<p><strong>ಬೆಂಗಳೂರು: </strong>`ಸರ್ಕಾರಿ ಶಾಲೆಗಳಲ್ಲಿ ಕಲಿಯುತ್ತಿರುವ ಬಗ್ಗೆ ವಿದ್ಯಾರ್ಥಿಗಳು ಕೀಳರಿಮೆ ಬೆಳೆಸಿಕೊಳ್ಳಬಾರದು. ಸರ್ಕಾರದ ಎಲ್ಲಾ ಸೌಕರ್ಯಗಳನ್ನೂ ಬಳಸಿ ಉತ್ತಮ ಕಲಿಕೆಯ ಕಡೆಗೆ ಹೆಚ್ಚು ಗಮನ ನೀಡಬೇಕು~ ಎಂದು ಮಹಾಲಕ್ಷ್ಮಿಪುರಂ ವಿಧಾನ ಸಭಾ ಕ್ಷೇತ್ರದ ಶಾಸಕ ನೆ.ಲ.ನರೇಂದ್ರಬಾಬು ಕರೆ ನೀಡಿದರು.<br /> <br /> ನಗರದಲ್ಲಿ ಬುಧವಾರ ಕೃಷ್ಣಾನಂದನಗರದ ಸರ್ಕಾರಿ ಪ್ರೌಢಶಾಲೆಯ ನೂತನ ಕಟ್ಟಡ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, `ಖಾಸಗಿ ಶಾಲೆಯ ವ್ಯಾಮೋಹವನ್ನು ಪೋಷಕರು ಬಿಡಬೇಕು~ ಎಂದರು.<br /> <br /> `ಬಡ ಮಕ್ಕಳೇ ಹೆಚ್ಚಾಗಿ ಬರುವ ಕೃಷ್ಣಾನಂದನಗರದ ಶಾಲೆಗೆ ಹೆಚ್ಚಿನ ಮೂಲ ಸೌಕರ್ಯ ಒದಗಿಸಿ ಇಲ್ಲಿ ಪಿಯುಸಿ ಹಾಗೂ ಪದವಿ ತರಗತಿಗಳನ್ನು ಆರಂಭಿಸಲು ಸರ್ಕಾರವನ್ನು ಒತ್ತಾಯಿಸಲಾಗುವುದು~ ಎಂದು ನುಡಿದರು.<br /> <br /> ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಅಧ್ಯಕ್ಷ ಸಿ. ಮರಿಯಪ್ಪ ಮಾತನಾಡಿ, `ಉತ್ತಮ ಫಲಿತಾಂಶಕ್ಕಾಗಿ ಕಲಿಸುವ ಸಂದರ್ಭಗಳಲ್ಲಿ ಶಿಕ್ಷಕರು ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕಾದ ಅಗತ್ಯವಿದೆ~ ಎಂದರು.<br /> <br /> ಕಾರ್ಯಕ್ರಮದಲ್ಲಿ ಬೆಂಗಳೂರು ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಅನ್ನಪೂರ್ಣ ಕೃಷ್ಣಮೂರ್ತಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಬೆಂಗಳೂರು ಉತ್ತರ ಜಿಲ್ಲೆಯ ಉಪನಿರ್ದೇಶಕ ಟಿ.ಸಿ.ಚಂದ್ರಯ್ಯ, ಬಿಬಿಎಂಪಿ ಸದಸ್ಯೆ ಲಕ್ಷ್ಮೀ ಚಿಕ್ಕೇಗೌಡ ಪಾಲ್ಗೊಂಡಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>`ಸರ್ಕಾರಿ ಶಾಲೆಗಳಲ್ಲಿ ಕಲಿಯುತ್ತಿರುವ ಬಗ್ಗೆ ವಿದ್ಯಾರ್ಥಿಗಳು ಕೀಳರಿಮೆ ಬೆಳೆಸಿಕೊಳ್ಳಬಾರದು. ಸರ್ಕಾರದ ಎಲ್ಲಾ ಸೌಕರ್ಯಗಳನ್ನೂ ಬಳಸಿ ಉತ್ತಮ ಕಲಿಕೆಯ ಕಡೆಗೆ ಹೆಚ್ಚು ಗಮನ ನೀಡಬೇಕು~ ಎಂದು ಮಹಾಲಕ್ಷ್ಮಿಪುರಂ ವಿಧಾನ ಸಭಾ ಕ್ಷೇತ್ರದ ಶಾಸಕ ನೆ.ಲ.ನರೇಂದ್ರಬಾಬು ಕರೆ ನೀಡಿದರು.<br /> <br /> ನಗರದಲ್ಲಿ ಬುಧವಾರ ಕೃಷ್ಣಾನಂದನಗರದ ಸರ್ಕಾರಿ ಪ್ರೌಢಶಾಲೆಯ ನೂತನ ಕಟ್ಟಡ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, `ಖಾಸಗಿ ಶಾಲೆಯ ವ್ಯಾಮೋಹವನ್ನು ಪೋಷಕರು ಬಿಡಬೇಕು~ ಎಂದರು.<br /> <br /> `ಬಡ ಮಕ್ಕಳೇ ಹೆಚ್ಚಾಗಿ ಬರುವ ಕೃಷ್ಣಾನಂದನಗರದ ಶಾಲೆಗೆ ಹೆಚ್ಚಿನ ಮೂಲ ಸೌಕರ್ಯ ಒದಗಿಸಿ ಇಲ್ಲಿ ಪಿಯುಸಿ ಹಾಗೂ ಪದವಿ ತರಗತಿಗಳನ್ನು ಆರಂಭಿಸಲು ಸರ್ಕಾರವನ್ನು ಒತ್ತಾಯಿಸಲಾಗುವುದು~ ಎಂದು ನುಡಿದರು.<br /> <br /> ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಅಧ್ಯಕ್ಷ ಸಿ. ಮರಿಯಪ್ಪ ಮಾತನಾಡಿ, `ಉತ್ತಮ ಫಲಿತಾಂಶಕ್ಕಾಗಿ ಕಲಿಸುವ ಸಂದರ್ಭಗಳಲ್ಲಿ ಶಿಕ್ಷಕರು ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕಾದ ಅಗತ್ಯವಿದೆ~ ಎಂದರು.<br /> <br /> ಕಾರ್ಯಕ್ರಮದಲ್ಲಿ ಬೆಂಗಳೂರು ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಅನ್ನಪೂರ್ಣ ಕೃಷ್ಣಮೂರ್ತಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಬೆಂಗಳೂರು ಉತ್ತರ ಜಿಲ್ಲೆಯ ಉಪನಿರ್ದೇಶಕ ಟಿ.ಸಿ.ಚಂದ್ರಯ್ಯ, ಬಿಬಿಎಂಪಿ ಸದಸ್ಯೆ ಲಕ್ಷ್ಮೀ ಚಿಕ್ಕೇಗೌಡ ಪಾಲ್ಗೊಂಡಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>