<p><strong>ನವದೆಹಲಿ (ಐಎಎನ್ಎಸ್): </strong>ಸ್ವಾಮಿ ವಿವೇಕಾನಂದ ಹಾಗೂ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಅವರ `ಬುದ್ಧಿ ಮಟ್ಟ~ ಹೋಲಿಸುವ ಮೂಲಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ ಅವರು ಮತ್ತೊಂದು ಹೊಸ ವಿವಾದಕ್ಕೆ ಸಿಕ್ಕಿಹಾಕಿಕೊಂಡಿದ್ದಾರೆ.<br /> <br /> `ನಾನು ಬಾಯ್ತಪ್ಪಿ ಈ ಹೇಳಿಕೆ ನೀಡಿದ್ದಾಗಿ~ ಸೋಮವಾರ ಗಡ್ಕರಿ ಸಮರ್ಥಿಸಿಕೊಂಡಿದ್ದರೂ, ಅವರ ಹೇಳಿಕೆ ರಾಜಕೀಯ ವಲಯದಲ್ಲಿ ತೀವ್ರ ಕೋಲಾಹಕ್ಕೆ ಕಾರಣವಾಗಿದೆ. ಈ ವಿವಾದಾತ್ಮಕ ಹೇಳಿಕೆಗೆ ಬಿಜೆಪಿ ಕ್ಷಮೆ ಯಾಚಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.<br /> <br /> <strong>ಘಟನೆ ವಿವರ: </strong>ಭೋಪಾಲ್ನಲ್ಲಿ ಭಾನುವಾರ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರನ್ನು ಗುರುತಿಸಿ ಸನ್ಮಾನಿಸುವ ಕಾರ್ಯಕ್ರಮ ನಡೆಯಿತು. ಸಮಾರಂಭದಲ್ಲಿ ಮಾತನಾಡಿದ ಗಡ್ಕರಿ, ತಮ್ಮ ಭಾಷಣದಲ್ಲಿ `ಒಬ್ಬ ವ್ಯಕ್ತಿಯ ಬುದ್ಧಿ ಶಕ್ತಿಯನ್ನು ಅವರವರ ಮಾನಸಿಕ ಶಕ್ತಿಯ ಮೇಲೆ ಅಳೆಯಲಾಗುತ್ತದೆ. ಅದು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗುತ್ತದೆ. <br /> <br /> ಏಕೆಂದರೆ ಅವರು ಬುದ್ಧಿಶಕ್ತಿಯನ್ನು ಯಾವ ಉದ್ದೇಶಕ್ಕಾಗಿ ಬಳಸುತ್ತಾರೆ ಎಂಬುದರ ಮೇಲೆ ಅದನ್ನು ಅಳೆಯಬಹುದಾಗಿದೆ. ಸ್ವಾಮಿ ವಿವೇಕಾನಂದ ಹಾಗೂ ದಾವೂದ್ ಇಬ್ರಾಹಿಂ ಬುದ್ಧಿಶಕ್ತಿಯನ್ನೇ ಹೋಲಿಸಿ ನೋಡಿ. ಇಬ್ಬರ ಬುದ್ಧಿಶಕ್ತಿ ಬಹುತೇಕ ಒಂದೇ ಮಟ್ಟದಲ್ಲಿದೆ. ಆದರೆ, ಅವರಿಬ್ಬರೂ ಆ ಶಕ್ತಿಯನ್ನು ಬೇರೆ ಬೇರೆ ಕ್ಷೇತ್ರಗಳ `ಅಭಿವೃದ್ಧಿಗೆ~ ಬಳಸಿದ್ದಾರೆ. <br /> <br /> ವಿವೇಕಾನಂದರು ರಾಷ್ಟ್ರ ನಿರ್ಮಾಣ, ಧರ್ಮ ಸ್ಥಾಪನೆಯಂತಹ ಉತ್ತಮ ಕಾರ್ಯಗಳಿಗೆ ಬಳಸಿದರೆ, ದಾವೂದ್ ಇಬ್ರಾಹಿಂ ಅಪರಾಧ ಜಗತ್ತಿನ ಚಟುವಟಿಕೆ ಹಾಗೂ ವಿಧ್ವಂಸಕ ಕೃತ್ಯಗಳಿಗೆ ಬಳಸಿದ್ದಾನೆ~ ಎಂದು ಹೋಲಿಕೆ ನೀಡಿದ್ದರು.<br /> <br /> ಗಡ್ಕರಿ ಅವರು ಭಾಷಣ ಮುಗಿಸಿ ವೇದಿಕೆಯಿಂದ ಇಳಿಯುತ್ತಿದ್ದಂತೆ ಅವರನ್ನು ಸುತ್ತುವರಿದ ಸುದ್ದಿಗಾರರು `ಹೋಲಿಕೆ~ ಹೇಳಿಕೆ ಕುರಿತು ಪ್ರಶ್ನಿಸಿದಾಗ, `ನಾನು ಹಾಗೆ ಯಾವುದೇ ಹೋಲಿಕೆಯ ಹೇಳಿಕೆ ನೀಡಿಲ್ಲ. ನಾನು ಹೇಳಿದ್ದು, ಒಬ್ಬ ವ್ಯಕ್ತಿ ತನ್ನ ಬುದ್ಧಿಶಕ್ತಿಯನ್ನು ಕೆಲವೊಮ್ಮೆ ಒಳ್ಳೆಯ ಕೆಲಸಕ್ಕೆ ಬಳಸಿಕೊಳ್ಳುತ್ತಾನೆ. ಮತ್ತೊಬ್ಬ ಬುದ್ಧಿಶಕ್ತಿ ಬಳಸಿಕೊಂಡು ದಾವೂದ್ನಂತೆ ಆಗಬಹುದೆಂದು ಹೇಳ್ದ್ದಿದೇನೆ~ ಎಂದು ಸಮರ್ಥಿಸಿಕೊಂಡರು. ಕೊನೆಯಲ್ಲಿ `ನಾನು ಬಾಯ್ತಪ್ಪಿ ಹಾಗೆ ಹೇಳಿಕೆ ನೀಡಿರಬಹುದು~ ಎಂದೂ ನುಣುಚಿಕೊಂಡಿದ್ದರು.<br /> <br /> <strong>ಖಂಡನೆ:</strong> ಗಡ್ಕರಿ ಅವರ ವಿವಾದಾತ್ಮಕ ಹೇಳಿಕೆಯನ್ನು ಕಾಂಗ್ರೆಸ್ ಖಂಡಿಸಿದೆ. `ಇದು ಬಿಜೆಪಿ ಸಂಸ್ಕೃತಿ ಮತ್ತು ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ~ ಎಂದು ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಮನೀಶ್ ತಿವಾರಿ, ವ್ಯಂಗ್ಯವಾಡಿದ್ದಾರೆ. `ಬಿಜೆಪಿಯು ಈ ಹೇಳಿಕೆಗೆ ಸ್ಪಷ್ಟನೆ ನೀಡಬೇಕು. ದೇಶದ ಕ್ಷಮೆಯಾಚಿಸಬೇಕು~ ಎಂದೂ ತಿವಾರಿ ಆಗ್ರಹಿಸಿದ್ದಾರೆ.<br /> <br /> ಆದರೆ, ಗಡ್ಕರಿ ಅವರ ಹೇಳಿಕೆ ಕುರಿತು ಬಿಜೆಪಿ ನಾಯಕರು ವಿವರಣೆ ನೀಡಲು ಪ್ರಯತ್ನಿಸುತ್ತಿದ್ದಾರೆ. ಬಿಜೆಪಿಯ ನಾಯಕ ಬಲಬೀರ್ ಪಂಜ್ ಅವರು, `ಗಡ್ಕರಿ ಅವರು ವಿವೇಕಾನಂದ - ದಾವೂದ್ ಇಬ್ರಾಹಿಂ~ ಅವರನ್ನು ಹೋಲಿಕೆ ಮಾಡಿಲ್ಲ. ಬುದ್ಧಿವಂತಿಕೆ ಮತ್ತು ಹಣವನ್ನು ಉತ್ತಮ ಹಾಗೂ ಕೆಟ್ಟಕೆಲಸಗಳಿಗೆ ಎರಡಕ್ಕೂ ಬಳಸಬಹುದೆಂಬ ಅರ್ಥ ನೀಡುವ ರೀತಿಯಲ್ಲಿ ಮಾತನಾಡಿದ್ದಾರೆ~ ಎಂದು ಸಮರ್ಥಿಸಿಕೊಂಡಿದ್ದಾರೆ.<br /> <br /> <strong>ಮಹೇಶ್ ಜೇಠ್ಮಲಾನಿ ರಾಜೀನಾಮೆ</strong><br /> <strong>ನವದೆಹಲಿ/ಮುಂಬೈ(ಪಿಟಿಐ):</strong> ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ ರಾಜೀನಾಮೆಗೆ ಒತ್ತಾಯಿಸಿ ವಕೀಲ ಮಹೇಶ್ ಜೇಠ್ಮಲಾನಿ ಅವರು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯತ್ವಕ್ಕೆ ಸೋಮವಾರ ರಾಜೀನಾಮೆ ನೀಡಿದ್ದಾರೆ.<br /> <br /> `ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ನಿಮ್ಮ ಅಧ್ಯಕ್ಷತೆಯಲ್ಲಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಲ್ಲಿ ಸದಸ್ಯನಾಗಿ ಮುಂದುವರಿಯಲು ನನ್ನ ಆತ್ಮಸಾಕ್ಷಿ ಒಪ್ಪುತ್ತಿಲ್ಲ. ಹಾಗೆ ಮುಂದುವರಿಯುವುದು ಸೂಕ್ತವೂ ಅಲ್ಲ. ಹಾಗಾಗಿ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ~ ಎಂದು ಮಹೇಶ್, ಗಡ್ಕರಿಅವರಿಗೆ ಪತ್ರ ಬರೆದಿದ್ದಾರೆ.<br /> <br /> ಈ ಕುರಿತು ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಹೇಶ್, `ಭ್ರಷ್ಟಾಚಾರ ಆರೋಪ ಕುರಿತು ತಾನು ಕೇಳಿರುವ ಪ್ರಶ್ನೆಗಳಿಗೆ ಗಡ್ಕರಿ ನೀಡಿದ ಉತ್ತರ ಸಮರ್ಪಕವಾಗಿಲ್ಲ. ಹಾಗಾಗಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಆದರೆ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತನಾಗಿ ಮುಂದುವರಿಯುತ್ತೇನೆ~ ಎಂದು ತಿಳಿಸಿದ್ದಾರೆ.<br /> <br /> ಖ್ಯಾತ ವಕೀಲ ರಾಜ್ಯಸಭಾ ಸದಸ್ಯ ರಾಮ್ ಜೇಠ್ಮಲಾನಿ ಅವರು ಎರಡನೇ ಅವಧಿಗೆ ರಾಷ್ಟ್ರೀಯ ಅಧ್ಯಕ್ಷರಾಗಿ ಮುಂದುವರಿಯದಂತೆ ಗಡ್ಕರಿಯನ್ನು ಒತ್ತಾಯಿಸಿದ ಹದಿನೈದು ದಿನಗಳ ನಂತರ ಪುತ್ರ ಮಹೇಶ್ ಜೇಠ್ಮಲಾನಿ ಕಾರ್ಯಕಾರಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಐಎಎನ್ಎಸ್): </strong>ಸ್ವಾಮಿ ವಿವೇಕಾನಂದ ಹಾಗೂ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಅವರ `ಬುದ್ಧಿ ಮಟ್ಟ~ ಹೋಲಿಸುವ ಮೂಲಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ ಅವರು ಮತ್ತೊಂದು ಹೊಸ ವಿವಾದಕ್ಕೆ ಸಿಕ್ಕಿಹಾಕಿಕೊಂಡಿದ್ದಾರೆ.<br /> <br /> `ನಾನು ಬಾಯ್ತಪ್ಪಿ ಈ ಹೇಳಿಕೆ ನೀಡಿದ್ದಾಗಿ~ ಸೋಮವಾರ ಗಡ್ಕರಿ ಸಮರ್ಥಿಸಿಕೊಂಡಿದ್ದರೂ, ಅವರ ಹೇಳಿಕೆ ರಾಜಕೀಯ ವಲಯದಲ್ಲಿ ತೀವ್ರ ಕೋಲಾಹಕ್ಕೆ ಕಾರಣವಾಗಿದೆ. ಈ ವಿವಾದಾತ್ಮಕ ಹೇಳಿಕೆಗೆ ಬಿಜೆಪಿ ಕ್ಷಮೆ ಯಾಚಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.<br /> <br /> <strong>ಘಟನೆ ವಿವರ: </strong>ಭೋಪಾಲ್ನಲ್ಲಿ ಭಾನುವಾರ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರನ್ನು ಗುರುತಿಸಿ ಸನ್ಮಾನಿಸುವ ಕಾರ್ಯಕ್ರಮ ನಡೆಯಿತು. ಸಮಾರಂಭದಲ್ಲಿ ಮಾತನಾಡಿದ ಗಡ್ಕರಿ, ತಮ್ಮ ಭಾಷಣದಲ್ಲಿ `ಒಬ್ಬ ವ್ಯಕ್ತಿಯ ಬುದ್ಧಿ ಶಕ್ತಿಯನ್ನು ಅವರವರ ಮಾನಸಿಕ ಶಕ್ತಿಯ ಮೇಲೆ ಅಳೆಯಲಾಗುತ್ತದೆ. ಅದು ವ್ಯಕ್ತಿಯಿಂದ ವ್ಯಕ್ತಿಗೆ ಬದಲಾಗುತ್ತದೆ. <br /> <br /> ಏಕೆಂದರೆ ಅವರು ಬುದ್ಧಿಶಕ್ತಿಯನ್ನು ಯಾವ ಉದ್ದೇಶಕ್ಕಾಗಿ ಬಳಸುತ್ತಾರೆ ಎಂಬುದರ ಮೇಲೆ ಅದನ್ನು ಅಳೆಯಬಹುದಾಗಿದೆ. ಸ್ವಾಮಿ ವಿವೇಕಾನಂದ ಹಾಗೂ ದಾವೂದ್ ಇಬ್ರಾಹಿಂ ಬುದ್ಧಿಶಕ್ತಿಯನ್ನೇ ಹೋಲಿಸಿ ನೋಡಿ. ಇಬ್ಬರ ಬುದ್ಧಿಶಕ್ತಿ ಬಹುತೇಕ ಒಂದೇ ಮಟ್ಟದಲ್ಲಿದೆ. ಆದರೆ, ಅವರಿಬ್ಬರೂ ಆ ಶಕ್ತಿಯನ್ನು ಬೇರೆ ಬೇರೆ ಕ್ಷೇತ್ರಗಳ `ಅಭಿವೃದ್ಧಿಗೆ~ ಬಳಸಿದ್ದಾರೆ. <br /> <br /> ವಿವೇಕಾನಂದರು ರಾಷ್ಟ್ರ ನಿರ್ಮಾಣ, ಧರ್ಮ ಸ್ಥಾಪನೆಯಂತಹ ಉತ್ತಮ ಕಾರ್ಯಗಳಿಗೆ ಬಳಸಿದರೆ, ದಾವೂದ್ ಇಬ್ರಾಹಿಂ ಅಪರಾಧ ಜಗತ್ತಿನ ಚಟುವಟಿಕೆ ಹಾಗೂ ವಿಧ್ವಂಸಕ ಕೃತ್ಯಗಳಿಗೆ ಬಳಸಿದ್ದಾನೆ~ ಎಂದು ಹೋಲಿಕೆ ನೀಡಿದ್ದರು.<br /> <br /> ಗಡ್ಕರಿ ಅವರು ಭಾಷಣ ಮುಗಿಸಿ ವೇದಿಕೆಯಿಂದ ಇಳಿಯುತ್ತಿದ್ದಂತೆ ಅವರನ್ನು ಸುತ್ತುವರಿದ ಸುದ್ದಿಗಾರರು `ಹೋಲಿಕೆ~ ಹೇಳಿಕೆ ಕುರಿತು ಪ್ರಶ್ನಿಸಿದಾಗ, `ನಾನು ಹಾಗೆ ಯಾವುದೇ ಹೋಲಿಕೆಯ ಹೇಳಿಕೆ ನೀಡಿಲ್ಲ. ನಾನು ಹೇಳಿದ್ದು, ಒಬ್ಬ ವ್ಯಕ್ತಿ ತನ್ನ ಬುದ್ಧಿಶಕ್ತಿಯನ್ನು ಕೆಲವೊಮ್ಮೆ ಒಳ್ಳೆಯ ಕೆಲಸಕ್ಕೆ ಬಳಸಿಕೊಳ್ಳುತ್ತಾನೆ. ಮತ್ತೊಬ್ಬ ಬುದ್ಧಿಶಕ್ತಿ ಬಳಸಿಕೊಂಡು ದಾವೂದ್ನಂತೆ ಆಗಬಹುದೆಂದು ಹೇಳ್ದ್ದಿದೇನೆ~ ಎಂದು ಸಮರ್ಥಿಸಿಕೊಂಡರು. ಕೊನೆಯಲ್ಲಿ `ನಾನು ಬಾಯ್ತಪ್ಪಿ ಹಾಗೆ ಹೇಳಿಕೆ ನೀಡಿರಬಹುದು~ ಎಂದೂ ನುಣುಚಿಕೊಂಡಿದ್ದರು.<br /> <br /> <strong>ಖಂಡನೆ:</strong> ಗಡ್ಕರಿ ಅವರ ವಿವಾದಾತ್ಮಕ ಹೇಳಿಕೆಯನ್ನು ಕಾಂಗ್ರೆಸ್ ಖಂಡಿಸಿದೆ. `ಇದು ಬಿಜೆಪಿ ಸಂಸ್ಕೃತಿ ಮತ್ತು ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ~ ಎಂದು ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಮನೀಶ್ ತಿವಾರಿ, ವ್ಯಂಗ್ಯವಾಡಿದ್ದಾರೆ. `ಬಿಜೆಪಿಯು ಈ ಹೇಳಿಕೆಗೆ ಸ್ಪಷ್ಟನೆ ನೀಡಬೇಕು. ದೇಶದ ಕ್ಷಮೆಯಾಚಿಸಬೇಕು~ ಎಂದೂ ತಿವಾರಿ ಆಗ್ರಹಿಸಿದ್ದಾರೆ.<br /> <br /> ಆದರೆ, ಗಡ್ಕರಿ ಅವರ ಹೇಳಿಕೆ ಕುರಿತು ಬಿಜೆಪಿ ನಾಯಕರು ವಿವರಣೆ ನೀಡಲು ಪ್ರಯತ್ನಿಸುತ್ತಿದ್ದಾರೆ. ಬಿಜೆಪಿಯ ನಾಯಕ ಬಲಬೀರ್ ಪಂಜ್ ಅವರು, `ಗಡ್ಕರಿ ಅವರು ವಿವೇಕಾನಂದ - ದಾವೂದ್ ಇಬ್ರಾಹಿಂ~ ಅವರನ್ನು ಹೋಲಿಕೆ ಮಾಡಿಲ್ಲ. ಬುದ್ಧಿವಂತಿಕೆ ಮತ್ತು ಹಣವನ್ನು ಉತ್ತಮ ಹಾಗೂ ಕೆಟ್ಟಕೆಲಸಗಳಿಗೆ ಎರಡಕ್ಕೂ ಬಳಸಬಹುದೆಂಬ ಅರ್ಥ ನೀಡುವ ರೀತಿಯಲ್ಲಿ ಮಾತನಾಡಿದ್ದಾರೆ~ ಎಂದು ಸಮರ್ಥಿಸಿಕೊಂಡಿದ್ದಾರೆ.<br /> <br /> <strong>ಮಹೇಶ್ ಜೇಠ್ಮಲಾನಿ ರಾಜೀನಾಮೆ</strong><br /> <strong>ನವದೆಹಲಿ/ಮುಂಬೈ(ಪಿಟಿಐ):</strong> ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ ರಾಜೀನಾಮೆಗೆ ಒತ್ತಾಯಿಸಿ ವಕೀಲ ಮಹೇಶ್ ಜೇಠ್ಮಲಾನಿ ಅವರು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯತ್ವಕ್ಕೆ ಸೋಮವಾರ ರಾಜೀನಾಮೆ ನೀಡಿದ್ದಾರೆ.<br /> <br /> `ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ನಿಮ್ಮ ಅಧ್ಯಕ್ಷತೆಯಲ್ಲಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಲ್ಲಿ ಸದಸ್ಯನಾಗಿ ಮುಂದುವರಿಯಲು ನನ್ನ ಆತ್ಮಸಾಕ್ಷಿ ಒಪ್ಪುತ್ತಿಲ್ಲ. ಹಾಗೆ ಮುಂದುವರಿಯುವುದು ಸೂಕ್ತವೂ ಅಲ್ಲ. ಹಾಗಾಗಿ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ~ ಎಂದು ಮಹೇಶ್, ಗಡ್ಕರಿಅವರಿಗೆ ಪತ್ರ ಬರೆದಿದ್ದಾರೆ.<br /> <br /> ಈ ಕುರಿತು ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಹೇಶ್, `ಭ್ರಷ್ಟಾಚಾರ ಆರೋಪ ಕುರಿತು ತಾನು ಕೇಳಿರುವ ಪ್ರಶ್ನೆಗಳಿಗೆ ಗಡ್ಕರಿ ನೀಡಿದ ಉತ್ತರ ಸಮರ್ಪಕವಾಗಿಲ್ಲ. ಹಾಗಾಗಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಆದರೆ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತನಾಗಿ ಮುಂದುವರಿಯುತ್ತೇನೆ~ ಎಂದು ತಿಳಿಸಿದ್ದಾರೆ.<br /> <br /> ಖ್ಯಾತ ವಕೀಲ ರಾಜ್ಯಸಭಾ ಸದಸ್ಯ ರಾಮ್ ಜೇಠ್ಮಲಾನಿ ಅವರು ಎರಡನೇ ಅವಧಿಗೆ ರಾಷ್ಟ್ರೀಯ ಅಧ್ಯಕ್ಷರಾಗಿ ಮುಂದುವರಿಯದಂತೆ ಗಡ್ಕರಿಯನ್ನು ಒತ್ತಾಯಿಸಿದ ಹದಿನೈದು ದಿನಗಳ ನಂತರ ಪುತ್ರ ಮಹೇಶ್ ಜೇಠ್ಮಲಾನಿ ಕಾರ್ಯಕಾರಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>