<p>ಮುಂಬೈ (ಪಿಟಿಐ): ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯು (ಬಿಸಿಸಿಐ) ಪ್ರತಿಷ್ಠಿತ ರಾಜೀವ್ ಗಾಂಧಿ ಖೇಲ್ರತ್ನ ಪ್ರಶಸ್ತಿಗೆ ರಾಹುಲ್ ದ್ರಾವಿಡ್ ಹೆಸರನ್ನು ಶಿಫಾರಸು ಮಾಡಿದೆ. ಅರ್ಜುನ ಪ್ರಶಸ್ತಿಗೆ ಯುವರಾಜ್ ಸಿಂಗ್ ಅವರನ್ನು ನಾಮನಿರ್ದೇಶನ ಮಾಡಿದೆ.</p>.<p><br /> `ಖೇಲ್ರತ್ನ ಪ್ರಶಸ್ತಿಗೆ ದ್ರಾವಿಡ್ ಹಾಗೂ ಅರ್ಜುನ ಪ್ರಶಸ್ತಿಗೆ ಯುವರಾಜ್ ಹೆಸರನ್ನು ಶಿಫಾರಸು ಮಾಡಿದ್ದೇವೆ. ಈ ಕುರಿತು ಕೇಂದ್ರ ಸರ್ಕಾರಕ್ಕೆ ಮುಂದಿನ ವಾರ ಮಾಹಿತಿ ನೀಡುವೆವು~ ಎಂದು ಬಿಸಿಸಿಐ ಮುಖ್ಯ ಆಡಳಿತಾಧಿಕಾರಿ ರತ್ನಾಕರ ಶೆಟ್ಟಿ ತಿಳಿಸಿದರು. ಕ್ರೀಡಾಳುಗಳ ಹೆಸರನ್ನು ಶಿಫಾರಸು ಮಾಡುವ ಅಂತಿಮ ದಿನಾಂಕವನ್ನು ಸರ್ಕಾರ ಇತ್ತೀಚೆಗೆ ಜುಲೈ 20ರ ವರೆಗೆ ವಿಸ್ತರಿಸಿತ್ತು.<br /> <br /> ಟೆಸ್ಟ್ ಹಾಗೂ ಏಕದಿನ ಪಂದ್ಯಗಳಲ್ಲಿ 23,000 ಕ್ಕೂ ಅಧಿಕ ರನ್ ಪೇರಿಸಿರುವ ದ್ರಾವಿಡ್ ಕೆಲ ತಿಂಗಳ ಹಿಂದೆ ನಿವೃತ್ತಿ ಪ್ರಕಟಿಸಿದ್ದರು. 39ರ ಹರೆಯದ ದ್ರಾವಿಡ್ಗೆ ಪ್ರಶಸ್ತಿ ಒಲಿದರೆ, ಈ ಪ್ರತಿಷ್ಠಿತ ಗೌರವ ಪಡೆದ ಮೂರನೇ ಕ್ರಿಕೆಟ್ ಆಟಗಾರ ಎನಿಸಿಕೊಳ್ಳಲಿದ್ದಾರೆ. <br /> <br /> ಸಚಿನ್ ತೆಂಡೂಲ್ಕರ್ (1997-98) ಮತ್ತು ಭಾರತ ತಂಡದ ನಾಯಕ ಮಹೇಂದ್ರ ಸಿಂಗ್ ದೋನಿ (2007-08) ಈಗಾಗಲೇ ಖೇಲ್ರತ್ನ ಪ್ರಶಸ್ತಿ ಪಡೆದಿದ್ದಾರೆ. ಸರ್ಕಾರ 1991-92 ರಲ್ಲಿ ಆರಂಭಿಸಿದ್ದ ಈ ಪ್ರಶಸ್ತಿಯನ್ನು ಇದುವರೆಗೆ 20 ಕ್ರೀಡಾಳುಗಳು ಪಡೆದಿದ್ದಾರೆ. <br /> <br /> ಭಾರತ ತಂಡ ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಯುವರಾಜ್ ಹೆಸರನ್ನು ಅರ್ಜುನ ಪ್ರಶಸ್ತಿಗೆ ಶಿಫಾರಸು ಮಾಡುವ ನಿರ್ಧಾರವನ್ನು ಬಿಸಿಸಿಐ ಕೈಗೊಂಡಿದೆ. ಕ್ಯಾನ್ಸರ್ನಿಂದ ಬಳಲಿದ್ದ `ಯುವಿ~ ಇದೀಗ ಚೇತರಿಸಿಕೊಂಡಿದ್ದು, ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (ಎನ್ಸಿಎ) ನಲ್ಲಿ ಅಭ್ಯಾಸವನ್ನು ಆರಂಭಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮುಂಬೈ (ಪಿಟಿಐ): ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯು (ಬಿಸಿಸಿಐ) ಪ್ರತಿಷ್ಠಿತ ರಾಜೀವ್ ಗಾಂಧಿ ಖೇಲ್ರತ್ನ ಪ್ರಶಸ್ತಿಗೆ ರಾಹುಲ್ ದ್ರಾವಿಡ್ ಹೆಸರನ್ನು ಶಿಫಾರಸು ಮಾಡಿದೆ. ಅರ್ಜುನ ಪ್ರಶಸ್ತಿಗೆ ಯುವರಾಜ್ ಸಿಂಗ್ ಅವರನ್ನು ನಾಮನಿರ್ದೇಶನ ಮಾಡಿದೆ.</p>.<p><br /> `ಖೇಲ್ರತ್ನ ಪ್ರಶಸ್ತಿಗೆ ದ್ರಾವಿಡ್ ಹಾಗೂ ಅರ್ಜುನ ಪ್ರಶಸ್ತಿಗೆ ಯುವರಾಜ್ ಹೆಸರನ್ನು ಶಿಫಾರಸು ಮಾಡಿದ್ದೇವೆ. ಈ ಕುರಿತು ಕೇಂದ್ರ ಸರ್ಕಾರಕ್ಕೆ ಮುಂದಿನ ವಾರ ಮಾಹಿತಿ ನೀಡುವೆವು~ ಎಂದು ಬಿಸಿಸಿಐ ಮುಖ್ಯ ಆಡಳಿತಾಧಿಕಾರಿ ರತ್ನಾಕರ ಶೆಟ್ಟಿ ತಿಳಿಸಿದರು. ಕ್ರೀಡಾಳುಗಳ ಹೆಸರನ್ನು ಶಿಫಾರಸು ಮಾಡುವ ಅಂತಿಮ ದಿನಾಂಕವನ್ನು ಸರ್ಕಾರ ಇತ್ತೀಚೆಗೆ ಜುಲೈ 20ರ ವರೆಗೆ ವಿಸ್ತರಿಸಿತ್ತು.<br /> <br /> ಟೆಸ್ಟ್ ಹಾಗೂ ಏಕದಿನ ಪಂದ್ಯಗಳಲ್ಲಿ 23,000 ಕ್ಕೂ ಅಧಿಕ ರನ್ ಪೇರಿಸಿರುವ ದ್ರಾವಿಡ್ ಕೆಲ ತಿಂಗಳ ಹಿಂದೆ ನಿವೃತ್ತಿ ಪ್ರಕಟಿಸಿದ್ದರು. 39ರ ಹರೆಯದ ದ್ರಾವಿಡ್ಗೆ ಪ್ರಶಸ್ತಿ ಒಲಿದರೆ, ಈ ಪ್ರತಿಷ್ಠಿತ ಗೌರವ ಪಡೆದ ಮೂರನೇ ಕ್ರಿಕೆಟ್ ಆಟಗಾರ ಎನಿಸಿಕೊಳ್ಳಲಿದ್ದಾರೆ. <br /> <br /> ಸಚಿನ್ ತೆಂಡೂಲ್ಕರ್ (1997-98) ಮತ್ತು ಭಾರತ ತಂಡದ ನಾಯಕ ಮಹೇಂದ್ರ ಸಿಂಗ್ ದೋನಿ (2007-08) ಈಗಾಗಲೇ ಖೇಲ್ರತ್ನ ಪ್ರಶಸ್ತಿ ಪಡೆದಿದ್ದಾರೆ. ಸರ್ಕಾರ 1991-92 ರಲ್ಲಿ ಆರಂಭಿಸಿದ್ದ ಈ ಪ್ರಶಸ್ತಿಯನ್ನು ಇದುವರೆಗೆ 20 ಕ್ರೀಡಾಳುಗಳು ಪಡೆದಿದ್ದಾರೆ. <br /> <br /> ಭಾರತ ತಂಡ ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಯುವರಾಜ್ ಹೆಸರನ್ನು ಅರ್ಜುನ ಪ್ರಶಸ್ತಿಗೆ ಶಿಫಾರಸು ಮಾಡುವ ನಿರ್ಧಾರವನ್ನು ಬಿಸಿಸಿಐ ಕೈಗೊಂಡಿದೆ. ಕ್ಯಾನ್ಸರ್ನಿಂದ ಬಳಲಿದ್ದ `ಯುವಿ~ ಇದೀಗ ಚೇತರಿಸಿಕೊಂಡಿದ್ದು, ಬೆಂಗಳೂರಿನಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (ಎನ್ಸಿಎ) ನಲ್ಲಿ ಅಭ್ಯಾಸವನ್ನು ಆರಂಭಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>