<p>ಹೊಸಪೇಟೆ: ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕೇಂದ್ರ ಪ್ರಾಚ್ಯವಸ್ತು ಇಲಾಖೆೆ, ಗಣಿ ಮತ್ತು ಭೂವಿಜ್ಞಾನ, ಪರಿಸರ ಹಾಗೂ ಐಬಿಎಂ (ಇಂಡಿಯನ್ ಬ್ಯೂರೊ ಆಫ್ ಮೈನ್ಸ್)ನ ಉನ್ನತಾಧಿಕಾರಿಗಳ ವಿಶೇಷ ತನಿಖಾ ತಂಡ ಐತಿಹಾಸಿಕ ಜಂಬುನಾಥಸ್ವಾಮಿ ದೇವಸ್ಥಾನದ ಹಾನಿಯ ಕುರಿತು ಪರಿಶೀಲನೆ ನಡೆಸಿತು. <br /> <br /> ಸೋಮವಾರ ನಗರಕ್ಕೆ ಆಗಮಿಸಿದ ವಿವಿಧ ಇಲಾಖೆಗಳ 10 ಜನ ವಿಶೇಷಾಧಿಕಾರಿಗಳ ಸಮಿತಿಯ<br /> ಸಂಚಾಲಕ ಹಾಗೂ ರಾಜ್ಯ ಪುರಾತತ್ವ ಇಲಾಖೆ ನಿರ್ದೇಶಕ ಡಾ.ಆರ್. ಗೋಪಾಲ ನೇತೃತ್ವದಲ್ಲಿ ಪರಿಶೀಲನೆ ನಡೆಸಿತು.<br /> <br /> ಪ್ರಾಚ್ಯವಸ್ತು ಇಲಾಖೆಯ ಸಿದ್ಧನಗೌಡ, ಕೇಂದ್ರ ಪ್ರಾಚ್ಯವಸ್ತು ಇಲಾಖೆಯ ನರಸಿಂಹನ್, ಗಣಿ ಇಲಾಖೆಯ ಉಪನಿರ್ದೇಶಕ ಡಾ.ಬಿ.ಎನ್. ಶಂಕರ, ಗಣಿ ಸುರಕ್ಷಾ ಇಲಾಖೆಯ ನಿರ್ದೇಶಕ ವಿ.ಲಕ್ಷ್ಮಿನಾರಾಯಣ, ಐಬಿಎಂನ ನಾಗಪುರ ವಲಯದ ಜಾಂಟೆ ಮತ್ತು ಎ.ಬಿ. ಮಾರೆಪ್ಪನವರ್ ಈ ಸಮಿತಿಯಲ್ಲಿದ್ದಾರೆ.<br /> <br /> ಸಮಿತಿಯು ದೇವಸ್ಥಾನಕ್ಕೆ ಭೇಟಿ ನೀಡಿ, ದೇವಸ್ಥಾನಕ್ಕೆ ಗಣಿಗಾರಿಕೆಯಿಂದ ಆಗುತ್ತಿರುವ ಹಾನಿಗಳನ್ನು ಪರಿಶೀಲಿಸಿತಲ್ಲದೆ ಸ್ಥಳೀಯರು, ಅರ್ಚಕರು ಮತ್ತು ದೇವಸ್ಥಾನ ಸಮಿತಿಗಳೊಂದಿಗೆ ಪ್ರತ್ಯೇಕವಾಗಿ ಮಾತುಕತೆ ನಡೆಸಿತು.<br /> <br /> ತನಿಖಾ ಸಮಿತಿಯ ಸಭೆ: ಸುಪ್ರೀಂ ಕೋರ್ಟ್ ರಚಿಸಿದ ಈ ಸಮಿತಿಯ ಮೊದಲ ಸಭೆ ನಗರದ ಹಂಪಿ ಪ್ರದೇಶಾಭಿವೃದ್ಧಿ ನಿರ್ವಹಣಾ ಪ್ರಾಧಿಕಾರದ ಸಭಾಂಗಣದಲ್ಲಿ ನಡೆಯಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹೊಸಪೇಟೆ: ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕೇಂದ್ರ ಪ್ರಾಚ್ಯವಸ್ತು ಇಲಾಖೆೆ, ಗಣಿ ಮತ್ತು ಭೂವಿಜ್ಞಾನ, ಪರಿಸರ ಹಾಗೂ ಐಬಿಎಂ (ಇಂಡಿಯನ್ ಬ್ಯೂರೊ ಆಫ್ ಮೈನ್ಸ್)ನ ಉನ್ನತಾಧಿಕಾರಿಗಳ ವಿಶೇಷ ತನಿಖಾ ತಂಡ ಐತಿಹಾಸಿಕ ಜಂಬುನಾಥಸ್ವಾಮಿ ದೇವಸ್ಥಾನದ ಹಾನಿಯ ಕುರಿತು ಪರಿಶೀಲನೆ ನಡೆಸಿತು. <br /> <br /> ಸೋಮವಾರ ನಗರಕ್ಕೆ ಆಗಮಿಸಿದ ವಿವಿಧ ಇಲಾಖೆಗಳ 10 ಜನ ವಿಶೇಷಾಧಿಕಾರಿಗಳ ಸಮಿತಿಯ<br /> ಸಂಚಾಲಕ ಹಾಗೂ ರಾಜ್ಯ ಪುರಾತತ್ವ ಇಲಾಖೆ ನಿರ್ದೇಶಕ ಡಾ.ಆರ್. ಗೋಪಾಲ ನೇತೃತ್ವದಲ್ಲಿ ಪರಿಶೀಲನೆ ನಡೆಸಿತು.<br /> <br /> ಪ್ರಾಚ್ಯವಸ್ತು ಇಲಾಖೆಯ ಸಿದ್ಧನಗೌಡ, ಕೇಂದ್ರ ಪ್ರಾಚ್ಯವಸ್ತು ಇಲಾಖೆಯ ನರಸಿಂಹನ್, ಗಣಿ ಇಲಾಖೆಯ ಉಪನಿರ್ದೇಶಕ ಡಾ.ಬಿ.ಎನ್. ಶಂಕರ, ಗಣಿ ಸುರಕ್ಷಾ ಇಲಾಖೆಯ ನಿರ್ದೇಶಕ ವಿ.ಲಕ್ಷ್ಮಿನಾರಾಯಣ, ಐಬಿಎಂನ ನಾಗಪುರ ವಲಯದ ಜಾಂಟೆ ಮತ್ತು ಎ.ಬಿ. ಮಾರೆಪ್ಪನವರ್ ಈ ಸಮಿತಿಯಲ್ಲಿದ್ದಾರೆ.<br /> <br /> ಸಮಿತಿಯು ದೇವಸ್ಥಾನಕ್ಕೆ ಭೇಟಿ ನೀಡಿ, ದೇವಸ್ಥಾನಕ್ಕೆ ಗಣಿಗಾರಿಕೆಯಿಂದ ಆಗುತ್ತಿರುವ ಹಾನಿಗಳನ್ನು ಪರಿಶೀಲಿಸಿತಲ್ಲದೆ ಸ್ಥಳೀಯರು, ಅರ್ಚಕರು ಮತ್ತು ದೇವಸ್ಥಾನ ಸಮಿತಿಗಳೊಂದಿಗೆ ಪ್ರತ್ಯೇಕವಾಗಿ ಮಾತುಕತೆ ನಡೆಸಿತು.<br /> <br /> ತನಿಖಾ ಸಮಿತಿಯ ಸಭೆ: ಸುಪ್ರೀಂ ಕೋರ್ಟ್ ರಚಿಸಿದ ಈ ಸಮಿತಿಯ ಮೊದಲ ಸಭೆ ನಗರದ ಹಂಪಿ ಪ್ರದೇಶಾಭಿವೃದ್ಧಿ ನಿರ್ವಹಣಾ ಪ್ರಾಧಿಕಾರದ ಸಭಾಂಗಣದಲ್ಲಿ ನಡೆಯಿತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>