<p><strong>ನವದೆಹಲಿ:</strong> ~ಆದಾಯ ಮೀರಿ ಆಸ್ತಿ ಹೊಂದಿರುವ ಆರೋಪದ ವಿಚಾರಣೆಗೆ ಬೆಂಗಳೂರು ಕೋರ್ಟ್ಗೆ ಗುರುವಾರ ಖುದ್ದು ಹಾಜರಾಗುವಂತೆ ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಅವರಿಗೆ ಸುಪ್ರೀಂ ಕೋರ್ಟ್ ಬುಧವಾರ ಸ್ಪಷ್ಟವಾಗಿ ಸೂಚಿಸಿದೆ.<br /> <br /> ತಮಿಳುನಾಡು ಮುಖ್ಯಮಂತ್ರಿಗೆ ಸೂಕ್ತ ಭದ್ರತೆ ಒದಗಿಸುವುದಾಗಿ ಕರ್ನಾಟಕ ಭರವಸೆ ನೀಡಿದ ನಂತರ ಕೋರ್ಟ್ ಈ ಸೂಚನೆ ನೀಡಿತು. ನ್ಯಾಯಾಲಯದ ಆದೇಶದಿಂದಾಗಿ ಜಯಲಲಿತಾ ಗುರುವಾರ ಕೋರ್ಟ್ಗೆ ಹಾಜರಾಗುವುದು ಅನಿವಾರ್ಯವಾಗಿದೆ.<br /> <br /> ತಮಗೆ ಸೂಕ್ತ ಭದ್ರತೆ ಒದಗಿಸಲು ಕರ್ನಾಟಕಕ್ಕೆ ಸಾಧ್ಯವಿಲ್ಲದ್ದರಿಂದ ಪ್ರಕರಣದ ವಿಚಾರಣೆಯನ್ನು ಮುಂದೂಡುವಂತೆ ಜಯಲಲಿತಾ ಮಾಡಿದ ಮನವಿಯನ್ನು ನ್ಯಾ. ದಲ್ವೀರ್ ಭಂಡಾರಿ ಹಾಗೂ ನ್ಯಾ. ದೀಪಕ್ ಮಿಶ್ರ ಅವರನ್ನು ಒಳಗೊಂಡ ನ್ಯಾಯಪೀಠ ತಿರಸ್ಕರಿಸಿತು.<br /> <br /> ಜಯಲಲಿತಾ ಅವರ ವಕೀಲ ಮುಕುಲ್ ರೋಹಟಗಿ ತಮ್ಮ ಕಕ್ಷಿಗಾರರ ಸುರಕ್ಷತೆ ಕುರಿತು ನ್ಯಾಯಾಲಯದಲ್ಲಿ ಆತಂಕ ವ್ಯಕ್ತಪಡಿಸಿದರು. ವಿಚಾರಣಾ ಕೋರ್ಟ್ ವಿಮಾನ ನಿಲ್ದಾಣದಿಂದ 65 ಕಿ.ಮೀ. ದೂರದಲ್ಲಿರುವುದರಿಂದ ಜಯಲಲಿತಾ ಅವರ ಸುರಕ್ಷತೆ ಸಮಸ್ಯೆ ಹುಟ್ಟುಹಾಕಿದೆ ಎಂದರು.<br /> <br /> ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಪೀಠ. `ಸಾರ್ವಜನಿಕ ವ್ಯಕ್ತಿಯಾಗಿರುವ ನೀವು ಜನರಿಂದ ಹೇಗೆ ದೂರ ಉಳಿಯುತ್ತೀರಿ?~ ಎಂದು ಕೇಳಿತು. ವಿಚಾರಣೆ ಸ್ಥಳವನ್ನಾದರೂ ವಿಮಾನ ನಿಲ್ದಾಣದ ಸಮೀಪಕ್ಕೆ ಸ್ಥಳಾಂತರಿಸಬೇಕು ಎಂಬ ಜಯಲಲಿತಾ ಮನವಿಗೂ ನ್ಯಾಯಾಲಯ ಕಿವಿಗೊಡಲಿಲ್ಲ. `ನಿಮ್ಮ ಅನುಕೂಲಕ್ಕಾಗಿ ಹೆಲಿಪ್ಯಾಡ್ ನಿರ್ಮಿಸಿದ ಮೇಲೆ ಮತ್ತೇನು ಬೇಕು?~. ವಿಚಾರಣೆ ಮುಗಿಸಿ ವಾಪಸ್ ಹೋಗಿ ಎಂದು ಹೇಳಿತು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ~ಆದಾಯ ಮೀರಿ ಆಸ್ತಿ ಹೊಂದಿರುವ ಆರೋಪದ ವಿಚಾರಣೆಗೆ ಬೆಂಗಳೂರು ಕೋರ್ಟ್ಗೆ ಗುರುವಾರ ಖುದ್ದು ಹಾಜರಾಗುವಂತೆ ತಮಿಳುನಾಡು ಮುಖ್ಯಮಂತ್ರಿ ಜೆ. ಜಯಲಲಿತಾ ಅವರಿಗೆ ಸುಪ್ರೀಂ ಕೋರ್ಟ್ ಬುಧವಾರ ಸ್ಪಷ್ಟವಾಗಿ ಸೂಚಿಸಿದೆ.<br /> <br /> ತಮಿಳುನಾಡು ಮುಖ್ಯಮಂತ್ರಿಗೆ ಸೂಕ್ತ ಭದ್ರತೆ ಒದಗಿಸುವುದಾಗಿ ಕರ್ನಾಟಕ ಭರವಸೆ ನೀಡಿದ ನಂತರ ಕೋರ್ಟ್ ಈ ಸೂಚನೆ ನೀಡಿತು. ನ್ಯಾಯಾಲಯದ ಆದೇಶದಿಂದಾಗಿ ಜಯಲಲಿತಾ ಗುರುವಾರ ಕೋರ್ಟ್ಗೆ ಹಾಜರಾಗುವುದು ಅನಿವಾರ್ಯವಾಗಿದೆ.<br /> <br /> ತಮಗೆ ಸೂಕ್ತ ಭದ್ರತೆ ಒದಗಿಸಲು ಕರ್ನಾಟಕಕ್ಕೆ ಸಾಧ್ಯವಿಲ್ಲದ್ದರಿಂದ ಪ್ರಕರಣದ ವಿಚಾರಣೆಯನ್ನು ಮುಂದೂಡುವಂತೆ ಜಯಲಲಿತಾ ಮಾಡಿದ ಮನವಿಯನ್ನು ನ್ಯಾ. ದಲ್ವೀರ್ ಭಂಡಾರಿ ಹಾಗೂ ನ್ಯಾ. ದೀಪಕ್ ಮಿಶ್ರ ಅವರನ್ನು ಒಳಗೊಂಡ ನ್ಯಾಯಪೀಠ ತಿರಸ್ಕರಿಸಿತು.<br /> <br /> ಜಯಲಲಿತಾ ಅವರ ವಕೀಲ ಮುಕುಲ್ ರೋಹಟಗಿ ತಮ್ಮ ಕಕ್ಷಿಗಾರರ ಸುರಕ್ಷತೆ ಕುರಿತು ನ್ಯಾಯಾಲಯದಲ್ಲಿ ಆತಂಕ ವ್ಯಕ್ತಪಡಿಸಿದರು. ವಿಚಾರಣಾ ಕೋರ್ಟ್ ವಿಮಾನ ನಿಲ್ದಾಣದಿಂದ 65 ಕಿ.ಮೀ. ದೂರದಲ್ಲಿರುವುದರಿಂದ ಜಯಲಲಿತಾ ಅವರ ಸುರಕ್ಷತೆ ಸಮಸ್ಯೆ ಹುಟ್ಟುಹಾಕಿದೆ ಎಂದರು.<br /> <br /> ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಪೀಠ. `ಸಾರ್ವಜನಿಕ ವ್ಯಕ್ತಿಯಾಗಿರುವ ನೀವು ಜನರಿಂದ ಹೇಗೆ ದೂರ ಉಳಿಯುತ್ತೀರಿ?~ ಎಂದು ಕೇಳಿತು. ವಿಚಾರಣೆ ಸ್ಥಳವನ್ನಾದರೂ ವಿಮಾನ ನಿಲ್ದಾಣದ ಸಮೀಪಕ್ಕೆ ಸ್ಥಳಾಂತರಿಸಬೇಕು ಎಂಬ ಜಯಲಲಿತಾ ಮನವಿಗೂ ನ್ಯಾಯಾಲಯ ಕಿವಿಗೊಡಲಿಲ್ಲ. `ನಿಮ್ಮ ಅನುಕೂಲಕ್ಕಾಗಿ ಹೆಲಿಪ್ಯಾಡ್ ನಿರ್ಮಿಸಿದ ಮೇಲೆ ಮತ್ತೇನು ಬೇಕು?~. ವಿಚಾರಣೆ ಮುಗಿಸಿ ವಾಪಸ್ ಹೋಗಿ ಎಂದು ಹೇಳಿತು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>