<p>ಚನ್ನರಾಯಪಟ್ಟಣ: `ಹಲವು ವರ್ಷಗಳಿಂದ ಉತ್ತಮ ಸೇವೆ ನೀಡುತ್ತಿರುವ ಖಾಸಗಿ ಶಾಲೆಗಳಿಗೆ ಸರ್ಕಾರ ಕೂಡಲೇ ಅನುದಾನ ನೀಡಬೇಕು~ ಎಂದು ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಆಗ್ರಹಿಸಿದರು.<br /> <br /> ಸಾರ್ವಜನಿಕ ಶಿಕ್ಷಣ ಇಲಾಖೆ, ತಾ.ಪಂ. ಮತ್ತು ಜಿ.ಪಂ. ಸಂಯುಕ್ತಾಶ್ರಯದಲ್ಲಿ ಪಟ್ಟಣದಲ್ಲಿ ಬುಧವಾರ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, `ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಮುಖ್ಯವಾದುದು. ಆದರೆ ಅನೇಕ ವರ್ಷಗಳಿಂದ ಖಾಸಗಿ ಶಾಲೆಗಳಿಗೆ ಸರ್ಕಾರ ಅನುದಾನ ನೀಡುತ್ತಿಲ್ಲ. ಮೂರು ವರ್ಷ ಹಿಂದೆ ಅನುದಾನ ನೀಡುವ ಬಗ್ಗೆ ನಿರ್ಧಾರ ಕೈಗೊಂಡಿದ್ದರೂ ಅದು ಅನುಷ್ಠಾನಗೊಂಡಿಲ್ಲ~ ಎಂದರು.<br /> <br /> ಶಿಕ್ಷಕರನ್ನು ಇತರೆ ಯೋಜನೆಗಳ ಕಾರ್ಯಗಳಿಗೆ ನಿಯೋಜಿಸಲಾಗುತ್ತಿದೆ. ಬಿಸಿಯೂಟದ ಹೊಣೆ ವಹಿಸಲಾಗಿದೆ. ಗ್ರಾಮೀಣ ಮಟ್ಟದಲ್ಲಿ ಮತ್ತಷ್ಟು ಸರ್ಕಾರಿ ಶಾಲಾ- ಕಾಲೇಜುಗಳನ್ನು ತೆರೆದು ಅಗತ್ಯ ಶಿಕ್ಷಕರನ್ನು ನೇಮಿಸಬೇಕೆಂದು ಅವರು ಒತ್ತಾಯಿಸಿದರು.<br /> <br /> ಜಿ.ಪಂ. ಅಧ್ಯಕ್ಷ ಬಿ.ಡಿ.ಚಂದ್ರೇಗೌಡ ಕಾರ್ಯಕ್ರಮ ಉದ್ಘಾಟಿಸಿದರು. ಶಾಸಕ ಸಿ.ಎಸ್. ಪುಟ್ಟೇಗೌಡ, ಎಚ್ಡಿಸಿಸಿ ಬ್ಯಾಂಕ್ ಸಿ.ಎನ್. ಬಾಲಕೃಷ್ಣ, ತಾ.ಪಂ. ಅಧ್ಯಕ್ಷೆ ವಿಜಯಶಿವಲಿಂಗಪ್ಪ, ಪುರಸಭಾಧ್ಯಕ್ಷೆ ಅನುಸೂಯ ಪ್ರಕಾಶ್, ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಎಚ್.ಎನ್. ಲೋಕೇಶ್ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚನ್ನರಾಯಪಟ್ಟಣ: `ಹಲವು ವರ್ಷಗಳಿಂದ ಉತ್ತಮ ಸೇವೆ ನೀಡುತ್ತಿರುವ ಖಾಸಗಿ ಶಾಲೆಗಳಿಗೆ ಸರ್ಕಾರ ಕೂಡಲೇ ಅನುದಾನ ನೀಡಬೇಕು~ ಎಂದು ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಆಗ್ರಹಿಸಿದರು.<br /> <br /> ಸಾರ್ವಜನಿಕ ಶಿಕ್ಷಣ ಇಲಾಖೆ, ತಾ.ಪಂ. ಮತ್ತು ಜಿ.ಪಂ. ಸಂಯುಕ್ತಾಶ್ರಯದಲ್ಲಿ ಪಟ್ಟಣದಲ್ಲಿ ಬುಧವಾರ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, `ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಶಿಕ್ಷಕರ ಪಾತ್ರ ಮುಖ್ಯವಾದುದು. ಆದರೆ ಅನೇಕ ವರ್ಷಗಳಿಂದ ಖಾಸಗಿ ಶಾಲೆಗಳಿಗೆ ಸರ್ಕಾರ ಅನುದಾನ ನೀಡುತ್ತಿಲ್ಲ. ಮೂರು ವರ್ಷ ಹಿಂದೆ ಅನುದಾನ ನೀಡುವ ಬಗ್ಗೆ ನಿರ್ಧಾರ ಕೈಗೊಂಡಿದ್ದರೂ ಅದು ಅನುಷ್ಠಾನಗೊಂಡಿಲ್ಲ~ ಎಂದರು.<br /> <br /> ಶಿಕ್ಷಕರನ್ನು ಇತರೆ ಯೋಜನೆಗಳ ಕಾರ್ಯಗಳಿಗೆ ನಿಯೋಜಿಸಲಾಗುತ್ತಿದೆ. ಬಿಸಿಯೂಟದ ಹೊಣೆ ವಹಿಸಲಾಗಿದೆ. ಗ್ರಾಮೀಣ ಮಟ್ಟದಲ್ಲಿ ಮತ್ತಷ್ಟು ಸರ್ಕಾರಿ ಶಾಲಾ- ಕಾಲೇಜುಗಳನ್ನು ತೆರೆದು ಅಗತ್ಯ ಶಿಕ್ಷಕರನ್ನು ನೇಮಿಸಬೇಕೆಂದು ಅವರು ಒತ್ತಾಯಿಸಿದರು.<br /> <br /> ಜಿ.ಪಂ. ಅಧ್ಯಕ್ಷ ಬಿ.ಡಿ.ಚಂದ್ರೇಗೌಡ ಕಾರ್ಯಕ್ರಮ ಉದ್ಘಾಟಿಸಿದರು. ಶಾಸಕ ಸಿ.ಎಸ್. ಪುಟ್ಟೇಗೌಡ, ಎಚ್ಡಿಸಿಸಿ ಬ್ಯಾಂಕ್ ಸಿ.ಎನ್. ಬಾಲಕೃಷ್ಣ, ತಾ.ಪಂ. ಅಧ್ಯಕ್ಷೆ ವಿಜಯಶಿವಲಿಂಗಪ್ಪ, ಪುರಸಭಾಧ್ಯಕ್ಷೆ ಅನುಸೂಯ ಪ್ರಕಾಶ್, ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಎಚ್.ಎನ್. ಲೋಕೇಶ್ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>