<p><strong>ಬೆಳಗಾವಿ:</strong> ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ತಾಲ್ಲೂಕು ಹಾಗೂ ಶಹರ ಘಟಕದ ಸಂಯುಕ್ತ ಆಶ್ರಯದಲ್ಲಿ ಮೇ 20 ರಂದು ಯಳ್ಳೂರು ಗ್ರಾಮದ ಮಹಾರಾಷ್ಟ್ರ ಮೈದಾನದಲ್ಲಿ ಗಡಿ ಸಮಾವೇಶ (ಭವ್ಯ ಸೀಮಾ ಮೇಳಾವ್) ಆಯೋಜಿಸಲು ಇತ್ತೀಚೆಗೆ ನಡೆದ ಎಂಇಎಸ್ ಮುಖಂಡರ ಸಭೆ ನಿರ್ಧರಿಸಿದೆ. <br /> <br /> ಗಡಿ ಸಮಸ್ಯೆಯನ್ನು ಸುಪ್ರೀಂ ಕೋರ್ಟ್ ಇತ್ಯರ್ಥಪಡಿಸುವವರೆಗೆ ಕರ್ನಾಟಕ ರಾಜ್ಯದ ಗಡಿಯಲ್ಲಿರುವ ಬೆಳಗಾವಿ ಸೇರಿದಂತೆ ಮರಾಠಿ ಭಾಷಿಕ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಲುಒತ್ತಾಯಪಡಿಸುವ ಉದ್ದೇಶದಿಂದ ಈ ಸಮಾವೇಶ ಆಯೋಜಿಸಲು ಎಂಇಎಸ್ ನಿರ್ಧರಿಸಿದೆ. <br /> <br /> ಸಮಾವೇಶದ ಪೂರ್ವ ಸಿದ್ಧತೆಗಾಗಿ ಮೇ 9 ರಂದು ಎಂಇಎಸ್ ಸದಸ್ಯರ ಸಭೆ ಕರೆಯಲು ನಿರ್ಧರಿಸಲಾಗಿದ್ದು, ಮಹಾರಾಷ್ಟ್ರದ ಮುಖ್ಯಮಂತ್ರಿ ಪೃಥ್ವಿರಾಜ್ ಚವಾಣ್, ಉಪ ಮುಖ್ಯಮಂತ್ರಿ ಅಜಿತ ಪವಾರ್ ಸಮಾವೇಶದಲ್ಲಿ ಭಾಗವಹಿಸುವುದಾಗಿ ಕಿರಣ ಥಾಕೂರ ನೇತೃತ್ವದ ಎಂಇಎಸ್ ನಿಯೋಗಕ್ಕೆ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ತಾಲ್ಲೂಕು ಹಾಗೂ ಶಹರ ಘಟಕದ ಸಂಯುಕ್ತ ಆಶ್ರಯದಲ್ಲಿ ಮೇ 20 ರಂದು ಯಳ್ಳೂರು ಗ್ರಾಮದ ಮಹಾರಾಷ್ಟ್ರ ಮೈದಾನದಲ್ಲಿ ಗಡಿ ಸಮಾವೇಶ (ಭವ್ಯ ಸೀಮಾ ಮೇಳಾವ್) ಆಯೋಜಿಸಲು ಇತ್ತೀಚೆಗೆ ನಡೆದ ಎಂಇಎಸ್ ಮುಖಂಡರ ಸಭೆ ನಿರ್ಧರಿಸಿದೆ. <br /> <br /> ಗಡಿ ಸಮಸ್ಯೆಯನ್ನು ಸುಪ್ರೀಂ ಕೋರ್ಟ್ ಇತ್ಯರ್ಥಪಡಿಸುವವರೆಗೆ ಕರ್ನಾಟಕ ರಾಜ್ಯದ ಗಡಿಯಲ್ಲಿರುವ ಬೆಳಗಾವಿ ಸೇರಿದಂತೆ ಮರಾಠಿ ಭಾಷಿಕ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಲುಒತ್ತಾಯಪಡಿಸುವ ಉದ್ದೇಶದಿಂದ ಈ ಸಮಾವೇಶ ಆಯೋಜಿಸಲು ಎಂಇಎಸ್ ನಿರ್ಧರಿಸಿದೆ. <br /> <br /> ಸಮಾವೇಶದ ಪೂರ್ವ ಸಿದ್ಧತೆಗಾಗಿ ಮೇ 9 ರಂದು ಎಂಇಎಸ್ ಸದಸ್ಯರ ಸಭೆ ಕರೆಯಲು ನಿರ್ಧರಿಸಲಾಗಿದ್ದು, ಮಹಾರಾಷ್ಟ್ರದ ಮುಖ್ಯಮಂತ್ರಿ ಪೃಥ್ವಿರಾಜ್ ಚವಾಣ್, ಉಪ ಮುಖ್ಯಮಂತ್ರಿ ಅಜಿತ ಪವಾರ್ ಸಮಾವೇಶದಲ್ಲಿ ಭಾಗವಹಿಸುವುದಾಗಿ ಕಿರಣ ಥಾಕೂರ ನೇತೃತ್ವದ ಎಂಇಎಸ್ ನಿಯೋಗಕ್ಕೆ ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>