<p><strong>ಬೆಂಗಳೂರು: </strong>`ಕೇಂದ್ರ ರಕ್ಷಣಾ ಸಚಿವಾಲಯವು ಸಾರ್ವಜನಿಕ ಸಂಸ್ಥೆಗಳನ್ನು ಖಾಸಗೀಕರಣಗೊಳಿಸಲು ಮುಂದಾಗುತ್ತಿರುವ ಕ್ರಮವನ್ನು ಕೂಡಲೇ ಕೈಬಿಡಬೇಕು~ ಎಂದು ಬಿಇಎಲ್, ಬಿಎಎಂಎಲ್, ಐಟಿಐ ಸಂಸ್ಥೆಗಳ ಜಂಟಿ ಕ್ರಿಯಾ ಸಮಿತಿ (ಜೆಎಎಫ್) ಸಂಚಾಲಕ ಎಸ್. ಪ್ರಸನ್ನ ಕುಮಾರ್ ಇಲ್ಲಿ ಆಗ್ರಹಿಸಿದರು.<br /> <br /> ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ರಕ್ಷಣಾ ಇಲಾಖೆಗೆ ಸೇರಿದ ಸಾರ್ವಜನಿಕ ಸಂಸ್ಥೆಯಾದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ನ ಶೇ 10ರಷ್ಟು ಷೇರುಗಳನ್ನು ಖಾಸಗಿ ಕಂಪೆನಿಗಳಿಗೆ ನೀಡಲು ರಕ್ಷಣಾ ಸಚಿವಾಲಯ ಮುಂದಾಗಿದೆ. ಇದರಿಂದ ಸಂಸ್ಥೆಯನ್ನು ನಿಧಾನವಾಗಿ ಖಾಸಗೀಕರಣ ಮಾಡಲು ಕೇಂದ್ರ ಸರ್ಕಾರ ಯತ್ನಿಸುತ್ತಿದೆ~ ಎಂದು ದೂರಿದರು.<br /> <br /> ಇದೇ ವೇಳೆ ಮಾತನಾಡಿದ ಭಾರತೀಯ ದೂರವಾಣಿ ಕೈಗಾರಿಕೆ (ಇಂಡಿಯನ್ ಟಿಲಿಫೋನ್ ಇಂಡಸ್ಟ್ರಿ) ನೌಕರರ ಸಂಘದ ಅಧ್ಯಕ್ಷ ಆರ್.ಮಹದೇವ್, `ಭಾರತೀಯ ದೂರವಾಣಿ ಕೈಗಾರಿಕಾ ಸಂಸ್ಥೆಯು ಸದ್ಯದ ಪರಿಸ್ಥಿತಿಯಲ್ಲಿ ನಷ್ಟದಲ್ಲಿದೆ. ಕೈಗಾರಿಕೆ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಸುಮಾರು 6,000 ಕೋಟಿ ಯೋಜನೆ ಕೇಂದ್ರದ ಮುಂದಿದೆ. ಯೋಜನೆ ಜಾರಿ ಮಾಡಲು ಸರ್ಕಾರ ವಿಳಂಬ ಮಾಡುತ್ತಿದೆ~ ಎಂದರು.<br /> <br /> ಪ್ರತಿಭಟನೆ: ಕೇಂದ್ರ ಸರ್ಕಾರ ಈ ಕ್ರಮವನ್ನು ಹಿಂತೆಗೆದುಕೊಳ್ಳದಿದ್ದರೆ ಜಂಟಿ ಕ್ರಿಯಾ ಸಮಿತಿಯು ಇದೇ 26 ರಂದು ನಗರದ ಎಂ.ಜಿ.ರಸ್ತೆಯಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ. <br /> <br /> ಅಲ್ಲದೆ, ರಕ್ಷಣಾ ಇಲಾಖೆಗೆ ಸಂಬಂಧಿಸಿದ ಸಾರ್ವಜನಿಕ ಸಂಸ್ಥೆಗಳನ್ನು ಖಾಸಗೀಕರಣ ಮಾಡುವುದನ್ನು ವಿರೋಧಿಸಿ ದೇಶಾದ್ಯಂತ ಉಗ್ರ ಹೋರಾಟ ನಡೆಯಲಿದೆ ಎಂದು ಎಚ್ಚರಿಸಿದರು.</p>.<p>ಎಚ್ಎಎಲ್ ನೌಕರರ ಸಂಘದ ಅಧ್ಯಕ್ಷ ಮನೋಹರ್, ಬಿಇಎಲ್ ಕಾರ್ಮಿಕ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಸಿ.ವಿ.ಕೃಷ್ಣಪ್ಪ ಮತ್ತಿತರು ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>`ಕೇಂದ್ರ ರಕ್ಷಣಾ ಸಚಿವಾಲಯವು ಸಾರ್ವಜನಿಕ ಸಂಸ್ಥೆಗಳನ್ನು ಖಾಸಗೀಕರಣಗೊಳಿಸಲು ಮುಂದಾಗುತ್ತಿರುವ ಕ್ರಮವನ್ನು ಕೂಡಲೇ ಕೈಬಿಡಬೇಕು~ ಎಂದು ಬಿಇಎಲ್, ಬಿಎಎಂಎಲ್, ಐಟಿಐ ಸಂಸ್ಥೆಗಳ ಜಂಟಿ ಕ್ರಿಯಾ ಸಮಿತಿ (ಜೆಎಎಫ್) ಸಂಚಾಲಕ ಎಸ್. ಪ್ರಸನ್ನ ಕುಮಾರ್ ಇಲ್ಲಿ ಆಗ್ರಹಿಸಿದರು.<br /> <br /> ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ರಕ್ಷಣಾ ಇಲಾಖೆಗೆ ಸೇರಿದ ಸಾರ್ವಜನಿಕ ಸಂಸ್ಥೆಯಾದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ನ ಶೇ 10ರಷ್ಟು ಷೇರುಗಳನ್ನು ಖಾಸಗಿ ಕಂಪೆನಿಗಳಿಗೆ ನೀಡಲು ರಕ್ಷಣಾ ಸಚಿವಾಲಯ ಮುಂದಾಗಿದೆ. ಇದರಿಂದ ಸಂಸ್ಥೆಯನ್ನು ನಿಧಾನವಾಗಿ ಖಾಸಗೀಕರಣ ಮಾಡಲು ಕೇಂದ್ರ ಸರ್ಕಾರ ಯತ್ನಿಸುತ್ತಿದೆ~ ಎಂದು ದೂರಿದರು.<br /> <br /> ಇದೇ ವೇಳೆ ಮಾತನಾಡಿದ ಭಾರತೀಯ ದೂರವಾಣಿ ಕೈಗಾರಿಕೆ (ಇಂಡಿಯನ್ ಟಿಲಿಫೋನ್ ಇಂಡಸ್ಟ್ರಿ) ನೌಕರರ ಸಂಘದ ಅಧ್ಯಕ್ಷ ಆರ್.ಮಹದೇವ್, `ಭಾರತೀಯ ದೂರವಾಣಿ ಕೈಗಾರಿಕಾ ಸಂಸ್ಥೆಯು ಸದ್ಯದ ಪರಿಸ್ಥಿತಿಯಲ್ಲಿ ನಷ್ಟದಲ್ಲಿದೆ. ಕೈಗಾರಿಕೆ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಸುಮಾರು 6,000 ಕೋಟಿ ಯೋಜನೆ ಕೇಂದ್ರದ ಮುಂದಿದೆ. ಯೋಜನೆ ಜಾರಿ ಮಾಡಲು ಸರ್ಕಾರ ವಿಳಂಬ ಮಾಡುತ್ತಿದೆ~ ಎಂದರು.<br /> <br /> ಪ್ರತಿಭಟನೆ: ಕೇಂದ್ರ ಸರ್ಕಾರ ಈ ಕ್ರಮವನ್ನು ಹಿಂತೆಗೆದುಕೊಳ್ಳದಿದ್ದರೆ ಜಂಟಿ ಕ್ರಿಯಾ ಸಮಿತಿಯು ಇದೇ 26 ರಂದು ನಗರದ ಎಂ.ಜಿ.ರಸ್ತೆಯಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ. <br /> <br /> ಅಲ್ಲದೆ, ರಕ್ಷಣಾ ಇಲಾಖೆಗೆ ಸಂಬಂಧಿಸಿದ ಸಾರ್ವಜನಿಕ ಸಂಸ್ಥೆಗಳನ್ನು ಖಾಸಗೀಕರಣ ಮಾಡುವುದನ್ನು ವಿರೋಧಿಸಿ ದೇಶಾದ್ಯಂತ ಉಗ್ರ ಹೋರಾಟ ನಡೆಯಲಿದೆ ಎಂದು ಎಚ್ಚರಿಸಿದರು.</p>.<p>ಎಚ್ಎಎಲ್ ನೌಕರರ ಸಂಘದ ಅಧ್ಯಕ್ಷ ಮನೋಹರ್, ಬಿಇಎಲ್ ಕಾರ್ಮಿಕ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಸಿ.ವಿ.ಕೃಷ್ಣಪ್ಪ ಮತ್ತಿತರು ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>