಗಳನ್ನು ಕೇಳಬೇಕು. ಆದರೆ ವ್ಯಕ್ತಿಯ ಖಾಸಗಿ ಬದುಕಿನ ವಿಷಯಕ್ಕೆ ಬಂದಾಗಲೂ ಇದೇ ರೀತಿ ಆಗಬಾರದು. ಮಾಧ್ಯಮದವರನ್ನು ಒಳಗೊಂಡಂತೆ ಪ್ರತಿಯೊಬ್ಬರೂ ಈ ವಿಷಯದಲ್ಲಿ ಎಚ್ಚರಿಕೆ ವಹಿಸಬೇಕು ಎಂದರು.<br /> <br /> ಸಿಂಘ್ವಿ ಅವರ ಸಿ.ಡಿ ವಿವಾದದ ಬಗ್ಗೆ ಬಿಜೆಪಿಯು ಸಂಸತ್ತಿನಲ್ಲಿ ದನಿ ಎತ್ತುವುದು ಸಮರ್ಥನೀಯವಲ್ಲ. ಸಂಸತ್ತಿಗೆ ತನ್ನದೇ ಆದ ಚೌಕಟ್ಟು ಇದ್ದು, ಸಾರ್ವಜನಿಕ ಹಿತಾಸಕ್ತಿಯ ವಿಷಯಗಳನ್ನು ಅಲ್ಲಿ ಪ್ರಸ್ತಾಪಿಸಬೇಕು ಎಂದು ಖುರ್ಷಿದ್ ಅಭಿಪ್ರಾಯಪಟ್ಟರು.<br /> <br /> ಆಗ ಅವರಿಗೆ, ಕರ್ನಾಟಕ ವಿಧಾನಸಭೆಯಲ್ಲಿ ಕೆಲವು ಶಾಸಕರು ಮೊಬೈಲ್ನಲ್ಲಿ ಅಶ್ಲೀಲ ದೃಶ್ಯ ವೀಕ್ಷಿಸಿದಾಗ ಕಾಂಗ್ರೆಸ್ ಆ ಬಗ್ಗೆ ದನಿ ಎತ್ತಿದ್ದು ಸರಿಯೇ ಎಂಬ ಪ್ರಶ್ನೆ ಎದುರಾಯಿತು.<br /> <br /> ಇದನ್ನು ಸಮರ್ಥಿಸಿಕೊಂಡ ಖುರ್ಷಿದ್, `ಶಾಸನಸಭೆಯಲ್ಲಿ ಕುಳಿತು ಅಶ್ಲೀಲ ದೃಶ್ಯ ನೋಡುವುದು ಖಾಸಗಿ ಬದುಕಿನ ವ್ಯಾಪ್ತಿಗೆ ಬರುವುದಿಲ್ಲ~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಪಿಟಿಐ): ಸಾರ್ವಜನಿಕ ಹಾಗೂ ಖಾಸಗಿ ಬದುಕುಗಳ ನಡುವಿನ ವ್ಯತ್ಯಾಸವನ್ನು ಪ್ರತಿಯೊಬ್ಬರೂ ಅರಿಯಬೇಕು ಎಂದು ಕೇಂದ್ರ ಕಾನೂನು ಸಚಿವ ಸಲ್ಮಾನ್ ಖುರ್ಷಿದ್ ಹೇಳಿದ್ದಾರೆ.<br /> <br /> ಸಿ.ಡಿ ವಿವಾದದ ಹಿನ್ನೆಲೆಯಲ್ಲಿ ಸಿಲುಕಿರುವ ಕಾಂಗ್ರೆಸ್ ನಾಯಕ ಅಭಿಷೇಕ್ ಮನು ಸಿಂಘ್ವಿ ಅವರಿಂದ ಪ್ರತಿಪಕ್ಷ ಬಿಜೆಪಿ ವಿವರಣೆ ಬಯಸಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿ ಅವರು ಹೀಗೆ ಹೇಳಿದ್ದಾರೆ.<br /> <br /> ಸಾರ್ವಜನಿಕ ಕಾರ್ಯವೈಖರಿ, ಸಾರ್ವಜನಿಕ ಆಡಳಿತದ ಬಗ್ಗೆ ಪ್ರಶ್ನೆಗಳನ್ನು ಕೇಳಬೇಕು. ಆದರೆ ವ್ಯಕ್ತಿಯ ಖಾಸಗಿ ಬದುಕಿನ ವಿಷಯಕ್ಕೆ ಬಂದಾಗಲೂ ಇದೇ ರೀತಿ ಆಗಬಾರದು. ಮಾಧ್ಯಮದವರನ್ನು ಒಳಗೊಂಡಂತೆ ಪ್ರತಿಯೊಬ್ಬರೂ ಈ ವಿಷಯದಲ್ಲಿ ಎಚ್ಚರಿಕೆ ವಹಿಸಬೇಕು ಎಂದರು.<br /> <br /> ಸಿಂಘ್ವಿ ಅವರ ಸಿ.ಡಿ ವಿವಾದದ ಬಗ್ಗೆ ಬಿಜೆಪಿಯು ಸಂಸತ್ತಿನಲ್ಲಿ ದನಿ ಎತ್ತುವುದು ಸಮರ್ಥನೀಯವಲ್ಲ. ಸಂಸತ್ತಿಗೆ ತನ್ನದೇ ಆದ ಚೌಕಟ್ಟು ಇದ್ದು, ಸಾರ್ವಜನಿಕ ಹಿತಾಸಕ್ತಿಯ ವಿಷಯಗಳನ್ನು ಅಲ್ಲಿ ಪ್ರಸ್ತಾಪಿಸಬೇಕು ಎಂದು ಖುರ್ಷಿದ್ ಅಭಿಪ್ರಾಯಪಟ್ಟರು.<br /> <br /> ಆಗ ಅವರಿಗೆ, ಕರ್ನಾಟಕ ವಿಧಾನಸಭೆಯಲ್ಲಿ ಕೆಲವು ಶಾಸಕರು ಮೊಬೈಲ್ನಲ್ಲಿ ಅಶ್ಲೀಲ ದೃಶ್ಯ ವೀಕ್ಷಿಸಿದಾಗ ಕಾಂಗ್ರೆಸ್ ಆ ಬಗ್ಗೆ ದನಿ ಎತ್ತಿದ್ದು ಸರಿಯೇ ಎಂಬ ಪ್ರಶ್ನೆ ಎದುರಾಯಿತು.<br /> <br /> ಇದನ್ನು ಸಮರ್ಥಿಸಿಕೊಂಡ ಖುರ್ಷಿದ್, `ಶಾಸನಸಭೆಯಲ್ಲಿ ಕುಳಿತು ಅಶ್ಲೀಲ ದೃಶ್ಯ ನೋಡುವುದು ಖಾಸಗಿ ಬದುಕಿನ ವ್ಯಾಪ್ತಿಗೆ ಬರುವುದಿಲ್ಲ~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>