<p><span style="font-size: 26px;"><strong>ಮದ್ದೂರು:</strong> ಪಟ್ಟಣದ ಎಪಿಎಂಸಿ ಮಾರುಕಟೆ ಇಡೀ ರಾಜ್ಯದಲ್ಲಿಯೇ ಅತೀ ದೊಡ್ಡ ಎಳನೀರು ಮಾರುಕಟ್ಟೆಯಾಗಿದ್ದು, 5ಲಕ್ಷ ರೂಪಾಯಿ ವೆಚ್ಚದಲ್ಲಿ ನೂತನ ಗಣಕೀಕೃತ ತೂಕ ಮಾಪನ ಯಂತ್ರವನ್ನು ಅಳವಡಿಸಲಾಗಿದೆ ಎಂದು ಶಾಸಕ ಡಿ.ಸಿ. ತಮ್ಮಣ್ಣ ತಿಳಿಸಿದರು.</span><br /> <br /> ಪಟ್ಟಣದ ಎಪಿಎಂಸಿ ಮಾರುಕಟ್ಟೆಯಲ್ಲಿ 40ಮೆಟ್ರಿಕ್ ಟನ್ ಸಾಮರ್ಥ್ಯದ ತೂಕಮಾಪನ ಯಂತ್ರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಗಣಕೀಕೃತ ತೂಕದ ಯಂತ್ರವನ್ನು ಅಳವಡಿಸಿರುವುದರಿಂದ ರೈತರಿಗೆ ಅನುಕೂಲವಾಗಲಿದೆ ಎಂದರು.<br /> <br /> ಮಾರುಕಟ್ಟೆಯಲ್ಲಿ ಶೌಚಾಲಯ, ವಸತಿಗೃಹ ಸೇರಿದಂತೆ ಮಾರುಕಟ್ಟೆ ಪ್ರಾಂಗಣಗಳ ಕೊರತೆಯಿದೆ. ಈ ಕುರಿತು ಮಾರುಕಟ್ಟೆ ಸಚಿವರ ಬಳಿ ಚರ್ಚಿಸಿ ಅಗತ್ಯ ಅನುದಾನ ಬಿಡುಗಡೆಗೊಳಿಸಲು ಶಕ್ತಿಮೀರಿ ಪ್ರಯತ್ನಿಸುವುದಾಗಿ ಅವರು ಭರವಸೆ ನೀಡಿದರು.<br /> <br /> ಎಪಿಎಂಸಿ ಅಧ್ಯಕ್ಷೆ ಸವಿತಾರಾಜಣ್ಣ, ಉಪಾಧ್ಯಕ್ಷ ಬಿಳಿಯಪ್ಪ, ವರ್ತಕರ ಸಂಘದ ಅಧ್ಯಕ್ಷ ರವಿಚನ್ನಸಂದ್ರ, ಕಾರ್ಯದರ್ಶಿ ಎ. ರಾಜು, ಎಪಿಎಂಸಿ ಕಾರ್ಯದರ್ಶಿ ವೆಂಕಟರಮಣರೆಡ್ಡಿ, ಮುಖಂಡರಾದ ಕೆ.ಟಿ. ಸುರೇಶ್, ಹೂತಗೆರೆದಿನೇಶ್, ಯೋಗಾನಂದ, ಚಾಕನಕೆರೆ ಕುಮಾರ್ ಸೇರಿದಂತೆ ಎಪಿಎಂಸಿ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><span style="font-size: 26px;"><strong>ಮದ್ದೂರು:</strong> ಪಟ್ಟಣದ ಎಪಿಎಂಸಿ ಮಾರುಕಟೆ ಇಡೀ ರಾಜ್ಯದಲ್ಲಿಯೇ ಅತೀ ದೊಡ್ಡ ಎಳನೀರು ಮಾರುಕಟ್ಟೆಯಾಗಿದ್ದು, 5ಲಕ್ಷ ರೂಪಾಯಿ ವೆಚ್ಚದಲ್ಲಿ ನೂತನ ಗಣಕೀಕೃತ ತೂಕ ಮಾಪನ ಯಂತ್ರವನ್ನು ಅಳವಡಿಸಲಾಗಿದೆ ಎಂದು ಶಾಸಕ ಡಿ.ಸಿ. ತಮ್ಮಣ್ಣ ತಿಳಿಸಿದರು.</span><br /> <br /> ಪಟ್ಟಣದ ಎಪಿಎಂಸಿ ಮಾರುಕಟ್ಟೆಯಲ್ಲಿ 40ಮೆಟ್ರಿಕ್ ಟನ್ ಸಾಮರ್ಥ್ಯದ ತೂಕಮಾಪನ ಯಂತ್ರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಗಣಕೀಕೃತ ತೂಕದ ಯಂತ್ರವನ್ನು ಅಳವಡಿಸಿರುವುದರಿಂದ ರೈತರಿಗೆ ಅನುಕೂಲವಾಗಲಿದೆ ಎಂದರು.<br /> <br /> ಮಾರುಕಟ್ಟೆಯಲ್ಲಿ ಶೌಚಾಲಯ, ವಸತಿಗೃಹ ಸೇರಿದಂತೆ ಮಾರುಕಟ್ಟೆ ಪ್ರಾಂಗಣಗಳ ಕೊರತೆಯಿದೆ. ಈ ಕುರಿತು ಮಾರುಕಟ್ಟೆ ಸಚಿವರ ಬಳಿ ಚರ್ಚಿಸಿ ಅಗತ್ಯ ಅನುದಾನ ಬಿಡುಗಡೆಗೊಳಿಸಲು ಶಕ್ತಿಮೀರಿ ಪ್ರಯತ್ನಿಸುವುದಾಗಿ ಅವರು ಭರವಸೆ ನೀಡಿದರು.<br /> <br /> ಎಪಿಎಂಸಿ ಅಧ್ಯಕ್ಷೆ ಸವಿತಾರಾಜಣ್ಣ, ಉಪಾಧ್ಯಕ್ಷ ಬಿಳಿಯಪ್ಪ, ವರ್ತಕರ ಸಂಘದ ಅಧ್ಯಕ್ಷ ರವಿಚನ್ನಸಂದ್ರ, ಕಾರ್ಯದರ್ಶಿ ಎ. ರಾಜು, ಎಪಿಎಂಸಿ ಕಾರ್ಯದರ್ಶಿ ವೆಂಕಟರಮಣರೆಡ್ಡಿ, ಮುಖಂಡರಾದ ಕೆ.ಟಿ. ಸುರೇಶ್, ಹೂತಗೆರೆದಿನೇಶ್, ಯೋಗಾನಂದ, ಚಾಕನಕೆರೆ ಕುಮಾರ್ ಸೇರಿದಂತೆ ಎಪಿಎಂಸಿ ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>