<p><strong>ಬೆಂಗಳೂರು: </strong>ಅಕ್ರಮ ಗಣಿಗಾರಿಕೆಯಲ್ಲಿ ಷಾಮೀಲಾಗಿದ್ದ ಆರೋಪದ ಮೇಲೆ ಆರು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು (ಆರ್ಟಿಓ), 54 ಮೋಟಾರು ವಾಹನ ನಿರೀಕ್ಷಕರು ಮತ್ತು ಮೂವರು ಚಾಲಕರಿಗೆ ಸಾರಿಗೆ ಇಲಾಖೆ ನೋಟಿಸ್ ಜಾರಿ ಮಾಡಿದೆ. ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದ ಲೋಕಾಯುಕ್ತ ತನಿಖಾ ವರದಿ ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ.<br /> <br /> ಅಕ್ರಮ ಗಣಿಗಾರಿಕೆ ನಡೆಸುವವರ ಜೊತೆ ನೇರವಾಗಿ ಷಾಮೀಲಾಗಿರುವುದು, ಅಕ್ರಮಕ್ಕೆ ಸಹಕಾರ ನೀಡಿರುವುದು, ಲಂಚ ಪಡೆದಿರುವುದು ಮತ್ತಿತರ ಆರೋಪಗಳಿಗೆ ಸಂಬಂಧಿಸಿದಂತೆ ಈ ಅಧಿಕಾರಿಗಳು ಮತ್ತು ಚಾಲಕರಿಗೆ ನೋಟಿಸ್ ನೀಡಲಾಗಿದೆ. ಅವರಿಂದ ಉತ್ತರ ಬಂದ ಬಳಿಕ ಕಾನೂನು ಕ್ರಮ ಜರುಗಿಸಲು ಸಾರಿಗೆ ಇಲಾಖೆ ನಿರ್ಧರಿಸಿದೆ.<br /> <br /> ಹೊಸಪೇಟೆಯ ಆರ್ಟಿಓ ನೂರ್ ಬಾಷಾ, ಬಾಗಲಕೋಟೆಯ ಆರ್ಟಿಓ ಐ.ಬಿ.ಆವಟಿ, ಬೆಳಗಾವಿ ಆರ್ಟಿಓ ಟಿ.ಎಸ್.ನಿಂಗಣ್ಣನವರ್, ದಾವಣಗೆರೆ ಆರ್ಟಿಓ ಬಿ.ಆರ್.ವಿಜಯಕುಮಾರ್, ಗದಗ ಆರ್ಟಿಓಗಳಾಗಿದ್ದ ವಿ.ಆರ್.ಶಂಭುಲಿಂಗ, ಸಿ.ಬಿ. ಪಾಟೀಲ್, ಕೊಪ್ಪಳ ಆರ್ಟಿಓ ಶಿವರಾಜ್ ಬಿ.ಪಾಟೀಲ್ ನೋಟಿಸ್ ಪಡೆದವರಲ್ಲಿ ಸೇರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಅಕ್ರಮ ಗಣಿಗಾರಿಕೆಯಲ್ಲಿ ಷಾಮೀಲಾಗಿದ್ದ ಆರೋಪದ ಮೇಲೆ ಆರು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು (ಆರ್ಟಿಓ), 54 ಮೋಟಾರು ವಾಹನ ನಿರೀಕ್ಷಕರು ಮತ್ತು ಮೂವರು ಚಾಲಕರಿಗೆ ಸಾರಿಗೆ ಇಲಾಖೆ ನೋಟಿಸ್ ಜಾರಿ ಮಾಡಿದೆ. ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದ ಲೋಕಾಯುಕ್ತ ತನಿಖಾ ವರದಿ ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದೆ.<br /> <br /> ಅಕ್ರಮ ಗಣಿಗಾರಿಕೆ ನಡೆಸುವವರ ಜೊತೆ ನೇರವಾಗಿ ಷಾಮೀಲಾಗಿರುವುದು, ಅಕ್ರಮಕ್ಕೆ ಸಹಕಾರ ನೀಡಿರುವುದು, ಲಂಚ ಪಡೆದಿರುವುದು ಮತ್ತಿತರ ಆರೋಪಗಳಿಗೆ ಸಂಬಂಧಿಸಿದಂತೆ ಈ ಅಧಿಕಾರಿಗಳು ಮತ್ತು ಚಾಲಕರಿಗೆ ನೋಟಿಸ್ ನೀಡಲಾಗಿದೆ. ಅವರಿಂದ ಉತ್ತರ ಬಂದ ಬಳಿಕ ಕಾನೂನು ಕ್ರಮ ಜರುಗಿಸಲು ಸಾರಿಗೆ ಇಲಾಖೆ ನಿರ್ಧರಿಸಿದೆ.<br /> <br /> ಹೊಸಪೇಟೆಯ ಆರ್ಟಿಓ ನೂರ್ ಬಾಷಾ, ಬಾಗಲಕೋಟೆಯ ಆರ್ಟಿಓ ಐ.ಬಿ.ಆವಟಿ, ಬೆಳಗಾವಿ ಆರ್ಟಿಓ ಟಿ.ಎಸ್.ನಿಂಗಣ್ಣನವರ್, ದಾವಣಗೆರೆ ಆರ್ಟಿಓ ಬಿ.ಆರ್.ವಿಜಯಕುಮಾರ್, ಗದಗ ಆರ್ಟಿಓಗಳಾಗಿದ್ದ ವಿ.ಆರ್.ಶಂಭುಲಿಂಗ, ಸಿ.ಬಿ. ಪಾಟೀಲ್, ಕೊಪ್ಪಳ ಆರ್ಟಿಓ ಶಿವರಾಜ್ ಬಿ.ಪಾಟೀಲ್ ನೋಟಿಸ್ ಪಡೆದವರಲ್ಲಿ ಸೇರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>