<p><strong>ನವದೆಹಲಿ (ಪಿಟಿಐ):</strong> ಮಾಜಿ ಗಗನ ಸಖಿ ಗೀತಿಕಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಪೊಲೀಸರ ಎದುರು ಶರಣಾಗಿ, ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಹರಿಯಾಣದ ಮಾಜಿ ಸಚಿವ ಗೋಪಾಲ್ ಗೋಯಲ್ ಕಾಂಡಾ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸುವ ಸಾಧ್ಯತೆ ಇದೆ ಎಂದು ದೆಹಲಿ ಪೊಲೀಸ್ ಮೂಲಗಳು ತಿಳಿಸಿವೆ.<br /> <br /> ಪ್ರಕರಣದ ಹೆಚ್ಚಿನ ವಿಚಾರಣೆಗೆ ಕಾಂಡಾ ಪೊಲೀಸರಿಗೆ ಸಹಕರಿಸುತ್ತಿಲ್ಲ. ಇದರಿಂದಾಗಿ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಲು ಯೋಚಿಸಲಾಗುತ್ತಿದೆ ಎಂದು ಸೋಮವಾರ ದೆಹಲಿ ಪೊಲೀಸ್ ಮೂಲಗಳಿಂದ ತಿಳಿದಿದೆ. <br /> <br /> ಗೀತಿಕಾ ಆತ್ಮಹತ್ಯೆ ಪ್ರಕರಣದಲ್ಲಿ ನಾನು ಭಾಗಿಯಾಗಿಲ್ಲ ಎಂದು ಕಾಂಡಾ ಹೇಳಿಕೆ ನೀಡುತ್ತಿದ್ದು, ಇದರಿಂದಾಗಿ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸುವ ಸಾಧ್ಯತೆ ಇದೆ .<br /> <br /> ಕಾಂಡಾ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸುತ್ತೀರಾ ಎಂದು ಸುದ್ದಿಗಾರರು ಹಿರಿಯ ಪೊಲೀಸ್ ಅಧಿಕಾರಿ ಡಿಸಿಪಿ ಪಿ. ಕರುಣಾಕರನ್ ಅವರನ್ನು ಪ್ರಶ್ನಿಸಿದಾಗ, ಅವರು ವಿಚಾರಣೆಗೆ ಸಹಕರಿಸದೇ ಇದ್ದಲ್ಲಿ ಅದನ್ನು ಕೂಡ ನಾವು ಮಾಡುತ್ತೇವೆ. ತನಿಖೆಗೆ ಅವಶ್ಯವಿರುವ ಸ್ಥಳಗಳಿಗೆ ಕಾಂಡಾ ಅವರನ್ನು ಕರೆದುಕೊಂಡು ಹೋಗುತ್ತೇವೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಮಾಜಿ ಗಗನ ಸಖಿ ಗೀತಿಕಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ಪೊಲೀಸರ ಎದುರು ಶರಣಾಗಿ, ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಹರಿಯಾಣದ ಮಾಜಿ ಸಚಿವ ಗೋಪಾಲ್ ಗೋಯಲ್ ಕಾಂಡಾ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸುವ ಸಾಧ್ಯತೆ ಇದೆ ಎಂದು ದೆಹಲಿ ಪೊಲೀಸ್ ಮೂಲಗಳು ತಿಳಿಸಿವೆ.<br /> <br /> ಪ್ರಕರಣದ ಹೆಚ್ಚಿನ ವಿಚಾರಣೆಗೆ ಕಾಂಡಾ ಪೊಲೀಸರಿಗೆ ಸಹಕರಿಸುತ್ತಿಲ್ಲ. ಇದರಿಂದಾಗಿ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಲು ಯೋಚಿಸಲಾಗುತ್ತಿದೆ ಎಂದು ಸೋಮವಾರ ದೆಹಲಿ ಪೊಲೀಸ್ ಮೂಲಗಳಿಂದ ತಿಳಿದಿದೆ. <br /> <br /> ಗೀತಿಕಾ ಆತ್ಮಹತ್ಯೆ ಪ್ರಕರಣದಲ್ಲಿ ನಾನು ಭಾಗಿಯಾಗಿಲ್ಲ ಎಂದು ಕಾಂಡಾ ಹೇಳಿಕೆ ನೀಡುತ್ತಿದ್ದು, ಇದರಿಂದಾಗಿ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸುವ ಸಾಧ್ಯತೆ ಇದೆ .<br /> <br /> ಕಾಂಡಾ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸುತ್ತೀರಾ ಎಂದು ಸುದ್ದಿಗಾರರು ಹಿರಿಯ ಪೊಲೀಸ್ ಅಧಿಕಾರಿ ಡಿಸಿಪಿ ಪಿ. ಕರುಣಾಕರನ್ ಅವರನ್ನು ಪ್ರಶ್ನಿಸಿದಾಗ, ಅವರು ವಿಚಾರಣೆಗೆ ಸಹಕರಿಸದೇ ಇದ್ದಲ್ಲಿ ಅದನ್ನು ಕೂಡ ನಾವು ಮಾಡುತ್ತೇವೆ. ತನಿಖೆಗೆ ಅವಶ್ಯವಿರುವ ಸ್ಥಳಗಳಿಗೆ ಕಾಂಡಾ ಅವರನ್ನು ಕರೆದುಕೊಂಡು ಹೋಗುತ್ತೇವೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>