<p>ಆಲಮೇಲ: ಇಲ್ಲಿಗೆ ಸಮೀಪದ ಆಹೇರಿ ಗ್ರಾಮದ ಗಂಗಾಧರ ಮಹಾರಾಜರ ಜಾತ್ರೆ ಭಾನುವಾರ ಜರುಗಿತು. <br /> ಜಾತ್ರೆಗೆ ಸುತ್ತಮುತ್ತಲಿನ ಹಳ್ಳಿಗಳಿಂದ ಹಾಗೂ ನೆರೆಯ ಮಹಾರಾಷ್ಟ್ರದಿಂದ ಸಹಸ್ರಾರು ಜನ ಭಕ್ತರು ಆಗಮಿಸಿ ದ್ದರು. ಇಲ್ಲಿಯ ವಿಶೇಷವೆಂದರೆ ಬಂದ ಭಕ್ತರು ಸಜ್ಜೆರೊಟ್ಟಿ, ವಿವಿಧ ತರಕಾರಿ ಮತ್ತು ಕಾಳುಧಾನ್ಯದಿಂದ ಮಾಡಿದ ಪಲ್ಯ ದಾಸೋಹದಲ್ಲಿ ನೀಡಲಾಗುತ್ತದೆ. ಇದನ್ನು ರೊಟ್ಟಿ ಜಾತ್ರೆಯೆಂದೇ ಪ್ರಸಿದ್ಧಿಯಾಗಿದೆ.<br /> <br /> ಪುಟ್ಟಹಳ್ಳಿ ಆಹೇರಿಯಲ್ಲಿ ಎಲ್ಲ ಧರ್ಮಿಯರೂ ಸೇರಿ ಒಂದಾಗಿ ಈ ಜಾತ್ರೆ ಆಚರಿಸುತ್ತಾರೆ. ಪ್ರತಿ ಮನೆಯಿಂದ ರೊಟ್ಟಿಗಳನ್ನು ಸಂಗ್ರಹಿಸಲಾಗುತ್ತದೆ. ಈ ಸಲ 102 ಬೃಹತ್ ಹಂಡೆಗಳಲ್ಲಿ ವಿಶೇಷವಾಗಿ ಬಜ್ಜಿ ಪಲ್ಯ ತಯಾರಿಸಲಾಗಿತ್ತು. ದರ್ಶನಕ್ಕೆ ಬರುವ ಪ್ರತಿಯೊಬ್ಬ ಭಕ್ತರು ಇಲ್ಲಿ ಪ್ರಸಾದ ಸ್ವೀಕರಿಯೇ ಹೋಗುತ್ತಾರೆ.<br /> <br /> ಒಂದು ಲಕ್ಷ್ಯ ರೊಟ್ಟಿ ಮತ್ತು 102 ಹಂಡೆಗಳಲ್ಲಿ ತಯಾರಿಸಿದ ಪಲ್ಯ (ವಿವಿಧ ತರಕಾರಿ ತಪ್ಪಲು, ಉಸುಳಿ, ಬಟಾಣಿ ಮುಂತಾದ ಧಾನ್ಯಗಳಿಂದ) ಊಟವನ್ನು ಜನರು ತಂಡೋಪ ತಂಡವಾಗಿ ಅಲ್ಲಲ್ಲಿ ಕುಳಿತು ಉಣ್ಣುತ್ತಿದ್ದ ದೃಶ್ಯ ಎಲ್ಲಡೆ ಕಂಡು ಬಂತು. <br /> <br /> ಶಾಸಕ ರಮೇಶ ಭೂಸನೂರ ಮೊದಲಾದ ಜನ ಪ್ರತಿನಿಧಿಗಳು ಜಾತ್ರೆಗೆ ಆಗಮಿಸಿ ಸಾಮನ್ಯ ಪಂಥಿಯಲ್ಲಿ ಪ್ರಸಾದ ಸವಿದದ್ದು ವಿಶೇಷವಾಗಿತ್ತು.<br /> <br /> ಬೆಳಿಗ್ಗೆ ಪುರವಂತರು ತಮ್ಮ ಸೇವಾ ಕಾರ್ಯ ನಡೆಸಿಕೊಟ್ಟರು. ಮಧ್ಯಾಹ್ನ ಭಕ್ತರು, ಪುರವಂತರು ಅಗ್ನಿ ಪ್ರವೇಶ ಮಾಡಿದರು. <br /> <br /> ಕೆಂಡದಲ್ಲಿ ಹಾಯುವ ಮೂಲಕ ಭಕ್ತರು ತಮ್ಮ ಹರಕೆಯನ್ನು ತಿರಿಸಿದರು. ನಂತರ ಹೇಳಿಕೆಗಳು ನಡೆದವು. ಚರಗ ಚೆಲ್ಲುವ ಮೂಲಕ ಸಂಕ್ರಾಂತಿ ಸುಗ್ಗಿ ಎದ್ದು ಕಾಣುತ್ತಿತ್ತು.<br /> <br /> ಪ್ರತಿ ವರ್ಷವೂ ಈ ಜಾತ್ರೆಗೆ ಭಕ್ತರ ಸಂಖ್ಯೆ ಹೆಚ್ಚಾಗುತ್ತಾ ಬಂದಿದೆ. ಕಳೆದ ಸಲಕ್ಕಿಂತ ಹೆಚ್ಚು ಭಕ್ತರು ಆಗಮಿಸಿ ಎಲ್ಲಡೆ ಜನ ತುಂಬಿತುಳುಕಿತ್ತು. ಪೊಲೀಸರು ಹೆಚ್ಚಿನ ಸಂಖ್ಯೆಯಲ್ಲಿದ್ದು ಬಂದೂಬಸ್ತ್ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಆಲಮೇಲ: ಇಲ್ಲಿಗೆ ಸಮೀಪದ ಆಹೇರಿ ಗ್ರಾಮದ ಗಂಗಾಧರ ಮಹಾರಾಜರ ಜಾತ್ರೆ ಭಾನುವಾರ ಜರುಗಿತು. <br /> ಜಾತ್ರೆಗೆ ಸುತ್ತಮುತ್ತಲಿನ ಹಳ್ಳಿಗಳಿಂದ ಹಾಗೂ ನೆರೆಯ ಮಹಾರಾಷ್ಟ್ರದಿಂದ ಸಹಸ್ರಾರು ಜನ ಭಕ್ತರು ಆಗಮಿಸಿ ದ್ದರು. ಇಲ್ಲಿಯ ವಿಶೇಷವೆಂದರೆ ಬಂದ ಭಕ್ತರು ಸಜ್ಜೆರೊಟ್ಟಿ, ವಿವಿಧ ತರಕಾರಿ ಮತ್ತು ಕಾಳುಧಾನ್ಯದಿಂದ ಮಾಡಿದ ಪಲ್ಯ ದಾಸೋಹದಲ್ಲಿ ನೀಡಲಾಗುತ್ತದೆ. ಇದನ್ನು ರೊಟ್ಟಿ ಜಾತ್ರೆಯೆಂದೇ ಪ್ರಸಿದ್ಧಿಯಾಗಿದೆ.<br /> <br /> ಪುಟ್ಟಹಳ್ಳಿ ಆಹೇರಿಯಲ್ಲಿ ಎಲ್ಲ ಧರ್ಮಿಯರೂ ಸೇರಿ ಒಂದಾಗಿ ಈ ಜಾತ್ರೆ ಆಚರಿಸುತ್ತಾರೆ. ಪ್ರತಿ ಮನೆಯಿಂದ ರೊಟ್ಟಿಗಳನ್ನು ಸಂಗ್ರಹಿಸಲಾಗುತ್ತದೆ. ಈ ಸಲ 102 ಬೃಹತ್ ಹಂಡೆಗಳಲ್ಲಿ ವಿಶೇಷವಾಗಿ ಬಜ್ಜಿ ಪಲ್ಯ ತಯಾರಿಸಲಾಗಿತ್ತು. ದರ್ಶನಕ್ಕೆ ಬರುವ ಪ್ರತಿಯೊಬ್ಬ ಭಕ್ತರು ಇಲ್ಲಿ ಪ್ರಸಾದ ಸ್ವೀಕರಿಯೇ ಹೋಗುತ್ತಾರೆ.<br /> <br /> ಒಂದು ಲಕ್ಷ್ಯ ರೊಟ್ಟಿ ಮತ್ತು 102 ಹಂಡೆಗಳಲ್ಲಿ ತಯಾರಿಸಿದ ಪಲ್ಯ (ವಿವಿಧ ತರಕಾರಿ ತಪ್ಪಲು, ಉಸುಳಿ, ಬಟಾಣಿ ಮುಂತಾದ ಧಾನ್ಯಗಳಿಂದ) ಊಟವನ್ನು ಜನರು ತಂಡೋಪ ತಂಡವಾಗಿ ಅಲ್ಲಲ್ಲಿ ಕುಳಿತು ಉಣ್ಣುತ್ತಿದ್ದ ದೃಶ್ಯ ಎಲ್ಲಡೆ ಕಂಡು ಬಂತು. <br /> <br /> ಶಾಸಕ ರಮೇಶ ಭೂಸನೂರ ಮೊದಲಾದ ಜನ ಪ್ರತಿನಿಧಿಗಳು ಜಾತ್ರೆಗೆ ಆಗಮಿಸಿ ಸಾಮನ್ಯ ಪಂಥಿಯಲ್ಲಿ ಪ್ರಸಾದ ಸವಿದದ್ದು ವಿಶೇಷವಾಗಿತ್ತು.<br /> <br /> ಬೆಳಿಗ್ಗೆ ಪುರವಂತರು ತಮ್ಮ ಸೇವಾ ಕಾರ್ಯ ನಡೆಸಿಕೊಟ್ಟರು. ಮಧ್ಯಾಹ್ನ ಭಕ್ತರು, ಪುರವಂತರು ಅಗ್ನಿ ಪ್ರವೇಶ ಮಾಡಿದರು. <br /> <br /> ಕೆಂಡದಲ್ಲಿ ಹಾಯುವ ಮೂಲಕ ಭಕ್ತರು ತಮ್ಮ ಹರಕೆಯನ್ನು ತಿರಿಸಿದರು. ನಂತರ ಹೇಳಿಕೆಗಳು ನಡೆದವು. ಚರಗ ಚೆಲ್ಲುವ ಮೂಲಕ ಸಂಕ್ರಾಂತಿ ಸುಗ್ಗಿ ಎದ್ದು ಕಾಣುತ್ತಿತ್ತು.<br /> <br /> ಪ್ರತಿ ವರ್ಷವೂ ಈ ಜಾತ್ರೆಗೆ ಭಕ್ತರ ಸಂಖ್ಯೆ ಹೆಚ್ಚಾಗುತ್ತಾ ಬಂದಿದೆ. ಕಳೆದ ಸಲಕ್ಕಿಂತ ಹೆಚ್ಚು ಭಕ್ತರು ಆಗಮಿಸಿ ಎಲ್ಲಡೆ ಜನ ತುಂಬಿತುಳುಕಿತ್ತು. ಪೊಲೀಸರು ಹೆಚ್ಚಿನ ಸಂಖ್ಯೆಯಲ್ಲಿದ್ದು ಬಂದೂಬಸ್ತ್ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>