<p><strong>ಕುಶಾಲನಗರ:</strong> ಸಮೀಪದ ಮುಳ್ಳುಸೋಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಡಿತರಚೀಟಿ ನೋಂದಣಿ ಕಾರ್ಯವನ್ನು ಖಾಸಗಿ ಸಂಸ್ಥೆಗೆ ವಹಿಸುವ ಕುರಿತು ಪಂಚಾಯಿತಿ ಸಭಾಂಗಣದಲ್ಲಿ ಅಧ್ಯಕ್ಷ ಶಿವಾನಂದ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ವಿಶೇಷ ಸಭೆ ನಡೆಯಿತು.<br /> <br /> ಪಂಚಾಯಿತಿ ವ್ಯಾಪ್ತಿಯಲ್ಲಿ ಸಾವಿರಕ್ಕೂ ಹೆಚ್ಚು ಪಡಿತರಚೀಟಿ ಪಡೆಯುವ ಅರ್ಹ ಅರ್ಜಿದಾರರಿದ್ದು, ಇದುವರೆಗೆ 200 ಕುಟುಂಬಗಳಿಗೆ ಮಾತ್ರವೇ ಭಾವಚಿತ್ರ ತೆಗೆಯಲಾಗಿದೆ. ಇದರಿಂದ ಪಡಿತರ ಚೀಟಿಗಾಗಿ ನೋಂದಣಿ ಕಾರ್ಯ ವಿಳಂಬ ಗೊಂಡಿರುವ ಕಾರಣದಿಂದ ಖಾಸಗಿ ಸಂಸ್ಥೆಗೆ ವಹಿಸಲು ಸಭೆಯಲ್ಲಿ ಚರ್ಚಿಸಲಾಯಿತು.<br /> <br /> ಭಾವಚಿತ್ರ ತೆಗೆಯಲು ಒಂದು ಕುಟುಂಬಕ್ಕೆ 185 ರೂಪಾಯಿ ವೆಚ್ಚವಾಗುತ್ತಿದ್ದು, ಫಲಾನುಭವಿಗಳು 85 ರೂಪಾಯಿ ಭರಿಸುವಂತೆಯೂ ಉಳಿದ 100 ರೂಪಾಯಿಗಳನ್ನು ಕಾರ್ಯನಿರ್ವಾಹಕ ಅಧಿಕಾರಿಗಳ ಒಪ್ಪಿಗೆ ಪಡೆದು ಪಂಚಾಯಿತಿ ಅನುದಾನದಲ್ಲಿ ನೀಡುವುದಾಗಿ ತೀರ್ಮಾನಿಸಲಾಯಿತು.<br /> <br /> ಸಭೆಯಲ್ಲಿ ಪಂಚಾಯಿತಿ ಉಪಾಧ್ಯಕ್ಷೆ ಕಮಲಾ, ಪಿಡಿಒ ಮಂಜೂರ್ ಖಾನ್, ಸದಸ್ಯರಾದ ಎಂ.ಎಸ್. ರಾಜೇಶ್, ಪ್ರಸನ್ನ, ಚೆಲುವರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಶಾಲನಗರ:</strong> ಸಮೀಪದ ಮುಳ್ಳುಸೋಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಡಿತರಚೀಟಿ ನೋಂದಣಿ ಕಾರ್ಯವನ್ನು ಖಾಸಗಿ ಸಂಸ್ಥೆಗೆ ವಹಿಸುವ ಕುರಿತು ಪಂಚಾಯಿತಿ ಸಭಾಂಗಣದಲ್ಲಿ ಅಧ್ಯಕ್ಷ ಶಿವಾನಂದ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ವಿಶೇಷ ಸಭೆ ನಡೆಯಿತು.<br /> <br /> ಪಂಚಾಯಿತಿ ವ್ಯಾಪ್ತಿಯಲ್ಲಿ ಸಾವಿರಕ್ಕೂ ಹೆಚ್ಚು ಪಡಿತರಚೀಟಿ ಪಡೆಯುವ ಅರ್ಹ ಅರ್ಜಿದಾರರಿದ್ದು, ಇದುವರೆಗೆ 200 ಕುಟುಂಬಗಳಿಗೆ ಮಾತ್ರವೇ ಭಾವಚಿತ್ರ ತೆಗೆಯಲಾಗಿದೆ. ಇದರಿಂದ ಪಡಿತರ ಚೀಟಿಗಾಗಿ ನೋಂದಣಿ ಕಾರ್ಯ ವಿಳಂಬ ಗೊಂಡಿರುವ ಕಾರಣದಿಂದ ಖಾಸಗಿ ಸಂಸ್ಥೆಗೆ ವಹಿಸಲು ಸಭೆಯಲ್ಲಿ ಚರ್ಚಿಸಲಾಯಿತು.<br /> <br /> ಭಾವಚಿತ್ರ ತೆಗೆಯಲು ಒಂದು ಕುಟುಂಬಕ್ಕೆ 185 ರೂಪಾಯಿ ವೆಚ್ಚವಾಗುತ್ತಿದ್ದು, ಫಲಾನುಭವಿಗಳು 85 ರೂಪಾಯಿ ಭರಿಸುವಂತೆಯೂ ಉಳಿದ 100 ರೂಪಾಯಿಗಳನ್ನು ಕಾರ್ಯನಿರ್ವಾಹಕ ಅಧಿಕಾರಿಗಳ ಒಪ್ಪಿಗೆ ಪಡೆದು ಪಂಚಾಯಿತಿ ಅನುದಾನದಲ್ಲಿ ನೀಡುವುದಾಗಿ ತೀರ್ಮಾನಿಸಲಾಯಿತು.<br /> <br /> ಸಭೆಯಲ್ಲಿ ಪಂಚಾಯಿತಿ ಉಪಾಧ್ಯಕ್ಷೆ ಕಮಲಾ, ಪಿಡಿಒ ಮಂಜೂರ್ ಖಾನ್, ಸದಸ್ಯರಾದ ಎಂ.ಎಸ್. ರಾಜೇಶ್, ಪ್ರಸನ್ನ, ಚೆಲುವರಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>